ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ರಾಮನಗರ
Murder Case: ಅನೈತಿಕ ಸಂಬಂಧ, ಗಂಡನನ್ನು ಕೊಲ್ಲಿಸಿ, ಆತ್ಮಹತ್ಯೆ ಎಂದು ಬಿಂಬಿಸಿದ ಗ್ರಾ.ಪಂ ಸದಸ್ಯೆ!

ಅನೈತಿಕ ಸಂಬಂಧ, ಗಂಡನನ್ನು ಕೊಲ್ಲಿಸಿ, ಆತ್ಮಹತ್ಯೆ ಎಂದ ಗ್ರಾ.ಪಂ ಸದಸ್ಯೆ!

Channapatna: ಜೂ. 24ರಂದು ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಗ್ರಾ.ಪಂ ಸದಸ್ಯೆ ಚಂದ್ರಕಲಾ ಪತಿ ಲೋಕೇಶ್ (45) ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಲೋಕೇಶ್ ಶವದ ಬಳಿ ವಿಷದ ಬಾಟಲಿ ಇಟ್ಟು, ಸೂಸೈಡ್ ಎಂದು ಬಿಂಬಿಸಲಾಗಿತ್ತು. ಈ ಸಂಬಂಧ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Physical Abuse: ಕುಟುಂಬ ವ್ಯಾಜ್ಯ ಪರಿಹರಿಸಲು ಬಂದ ಪೊಲೀಸ್‌ ಪೇದೆಯಿಂದ ಅತ್ಯಾಚಾರ, ಹಣ ಸುಲಿಗೆ: ದೂರು

ಕುಟುಂಬ ವ್ಯಾಜ್ಯ ಪರಿಹರಿಸಬಂದ ಪೇದೆಯಿಂದ ಅತ್ಯಾಚಾರ, ಹಣ ಸುಲಿಗೆ: ದೂರು

Physical Abuse: ಡಿಎಆರ್ ಪೇದೆ ಪುಟ್ಟಸ್ವಾಮಿ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದ್ದು, ಈತ 112 ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಚನ್ನಪಟ್ಟಣ ತಾಲ್ಲೂಕಿನ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿ, ಮಹಿಳೆಯನ್ನು ಪುಸಲಾಯಿಸಿ 12 ಲಕ್ಷ ರೂ. ಹಣ ಕೂಡಾ ಪಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ: ಡಿಸಿಎಂ ಡಿಕೆಶಿ

ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ: ಡಿಕೆಶಿ

DK Shivakumar: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ಇದಕ್ಕೆ ಅಗತ್ಯ ಮಾರ್ಗದರ್ಶನ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲಹೆ ನೀಡಿದ್ದಾರೆ.

HD Kumaraswamy: ಕೇಂದ್ರ ಸಚಿವ ಎಚ್‌ಡಿಕೆಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್‌ ರಿಲೀಫ್‌; ನ್ಯಾಯಾಂಗ ನಿಂದನೆ ವಿಚಾರಣೆಗೆ ತಡೆ

ಎಚ್‌ಡಿಕೆಗೆ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ತಡೆ

Supreme Court: ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಕುಮಾರಸ್ವಾಮಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

Self Harming: ಡಿಜಿಟಲ್‌ ಆರೆಸ್ಟ್‌ನಲ್ಲಿ 11 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ

ಡಿಜಿಟಲ್‌ ಆರೆಸ್ಟ್‌ನಲ್ಲಿ 11 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ

Self Harming: ವಿಕ್ರಮ್ ಗೋಸ್ವಾಮಿ ಹೆಸರಿನ ವ್ಯಕ್ತಿ ಸಿಬಿಐ ಅಧಿಕಾರಿ ಎಂದು ಕರೆಮಾಡಿ, ನಿನ್ನ ಮೇಲೆ ಆರೆಸ್ಟ್ ವಾರಂಟ್ ಬಂದಿದೆ ಎಂದು ಹೆದರಿಸಿದ್ದ. ನಿನ್ನನ್ನು ಪ್ರಕರಣವೊಂದರಲ್ಲಿ ಬಂಧಿಸುತ್ತೇನೆ ಎಂಬ ಬೆದರಿಕೆ ಹಾಕಿ ನಂತರ ಸಹಾಯದ ನೆಪದಲ್ಲಿ 1.95 ಲಕ್ಷ ರೂ. ಗಳನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದ.

B Saroja Devi: ಮಣ್ಣಲ್ಲಿ ಮಣ್ಣಾದ ಬಿ.ಸರೋಜಾದೇವಿ; ತಾಯಿಯ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

ಮಣ್ಣಲ್ಲಿ ಮಣ್ಣಾದ ಬಿ.ಸರೋಜಾದೇವಿ; ತಾಯಿಯ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

B Saroja Devi: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸರೋಜಾದೇವಿ ಅವರ ಅಂತ್ಯಕ್ರಿಯೆ ಮಂಗಳವಾರ ನೆರವೇರಿತು. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಿದ್ದು, ಪುತ್ರ ಗೌತಮ್ ಅಂತಿಮ ವಿಧಿ ವಿಧಾನ ನೆರವೇರಿಸಿದರು.

DK Suresh: ಬಮುಲ್ ರೈತರ ಸಂಸ್ಥೆ, ಇದನ್ನು ಬೆಳೆಸುವುದು ನಮ್ಮ ಕರ್ತವ್ಯ: ಡಿ.ಕೆ. ಸುರೇಶ್

ಬಮುಲ್ ರೈತರ ಸಂಸ್ಥೆ, ಇದನ್ನು ಬೆಳೆಸುವುದು ನಮ್ಮ ಕರ್ತವ್ಯ

DK Suresh: ನನಗೆ ಡೈರಿಯ ಸಂಬಳ, ಡೈರಿಯ ಅನುಕೂಲಗಳು ಬೇಡ. ನಾನು ಇರುವ ತನಕ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ನನ್ನ ಮನವಿ ಎಂದರೆ ನಂದಿನಿ ಉಳಿಸಿ, ಬೆಳೆಸಿ,‌ ಉತ್ಪನ್ನಗಳನ್ನು ಬಳಸಿ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

Road Accident: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ, ಮೂವರ ದುರ್ಮರಣ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ, ಮೂವರ ದುರ್ಮರಣ

Road Accident: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ ಹಾಕಿ ಫಲಕಗಳನ್ನು ಹಾಕಿದ್ದರೂ ಅಪಘಾತಗಳು ಸಂಭವಿಸುವುದು ತಪ್ಪಿಲ್ಲ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ರಾಮನಗರದ ಹತ್ತಿರ ಜಯಪುರ ಗೇಟ್ ಬಳಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

Rambhapuri Swamiji: ಡಿ.ಕೆ. ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ: ರಂಭಾಪುರಿ ಶ್ರೀ

ಡಿ.ಕೆ. ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ: ರಂಭಾಪುರಿ ಶ್ರೀ

Rambhapuri Swamiji: ಕರ್ನಾಟಕದಲ್ಲಿ ಕಾಂಗ್ರೆಸ್ ‌ಪ್ರಚಂಡ ಬಹುಮತ ಗಳಿಸಲು ಡಿ.ಕೆ.ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾದ ನಂತರ ಬಹಳ ಶ್ರಮ ಪಟ್ಟಿರುವುದು ರಾಜ್ಯದ ಜನರಿಗೆ ತಿಳಿದಿದೆ. ಚುನಾವಣೆ ನಂತರ ನಡೆದಿರುವ ಒಳ ಒಪ್ಪಂದ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ತಿಳಿದಿದೆ. ಆ ಒಡಂಬಡಿಕೆಯಂತೆ ನಡೆದುಕೊಂಡರೆ ಎಲ್ಲಾ ರಾಜಕಾರಣಿಗಳಿಗೆ ಗೌರವವಿದೆ ರಂಬಾಪುರಿ ಶ್ರೀಗಳು ತಿಳಿಸಿದ್ದಾರೆ.

Road Accident: ಕುಣಿಗಲ್‌ನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

ಕುಣಿಗಲ್‌ನಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರ ಸಾವು

Tumkur News: ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್​ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಮಾಗಡಿ ಪಟ್ಟಣದ ಸೀಬೇಗೌಡ (45), ಪತ್ನಿ ಶೋಭಾ (37) ಮಗಳು ದುಂಬಿಶ್ರಿ (21), ಮಗ ಭಾನುಕಿರಣ್ ಗೌಡ (15)ಎಂದು ಗುರುತಿಸಲಾಗಿದೆ.

Iqbal Hussain: ಮೂರು ತಿಂಗಳ ಬಳಿಕ DK ಶಿವಕುಮಾರ್‌ ಸಿಎಂ ಆಗ್ತಾರೆ; ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ

ಮೂರು ತಿಂಗಳ ಬಳಿಕ DK ಶಿವಕುಮಾರ್‌ ಸಿಎಂ ಆಗ್ತಾರೆ; ಇಕ್ಬಾಲ್ ಹುಸೇನ್

ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಕೂಗು ಜೋರಾಗಿಯೇ ಕೇಳಿ ಬರುತ್ತಿದೆ. ಅತ್ತ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಸದ್ದಿಲ್ಲದೆ ತಯಾರಿ ನಡೆಯುತ್ತಿದ್ದರೆ, ಇತ್ತ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆಗೆ ಕೆಲ ಶಾಸಕರು ಪಟ್ಟು ಹಿಡಿದಿದ್ದಾರೆ. ಇದೀಗ ರಾಮನಗರ ಶಾಸಕ ಇಕ್ಬಾಲ್ ಹುಸೈನ್ ಮುಂದಿನ ಮೂರು ತಿಂಗಳಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೊಸ ಬಾಂಬ್‌ ಒಂದನ್ನು ಸಿಡಿಸಿದ್ದಾರೆ.

2025ರ ಪರಿಸರ ಮಾಸ ಯಶಸ್ವಿಯಾಗಿ ಪೂರ್ಣಗೊಳಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್

‘ಸುಸ್ಥಿರ ಸಂಪನ್ಮೂಲ ನಿರ್ವಹಣಾ ಅಭಿಯಾನ’

ಹಸಿರು ಸಾರಿಗೆ ವ್ಯವಸ್ಥೆಗೆ ಪರಿವರ್ತನೆ ಹೊಂದುವುದು, ಸಂಪನ್ಮೂಲ ಪ್ರಧಾನ ವಿಧಾನವನ್ನು ಅಳವಡಿಸಿಕೊಳ್ಳುವುದು, ಪಾಲುದಾರರಲ್ಲಿ ಪರಿಸರ ಜಾಗೃತಿಯನ್ನು ಉಂಟು ಮಾಡುವುದು, ಈ ಮೂಲಕ ಸುಸ್ಥಿರ ಜೀವನ ಪಾಲಿಸುವಂತೆ ಮಾಡುವುದು ಮತ್ತು ಪರಿಸರದ ಮೇಲೆ ಸಕಾರಾತ್ಮಕ ಪರಿಣಾಮ ಉಂಟು ಮಾಡಲು ನಿರ್ಧಾರ

Nikhil Kumaraswamy: ರಾಮನಗರದಿಂದಲೇ ಸ್ಪರ್ಧಿಸುತ್ತೇನೆ: ನಿಖಿಲ್ ಕುಮಾರಸ್ವಾಮಿ ಘೋಷಣೆ

ರಾಮನಗರದಿಂದಲೇ ಸ್ಪರ್ಧಿಸುತ್ತೇನೆ: ನಿಖಿಲ್ ಕುಮಾರಸ್ವಾಮಿ

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಆರನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಚುನಾವಣೆಗೆ ನಿಲ್ಲುವ ಸಂದರ್ಭ ಬಂದರೆ ರಾಮನಗರದಲ್ಲಿಯೇ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Agriculture college: ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

Agriculture college: ಬೆಂಗಳೂರು ‌ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾವಣೆ ‌ಕಾರಣಕ್ಕೆ ಏನೆಲ್ಲಾ ಬದಲಾವಣೆಯಾಗುತ್ತಿದೆ ಎಂಬುದು ಜನರಿಗೆ ಅರ್ಥವಾಗುತ್ತಿದೆ. ಕೆಲವೊಬ್ಬರು ಇದನ್ನು ಟೀಕೆ ಮಾಡುತ್ತಿದ್ದಾರೆ. ಅವರುಗಳಿಗೆ ನಾನು ಉತ್ತರ ನೀಡಲು ಹೋಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Fake Doctor: ರಾಮನಗರದಲ್ಲಿ ನಕಲಿ ವೈದ್ಯನ ಚಿಕಿತ್ಸೆಯಿಂದ ಮಗು ಬಲಿ

ರಾಮನಗರದಲ್ಲಿ ನಕಲಿ ವೈದ್ಯನ ಚಿಕಿತ್ಸೆಯಿಂದ ಮಗು ಬಲಿ

ರಾಮನಗರದಲ್ಲಿ ಸಾಕಷ್ಟು ನಕಲಿ ಕ್ಲಿನಿಕ್​ಗಳು ತಲೆ ಎತ್ತಿದ್ದು ಅವುಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಅಂಥ ಒಬ್ಬ ನಕಲಿ ಡಾಕ್ಟರ್‌ (Fake Doctor) ನೀಡಿದ ಚಿಕಿತ್ಸೆಯ ಪರಿಣಾಮ ಆರು ತಿಂಗಳ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

Moral Policing: ಬೈಕ್‌ನಲ್ಲಿ ಹೋಗುತ್ತಿದ್ದ ಹಿಂದೂ ಯುವಕ, ಮುಸ್ಲಿಂ ಯುವತಿ ಮೇಲೆ ನೈತಿಕ ಪೊಲೀಸ್‌ ಗಿರಿ

ಹಿಂದೂ ಯುವಕ, ಮುಸ್ಲಿಂ ಯುವತಿ ಮೇಲೆ ನೈತಿಕ ಪೊಲೀಸ್‌ ಗಿರಿ

Moral Policing: ರಾಮನಗರ ಹೊರವಲಯದ ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ನೈತಿಕ ಪೊಲೀಸ್‌ ಗಿರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ರಾಮನಗರ ಗ್ರಾಮಾಂತರ ಪೊಲೀಸರು, ಒಬ್ಬನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

DK Shivakumar: ಬೇರೆಯವರ ಮುಂದೆ ಮಂಡಿಯೂರುವುದು ಕನಕಪುರದವರ ರಕ್ತದಲ್ಲಿ ಇಲ್ಲ ಎಂದ ಡಿಕೆಶಿ

ಬೇರೆಯವರ ಮುಂದೆ ಮಂಡಿಯೂರುವುದು ಕನಕಪುರದವರ ರಕ್ತದಲ್ಲಿ ಇಲ್ಲ: ಡಿಕೆಶಿ

ನಾನು ಇಡಿ, ಸಿಬಿಐ ಪ್ರಕರಣವನ್ನು ಹಿಂಪಡೆಯಲು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ ಕಾರಣ ನಾನು 100 ಕೋಟಿ ರೂ. ಮಾನಹಾನಿ ಪ್ರಕರಣ ದಾಖಲಿಸಿದ್ದೆ. ಇದಕ್ಕಾಗಿ 1 ಕೋಟಿ ರೂ. ಶುಲ್ಕ ಠೇವಣಿಯನ್ನು ನ್ಯಾಯಾಲಯಕ್ಕೆ ಕಟ್ಟಿದ್ದೇನೆ. ಈ ಪ್ರಕರಣವನ್ನು ಬೆಂಗಳೂರಿನಲ್ಲಿ ನಡೆಸಬೇಕು ಎಂದು ಹೈಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದರು. ಅದು ವಜಾ ಆಗಿದೆ. ಹೀಗಾಗಿ ಇಂದು ನಾನು ಸಲ್ಲಿಸಿರುವ ದಾಖಲೆಗಳ ದೃಢಪಡಿಸಬೇಕಿತ್ತು. ಹೀಗಾಗಿ ನ್ಯಾಯಾಲಯದ ವಿಚಾರಣೆಯಲ್ಲಿ ಭಾಗಿಯಾಗಿದ್ದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Hemavathy Water: ಉಲ್ಬಣಗೊಂಡ ಹೇಮಾವತಿ ಕಿಚ್ಚು; ಜಿಲ್ಲೆಗಳ ನಡುವೆ ನೀರಿಗಾಗಿ ಜಗಳ, ರೈತರು- ಸ್ವಾಮೀಜಿಗಳ ಮೇಲೆ ಕೇಸ್

ಉಲ್ಬಣಗೊಂಡ ಹೇಮಾವತಿ ಕಿಚ್ಚು; ಜಿಲ್ಲೆಗಳ ನಡುವೆ ನೀರಿಗಾಗಿ ಜಗಳ

Hemavathi water dispute:‌ ತುಮಕೂರಿನ ಗುಬ್ಬಿಯ ಸಂಕಾಪುರದ ಕಾಮಗಾರಿ ಸ್ಥಳದಲ್ಲಿ ಜಿಲ್ಲಾಡಳಿತ ಹೇರಿದ್ದ ನಿಷೇಧಾಜ್ಞೆ ಉಲ್ಲಂಘಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಕಾಮಗಾರಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ ಮುಖಂಡ ದಿಲೀಪ್, ನಾಲ್ವರು ಸ್ವಾಮೀಜಿಗಳು ಸೇರಿದಂತೆ ಹಲವರ ಮೇಲೆ ಕೇಸ್ ಬಿದ್ದಿದೆ.

Rename Ramanagara District: ರಾಮನಗರ ಇನ್ನುಮುಂದೆ 'ಬೆಂಗಳೂರು ದಕ್ಷಿಣ ಜಿಲ್ಲೆ'; ಮರುನಾಮಕರಣಕ್ಕೆ ಸಚಿವ ಸಂಪುಟ ಒಪ್ಪಿಗೆ

ರಾಮನಗರ ಇನ್ನುಮುಂದೆ 'ಬೆಂಗಳೂರು ದಕ್ಷಿಣ ಜಿಲ್ಲೆ; ಸಂಪುಟ ಒಪ್ಪಿಗೆ

Rename Ramanagara District: ವಿಶ್ವದಲ್ಲೇ ಬೆಂಗಳೂರು ದಕ್ಷಿಣ ದೊಡ್ಡದಾಗಿ ಬೆಳೆಯುತ್ತಿದೆ. ಕಾನೂನು ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಿದ್ದೇವೆ. ಉಳಿದಂತೆ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Magadi News: ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರ ಸಾವು, ನಾಲ್ವರ ರಕ್ಷಣೆ

ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರ ಸಾವು

Magadi News: ಮಾಗಡಿಯ ವೈಜಿ ಗುಡ್ಡ ಜಲಾಶಯ ವೀಕ್ಷಣೆಗೆಂದು 7 ಯುವತಿಯರು ತೆರಳಿದ್ದರು. ಈ ವೇಳೆ ಒಬ್ಬ ಯುವತಿ ನೀರಿಗೆ ಬಿದ್ದಿದ್ದು, ಆಕೆಯ ರಕ್ಷಣೆಗೆ ಉಳಿದ ಸ್ನೇಹಿತೆಯರು ತೆರಳಿದ್ದಾರೆ. ಕೂಡಲೇ ಸ್ಥಳೀಯ ಯುವಕ ನಾಲ್ವರು ಯುವತಿಯರನ್ನು ರಕ್ಷಿಸಿದ್ದು, ಇನ್ನುಳಿದ ಮೂವರು ನೀರುಪಾಲಾಗಿದ್ದಾರೆ.

Bidadi Girl death case: ಬಿಡದಿ ಬಾಲಕಿ ಸಾವು ಪ್ರಕರಣ; ಅತ್ಯಾಚಾರ ನಡೆದಿಲ್ಲ ಎಂದ ಎಫ್‌ಎಸ್ಎಲ್ ವರದಿ

ಬಿಡದಿ ಬಾಲಕಿ ಸಾವು ಪ್ರಕರಣ; ಅತ್ಯಾಚಾರ ನಡೆದಿಲ್ಲ ಎಂದ ಎಫ್‌ಎಸ್ಎಲ್ ವರದಿ

Bidadi Girl death case: ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ತಾಯಿ ಸೇರಿ ಕುಟುಂಬದವರು ಆರೋಪಿಸಿದ್ದರು. ಹಾಗಾಗಿ, ಬಾಲಕಿ ದೇಹದ 32 ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್ಎಲ್‌ಗೆ ಕಳುಹಿಲಾಗಿತ್ತು. ಆದರೆ, ಎಫ್‌ಎಸ್ಎಲ್‌ ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂಬುದು ಗೊತ್ತಾಗಿದೆ ಎಂದು ರಾಮನಗರ ಎಸ್‌ಪಿ ತಿಳಿಸಿದ್ದಾರೆ.

DK Shivakumar: ನಾಳೆ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿಕೆ ಶಿವಕುಮಾರ್‌

ನಾಳೆ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿಕೆ ಶಿವಕುಮಾರ್‌

"ಭಯೋತ್ಪಾದನೆ ವಿರುದ್ಧ ನಮ್ಮ ದೇಶದ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತಿದ್ದೇನೆ" ಎಂದಿದ್ದಾರೆ ಡಿಕೆ‌ ಶಿವಕುಮಾರ್ (DK Shivakumar).

Car Accident: ಚನ್ನಪಟ್ಟಣದಲ್ಲಿ ಮರಕ್ಕೆ ಕಾರು ಡಿಕ್ಕಿ; ಒಬ್ಬ ಸಾವು, ನಾಲ್ವರು ಯುವಕರ ಸ್ಥಿತಿ ಗಂಭೀರ

ಚನ್ನಪಟ್ಟಣದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಒಬ್ಬ ಯುವಕ ಸಾವು

Car Accident: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಪಾಂಡುಪುರ ಗ್ರಾಮದ ಸಮೀಪ ಅಪಘಾತ ನಡೆದಿದೆ. ಬೆಂಗಳೂರಿನಿಂದ ಕಬ್ಬಾಳು ದೇವಸ್ಥಾನಕ್ಕೆ ಐವರು ಸ್ನೇಹಿತರು ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

Road Accident: ರಾಮನಗರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ರಾಮನಗರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ಕಬ್ಬಾಳು ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಕಾರು ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಚಿರು ಎಂಬಾತನ ಸ್ಥಿತಿ ಗಂಭೀರವಾಗಿದೆ.

Loading...