ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಯಚೂರು

ಡಿಸಿಎಂ ಡಿಕೆಶಿ, ನಟ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಅನಾಹುತ

ಡಿಕೆಶಿ, ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ

ರಾಯಚೂರು ಜಿಲ್ಲೆ ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಫೌಂಡೇಷನ್ ವತಿಯಿಂದ ಭಾನುವಾರ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ನಟ ಕಿಚ್ಚ ಸುದೀಪ್‌ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು. ಈ ವೇಳೆ ವೇದಿಕೆ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ.

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಮತ್ತೊಂದು ಬಲಿ; ಬಿಸಿಲ ತಾಪಕ್ಕೆ ಕಾರ್ಮಿಕ ಸಾವು

ಬಿಸಿಲ ತಾಪಕ್ಕೆ ಕಾರ್ಮಿಕ ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲಿನ ತಾಪ ತಾಳಲಾರದೆ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

PM Narendra Modi: ಮದುವೆಗೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

ರಾಯಚೂರಿನ ಯುವಕನ ಮದುವೆಗೆ ಪ್ರಧಾನಿ ಮೋದಿಯಿಂದ ಶುಭಾಶಯ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ್ ಅವರು ಪ್ರಧಾನಿ ಮೋದಿಗೆ ಮದುವೆ ಆಹ್ವಾನ ಪತ್ರಿಕೆ ಕಳುಹಿಸಿದ್ದರು. ಈಗ ಪ್ರಧಾನಿ ಕಚೇರಿಯಿಂದ ನವ ದಂಪತಿಗೆ ಶುಭಾಶಯ ಪತ್ರ ಬಂದಿದೆ. ಈ ಬಗ್ಗೆ ಯುವಕನ ಕುಟುಂಬ ಸಂತಸ ವ್ಯಕ್ತಪಡಿಸಿದೆ.

Road Accident: ನಾಲ್ವರು ಪ್ರಯಾಣಿಸುತ್ತಿದ್ದ ಬೈಕಿಗೆ ಟಿಪ್ಪರ್‌ ಡಿಕ್ಕಿ, ಇಬ್ಬರು ಸಾವು

ನಾಲ್ವರು ಪ್ರಯಾಣಿಸುತ್ತಿದ್ದ ಬೈಕಿಗೆ ಟಿಪ್ಪರ್‌ ಡಿಕ್ಕಿ, ಇಬ್ಬರು ಸಾವು

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಈ ದುರಂತ ನಡೆದಿದೆ. ಮೃತರನ್ನು ಬೈಕ್ ಓಡಿಸುತ್ತಿದ್ದ 37 ವರ್ಷದ ಅಂಜಿನಯ್ಯ ನಾಯಕ ಹಾಗೂ 10 ವರ್ಷದ ಬಾಲಕಿ ಅರ್ಚನಾ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ 19 ಶ್ವೇತಾ ಅವರ ಕಾಲು ಕಟ್ ಆಗಿದೆ.

Weather report: ಜಾಗತಿಕ 100 ಬಿಸಿ ನಗರಗಳ ಪಟ್ಟಿಯಲ್ಲಿ ದೇಶದ 95, ಕರ್ನಾಟಕದ 3 ನಗರ!

ಜಾಗತಿಕ 100 ಬಿಸಿ ನಗರಗಳ ಪಟ್ಟಿಯಲ್ಲಿ ದೇಶದ 95, ಕರ್ನಾಟಕದ 3 ನಗರ!

ವಿಶ್ವದ ಅತ್ಯಂತ ಬಿಸಿಯಾದ 100 ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಮೂರು ಜಿಲ್ಲೆಗಳು ಸ್ಥಾನ ಪಡೆದಿದೆ. ಇದು ರಾಜ್ಯದಲ್ಲಿ ತಾಪಮಾನ ಏರುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಉತ್ತರ ಕರ್ನಾಟಕದ ಈ ಭಾಗಗಳಲ್ಲಿ ಸೂರ್ಯನ ಪ್ರತಾಪ ಅತಿಯಾಗಿದ್ದು, ಜನರು ಮನೆಯಿಂದ ಹೊರಬರಲು ಭಯಪಡುವಂತಾಗಿದೆ.

Drowned: ಒಂದೇ ಕುಟುಂಬದ ನಾಲ್ವರು ತುಂಗಭದ್ರಾ ನದಿಯಲ್ಲಿ ನೀರುಪಾಲು

ಒಂದೇ ಕುಟುಂಬದ ನಾಲ್ವರು ತುಂಗಭದ್ರಾ ನದಿಯಲ್ಲಿ ನೀರುಪಾಲು

ಆಂಧ್ರಪ್ರದೇಶದ ಕೋಸಗಿ ತಾಲೂಕಿನ ರಾಜಲಬಂಡ ಅಣೆಕಟ್ಟಿನ ಕೊನೆ ಭಾಗದಲ್ಲಿರುವ ಸಾತುನೂರು ಗ್ರಾಮದ ಬಳಿಯ ತುಂಗಭದ್ರಾ ನದಿಗೆ ಮಧ್ಯಾಹ್ನ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತಗ್ಗು ಪ್ರದೇಶದಲ್ಲಿ ಸಿಲುಕಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

Zero development, Bogus bills: ಅಭಿವೃದ್ಧಿ ಶೂನ್ಯ, ಬೋಗಸ್ ಬಿಲ್‌ಗಳದ್ದೇ ಹವಾ

ಅಭಿವೃದ್ಧಿ ಶೂನ್ಯ, ಬೋಗಸ್ ಬಿಲ್‌ಗಳದ್ದೇ ಹವಾ

ತಾಲೂಕಿನ ವಿವಿಧ ಇಲಾಖೆಗಳಲ್ಲಿ ಅಭಿವೃದ್ಧಿ ಕೆಲಸಗಳು ಕೇವಲ ಕಾಗದದ ಮೇಲೆ ಸೀಮಿತ ವಾಗಿದ್ದು, ಯಾವುದೇ ಕೆಲಸ ಮಾಡದೆಯೇ ನೂರಕ್ಕೆ ನೂರರಷ್ಟು ಹಣ ಪಾವತಿ ಮಾಡಿ ಕೊಳ್ಳುವ ಮೂಲಕ ಕೋಟ್ಯಂತರ ರು. ಸಾರ್ವಜನಿಕ ಹಣ ದುರ್ಬಳಕೆಯಾಗುತ್ತಿದೆ. ಸರಕಾರಿ ಅನುದಾನದ ದುರ್ಬಳಕೆ ಮಿತಿ ಮೀರಿದ್ದು, ಪಂಚಾಯತ್ ರಾಜ್ ಇಲಾಖೆಯಿಂದ ಹಿಡಿದು ಶಿಕ್ಷಣ ಮತ್ತು ವಸತಿ ನಿಲಯಗಳವರೆಗೆ ಭ್ರಷ್ಟಾಚಾರದ ಜಾಲ ವ್ಯಾಪಿಸಿದೆ.

Self Hraming: ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ

ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ

ಸದಾ ಪ್ರವಚನ ನೀಡುತ್ತಾ ಇತರರಿಗೆ ದಾರಿ ದೀಪವಾಗಿದ್ದ ಸ್ವಾಮೀಜಿಯವರು ಇದ್ದಕ್ಕಿದ್ದಂತೆ ಮಠದಲ್ಲೇ ನೇಣಿಗೆ ಶರಣಾಗಿರುವುದು ಗ್ರಾಮಸ್ಥರಲ್ಲಿ ಹಾಗೂ ಅವರ ಭಕ್ತ ವಲಯದಲ್ಲಿ ತೀವ್ರ ಆಘಾತ ಮತ್ತು ಅನುಮಾನಗಳನ್ನು ಮೂಡಿಸಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

Bus Accident: ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು

ಸಿಂಧನೂರು ಬಸ್ ನಿಲ್ದಾಣದಲ್ಲಿ ಸೋಮವಾರ ಅಪಘಾತ ನಡೆದಿದೆ. ಕೆಕೆಆರ್‌ಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ಮಹಿಳೆ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಪ್ರಯಾಣಿಕರನ್ನ ಬೆಚ್ಚಿಬೀಳಿಸಿದೆ. ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೊಡ್ಡ ಈರಮ್ಮ (38) ಮೃತ ದುರ್ದೈವಿ.

ದೋಸೆ, ಪೂರಿ, ಗೋಬಿ ಮಂಚೂರಿಗೆ ಬಿದ್ದಿದೆ ಬ್ರೇಕ್

ದೋಸೆ, ಪೂರಿ, ಗೋಬಿ ಮಂಚೂರಿಗೆ ಬಿದ್ದಿದೆ ಬ್ರೇಕ್

ಜಿಲ್ಲೆಯಾದ್ಯಂತ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಪೂರೈಕೆ ಸಮಸ್ಯೆಯಿಂದ ಹೋಟೆಲ್ಗಳಲ್ಲಿ ಆರ್ಡರ್‌ಮಾಡಿದ ಕೂಡಲೇ ಸಿದ್ದಪಡಿಸುವಂತ ದೋಸೆ, ಪೂರಿ, ಗೋಬಿ ಮಂಚೂರಿಯಂತ ತಿಂಡಿಗಳನ್ನ ತಾತ್ಕಾಲಿಕವಾಗಿ ನಿಲ್ಲಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸಿಲಿಂಡರ್‌ಸರಿಯಾಗಿ ಪೂರೈಕೆಯಾಗದ ಹಿನ್ನಲೆ ಪರ್ಯಾಯವಾಗಿ ಸೌದೆ ಒಲೆ ಬಳಕೆಗೆ ಹೋಟೆಲ್ ಮಾಲೀಕರು ಮುಂದಾಗಿದ್ದಾರೆ.

Raichur News: ಸೆಕೆ ಅಂತ ಮನೆ ಮುಂದೆ ಮಲಗಿದ್ದ ವೃದ್ಧೆಗೆ ಕಚ್ಚಿದ ಹಾವು!

ಸೆಕೆ ಅಂತ ಮನೆ ಮುಂದೆ ಮಲಗಿದ್ದ ವೃದ್ಧೆಗೆ ಕಚ್ಚಿದ ಹಾವು!

Snake Bite: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ಮನೆ ಮುಂದೆ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದೆ. ಮಾರ್ಚ್ 8ರಂದು ರಾತ್ರಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಾವು ಕಡಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Couple death: ಕನಸಿನ ಮನೆಯ ಮೆಟ್ಟಿಲು ಕುಸಿದು ದುರಂತ ಕಂಡ ದಂಪತಿ

ಕನಸಿನ ಮನೆಯ ಮೆಟ್ಟಿಲು ಕುಸಿದು ದುರಂತ ಕಂಡ ದಂಪತಿ

ದ್ಯಾವಪ್ಪ ಹಾಗೂ ಶಿವಮ್ಮ ದಂಪತಿ ಮನೆ ಕಟ್ಟುವ ಕನಸು ಕಂಡಿದ್ದು, ಅದರಂತೆ ಹಣ ಹೊಂದಿಸಿ ಮನೆ ನಿರ್ಮಾಣ ಮಾಡಲು ಶುರು ಮಾಡಿದ್ದರು. ಸ್ವತಃ ತಾವೇ ಮನೆ ನಿರ್ಮಿಸಿಕೊಳ್ಳುತ್ತಿದ್ದು, ಅರ್ಧ ಮನೆ ಸಹ ಕಟ್ಟಲಾಗಿತ್ತು. ನಿನ್ನೆ ಮನೆ ಗೋಡೆ ಪ್ಲಾಸ್ಟರಿಂಗ್ ಮಾಡುತ್ತಿದ್ದ ವೇಳೆ ದಂಪತಿ ಮೇಲೆ ಏಕಾಏಕಿ ಮೆಟ್ಟಿಲುಗಳ ಪಿಲ್ಲರ್ ಕುಸಿದು ಬಿದ್ದಿದೆ.

Raichur News: ರಾಯಚೂರಿನಲ್ಲಿ ಬೈಕ್‌ಗೆ ಟ್ರಕ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ರಾಯಚೂರಿನಲ್ಲಿ ಬೈಕ್‌ಗೆ ಟ್ರಕ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಮೃತರೆಲ್ಲಾ ನಗರದ ಸುಖಾಣಿ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ (Raichur City Traffic Police) ಎಫ್‌ಐಆರ್‌ ದಾಖಲಾಗಿದೆ.

Hatti Gold Mine: ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳ ಪತ್ತೆ

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳ ಪತ್ತೆ

ಭದ್ರತಾ ದೃಷ್ಟಿಯಿಂದ ಜಿಲ್ಲೆಯ ಸೂಕ್ಷ್ಮ ಪ್ರದೇಶವಾದ ಹಟ್ಟಿ ಚಿನ್ನದ ಗಣಿ ದ್ವಾರದ ಬಳಿ ಮದ್ದುಗಳು ಪತ್ತೆಯಾಗಿದ್ದರಿಂದ ಪೊಲೀಸರು ಪರಿಶೀಲನೆ ಚುರುಕುಗೊಳಿಸಿದ್ದಾರೆ. ಹಟ್ಟಿ ಚಿನ್ನದ ಗಣಿಯಲ್ಲಿ ಚಿನ್ನದ ಗಣಿಗಾರಿಕೆಗೆ ಬಳಸುವ ಮದ್ದುಗಳಾ, ಖಾಸಗಿ ಕಲ್ಲು ಕ್ವಾರೆಗಳಲ್ಲಿ ಕಲ್ಲು ಗಣಿಗಾರಿಕೆಗೆ ಬಳಸುವ ಮದ್ದುಗಳಾ, ಯಾರು ಎಲ್ಲಿಗೆ ಸಾಗಿಸುತ್ತಿದ್ದರು ಅನ್ನೋ ಬಗ್ಗೆ ತನಿಖೆ ಆರಂಭಗೊಂಡಿದೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದೆಲ್ಲೆಡೆ ಧಾರ್ಮಿಕ, ಸಾಂಸ್ಕೃತಿಕ ಪುನರುತ್ಥಾನ: ಪ್ರಲ್ಹಾದ್‌ ಜೋಶಿ

ಪ್ರಧಾನಿ ಮೋದಿ ನೇತೃತ್ವದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಪುನರುತ್ಥಾನ: ಜೋಶಿ

Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದೆಲ್ಲೆಡೆ ಇಂದು ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ ಪುನರುತ್ಥಾನದ ಕೈಂಕರ್ಯ ನಡೆದಿದೆ. ಮಕ್ಕಳಲ್ಲಿ ಸಾಂಸ್ಕೃತಿಕ, ಆಧ್ಯಾತ್ಮಿಕ ಪರಿಕಲ್ಪನೆ ಮೂಡಿಸಲಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Prasannananda Puri: ಮಹರ್ಷಿ ವಾಲ್ಮಿಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ, ಅಸ್ಪತ್ರೆಗೆ ದಾಖಲು

ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ, ಅಸ್ಪತ್ರೆಗೆ ದಾಖಲು

ವೈದ್ಯರ ಸಲಹೆಯಂತೆ, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ರಾಯಚೂರಿನಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಸದ್ಯ ಶ್ರೀಗಳು ಹೈದರಾಬಾದ್‌ನಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಠದ ಮೂಲಗಳು ಮತ್ತು ಆಸ್ಪತ್ರೆ ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರದ 6ನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ತುಂಗಾಭದ್ರ ಅಣೆಕಟ್ಟಿನ ಎಲ್ಲ ಗೇಟ್ ಬದಲಿಸುತ್ತೇವೆ ಎಂದ ಡಿಕೆಶಿ

DK Shivakumar: “ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಸರ್ಕಾರ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆಬ್ರವರಿ 14ರಂದು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆʼʼ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಕರ್ನಾಟಕದಲ್ಲಿ ಕನಕ ಗುರುಪೀಠ ಜಾತ್ಯತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕನಕ ಗುರುಪೀಠ ಜಾತ್ಯತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

ಬ್ರಹ್ಮಲೀನರಾದ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಸಮಾನ ಅವಕಾಶವಿರುವ ಸಮಸಮಾಜವನ್ನು ನಿರ್ಮಿಸುವುದು ಅವಶ್ಯಕ. ಶಿಕ್ಷಣವಿಲ್ಲದೇ ಪ್ರಗತಿ ಸಾಧ್ಯವಿಲ್ಲ. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಭೀಕರ ಸರಣಿ ಅಪಘಾತ; ಐವರು ಸ್ಥಳದಲ್ಲೇ ಸಾವು

ರಾಯಚೂರಿನಲ್ಲಿ ಭೀಕರ ಸರಣಿ ಅಪಘಾತ; ಐವರು ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಮಂಗಳವಾರ ಲಾರಿ ಹಾಗೂ ಎರಡು ಗೂಡ್ಸ್ ವಾಹನಾಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಇಂದು ಸಂಜೆ ಕುರಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ಲಾರಿ ಡಿಕ್ಕಿ ಹೊಡೆದಿದೆ.

ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್‌ ಶಾಸಕಿ ಮನೆಗೆ ನುಗ್ಗಿ ಜೀವ ಬೆದರಿಕೆ!

ಮರಳು ದಂಧೆ ವಿರುದ್ಧ ಸಮರ ಸಾರಿದ ಶಾಸಕಿಗೆ ಜೀವ ಬೆದರಿಕೆ!

ಜೀವ ಬೆದರಿಕೆ ಸಂಬಂಧ ರಾಯಚೂರು ಎಸ್ಪಿ ಅರುಣಾಂಶು ಗಿರಿ ಅವರ ಕಚೇರಿಗೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್‌ ಅವರು ತೆರಳಿ ದೂರು ನೀಡಿದ್ದಾರೆ. ಅಕ್ರಮ ಮರಳುಗಾರಿಕೆ ತಡೆಯಲು ಹೋದರೆ ಯಾರೂ ಇಲ್ಲದ ಸಮಯ ನೋಡಿ ಮನೆ ಬಳಿ ಬಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ತಮಗೆ ರಕ್ಷಣೆ ನೀಡಬೇಕು ಎಂದು ಶಾಸಕಿ ಕೋರಿದ್ದಾರೆ.

Siddaramananda Swamiji: ಕಾಗಿನೆಲೆ ಕನಕಗುರು ಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಇನ್ನಿಲ್ಲ

ಕಾಗಿನೆಲೆ ಕನಕಗುರು ಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಇನ್ನಿಲ್ಲ

ಸ್ವಾಮೀಜಿ (Siddaramananda Swamiji) ಇದೇ ಜ.12, 13, 14 ರಂದು ಅದ್ದೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿದ್ದರು. ಹಾಲುಮತ ಸಾಹಿತ್ಯ ಸಮ್ಮೇಳನ ಹಾಗೂ ಹಾಲುಮತ (Halumatha) ಪೂಜಾರಿಗಳ ಶಿಬಿರ ಅದ್ದೂರಿಯಾಗಿ ನಡೆದಿತ್ತು. ಕಳೆದ ಒಂದು ವಾರದಿಂದ ಸರಿಯಾಗಿ ಊಟ, ನಿದ್ದೆ ಮಾಡದೇ ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರಿಂದ ಬುಧವಾರ ರಾತ್ರಿ ಲೋ ಬಿಪಿಯಿಂದ ಸ್ವಾಮೀಜಿ ಬಳಲಿದ್ದರು.

Karnataka Weather Forecast: ನಾಳೆ ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ, ಉತ್ತರ ಒಳನಾಡಿಗೆ ಶೀತ ಗಾಳಿ ಎಚ್ಚರಿಕೆ!

ನಾಳೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಧಾರವಾಡ, ಗದಗ, ಬೀದರ್‌, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಶೀತ ಅಲೆಯ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

CM Siddaramaiah: ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಬಡವರ ಬದುಕು ಸರ್ವನಾಶ: ಸಿಎಂ ಸಿದ್ದರಾಮಯ್ಯ

ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಬಡವರ ಬದುಕು ಸರ್ವನಾಶ: ಸಿದ್ದರಾಮಯ್ಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾರಿಗೊಳಿಸಿದ್ದ ಜನಪರವಾಗಿದ್ದ ಮ ನರೇಗಾ ಕಾನೂನನ್ನು, 20 ವರ್ಷಗಳ ನಂತರ ಪ್ರಧಾನಿ ಮೋದಿ ಅವರು ಮಹಾತ್ಮಾ ಗಾಂಧಿಯವರ ಹೆಸರನ್ನೂ ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಹೆಸರಿಟ್ಟಿದ್ದಾರೆ. ಕೇಂದ್ರದ ಈ ಕ್ರಮವನ್ನು ರಾಜ್ಯದ ಜನರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Raichur News: ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಗದ್ದೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಕೂಲಿ ಕೆಲಸ ಮುಗಿಸಿ ಕೈಕಾಲು ತೊಳೆದುಕೊಂಡು ಮನೆಗೆ ಹೋಗಲು ಕಾಲುವೆ ಬಳಿ ಬಂದಿದ್ದರು. ಲಿಂಗಸುಗೂರು ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮಹಿಳೆಯರ ಶವ ಹೊರತೆಗೆದಿದ್ದಾರೆ. ಸದ್ಯ ಇಬ್ಬರು ಮಹಿಳೆಯರ ಮೃತದೇಹವನ್ನು ಲಿಂಗಸುಗೂರು ತಾಲೂಕಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

Loading...