ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೆಪಿಎಸ್‍ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ; ರಾಜ್ಯದಲ್ಲೂ ದೆಹಲಿ ಮಾದರಿ ಹೋರಾಟ ನಡೆಯುತ್ತ?

BJP: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ₹80 ಲಕ್ಷದವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಹಿರಿಯ ಶಾಸಕ ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.

ಕೆಪಿಎಸ್‍ಸಿ ನೇಮಕಾತಿ ಅಕ್ರಮ ಆರೋಪ; ಸಿಬಿಐ ತನಿಖೆಗೆ ಬಿಜೆಪಿ ಪಟ್ಟು

ಕೆಪಿಎಸ್‍ಸಿ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ ಬಿಜೆಪಿ ನಿಯೋಗ -

Profile
Siddalinga Swamy Jul 27, 2026 8:34 PM

ಬೆಂಗಳೂರು, ಜು. 27: ಕೆಪಿಎಸ್‍ಸಿಯ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ₹80 ಲಕ್ಷದವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಬಿಜೆಪಿ (BJP) ನಿಯೋಗವು ಒತ್ತಾಯಿಸಿದೆ. ಈ ಕುರಿತು ಮನವಿ ಸಲ್ಲಿಸಿದೆ. ಈ ಹಗರಣವು ಕರ್ನಾಟಕದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ನಂಬಿಕೆಗೆ ದೊಡ್ಡ ಆಘಾತ ನೀಡಿವೆ. ಇಂತಹ ಸಂದರ್ಭದಲ್ಲಿ ಕೆಪಿಎಸ್‍ಸಿಯೇ ತನ್ನ ವಿರುದ್ಧದ ಆರೋಪಗಳನ್ನು ಆಂತರಿಕವಾಗಿ ತನಿಖೆ ನಡೆಸುವುದರಿಂದ ಸತ್ಯ ಹೊರಬರುವುದಿಲ್ಲ; ಸಾರ್ವಜನಿಕರ ವಿಶ್ವಾಸವೂ ಮೂಡುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ಸೋಮವಾರ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಹಿರಿಯ ಶಾಸಕ ಸುರೇಶ್ ಕುಮಾರ್ ಅವರನ್ನೊಳಗೊಂಡ ನಿಯೋಗವು ಕೆಪಿಎಸ್‍ಸಿ ಕಾರ್ಯದರ್ಶಿಯವರನ್ನು ಭೇಟಿ ಮಾಡಿ, ಈ ಆಂತರಿಕ ತನಿಖೆಯನ್ನು ತಕ್ಷಣವೇ ರದ್ದುಗೊಳಿಸಲು ಒತ್ತಾಯಿಸಲಾಯಿತು. ಅಲ್ಲದೇ ಪ್ರಕರಣವನ್ನು ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಇದು ಕೇವಲ ಒಂದು ನೇಮಕಾತಿಯ ಪ್ರಶ್ನೆಯಲ್ಲ. ತಮ್ಮ ಜೀವನದ ಅಮೂಲ್ಯ ವರ್ಷಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಮೀಸಲಿಟ್ಟಿರುವ ಲಕ್ಷಾಂತರ ಯುವಕರ ಕನಸು, ಪರಿಶ್ರಮ ಮತ್ತು ನ್ಯಾಯಯುತ ಹಕ್ಕಿನ ಪ್ರಶ್ನೆಯಾಗಿದೆ. ವಿಶ್ವಾಸಾರ್ಹತೆ ಇಲ್ಲದ ಕಾಟಾಚಾರದ ತನಿಖೆಯಿಂದ ಯಾರಿಗೂ ಪ್ರಯೋಜನವಿಲ್ಲ. ಕೆಪಿಎಸ್‍ಸಿಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮರುಸ್ಥಾಪಿಸಲು ಸಂಪೂರ್ಣ ಸ್ವತಂತ್ರ ತನಿಖೆಯೊಂದೇ ಮಾರ್ಗ ಎಂದು ತಿಳಿಸಲಾಯಿತು.‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಉದ್ಯೋಗಾಕಾಂಕ್ಷಿ ಯುವಜನರ ಹಕ್ಕುಗಳಿಗಾಗಿ ನಮ್ಮ ಹೋರಾಟ ನಿರಂತರ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಹಿರಿಯ ಶಾಸಕ ಸುರೇಶ್ ಕುಮಾರ್ ತಿಳಿಸಿದ್ದಾರೆ.