Daily Horoscope: ಇಂದು ರವಿಯ ಪ್ರವೇಶ- ಈ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಭಾರೀ ಯಶಸ್ಸು!
ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ವರ್ಷ ಶರದೃತು ಕಾರ್ತಿಕ ಮಾಸೆ ಶುಕ್ಲ ಪಕ್ಷದ ಅಷ್ಟಮಿ ತಿಥಿ, ಉತ್ತರಷಾಡ ನಕ್ಷತ್ರದ ಅಕ್ಟೋಬರ್ 29ನೇ ತಾರೀಖಿನ ಬುಧವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೀಗಿದೆ.
-
ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಶರದೃತು ಕಾರ್ತಿಕ ಮಾಸೆ ಶುಕ್ಲ ಪಕ್ಷದ ಉತ್ತರಷಾಡ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಇಂದು ಉತ್ತರಷಾಡ ನಕ್ಷತ್ರ ಇದ್ದು ಇದರ ಅಧಿಪತಿ ರವಿ ಆಗಿದ್ದಾನೆ. ಮೇಷ ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚಿನ ಯಶಸ್ಸು ಸಿಗಲಿದ್ದು ನಿಮ್ಮ ಪ್ರತಿಷ್ಠೆ ಗೆ ಗೌರವ ಸಿಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಭಾಗ್ಯೋದಯವಾದ ದಿನವಾಗಿದೆ.
ವೃಷಭ ರಾಶಿ: ವೃಷಭ ರಾಶಿ ಅವರಿಗೆ ಇಂದು ಭಾಗ್ಯೋದಯವಾದ ದಿನವಾಗಿದೆ. ಇಂದು ಮನಸ್ಸಿಗೆ ನೆಮ್ಮದಿ ಇದೆ. ಆದರೆ ನಿಮ್ಮ ವ್ಯಕ್ತಿತ್ವ ಬಗ್ಗೆ ಟೀಕೆಗಳು ಕೇಳಿ ಬರಬಹುದು. ಹಾಗಾಗಿ ವಿನಯತೆ ಯಿಂದ ನೀವು ಇರಬೇಕಾಗುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಈ ದಿನ ಸ್ವಲ್ಪ ಕ್ಷೇಷಕರವಾದ ದಿನವಾಗಿದೆ. ಇಂದು ಯಾವುದೇ ಮುಖ್ಯವಾದ ನಿರ್ಧಾರಗಳನ್ನು ಮಾಡಲು ಹೋಗಬೇಡಿ. ನಿಮ್ಮ ಪ್ರೀತಿ ಪಾತ್ರ ರಿಂದ ಯಾವುದೇ ಸಹಕಾರ ನಿಮಗೆ ಸಿಗುವುದಿಲ್ಲ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಎಲ್ಲ ರೀತಿಯಿಂದಲೂ ಸಹಕಾರ ಸಿಗಲಿದ್ದು ದಾಂಪತ್ಯ, ಮಿತೃತ್ವದಲ್ಲಿ ಕೂಡ ನೆಮ್ಮದಿ ಸಿಗಲಿದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಈ ದಿನ ಸಾಮಾಜಿಕ ಚಟುವಟಿಕೆ ಗಳಲ್ಲಿ ಜಯ ಪ್ರಾಪ್ತಿ ಯಾಗಲಿದೆ. ನಿಮ್ಮ ಶತ್ರುಗಳನ್ನು ನೀವು ಹಿಮ್ಮೆಟ್ಟಲಿದ್ದೀರಿ. ಯಾರೆಲ್ಲ ಸೋಷಿಯಲ್ ಮೀಡಿಯಾ, ಟಿವಿಯಲ್ಲಿ ಕೆಲಸ ಮಾಡುತ್ತಿದ್ದೀರೋ ಅಂತವರಿಗೆ ಉತ್ತಮವಾದ ದಿನವಾಗಿದೆ. ಫಿಟ್ ನೆಸ್, ಜಿಮ್ ಇತ್ಯಾದಿಯಲ್ಲಿ ಕೆಲಸ ಮಾಡು ವವರಿಗೂ ಉತ್ತಮ ದಿನವಾಗಿದೆ.
ಕನ್ಯಾ ರಾಶಿ: ಕನ್ಯಾ ರಾಶಿ ಅವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಪ್ರೇಮ,ಪ್ರೀತಿ ದಾಂಪತ್ಯದಲ್ಲಿ ಕಷ್ಟ ಆಗಬಹುದು. ಮಕ್ಕಳಿಂದ ತೊಂದರೆ ಆಗಲಿದ್ದು ಬಿಸೆನೆಸ್ ವ್ಯವಹಾರದಲ್ಲಿ ಲಾಸ್ ಆಗುವ ಸಾಧ್ಯತೆ ಇದೆ. ಬುದ್ದಿವಂತಿಕೆಯಿಂದ ಕೆಲಸ ಮಾಡಿದರೆ ಎಲ್ಲವೂ ಒಳಿತು ಆಗಲಿದೆ.
ತುಲಾ ರಾಶಿ: ತುಲಾ ರಾಶಿ ಅವರಿಗೆ ನಿಮ್ಮ ಆಸ್ತಿ ಪಾಸ್ತಿ ವಿಚಾರ, ತಾಯಿಯ ಆರೋಗ್ಯ ಬಗ್ಗೆ ಹೆಚ್ಚಿನ ಗಮನ ವನ್ನು ನೀಡಬೇಕಾಗುತ್ತದೆ. ಕೋರ್ಟ್ ,ಕಛೇರಿ ವ್ಯವಹಾರದಲ್ಲಿ ಇರುವವರಿಗೆ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ.
ಇದನ್ನು ಓದಿ:Vastu Tips: ಅಪ್ಪಿತಪ್ಪಿಯೂ ಈ ಜಾಗಗಳಲ್ಲಿ ರಂಗೋಲಿ ಹಾಕಬೇಡಿ ಎನ್ನುತ್ತದೆ ವಾಸ್ತು; ಯಾಕೆ ಗೊತ್ತೇ?
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಅತ್ಯುತ್ತಮ ವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಮಾಸ್ ಮೀಡಿಯಾ, ಪತ್ರಿಕೋದ್ಯಮದಲ್ಲಿ ಇದ್ದೀರಿ ಅಂತವರಿಗೆ ಉತ್ತಮ ದಿನವಾಗಿದೆ.
ಧನಸ್ಸು ರಾಶಿ: ಧನಸ್ಸು ರಾಶಿ ಅವರು ನಿಮ್ಮ ಸಂಸಾರ, ಕುಟುಂಬದ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ. ನಿಮ್ಮ ಮನಸ್ಸಿನ ನೆಮ್ಮದಿಯನ್ನು ನಿಮ್ಮ ಮನೆಯವರಿಗೂ ಹಂಚಿಕೊಳ್ಳಬೇಕಾಗುತ್ತದೆ
ಮಕರ ರಾಶಿ: ಮಕರ ರಾಶಿ ಅವರಿಗೆ ಈ ದಿನ ಅತ್ಯುತ್ತಮವಾದ ದಿನವಾಗಿದೆ. ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ಮನಸ್ಸಿನ ನೋವೆಲ್ಲ ಮಾಯವಾಗಲಿದೆ. ಇಂದು ಭಾಗ್ಯೋದಯವಾದ ದಿನವಾಗಿದ್ದು ಮನಸ್ಸಿಗೆ ಬಹಳಷ್ಟು ಖುಷಿ ಸಿಗಲಿದೆ.
ಕುಂಭರಾಶಿ: ಕುಂಭ ರಾಶಿ ಅವರಿಗೆ ಈ ದಿನ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರಗಳನ್ನು ಮಾಡಲು ಹೋಗಬೇಡಿ. ಯಾವುದೇ ಕೆಲಸಗಳು ಇಂದು ನಿಮ್ಮ ಪರ ಆಗುವುದಿಲ್ಲ. ಹಣ ವ್ಯಯವಾಗುವ ಸಾಧ್ಯತೆ ಕೂಡ ಹೆಚ್ಚು ಇದೆ. ಆರೋಗ್ಯದಲ್ಲಿ ಹೆಚ್ಚಿನ ಗಮನ ನೀಡಬೇಕು.
ಮೀನ ರಾಶಿ: ಮೀನ ರಾಶಿ ಅವರಿಗೆ ಅತ್ಯುತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು, ಮನಸ್ಸಿಗೆ ನೆಮ್ಮದಿ ಇದ್ದು ಮಿತ್ರರಿಂದ ನೆಮ್ಮದಿ ಮತ್ತು ಧನ ಆಗಮನದ ಸೂಚನೆ ಕೂಡ ಇದೆ.