ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಮನಗರ

ಕನಕಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ; ಗಣೇಶೋತ್ಸವದಲ್ಲಿ ಭಾಗಿ, ಕ್ಷೇತ್ರದ ಜನರ ಕುಶಲೋಪರಿ ವಿಚಾರಣೆ

ಕನಕಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ; ಗಣೇಶೋತ್ಸವದಲ್ಲಿ ಭಾಗಿ

CM DK Shivakumar: ಕನಕಪುರ ತಾಲೂಕಿನ ಚಿಕ್ಕೇಗೌಡನದೊಡ್ಡಿಯಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ 10ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ ವಿಘ್ನ ವಿನಾಶಕ ಶ್ರೀ ಗಣೇಶನಿಗೆ ಸಿಎಂ ಡಿ.ಕೆ. ಶಿವಕುಮಾರ್‌, ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.

200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ; ಕೇಂದ್ರದ ನಿಯಮಾನುಸಾರ ಬರ ತಾಲೂಕುಗಳ ಘೋಷಣೆ ಎಂದ ಸಿಎಂ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ: ಸಿಎಂ

CM DK Shivakumar: ನಾನು ಅನೇಕ ಕಡೆ ಭೇಟಿ ನೀಡಿ ಬರ ಪರಿಶೀಲನೆ ಮಾಡಿದ್ದು, ಈಗಾಗಲೇ 102 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಉಳಿದ ಕಡೆ ಪರಿಶೀಲನೆ ನಡೆಯುತ್ತಿದೆ. ಯಾರೂ ಆತುರ ಪಡುವುದು ಬೇಡ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಊಟ ಮಾಡುವಾಗಲೇ ಹೃದಯಾಘಾತ; ಮಗಳ ಮುಂದೆಯೇ ಪ್ರಾಣಬಿಟ್ಟ ತಂದೆ, ಆಘಾತಕಾರಿ ವಿಡಿಯೊ ಇಲ್ಲಿದೆ!

ಊಟ ಮಾಡುವಾಗಲೇ ಹೃದಯಾಘಾತ; ಮಗಳ ಮುಂದೆಯೇ ತಂದೆ ಸಾವು!

Ramanagara News: ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಲಿಂಗಯ್ಯ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಗಳ ಕಣ್ಣೆದುರೇ ತಂದೆಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

NICE Road: ನೈಸ್ ರಸ್ತೆ ಹಗರಣದ ವಿರುದ್ಧ ಇಡೀ ರಾಜ್ಯದ ಜನರು ಎದ್ದು ನಿಲ್ಲಬೇಕು: ಎಚ್‌ಡಿಕೆ ಕರೆ

ನೈಸ್ ರಸ್ತೆ ಹಗರಣದ ವಿರುದ್ಧ ಜನರು ಎದ್ದು ನಿಲ್ಲಬೇಕು: ಎಚ್‌ಡಿಕೆ ಕರೆ

ನೈಸ್ ರಸ್ತೆಗಾಗಿ 20 ವರ್ಷದಿಂದ ರೈತರ ಭೂಮಿ ವಶಕ್ಕೆ ಪಡೆದು ಇನ್ನೂ ಪರಿಹಾರದ ದುಡ್ಡು ಕೊಟ್ಟಿಲ್ಲ. ಅಭಿವೃದ್ಧಿ ಹೆಸರಲ್ಲಿ ರೈತರ ಭೂಮಿ ವಶಪಡಿಸಿಕೊಂಡು 20 ವರ್ಷದಿಂದ ಅನಧಿಕೃತವಾಗಿ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇತ್ತ ವೃಷಭಾವತಿ ನಾಲೆಯಲ್ಲಿ ತೇಲಿದ 500 ರುಪಾಯಿಯ ಕಂತೆ ಕಂತೆ ನೋಟು; ಅತ್ತ ನಕಲಿ ಔಷಧ ತಯಾರಿಸುತ್ತಿದ್ದ ಬೃಹತ್ ಜಾಲ ಪತ್ತೆ: ಏನಾಗ್ತಿದೆ ರಾಮನಗರದಲ್ಲಿ?

ರಾಮನಗರದಲ್ಲಿ ಬೃಹತ್ ನಕಲಿ ಔಷಧ ತಯಾರಿಸುತ್ತಿದ್ದ ಜಾಲ ಪತ್ತೆ

Ramanagara News: ರಾಮನಗರ ಸದ್ಯ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ರಾಮನಗರ ತಾಲೂಕಿನ ಭೈರಮಂಗಲದ ವೃಷಭಾವತಿ ನಾಲೆಯಲ್ಲಿ ಕಂತೆ ಕಂತೆ ನೋಟುಗಳು ತೇಲುತ್ತಿರುವುದನ್ನು ಕಂಡು ಬಂದಿದ್ದು, ಘಟನೆಯ ವಿಡಿಯೊ ವೈರಲ್‌ ಆಗಿದೆ. ಅತ್ತ ರಾಮನಗರದ ದೊಡ್ಡೇರಿ ಗ್ರಾಮದ ಬಳಿ ಫಾರ್ಮ್‌ಹೌಸ್‌ನಲ್ಲಿ ನಕಲಿ ಔಷಧ ದಂಧೆ ಜಾಲ ಪತ್ತೆಯಾಗಿದೆ. ಈ ಎರಡೂ ಘಟನೆಗಳ ಸಮಗ್ರ ತನಿಖೆಗೆ ಬಿಜೆಪಿ ಆಗ್ರಹಿಸಿದೆ.

Bidadi Township: ಕಣಿಮಿಣಿಕೆ ಬಳಿ ಪಾದಯಾತ್ರೆಗೆ ಅಡಿ ರೈತರು-ಪೊಲೀಸರ ನಡುವೆ ತಳ್ಳಾಟ: ಬಿಡದಿ ಟೌನ್‌ʼಶಿಪ್‌ ಹೋರಾಟ ಹೋರಾಟ ಸ್ಥಗಿತ

ಬಿಡದಿ ಟೌನ್‌ʼಶಿಪ್‌ ಹೋರಾಟ ಹೋರಾಟ ಸ್ಥಗಿತ

ಬಿಡದಿ ಟೌನ್‌ಶಿಪ್ ವಿರೋಧಿಸಿ ಬೈರಮಂಗಲದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೆ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ಬೆಂಗಳೂರು ದಕ್ಷಿಣ ಜಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಣಿಮಿಣಿಕೆ ಟೋಲ್ ಬಳಿ ಪೊಲೀಸರು ತಡೆದರು. ಈ ವೇಳೆ, ಪಾದ ಯಾತ್ರೆ ನಿರತ ಕಾರ್ಯ ಕರ್ತರು, ರೈತರು ಹಾಗೂ ಪೊಲೀಸರ ನಡುವೆ ಪರಸ್ಪರ ತಳ್ಳಾಟ ನಡೆಯಿತು.

JDS Padayatra: ಬೆಂಗಳೂರು ಪ್ರವೇಶಿಸದಂತೆ ಜೆಡಿಎಸ್‌ ಪಾದಯಾತ್ರೆಗೆ ಪೊಲೀಸರ ತಡೆ; ನಿಖಿಲ್‌ ಕುಮಾರಸ್ವಾಮಿ ವಶಕ್ಕೆ ಯತ್ನ, ಸ್ಥಳದಲ್ಲಿ ಹೈಡ್ರಾಮಾ!

ಬೆಂಗಳೂರು ಪ್ರವೇಶಿಸದಂತೆ ಜೆಡಿಎಸ್‌ ಪಾದಯಾತ್ರೆಗೆ ಪೊಲೀಸರ ತಡೆ

ರಾಮನಗರ ಬಳಿಯ ಕಣಿಮಿಣಿಕೆ ಟೋಲ್‌ ಬಳಿ ಪಾದಯಾತ್ರೆಯನ್ನು ಬೆಂಗಳೂರು ಪೊಲೀಸರು ತಡೆದರು. ಬೆಂಗಳೂರು ಪ್ರವೇಶಿಸದಂತೆ ಜೆಡಿಎಸ್‌ ಪಾದಯಾತ್ರೆಯನ್ನು ತಡೆದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬಳಿಕ ಜೆಡಿಎಸ್‌ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

147 ರೈತರ ಜೀವ ನುಂಗಿದ ಸಾಲ

147 ರೈತರ ಜೀವ ನುಂಗಿದ ಸಾಲ

ಕೃಷ್ಣಾ-ಭೀಮಾ ನದಿಯ ಬೃಹತ್ ಜಲಾಶಯ ದಿಂದ ಫಲವತ್ತಾದ ಭೂಮಿ ಹೊಂದಿರುವ ಯಾದಗಿರಿ ಜಿಲ್ಲೆಯ ರೈತರು ದುರಾದೃಷ್ಟವಶಾತ್ ಋಣ ಭಾರಕ್ಕೆ ನಲುಗಿ ಹೋಗಿದ್ದಾರೆ. ಕೃಷಿ ಚಟುವಟಿಕೆ, ಕೌಟುಂಬಿಕ ಕಾರ್ಯಕ್ರಮಗಳಿಗೆ ಮಾಡಿಕೊಂಡ ಸಾಲ ತೀರಿಸಲು ಆಗದೆ ಆತ್ಮ ಹತ್ಯೆ ಮೊರೆ ಹೋಗುತ್ತಿದ್ದಾರೆ

ಅಪ್ರಾಪ್ತ ಲಿವ್ ಇನ್ ಸಂಗಾತಿಯನ್ನು ಕೊಂದು ಹೂತುಹಾಕಿದ್ದ 16 ವರ್ಷದ ಬಾಲಕನ ಬಂಧನ

ಅಪ್ರಾಪ್ತ ಲಿವ್ ಇನ್ ಸಂಗಾತಿಯನ್ನು ಕೊಂದು 16 ವರ್ಷದ ಬಾಲಕ

ಅಪ್ರಾಪ್ತ ಬಾಲಕನೊಬ್ಬ ಜುಲೈ 10 ರಂದು ತನ್ನ ಲಿವ್ ಇನ್ ಪಾರ್ಟ್ನರ್ ಆಗಿದ್ದ 16 ವರ್ಷದ ಬಾಲಕಿಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯು ಇತರ ಇಬ್ಬರೊಂದಿಗೆ ಸೇರಿ ಆಕೆಯ ಮೃತದೇಹವನ್ನು ತಮ್ಮ ಕೃಷಿ ಜಮೀನಿನಲ್ಲಿ ಹೂತುಹಾಕಿದ್ದನು ಎಂದು ತಿಳಿದು ಬಂದಿದೆ.

Kanakapura murder: ಪ್ರೇಯಸಿಯನ್ನು ಗುಂಡಿಟ್ಟು ಕೊಂದು ತೋಟದಲ್ಲಿ ಹೂತುಹಾಕಿದ ಯುವಕ!

ಪ್ರೇಯಸಿಯನ್ನು ಕೊಂದು ತೋಟದಲ್ಲಿ ಹೂತುಹಾಕಿದ ಯುವಕ!

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಕೆಂಪಲನಾಥ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರೀತಿಸಿದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಂಶಯಗೊಂಡ ಯುವಕ, ಆಕೆಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿ, ಶವವನ್ನು ತೋಟದಲ್ಲಿ ಹೂತುಹಾಕಿದ್ದಾನೆ.

ಬಿಡದಿ ಟೌನ್‌ಶಿಪ್‌ ಯೋಜನೆ ರೂಪು ತಳೆದಿದ್ದು ಹೇಗೆ? 2006ರ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಿಂದ ಇಲ್ಲಿಯವರೆಗಿನ ಬೆಳವಣಿಗೆಯ ಸಮಗ್ರ ಚಿತ್ರಣ

ಬಿಡದಿ ಟೌನ್‌ಶಿಪ್‌ ಯೋಜನೆ ರೂಪು ತಳೆದಿದ್ದು ಹೇಗೆ?

Bidadi Township Row: ಬಿಡದಿ ಟೌನ್‌ಶಿಪ್‌ ವಿವಾದ ತಾರಕಕ್ಕೇರಿದೆ. ಕಾಂಗ್ರೆಸ್‌ ನೇತೃತ್ವದ ಸರಾರ ಈ ಯೋಜನೆಯನ್ನು ಜಾರಿಗೊಳಿಸಿಯೇ ಸಿದ್ಧ ಎಂದು ಘೋಷಿಸಿದರೆ ಜೆಡಿಎಸ್‌ ವಿರೋಧ ವ್ಯಕ್ತಪಡಿಸುತ್ತಿದೆ. ಈ ಯೋಜನೆಗೆ ತೀವ್ರ ವ್ಯಕ್ತಪಡಿಸುವ ಎಚ್‌.ಡಿ. ಕುಮಾರಸ್ವಾಮಿಯೇ ಇದನ್ನು ಆರಂಭಿಸಿದ್ದು ಎಂದಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆ ನಡೆದು ಬಂದ ಹಾದಿಯ ಪರಿಚಯ ಇಲ್ಲಿದೆ.

Bidadi Township: ನಾನು ಮಂಡಲಹಳ್ಳಿಗೆ ಹೋಗುತ್ತೇನೆ, ತಾಕತ್ತಿದ್ರೆ ನನ್ನ ವಿರುದ್ಧ ಎಫ್ಐಆರ್ ಮಾಡಿ: ಎಚ್‌.ಡಿ. ಕುಮಾರಸ್ವಾಮಿ ಸವಾಲು

ನಾನು ಮಂಡಲಹಳ್ಳಿಗೆ ಹೋಗುತ್ತೇನೆ, ತಾಕತ್ತಿದ್ರೆ ಎಫ್ಐಆರ್ ಮಾಡಿ

HD Kumaraswamy: ಸರ್ಕಾರದ ಚಿತಾವಣೆಯಿಂದಲೇ ಅಧಿಕಾರಿಗಳು ಸರ್ವೆಗೆ ಬಂದಿದ್ದಾರೆ. ಮುಖ್ಯಮಂತ್ರಿಗೆ ಇಷ್ಟೊಂದು ಹಠ ಏಕೆ ಎಂಬುದೇ ಅರ್ಥವಾಗುತ್ತಿಲ್ಲ. ರೈತರ ಮೇಲೆ ಎರಡು ಎಫ್ಐಆರ್‌ಗಳನ್ನು ಹಾಕಿದ್ದಾರೆ. ಅವರಿಗೆ ಧೈರ್ಯವಿದ್ದರೆ ನನ್ನ ವಿರುದ್ಧ ಕೇಸ್ ಹಾಕಲಿ ಎಂದು ಕೇಂದ್ರ ಸಚಿವ ಎಚ್‍.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

Bidadi Farmers protest: ಬಿಡದಿ ಟೌನ್‌ಶಿಪ್‌ ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆದು ಕಳಿಸಿದ ರೈತ ಮಹಿಳೆಯರು!

ಬಿಡದಿಯಲ್ಲಿ ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆದ ರೈತರು

ಬಿಡದಿ ಟೌನ್‌ಶಿಪ್‌ಗೆ ಮುಂದಾಗಿರುವ ರಾಜ್ಯ ಸರಕಾರ ತಕ್ಷಣ ಸರ್ವೆ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ವಾಪಸು ಕರೆಯಿಸಿಕೊಳ್ಳಬೇಕು. ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಕೂಡಲೇ ನಿಲ್ಲಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ. ಟಿ ಎಚ್ಚರಿಕೆ ನೀಡಿದ್ದಾರೆ.

Pravasi Prapancha: ಧರೆಗಿಳಿದ ಸೀತಾರಾಮ; ರಾಮನಗರದ ಚನ್ನಮಾನಹಳ್ಳಿಯ ಶ್ರೀ ಸೀತಾರಾಮಚಂದ್ರ ದೇವಾಲಯ

ಗಮನ ಸೆಳೆವ ಚನ್ನಮಾನಹಳ್ಳಿಯ ಸೀತಾರಾಮಚಂದ್ರ ದೇವಾಲಯ

ರಾಮನಗರದ ಚನ್ನಮಾನಹಳ್ಳಿಯಲ್ಲಿ ನಿರ್ಮಿಸಲ್ಪಟ್ಟ ಈ ಶ್ರೀ ಸೀತಾರಾಮಚಂದ್ರ ದೇವಾಲಯವು ಕೇವಲ ಒಂದು ಕಟ್ಟಡವಾಗಿರದೆ, ಅತ್ಯಂತ ಸುಂದರ ಹಾಗೂ ವೈಭವಯುತ ಕಲಾಕೃತಿಯಾಗಿ ಮೂಡಿಬರಲು ದೇಶದ ಹೆಸರಾಂತ ತಜ್ಞರು, ಅನುಭವಿ ಸ್ಥಪತಿಗಳು, ಶಿಲ್ಪಿಗಳು ಮತ್ತು ಚಿತ್ರಕಲಾವಿದರು ಶ್ರಮಿಸಿದ್ದಾರೆ. ತಮಿಳುನಾಡು ಸರಕಾರದ ಪ್ರಸಿದ್ಧ ಸ್ಥಪತಿಗಳಾದ, ಪದ್ಮಶ್ರೀ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀ ಮುತ್ತಯ್ಯ ಸ್ಥಪತಿಗಳ ಉನ್ನತ ನೇತೃತ್ವದಲ್ಲಿ ಚನ್ನಮಾನಹಳ್ಳಿಯ ಈ ದೇವಾಲಯದ ಸಂಪೂರ್ಣ ವಿನ್ಯಾಸ ನೆರವೇರಿತು.

ಚನ್ನಪಟ್ಟಣ ತಹಶೀಲ್ದಾರ್ ಮೇಲೆ  ಹಲ್ಲೆ ಮಾಡಿ ವಿವಸ್ತ್ರಗೊಳಿಸಿ 10 ಲಕ್ಷ ರೂ.ಗೆ ಬ್ಲ್ಯಾಕ್‌‌ಮೇಲ್; ರೌಡಿಶೀಟರ್ ಬಂಧನ, ಇನ್ನಿಬ್ಬರಿಗಾಗಿ ಶೋಧ

ಚನ್ನಪಟ್ಟಣ ತಹಶೀಲ್ದಾರ್ ಮೇಲೆ ಹಲ್ಲೆ; 10 ಲಕ್ಷ ರೂ.ಗೆ ಬ್ಲಾಕ್‌ಮೇಲ್

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಪ್ರಜ್ಞೆ ತಪ್ಪಿಸಿ, ವಿವಸ್ತ್ರಗೊಳಿಸಿ ಹಲ್ಲೆಗೈದು, ವಿಡಿಯೋ ಚಿತ್ರೀಕರಿಸಿಕೊಂಡು 10 ಲಕ್ಷ ರೂ.ಗೆ ಬ್ಲಾಕ್‌ಮೇಲ್‌ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೈಸೂರು ಮೂಲದ ರೌಡಿಶೀಟರ್ ಅನುಷ್, ಶೋಭರಾಜ್ ಮತ್ತು ನವೀನ್ ಎಂಬುವರು ಈ ಕೃತ್ಯ ಎಸಗಿದ್ದಾರೆ.

ರಾಮನಗರ ರಹೀಂ ನಗರ ಆಗುತ್ತೆ; ಮುಸ್ಲಿಂ ವಾರ್ಡ್‌ಗಳಲ್ಲಿ ಕಾನೂನುಬಾಹಿರ SIR ಆಗ್ತಿದೆ ಎಂದು ನಿಖಿಲ್‌ ಕುಮಾರಸ್ವಾಮಿ ಕಿಡಿ

ಮುಸ್ಲಿಂ ವಾರ್ಡ್‌ಗಳಲ್ಲಿ ಕಾನೂನುಬಾಹಿರ SIR: ನಿಖಿಲ್‌ ಆರೋಪ

BJP-JDS Protest: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಗಾಳಿಗೆ ತೂರಿ, ಕಲ್ಯಾಣ ಮಂಟಪದಲ್ಲಿ ಅಕ್ರಮವಾಗಿ ದಾಖಲೆ ಸೃಷ್ಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಶುಕ್ರವಾರ ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ರಾಮನಗರದಲ್ಲಿ 'SIR ಸ್ಕ್ಯಾಮ್', ಮತದಾರರ ಪಟ್ಟಿಯಲ್ಲಿ ಬಾಂಗ್ಲಾ ವಲಸಿಗರಿಗೆ ಮಣೆ:  ಎಚ್‌ಡಿಕೆ ಆರೋಪ

ಮತದಾರರ ಪಟ್ಟಿಯಲ್ಲಿ ಬಾಂಗ್ಲಾ ವಲಸಿಗರಿಗೆ ಮಣೆ: ಎಚ್‌ಡಿಕೆ ಆರೋಪ

Ramanagara SIR scam: ನಿಯಮದಂತೆ ಬಿಎಲ್‌ಒಗಳು ಮನೆ-ಮನೆಗೆ ಹೋಗಬೇಕಾದರೆ, ರಾಮನಗರದಲ್ಲಿ ಸಿಎಂ ಅವರು ಪ್ರಭಾವ ಬಳಸಿ ಸಾವಿರಾರು ಜನರನ್ನು ಕಲ್ಯಾಣ ಮಂಟಪದಲ್ಲಿ ಕೂರಿಸಿ SIR ಜಾತ್ರೆ ನಡೆಸುತ್ತಿದ್ದಾರೆ. ದೇಶದ ಭದ್ರತೆಗೆ ಸವಾಲಾಗಿರುವ ಬಾಂಗ್ಲಾ ನುಸುಳುಕೋರರನ್ನು ಇಲ್ಲಿ ಪೋಷಿಸಿ, ಅವರಿಗೆ ಮತದಾನದ ಹಕ್ಕು ಕೊಡಿಸುವ ವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

SIR in Karnataka: ರಾಮನಗರ SIR ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ; ಪ್ರಲ್ಹಾದ್‌ ಜೋಶಿ ಆರೋಪ

ರಾಮನಗರ SIR ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ; ಪ್ರಲ್ಹಾದ್‌ ಜೋಶಿ ಆರೋಪ

Pralhad Joshi: ರಾಮನಗರದಲ್ಲಿ ನಡೆದ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ ನಡೆದಿದೆ. ಇದು ಪ್ರಜಾಪ್ರಭುತ್ವದ ಆಶಯಕ್ಕೆ ದ್ರೋಹ ಬಗೆದಂತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ತಿರುಚಲು ಸರ್ಕಾರದ ಉನ್ನತ ಮಟ್ಟದಿಂದಲೇ ವ್ಯವಸ್ಥಿತವಾಗಿ ಸಂಚು ರೂಪಿಸಿದಂತಿದ್ದು, ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ ಮಾರ್ಗ: ವಿ. ಸೋಮಣ್ಣ

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ ಮಾರ್ಗ

V Somanna: ಚನ್ನಪಟ್ಟಣ ತಾಲೂಕಿನ ಎಲೆಕೇರಿ ಬಳಿ ನೂತನವಾಗಿ ನಿರ್ಮಿಸಿರುವ ರಸ್ತೆ ಮೇಲ್ಸೇತುವೆಯನ್ನು ಸೋಮವಾರ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ ರೈಲ್ವೆ ಮಾರ್ಗಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.

CP Yogeshwar: ಮನೆಗೆ ಪ್ರವೇಶ ನಿರಾಕರಣೆ; ಪುತ್ರಿ ನಿಶಾ ಆರೋಪಕ್ಕೆ ಶಾಸಕ ಸಿ.ಪಿ. ಯೋಗೇಶ್ವರ್‌ ಸ್ಪಷ್ಟನೆ ಏನು?

ಪುತ್ರಿ ನಿಶಾ ಆರೋಪಕ್ಕೆ ಶಾಸಕ ಸಿ.ಪಿ. ಯೋಗೇಶ್ವರ್‌ ಸ್ಪಷ್ಟನೆ ಏನು?

Nisha Yogeshwar: ನಿಶಾಳ ತಾಯಿ ನನ್ನಿಂದ ವಿಚ್ಚೇದನ ಪಡೆದು 25 ವರ್ಷಗಳಾಗಿವೆ. ಆಕೆ ಮತ್ತು ನನ್ನ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ. ಅದರೆ, ನನ್ನ ಮಗಳು ನನ್ನ ವಿರುದ್ಧವೇ ಇಲ್ಲ ಸಲ್ಲದ ಆರೋಪಗಳನ್ನು ಮಾಡಿರೋದು ನನ್ನ ಮನಸ್ಸಿದೆ ಘಾಸಿಯುಂಟು ಮಾಡಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ.

Nisha Yogeshwar: ನಾವು ಹುಟ್ಟಿ ಬೆಳೆದ ಮನೆಗೆ ನಮಗೆ ಪ್ರವೇಶವಿಲ್ಲ: ನಿಶಾ ಯೋಗೇಶ್ವರ್‌ ಕಣ್ಣೀರು, Video

ನಾವು ಹುಟ್ಟಿ ಬೆಳೆದ ಮನೆಗೆ ನಮಗೆ ಪ್ರವೇಶವಿಲ್ಲ: ನಿಶಾ ಯೋಗೇಶ್ವರ್‌

ಚನ್ನಪಟ್ಟಣದ ತಮ್ಮ ಸ್ವಗೃಹದ ಮುಂದೆ ನಿಂತು ಅಸಹಾಯಕತೆ ವ್ಯಕ್ತಪಡಿಸಿರುವ ನಿಶಾ ಯೋಗೇಶ್ವರ್‌ ಅವರು, ನಾವು ಹುಟ್ಟಿ ಬೆಳೆದ ನಮ್ಮ ಮನೆಗೆ ನಮಗೆ ಪ್ರವೇಶವಿಲ್ಲ. ನಮ್ಮ ಮನೆಗೆ ಈಗ ಬೀಗ ಹಾಕಲಾಗಿದೆ ಎಂದು ಹೇಳಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Channapatna News: 26 ವರ್ಷದ ಯುವತಿ ಜತೆ ಪ್ರೀತಿಗೆ ಮನೆಯವರ ಅಡ್ಡಿ: ಮನನೊಂದು 15 ವರ್ಷದ ಬಾಲಕ ಆತ್ಮಹತ್ಯೆ

26ರ ಯುವತಿ ಜತೆ ಪ್ರೀತಿಗೆ ಮನೆಯವರ ಅಡ್ಡಿ; ಬಾಲಕ ಆತ್ಮಹತ್ಯೆ

ಬಿಡದಿ ಮೂಲದ 26 ವರ್ಷದ ಯುವತಿ ಜತೆ ಬಾಲಕ ಪ್ರೀತಿಯಲ್ಲಿ ಬಿದ್ದಿದ್ದ. ಈ ಬಗ್ಗೆ ಪೋಷಕರಿಗೆ ಗೊತ್ತಾಗಿದ್ದು, ಬಾಲಕನಿಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಬಾಲಕ ಹಾಗೂ ಯುವತಿ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ನಂತರ ಯುವತಿ ಜತೆ ಗಲಾಟೆ ಮಾಡಿಕೊಂಡು ಏ.29ರಂದು ವಿಷ ಸೇವಿಸಿ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಇದೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Ramanagara News: ಬೆತ್ತಲೆ ಪೂಜೆ ಮಾಡಿದ್ರೆ 30 ಲಕ್ಷ ಹಣ; ಯುವತಿಗೆ ಟಾರ್ಚರ್ ನೀಡಿದ ಖದೀಮನ ವಿರುದ್ಧ ದೂರು ದಾಖಲು

ಬೆತ್ತಲೆ ಪೂಜೆ ಮಾಡಿದ್ರೆ 30 ಲಕ್ಷ ಹಣ; ಯುವತಿಗೆ ಟಾರ್ಚರ್ ನೀಡಿದ ಖದೀಮ!

ಒಂದು ದಿನ ಬೆತ್ತಲಾಗಿ ಪೂಜೆ ಕುಳಿತುಕೋ ಎಂದು ಒತ್ತಾಯಿಸಿ ಆರೋಪಿ ಕಿರುಕುಳ ನೀಡುತ್ತಿದ್ದಾನೆ ಎಂದು ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾಳೆ. ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಎಂಬಾತನ ವಿರುದ್ಧ ಯುವತಿ ದೂರು ನೀಡಿದ್ದಾಳೆ.

Elephant attack: ಪ್ರವಾಸಿ ತಾಣದಲ್ಲಿ ಆನೆ ದಾಳಿ: ಮೇಕೆದಾಟು ಬಳಿ ನುಗ್ಗಿಬಂದ ಕಾಡಾನೆ, ಮಹಿಳೆಗೆ ಗಾಯ

ಮೇಕೆದಾಟು ಬಳಿ ಪ್ರವಾಸಿಗರ ಮೇಲೆ ನುಗ್ಗಿಬಂದ ಕಾಡಾನೆ, ಮಹಿಳೆಗೆ ಗಾಯ

ಕನಕಪುರ (Kanakapura) ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ ಎರಗಿದೆ. ಈ ವೇಳೆ ಪ್ರವಾಸಿಗರು ಸ್ಥಳದಿಂದ ಎದ್ದೆನೋ ಬಿದ್ದೆನೋ ಎಂದು ಓಡಿದ್ದಾರೆ. ಈ ವೇಳೆ ಓರ್ವ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ ಅಲ್ಲಿಂದ ಕಾಡಿನೊಳಗೆ ಕಾಲ್ಕಿತ್ತಿದೆ.

Loading...