PM Narendra Modi: ಆಪರೇಷನ್ ಸಿಂದೂರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ; ಬಿಜೆಪಿ ನಾಯಕರಿಗೆ ಮೋದಿ ಖಡಕ್ ವಾರ್ನಿಂಗ್
Operation Sindoor:ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನಂತರದ ಆಪರೇಷನ್ ಸಿಂಧೂರ್ ಕುರಿತು ಕೆಲವು ಬಿಜೆಪಿ ನಾಯಕರ ವಿವಾದಾತ್ಮಕ ಹೇಳಿಕೆಗಳು ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗಿವೆ, ಇದರಿಂದಾಗಿ ಪಕ್ಷವು ಮುಜುಗರಕ್ಕೀಡಾಗಿದೆ. ಹೀಗಾಗಿ ತಮ್ಮ ಪಕ್ಷದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.


ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ನಡೆಸಿದ ನಿಖರ ದಾಳಿ - ಆಪರೇಷನ್ ಸಿಂಧೂರ್(Operation Sindoor) ಬಗ್ಗೆ ಹಲವಾರು ವಿವೇಚನಾರಹಿತ ಹೇಳಿಕೆಗಳನ್ನು ನೀಡಿದ ತಮ್ಮ ಪಕ್ಷದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಎನ್ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ಮೋದಿ, ನಾಯಕರು ಪ್ರತಿಯೊಂದು ವಿಷಯದ ಬಗ್ಗೆಯೂ ಮಾತನಾಡುವುದನ್ನು ಮತ್ತು ಅನಗತ್ಯ ಹೇಳಿಕೆಗಳನ್ನು ನೀಡುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನಂತರದ ಆಪರೇಷನ್ ಸಿಂಧೂರ್ ಕುರಿತು ಕೆಲವು ಬಿಜೆಪಿ ನಾಯಕರ ವಿವಾದಾತ್ಮಕ ಹೇಳಿಕೆಗಳು ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗಿವೆ, ಇದರಿಂದಾಗಿ ಪಕ್ಷವು ಮುಜುಗರಕ್ಕೀಡಾಗಿದೆ. ಇದರಿಂದ ಗರಂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಪಕ್ಷ ಎಲ್ಲಾ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಮಹೌನಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ವಿಜಯ್ ಶಾ, ಉಗ್ರರು ಭೀಕರ ದಾಳಿ ಮಾಡುವ ಮಾಡುವ ಮೂಲಕ ನಮ್ಮ ಹೆಣ್ಣು ಮಕ್ಕಳ ಕುಂಕುಮ ಅಳಿಸಿದ್ದರು. ನಾವು ಅವರ ಸಹೋದರಿಯನ್ನೇ ಪಾಠ ಕಲಿಸು ಕಳುಹಿಸಿದೆವು. ಅವರು ಹಿಂದೂಗಳನ್ನು ವಿವಸ್ತ್ರಗೊಳಿಸಿ ಕೊಂದರು. ಇದಕ್ಕೆ ಪ್ರತಿಯಾಗಿ ಮೋದಿ ಜಿ ಅವರ ಸಹೋದರಿಯನ್ನೇ ಕಳುಹಿಸಿದರು. ನಮ್ಮ ಸಮುದಾಯದ ಸಹೋದರಿಯರನ್ನು ವಿಧವೆಯರನ್ನಾಗಿ ಮಾಡಿದರೆ, ನಿಮ್ಮ ಸಮುದಾಯದ ಸಹೋದರಿ ನಿಮ್ಮನ್ನು ವಿವಸ್ತ್ರಗೊಳಿಸುತ್ತಾರೆ ಎಂಬ ಸಂದೇಶವನ್ನು ಕಳುಹಿಸಲು ಮೋದಿ ಉಗ್ರರ ಸಮುದಾಯದ ಸಹೋದರಿಯನ್ನೇ ಕಳುಹಿಸಿದ್ದಾರೆ ಎಂದಿದ್ದರು.
ಈ ಸುದ್ದಿಯನ್ನೂ ಓದಿ: Pahalgam Terror Attack: ಮಹಿಳೆಯರಿಗೆ ಗಂಡನನ್ನು ಉಳಿಸಿಕೊಳ್ಳುವ ವೀರತೆ ಇರಲಿಲ್ಲ; ಪಹಲ್ಗಾಮ್ ದಾಳಿ ಸಂತ್ರಸ್ತರ ಕುರಿತು ನಾಲಿಗೆ ಹರಿಬಿಟ್ಟ ಬಿಜೆಪಿ ಸಂಸದ
ಇದಾದ ಬಳಿಕ ಎರಡು ದಿನಗಳ ಹಿಂದೆ ರಾಜ್ಯಸಭಾ ಸಂಸದ ರಾಮ್ ಚಂದರ್ ಜಂಗ್ರಾ (BJP MP) ತಮ್ಮ ಹೇಳಿಕೆಯಿಂದ ವಿವಾದವನ್ನು ಹುಟ್ಟು ಹಾಕಿದ್ದರು. ಪಹಲ್ಗಾಮ್ ದಾಳಿಯಲ್ಲಿ ತಮ್ಮ ಗಂಡನನ್ನು ಕಳೆದುಕೊಂಡ ಮಹಿಳೆಯರನ್ನು ಅವರು ಟೀಕಿಸಿದ್ದರು. ಪಹಲ್ಗಾಮ್ನಲ್ಲಿ ಪ್ರಾಣ ಕಳೆದುಕೊಂಡ ಪ್ರವಾಸಿಗರು ಭಯೋತ್ಪಾದಕರ ವಿರುದ್ಧ ಹೋರಾಡಬೇಕಿತ್ತು ಮತ್ತು ಭಯೋತ್ಪಾದಕ ದಾಳಿಯಲ್ಲಿ ತಮ್ಮ ಗಂಡಂದಿರನ್ನು ಕಳೆದುಕೊಂಡ ಮಹಿಳೆಯರಿಗೆ ಯೋಧ ಮಹಿಳೆಯರ ಮನೋಭಾವವಿಲ್ಲ ಎಂದು ರಾಜ್ಯಸಭಾ ಸಂಸದ ರಾಮ್ ಚಂದರ್ ಜಂಗ್ರಾ ಶನಿವಾರ ಹೇಳಿದ್ದರು.