ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Nikhil Kumaraswamy: ಹೇಮಾವತಿ ಲಿಂಕ್ ಕೆನಾಲ್ ಹೋರಾಟ; ರಾಜ್ಯ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ಹೇಮಾವತಿ ಲಿಂಕ್ ಕೆನಾಲ್ ಹೋರಾಟ ರೈತರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿರೋದೆ ರಾಜ್ಯ ಸರ್ಕಾರ, ರಾಜ್ಯದ ಸಿಎಂ ಹಾಗೂ ಡಿಸಿಎಂ ಅವರು, ಇವತ್ತು ಡಿಸಿಎಂ ಜಲ ಸಂಪನ್ಮೂಲ ಸಚಿವರಾಗಿದ್ದಾರೆ. ಇಷ್ಟೆಲ್ಲಾ ರಾದ್ಧಾಂತವಾಗಿದೆ ಇನ್ನೂ ಕೂಡ ಡಿಸಿಎಂ ಒಂದೇ ಒಂದು ಉತ್ತರ ನೀಡಿಲ್ಲ ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಹೇಮಾವತಿ ಲಿಂಕ್ ಕೆನಾಲ್ ಹೋರಾಟ-ಡಿಸಿಎಂ ಒಂದೇ ಒಂದು ಉತ್ತರ ನೀಡಿಲ್ಲ: ನಿಖಿಲ್

Profile Siddalinga Swamy Jun 16, 2025 7:27 PM

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಹೋರಾಟ ರೈತರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿರೋದೆ ರಾಜ್ಯ ಸರ್ಕಾರ, ರಾಜ್ಯದ ಸಿಎಂ ಹಾಗೂ ಡಿಸಿಎಂ ಅವರು, ಇವತ್ತು ಡಿಸಿಎಂ ಜಲ ಸಂಪನ್ಮೂಲ ಸಚಿವರಾಗಿದ್ದಾರೆ. ಇಷ್ಟೆಲ್ಲಾ ರಾದ್ಧಾಂತವಾಗಿದೆ ಇನ್ನೂ ಕೂಡ ಡಿಸಿಎಂ ಒಂದೇ ಒಂದು ಉತ್ತರ ನೀಡಿಲ್ಲ ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಿಡಿಕಾರಿದ್ದಾರೆ. ʼಜನರೊಂದಿಗೆ ಜನತಾದಳʼ ಮೊದಲನೇ ದಿನದ ಪ್ರವಾಸಕ್ಕೂ ಮೊದಲು ಶ್ರೀಕ್ಷೇತ್ರ ಸಿದ್ದಗಂಗಾ ಮಠಕ್ಕೆ ಅವರು ಭೇಟಿ ನೀಡಿ, ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡ ಬಳಿಕ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಸ್ಥಳೀಯ ರೈತ ಮುಖಂಡರನ್ನು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದಿಲ್ಲ. ಎಲ್ಲರನ್ನು ಕೂರಿಸಿ ಈ ರಾಜ್ಯ ಸರ್ಕಾರ ಚರ್ಚೆ ಮಾಡಿಲ್ಲ. ಈ ರೀತಿಯ ಘಟನೆಗಳು ಕುಮಾರಣ್ಣ ಕಾಲದಲ್ಲಿ ನಡೆದಿದ್ದರೆ ರೈತರು ಜನಪ್ರತಿನಿಧಿಗಳನ್ನು ಕರೆದು ಕೂರಿಸಿ ಅಲ್ಲಿರುವಂತಹ ಸಮಸ್ಯೆಯನ್ನು ಬಗೆಹರಿಸಿರೋರು. ರಾಜ್ಯ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಎಂದು ಅವರು ಸರ್ಕಾರಕ್ಕೆ ಆಗ್ರಹಿಸಿದರು.

ಜೆಪಿ‌ ಭವನದ ಸಭೆಯಲ್ಲಿ ಜೆಡಿಎಸ್ ಶಾಸಕರ ಗೈರು ವಿಚಾರಕ್ಕೆ ಪ್ರತಿಕ್ರಿಸಿದ ಅವರು, ಶಾಸಕರ ಕ್ಷೇತ್ರಗಳಲ್ಲಿ ಶನಿವಾರ ಮತ್ತು ಭಾನುವಾರ ಕಾರ್ಯಕ್ರಮ ನಿರಂತರವಾಗಿರುತ್ತೆ. ಶನಿವಾರ ಬಹುತೇಕ ಶಾಸಕರು, ಮುಖಂಡರುಗಳು ಭಾಗಿಯಾಗಿದ್ರು. ಭಾಗಿಯಾಗೋಕೆ ಆಗದೇ ಇರೋರು ಕುಮಾರಸ್ವಾಮಿ ಅವರ ಬಳಿ ತಿಳಿಸಿದರು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸುವುದಕ್ಕೆ ರಾಜ್ಯ ಸರ್ಕಾರ ಮನಸ್ಸು ಮಾಡಬೇಕಾಗಿದೆ. ಸರ್ಕಾರ ಇಲ್ಲಿಯವರೆಗೂ ಮನಸ್ಸು ಮಾಡಿಲ್ಲ. ಇಲ್ಲಿವರೆಗೂ ತಡೆ ಹಿಡಿದು ಕುಳಿತುಕೊಂಡಿದ್ದಾರೆ. ಅತಿ ಶೀಘ್ರದಲ್ಲಿ ಜಿಪಂ, ತಾಪಂ, ಬೆಂಗಳೂರು ಪಾಲಿಕೆ ಚುನಾವಣೆ ಆಗಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರ ಕುರಿತು ಮಾತನಾಡಿದ ಅವರು, ನಾನು ಈ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕಾರ್ಯಕರ್ತರ ಜತೆಗೂಡಿ ಈ ಪಕ್ಷವನ್ನ ಬೇರು ಮಟ್ಟದಿಂದ ಬೆಳೆಸಲು ಪ್ರವಾಸ ಮಾಡುತ್ತಿದ್ದೇನೆ. ಈ ವಿಚಾರ ಈಗ ಅಪ್ರಸ್ತುತ ಎಂದು ತಿಳಿಸಿದರು.

ಜೆಡಿಎಸ್ ಮುಳುಗೋ ದೋಣಿ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಯಾವುದು ಮಳುಗೋಗಿರುವ ದೋಣಿ..? ಸದಾಕಾಲ ಎಚ್.ಡಿ. ದೇವೆಗೌಡರ ಹಾಗೂ ಕುಮಾರಣ್ಣನವರ ನಿರಂತರ ಹೋರಾಟಕ್ಕೆ ಪ್ರತಿಫಲವಾಗಿ ರಾಜ್ಯದ ಜನ ಆಶೀರ್ವಾದ ಮಾಡಿದ್ದಾರೆ. ಅನೇಕ ಚುನಾವಣೆಗಳಲ್ಲಿ ಅದು ಸಾಬೀತಾಗಿದೆ. ನಮ್ಮದು ಪ್ರಾದೇಶಿಕ ಪಕ್ಷ ಆದರೂ ಶೇ 20% ರಷ್ಟು ಓಟ್ ಶೇರ್ ಇಟ್ಟುಕೊಂಡಿದ್ದೇವೆ. ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ 34% ಓಟಿಂಗ್ ಶೇರ್ ನನ್ನ ಜನ ನೀಡಿದ್ದಾರೆ ಎಂದರು. ಚುನಾವಣೆಯಲ್ಲಿ ಗೆಲುವು ಸೋಲು ಸರ್ವೆ ಸಾಮಾನ್ಯ. ಅದನ್ನ ಸಮಚ್ಚಿತ್ತವಾಗಿ ಕೊಂಡೊಯ್ಯುವ ಮನಸ್ಥಿತಿಯನ್ನು ನಾವು ಹೊಂದಿದ್ದೇವೆ. ಕಾರ್ಯಕರ್ತರಿದ್ದಾರೆ, ಹುಮ್ಮಸ್ಸಿದೆ, ಅಭ್ಯರ್ಥಿಗಳಲ್ಲಿ ಉಮ್ಮಸ್ಸಿದೆ. ನಾವೆಲ್ಲಾ ಕೆಲಸ ಮಾಡಿ ಜನರ ಆಶೀರ್ವಾದ ಪಡೆಡುಕೊಳ್ಳುತ್ತೇವೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Online Payment: UPI ಗ್ರಾಹಕರಿಗೆ ಗುಡ್‌ನ್ಯೂಸ್‌!‌ ಇಂದಿನಿಂದ ಫೋನ್‌ಪೇ, ಗೂಗಲ್ ಪೇ ವಹಿವಾಟು ಸೂಪರ್ ಫಾಸ್ಟ್‌

ಮುಂದಿನ ಚುನಾವಣೆಯಲ್ಲಿ ಮೈತ್ರಿ ವಿಚಾರ ಕುರಿತು ಮಾತನಾಡಿದ ಅವರು, ಈ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ- ಜೆಡಿಎಸ್ ಹೊಂದಾಣಿಕೆ ಆಗಿರುವಂತಾದ್ದು. ಎರಡು ಪಕ್ಷಗಳಿಗೆ ಅನುಕೂಲವಾಗಿದೆ, ಕಳೆದ ಎಂಪಿ‌ ಚುನಾವಣೆಯಲ್ಲಿ ಅದು ಸಾಬೀತಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.