ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Govinda Karajola: ಜಾತಿಗಣತಿ ವಿಷಯದಲ್ಲಿ ಗೊಂದಲ ಮೂಡಿಸುತ್ತಿದೆ ರಾಜ್ಯ ಸರ್ಕಾರ, ಕಾಂಗ್ರೆಸ್ ಹೈಕಮಾಂಡ್- ಗೋವಿಂದ ಕಾರಜೋಳ

Govinda Karajola: ಜಾತಿ ಗಣತಿ ವಿಷಯದಲ್ಲಿ ನಾವು ಗೊಂದಲ ಸೃಷ್ಟಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಮತ್ತು ಕಾಂಗ್ರೆಸ್ ಹೈಕಮಾಂಡ್ ಗೊಂದಲ ಮೂಡಿಸುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಜಾತಿಗಣತಿ ವಿಷಯದಲ್ಲಿ ನಾವು ಗೊಂದಲ ಸೃಷ್ಟಿಸುತ್ತಿಲ್ಲ- ಗೋವಿಂದ ಕಾರಜೋಳ

-

Profile Siddalinga Swamy Sep 30, 2025 2:47 PM

ಕಲಬುರಗಿ: ಜಾತಿ ಗಣತಿ ವಿಷಯದಲ್ಲಿ ನಾವು ಗೊಂದಲ ಸೃಷ್ಟಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ (State Congress Government) ಮತ್ತು ಕಾಂಗ್ರೆಸ್ ಹೈಕಮಾಂಡ್ ಗೊಂದಲ ಮೂಡಿಸುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ (Govinda Karajola) ಆರೋಪಿಸಿದರು. ಮಂಗಳವಾರ ಕಲಬುರಗಿಯಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಕ್ರಿಶ್ಚಿಯನ್ ಲಿಂಗಾಯತರು ಇದ್ದಾರಾ? ಜೈನ ಪಂಚಮಸಾಲಿ ಇದ್ದಾರಾ? ಕ್ರಿಶ್ಚಿಯನ್ ದಲಿತರು ಇದ್ದಾರಾ? ಎಂದು ಪ್ರಶ್ನಿಸಿದರು.

ಕ್ರಿಶ್ಚಿಯನ್ ದಲಿತರು ಎನ್ನಬೇಡಿ; ಯಾವುದೇ ವ್ಯಕ್ತಿ ಧರ್ಮಾಂತರ ಆದರೆ, ಧರ್ಮಾಂತರ ಆದ ದಿನದಿಂದ ಅವನ ಪೂರ್ವಾಶ್ರಮದ ಹಂಗು ಇರುವುದಿಲ್ಲ. ಪೂರ್ವಾಶ್ರಮದ ಸಂಬಂಧ ಕಡಿದುಹೋಗುತ್ತದೆ ಎಂದು ತಿಳಿಸಿದರು. ಧರ್ಮಾಂತರ ಆದರೆ, ಕ್ರಿಶ್ಚಿಯನ್ ಆದರೆ ಕ್ರಿಶ್ಚಿಯನ್, ಇಸ್ಲಾಂಗೆ ಆಗಿದ್ದರೆ ಇಸ್ಲಾಂ ಧರ್ಮ ಇರುತ್ತದೆ ಎಂದು ಹೇಳಿದರು.

ಆರ್ಥಿಕ, ಶೈಕ್ಷಣಿಕ ಕಾಳಜಿ ಇದ್ದರೆ 2013ರಿಂದ 2018ರವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದರು. ಕಾಂತರಾಜು ಅವರನ್ನು ನೇಮಿಸಿ ವರದಿ ತೆಗೆದುಕೊಂಡರು. 180 ಕೋಟಿ ಖರ್ಚು ಮಾಡಿದ ಆ ವರದಿ ಏನಾಗಿದೆ? ಕಸದ ಬುಟ್ಟಿಗೆ ಹಾಕಿದ್ದಾರೆ ಎಂದು ಟೀಕಿಸಿದರು.

ನಾವು ದಾರಿ ತಪ್ಪಿಸುತ್ತಿಲ್ಲ. ಸಿದ್ದರಾಮಯ್ಯನವರು- ಕಾಂಗ್ರೆಸ್ ಪಕ್ಷ ದಾರಿ ತಪ್ಪಿಸುತ್ತಿವೆ. ಆವತ್ತು ಜಾತಿಗಳ ಅಂಕಿ ಸಂಖ್ಯೆ ಬಿಡುಗಡೆ ಮಾಡಿದ್ದರು. ಗೌಪ್ಯವಾಗಿ ಇಡಬೇಕಾದ ಅಂಕಿ ಅಂಶವನ್ನು ಯಾಕೆ ಗೌಪ್ಯವಾಗಿಡಲಿಲ್ಲ? ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ | Bank Holiday: ಗಾಂಧಿ ಜಯಂತಿ, ದೀಪಾವಳಿ ಸೇರಿ ಅಕ್ಟೋಬರ್‌ ತಿಂಗಳಲ್ಲಿ ಬ್ಯಾಂಕ್‌ಗಳಿ 21 ದಿನ ರಜೆ; ಇಲ್ಲಿದೆ ಸಂಪೂರ್ಣ ಪಟ್ಟಿ