ಕುಮಾರಸ್ವಾಮಿಯನ್ನು ಚರ್ಚೆಗೆ ಕರೆದ ಡಿಸಿಎಂ
ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಬೇಕಾದರೆ ಚರ್ಚೆಗೆ ಬರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸವಾಲು ಹಾಕಿದ್ದಾರೆ. ಇದಕ್ಕಾಗಿ ಮಾಧ್ಯಮಗಳೇ ಚರ್ಚೆಗೆ ದಿನಾಂಕ ನಿಗದಿ ಮಾಡಿ 3 ದಿನ ಮುಂಚಿತವಾಗಿ ನನಗೆ ಮಾಹಿತಿ ನೀಡಲಿ. ಚರ್ಚೆಗೆ ಬರುತ್ತೇನೆ ಎನ್ನುವವರನ್ನು ಬೇಡ ಎನ್ನಲು ಆಗುತ್ತದೆಯೇ ಎಂದು ಅವರು ಪ್ರಶ್ನಿಸಿದರು.