ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

A Narayanaswamy: ಸಮರ್ಪಕವಾಗಿ ಒಳಮೀಸಲಾತಿ ಜಾರಿಗೊಳಿಸದಿದ್ರೆ ಸರ್ಕಾರ ಕಿತ್ತೊಗೆಯುವ ಸಂಕಲ್ಪ: ಎ. ನಾರಾಯಣಸ್ವಾಮಿ

ಮುಂಬಡ್ತಿ ಮೀಸಲಾತಿ ಅನುಷ್ಠಾನ ಸಂಬಂಧ ಈ ಸದನದಲ್ಲಿ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದ ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಹರಿಯಾಣ, ಪಂಜಾಬ್, ಆಂಧ್ರ ಪ್ರದೇಶದಲ್ಲಿ ಮುಂಬಡ್ತಿ ಮೀಸಲಾತಿ ಇದೆ. ತಮಿಳುನಾಡಿನಲ್ಲೂ ಇದೆ. ಕರ್ನಾಟಕದಲ್ಲಿ ಇದು ಆಗಬೇಕು. ಕಳೆದ 20 ವರ್ಷಗಳಿಂದ ನಾನು ಹೋರಾಟದ ಭಾಗವಾಗಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಮರ್ಪಕವಾಗಿ ಒಳಮೀಸಲಾತಿ ಜಾರಿಗೊಳಿಸಿ: ಎ. ನಾರಾಯಣಸ್ವಾಮಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ. -

Profile
Siddalinga Swamy Dec 17, 2025 5:45 PM

ಬೆಳಗಾವಿ, ಡಿ.17: ಒಳಮೀಸಲಾತಿಯನ್ನು (Internal reservation) ರಾಜ್ಯದಲ್ಲಿ ಸಮರ್ಪಕವಾಗಿ ಜಾರಿ ಮಾಡದೇ ಇದ್ದಲ್ಲಿ ಈ ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪವನ್ನು ರಾಜ್ಯದ ಶೋಷಿತ ಮಾದಿಗರು, ಉಪ ಜಾತಿಗಳು ಮಾಡಲಿವೆ ಎಂದು ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ (A Narayanaswamy) ಎಚ್ಚರಿಸಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬಡ್ತಿ ಮೀಸಲಾತಿ ಅನುಷ್ಠಾನ ಸಂಬಂಧ ಈ ಸದನದಲ್ಲಿ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದರು.

ಹರಿಯಾಣ, ಪಂಜಾಬ್, ಆಂಧ್ರ ಪ್ರದೇಶದಲ್ಲಿ ಮುಂಬಡ್ತಿ ಮೀಸಲಾತಿ ಇದೆ. ತಮಿಳುನಾಡಿನಲ್ಲೂ ಇದೆ. ಕರ್ನಾಟಕದಲ್ಲಿ ಇದು ಆಗಬೇಕು ಎಂದು ತಿಳಿಸಿದ ಅವರು, ಕಳೆದ 20 ವರ್ಷಗಳಿಂದ ನಾನು ಹೋರಾಟದ ಭಾಗವಾಗಿದ್ದೇನೆ ಎಂದು ಹೇಳಿದರು

2023ರಲ್ಲಿ ಸಿದ್ದರಾಮಯ್ಯ ಅವರು ಮಾದಿಗ ಉಪ ಜಾತಿಗಳಿಗೆ ಒಳ ಮೀಸಲಾತಿ ಕೊಡುವುದಾಗಿ ಮತ್ತೊಮ್ಮೆ ಪ್ರಣಾಳಿಕೆಯಲ್ಲಿ ತಿಳಿಸಿ ಅಧಿಕಾರಕ್ಕೆ ಬಂದರು. ಬಳಿಕ ಜನತೆಯ ದಿಕ್ಕು ತಪ್ಪಿಸಿದ್ದರು ಎಂದು ಆರೋಪಿಸಿದರು.

ಒಳ ಮೀಸಲಾತಿ ಜಾರಿಯ ನಂತರ ಮೀಸಲಾತಿ ಮಿತಿಯು ಶೇ. 50 ಅನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟಿನ ನಿರ್ದೇಶನ ಇದ್ದರೂ, ಯಾವ ರಾಜ್ಯದಲ್ಲಿ ಶೇ. 50 ಮಿತಿಯಿಂದ ಹೆಚ್ಚು ನೀಡುವ ಅವಶ್ಯಕತೆ ಇದ್ದರೆ, ಮಿತಿಯನ್ನು ಮೀರಬಹುದೆಂದು ತೀರ್ಪಿತ್ತಿದ್ದಾರೆ. ಛತ್ತೀಸಗಡದಲ್ಲಿ ಶೇ.58 ಮಾಡಿದ್ದರು. ಅಲ್ಲಿ ಹೈಕೋರ್ಟಿನ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ ಎಂದು ತಿಳಿಸಿದರು.

ಚಳಿಗಾಲದ ಅಧಿವೇಶನ ಇಲ್ಲಿ ನಡೆಯುತ್ತಿದೆ. ಒಳಮೀಸಲಾತಿಯ ಪ್ರಮುಖ ಚರ್ಚೆ ಆಗಬೇಕಿದೆ. ರಾಜ್ಯದಲ್ಲಿ 35 ವರ್ಷಗಳಿಂದ ಒಳಮೀಸಲಾತಿಯ ಹೋರಾಟ ನಡೆದಿದೆ. ಸದಾಶಿವ ಆಯೋಗದ ವರದಿ, ಮಾಧುಸ್ವಾಮಿ ವರದಿ, ನಾಗಮೋಹನದಾಸ್ ವರದಿ ಸೇರಿ ಅನೇಕ ಆಯೋಗದ ವರದಿಗಳು ಬಂದ ನಂತರವೂ ನ್ಯಾಯ ಸಿಕ್ಕಿಲ್ಲ ಎಂದು ದೂರಿದರು.‌

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ದುರ್ಯೋಧನ ಐಹೊಳೆ, ಬಸವರಾಜ್ ಮತ್ತಿಮಡು, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್, ಮುಖಂಡರಾದ ಅನಂತ್, ಸತ್ಯಪ್ರಸಾದ್, ರಾಜೇಂದ್ರ, ಸಿದ್ದು, ರಮೇಶ್, ಅಜಿತ್, ಮೋಹನ್, ಪ್ರಶಾಂತ್ ಸೇರಿ ಹಲವು ಮುಖಂಡರು ಭಾಗವಹಿಸಿದ್ದರು.