ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಶಿವಮೊಗ್ಗ

Road Accident: ಮತ್ತೊಂದು ಭೀಕರ ಅಪಘಾತ, ಬಸ್ಸಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು

ಮತ್ತೊಂದು ಭೀಕರ ಅಪಘಾತ, ಬಸ್ಸಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು

ಮೃತರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಚಾಲಕ ಸೇರಿದಂತೆ ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಂದೇ ಕುಟುಂಬದ 6 ಜನ ಪ್ರಯಾಣ ಮಾಡುತ್ತಿದ್ದರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ, ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.

Self Harming: ಒಂದೇ ದಿನದಲ್ಲಿ ಇಬ್ಬರು ಪೊಲೀಸ್‌ ಪೇದೆಗಳ ಆತ್ಮಹತ್ಯೆ, ಠಾಣೆಯಲ್ಲೇ ನೇಣು ಹಾಕಿಕೊಂಡ ಕಾನ್‌ಸ್ಟೇಬಲ್

ಒಂದೇ ದಿನದಲ್ಲಿ ಇಬ್ಬರು ಪೊಲೀಸ್‌ ಪೇದೆಗಳ ಆತ್ಮಹತ್ಯೆ

ರಾಜ್ಯದಲ್ಲಿ ಇಬ್ಬರು ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ (Shivamogga) ಮೊಹಮ್ಮದ್ ಝಕ್ರಿಯ ಎಂಬ ಸಂಚಾರಿ ಪೊಲೀಸ್‌ ಪೇದೆ (police constable) ಠಾಣೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮದ್ದೂರಿನಲ್ಲಿ (Madduru) ರಮೇಶ್‌ ಎಂಬವರು ವಿಶ್ರಾಂತಿ ಗೃಹದಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪ್ರಾಣ ತೆಗೆದುಕೊಂಡಿದ್ದಾರೆ.

ಜ.3ರಿಂದ ಸಾಗರ ಸುತ್ತ ಸಹೃದಯರಿಗೊಂದು ಸಹೃದಯೋತ್ಸವ

ಜ.3ರಿಂದ ಸಾಗರ ಸುತ್ತ ಸಹೃದಯರಿಗೊಂದು ಸಹೃದಯೋತ್ಸವ

ಇತಿಹಾಸ ಸಮ್ಮೇಳನದ ಮೂಲಕ ತೆರೆದುಕೊಂಡ ಸಹೃದಯ ಬಳಗ ಕಳೆದ 25 ವರ್ಷ ಗಳಿಂದ ಸಾಗರೋ ತ್ಸವದ ಹೆಸರಿನಲ್ಲಿ ಒಂದಿಲ್ಲೊಂದು ಜನಾಕರ್ಷಕ ಕರ್ಯಕ್ರಮ ನೀಡುತ್ತ ಬಂದಿದೆ. ಆರಂಭದ 7 ವರ್ಷ ಇತಿಹಾಸ ವೇದಿಕೆಯೊಂದಿಗೆ ಇತಿಹಾಸ ಸುತ್ತುವರಿದ ಸಮ್ಮೇಳನ ಆಯೋಜಿಸಿ ಕೆಳದಿ ಸೇರಿದಂತೆ ಮಲೆ ನಾಡ ಭಾಗದ ರಾಜಮನೆತನದ ಇತಿಹಾಸದ ಪರಿಚಯ ಅದನ್ನು ತಿಳಿಯುವ ಅಗತ್ಯವನ್ನು ಜನಮಾನಸಕ್ಕೆ ಮುಟ್ಟಿಸುವ ಕಾರ್ಯ ಮಾಡಿತ್ತು.

ಹೊನ್ನೇಸರದ ಪಿಎಂಶ್ರೀ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 22 ಜನ ಶಿಕ್ಷಕರು !

ಹೊನ್ನೇಸರದ ಪಿಎಂಶ್ರೀ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 22 ಜನ ಶಿಕ್ಷಕರು !

ಹಳ್ಳಿಯ ಈ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಬರೋಬ್ಬರಿ 22 ಶಿಕ್ಷಕರು ಕರ್ತವ್ಯ ಮಾಡುತ್ತಿದ್ದಾರೆ. ಆ 22 ಶಿಕ್ಷಕರ ಪೈಕಿ 19 ಜನರು ಮಹಿಳಾ ಶಿಕ್ಷಕರು ಎನ್ನುವುದು ಮತ್ತೊಂದು ವಿಶೇಷ. ಹೀಗೆ 19 ಶಿಕ್ಷಕಿಯರನ್ನು ಮೂರು ಪುರುಷ ಶಿಕ್ಷಕರನ್ನು ಹೊಂದಿರುವ ಅಪರೂಪದ ಶಾಲೆಯೇ ಹೆಗ್ಗೋಡಿನ ಹೊನ್ನೇಸರ ಪಿಎಂಶ್ರೀ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆ.

Hulikal Ghat Bus Accident: ಹುಲಿಕಲ್ ಘಾಟ್‌ನಲ್ಲಿ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿ; ಮಗು ಸಾವು, ಹಲವರಿಗೆ ಗಾಯ

ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ ಅಪಘಾತ; ಮಗು ಸಾವು, ಹಲವರಿಗೆ ಗಾಯ

Bus Accident in Shivamogga: ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ದುರ್ಗಾಂಬ ಬಸ್, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್‌ ಘಾಟ್‌ನಲ್ಲಿ ಅಪಘಾತಕ್ಕೀಡಾಗಿದ್ದು, ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮಗು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

‌ವಿದೇಶದಲ್ಲಿ ಯಕ್ಷಗಾನ ಮೇಳ ಕಟ್ಟಿದ ಕೆನಡಾ ವಿವಿ ಪ್ರೊಫೆಸರ್

ವಿದೇಶದಲ್ಲಿ ಯಕ್ಷಗಾನ ಮೇಳ ಕಟ್ಟಿದ ಕೆನಡಾ ವಿವಿ ಪ್ರೊಫೆಸರ್

ತಮ್ಮ ಉದ್ಯೋಗ ನಿಮಿತ್ತ ಅಮೆರಿಕಾ, ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲಿರುವ ನಮ್ಮವರು ಅನೇಕರು ಯಕ್ಷಗಾನದ ಮೇಲಿನ ಪ್ರೀತಿಯಿಂದ ತಮ್ಮ ವೃತ್ತಿಯ ನಡುವೆಯೂ ಅಲ್ಲಿ ಯಕ್ಷ ಸಂಘಟನೆಯನ್ನು ಕಟ್ಟಿ ಪ್ರದರ್ಶನ ನೀಡುವ ಮತ್ತು ಇಲ್ಲಿಯ ಕಲಾವಿದರನ್ನೂ ಕರೆಸಿ ವೇದಿಕೆ ಕಲ್ಪಿಸುವ ಕೆಲಸ ಹಿಂದಿನಿಂದಲೂ ನಡೆಸಿಕೊಂಡು ಬರುತ್ತಿದ್ದಾರೆ ಈಗಲೂ ಮುಂದುವರಿದಿದೆ.

ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಯುವಕನಿಗೆ ಚಾಕು ಇರಿದ ಕಿಡಿಗೇಡಿಗಳು!

ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಯುವಕನಿಗೆ ಚಾಕು ಇರಿತ

Shivamogga News: ಚಾಕು ಇರಿತಕ್ಕೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಳೆ ವೈಷಮ್ಯದಿಂದಾಗಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Monkey Disease: ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ, 8 ಜನರಲ್ಲಿ ಕೆಎಫ್‌ಡಿ ವೈರಸ್

ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ, 8 ಜನರಲ್ಲಿ ಕೆಎಫ್‌ಡಿ ವೈರಸ್

ಸಾಮಾನ್ಯವಾಗಿ ಈ ಸೋಂಕು (Kyasanur Forest Disease) ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕಂಡುಬರುತ್ತಿತ್ತು. ಆರೋಗ್ಯ ಇಲಾಖೆ ಇದಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಸಹ ತೆಗೆದುಕೊಳ್ಳುತ್ತಿತ್ತು. ಆದರೆ ಈ ವರ್ಷ ಡಿಸೆಂಬರ್ ತಿಂಗಳಲ್ಲೇ ಈ ಸೋಂಕು ಕಾಣಿಸಿಕೊಂಡಿದೆ. ಮಲೆನಾಡು ಭಾಗದ ಕಾಡಂಚಿನ ಪ್ರದೇಶಗಳ ಗ್ರಾಮಸ್ಥರ ಜೊತೆಗೆ, ಆರೋಗ್ಯ ಇಲಾಖೆಗೂ ಈಗ ದೊಡ್ಡ ಆತಂಕ ಎದುರಾಗಿದೆ.

Road Accident: ರಸ್ತೆಯಲ್ಲಿ ಬಿದ್ದವರ ಮೇಲೆ ಟ್ರಾಕ್ಟರ್‌ ಹರಿದು ಇಬ್ಬರು ಯುವಕರ ಸಾವು

ರಸ್ತೆಯಲ್ಲಿ ಬಿದ್ದವರ ಮೇಲೆ ಟ್ರಾಕ್ಟರ್‌ ಹರಿದು ಇಬ್ಬರು ಯುವಕರ ಸಾವು

ಎರಡು ಬೈಕುಗಳು (Bike Accident) ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ, ಬೈಕ್ ಚಾಲಕ ಮತ್ತು ಹಿಂಬದಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಟ್ರ್ಯಾಕ್ಟರ್ ಕೆಳಕ್ಕೆ ಬಿದ್ದವರ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shivamogga News: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಪುತ್ರ ಆಕಾಶ್ ಆತ್ಮಹತ್ಯೆ

ಶಿವಮೊಗ್ಗದ ಖ್ಯಾತ ವೈದ್ಯೆ ಡಾ. ಜಯಶ್ರೀ ಹಾಗೂ ಪುತ್ರ ನೇಣಿಗೆ ಶರಣು

ಡಾ. ಜಯಶ್ರೀ ಮತ್ತು ಮಗ ಆಕಾಶ್ ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿನೋಬನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಡೆತ್ ನೋಟ್ ಪತ್ತೆಯಾಗಿದೆ. ಡಾ. ಜಯಶ್ರೀ ಅವರ ಪತಿ ಹಾಗೂ ಸೊಸೆ ಕೂಡ ಈ ಮೊದಲು ಆತ್ಮಹತ್ಯೆಗೆ ಶರಣಾಗಿದ್ದರು.

WCD Recruitment 2025: 544 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ

ಶಿವಮೊಗ್ಗ ಜಿಲ್ಲೆಯಲ್ಲಿದೆ ಉದ್ಯೋಗಾವಕಾಶ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 544 ಅಂಗನವಾಡಿ ಹುದ್ದೆಗಳು ಖಾಲಿ ಇದ್ದು, ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ

ಮಲೆನಾಡಿನ ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಬಿ.ವೈ.ರಾಘವೇಂದ್ರ

ಅಡಿಕೆ ಬೆಳೆಗಾರರ ಸಂಕಷ್ಟ ಪರಿಹರಿಸಿ; ಕೇಂದ್ರಕ್ಕೆ ಬಿ.ವೈ.ರಾಘವೇಂದ್ರ ಮನವಿ

Parliament Winter Session 2025: ಅಡಿಕೆಗೆ ಹಳದಿ ಎಲೆ ರೋಗ ಹಾಗೂ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಹಾಗೂ ಅಡಿಕೆ ಬೆಳೆ ನಷ್ಟಕ್ಕೆ ವಿಶೇಷ ಪರಿಹಾರ ಪ್ಯಾಕೇಜ್‌ ನೀಡುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರವನ್ನು ನಾನು ಮನವಿ ಮಾಡಿದ್ದೇನೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

Self Harming: ಗಂಡನ ಮನೆಯಲ್ಲಿ ಕಿರುಕುಳ, ಮದುವೆಯಾದ ಆರು ತಿಂಗಳಲ್ಲೇ ಮಹಿಳೆ ನಾಲೆಗೆ ಹಾರಿ ಆತ್ಮಹತ್ಯೆ

ಗಂಡನ ಮನೆಯಲ್ಲಿ ಕಿರುಕುಳ, ಮದುವೆಯಾದ ಆರು ತಿಂಗಳಲ್ಲೇ ಮಹಿಳೆ ಆತ್ಮಹತ್ಯೆ

Shivamogga news: ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ಗುರುತಿಸಲಾಗಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿಎಸ್‌ಸಿ ಮತ್ತು ಬಿಎಡ್ ಪದವೀಧರೆ ಆಗಿದ್ದರು. 2025ರ ಏಪ್ರಿಲ್ 14ರಂದು ಶಿಕಾರಿಪುರದ ಗುರುರಾಜ್ ಜೊತೆಗೆ ಲತಾ ವಿವಾಹವಾಗಿತ್ತು. ಆರು ತಿಂಗಳ ಹಿಂದೆಯಷ್ಟೇ ಲತಾ ಗುರುರಾಜ್ ನನ್ನು ಮದುವೆಯಾಗಿದ್ದರು.

Karnataka Weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ. ಇನ್ನು ಮುಂದಿನ 6 ದಿನ ರಾಜ್ಯದ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿದೆ.

Karnataka Weather: ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

WCD Shivamogga Recruitment 2025: ಶಿವಮೊಗ್ಗ ಅಂಗನವಾಡಿಯಲ್ಲಿದೆ 544 ಹುದ್ದೆ; 10, 12ನೇ ತರಗತಿ ಪಾಸಾದವರು ಅಪ್ಲೈ ಮಾಡಿ

ಶಿವಮೊಗ್ಗ ಅಂಗನವಾಡಿಯಲ್ಲಿದೆ 544 ಹುದ್ದೆ

Job Guide: ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 544 ಅಂಗನವಾಡಿ ವರ್ಕರ್‌ (ಕಾರ್ಯಕರ್ತೆ) ಮತ್ತು ಹೆಲ್ಪರ್‌ (ಸಹಾಯಕಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಡಿಸೆಂಬರ್‌ 15.

Bhagavad Gita seminar: ಕುವೆಂಪು ವಿವಿಯಲ್ಲಿ ಭಗವದ್ಗೀತೆ ವಿಚಾರ ಸಂಕಿರಣ: ದಲಿತ ಸಂಘರ್ಷ ಸಮಿತಿ ವಿರೋಧ

ಕುವೆಂಪು ವಿವಿಯಲ್ಲಿ ಭಗವದ್ಗೀತೆ ವಿಚಾರ ಸಂಕಿರಣ: ದಲಿತ ಸಂಘರ್ಷ ಸಮಿತಿ ವಿರೋಧ

Shivamogga News: ಈ ವಿಚಾರಗೋಷ್ಠಿ ಬಲಪಂಥೀಯ ತತ್ತ್ವದ ಅಜೆಂಡಾವನ್ನು ಉತ್ತೇಜಿಸುತ್ತಿದೆ. ರಾಷ್ಟ್ರೀಯ ಕವಿ ಕುವೆಂಪು ಅವರ ಆದರ್ಶಗಳು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಭಗವದ್ಗೀತೆಯನ್ನು ಇತಿಹಾಸದಲ್ಲಿ ಚಾತುರ್ವರ್ಣ ವ್ಯವಸ್ಥೆ ಮತ್ತು ಜಾತಿ ಪದ್ಧತಿಯನ್ನು ಸಮರ್ಥಿಸಲು ಬಳಸಲಾಗಿದೆ. ಬಲಪಂಥೀಯ ಗುಂಪುಗಳು ಇಂತಹ ಕಾರ್ಯಕ್ರಮಗಳ ಮೂಲಕ ವಿಶ್ವವಿದ್ಯಾಲಯಗಳಲ್ಲಿ ಒಂದೇ ರೀತಿಯ ತತ್ತ್ವದ ಚೌಕಟ್ಟನ್ನು ಮುನ್ನೆಲೆಗೆ ತಂದು ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿವೆ ಎಂದು ಆರೋಪಿಸಲಾಗಿದೆ.

MB Patil: 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು- ಕೇಂದ್ರಕ್ಕೆ ಪತ್ರ ಬರೆದ ಎಂ.ಬಿ. ಪಾಟೀಲ್‌

4 ರೈಲು ನಿಲ್ದಾಣಗಳಿಗೆ ಸಂತರ ಹೆಸರು- ಕೇಂದ್ರಕ್ಕೆ ಎಂ.ಬಿ. ಪಾಟೀಲ್‌ ಪತ್ರ

ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಶಿಫಾರಸು ಮಾಡಿದ್ದು, ಈ ಸಂಬಂಧವಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

Karnataka Weather: ಇಂದಿನ ಹವಾಮಾನ; ರಾಜ್ಯಾದ್ಯಂತ ಮುಂದುವರಿಯಲಿದೆ ಒಣ ಹವೆ

ಇಂದಿನ ಹವಾಮಾನ; ರಾಜ್ಯಾದ್ಯಂತ ಮುಂದುವರಿಯಲಿದೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 19° C ಆಗಿರಬಹುದು.

Karnataka Weather: ಇಂದಿನ ಹವಾಮಾನ; ಮಲೆನಾಡು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಮಲೆನಾಡು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗು (Weather forecast) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

Karnataka Weather: ನಾಳೆ ಶಿವಮೊಗ್ಗ, ಕೊಡಗು ಸೇರಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗುಡುಗು ಸಹಿತ ಮಳೆ ನಿರೀಕ್ಷೆ

ಹವಾಮಾನ ವರದಿ; ನಾಳೆ ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗು (Weather forecast) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

Student Death: ಬೆಳಗ್ಗೆ ಊರಿಗೆ ಬರುತ್ತೇನೆಂದ ಮಗಳು ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದವಾಗಿ ನೇಣಿಗೆ ಶರಣು

ಬೆಳಗ್ಗೆ ಊರಿಗೆ ಬರುತ್ತೇನೆಂದ ಮಗಳು ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು

Self Harming: ಶಿವಮೊಗ್ಗದ ಡಿವಿಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ವನಿಷಾ (21) ಇನ್ನೇನು ಕಾಲೇಜ್ ಹೋಗುವ ಸಮಯದಲ್ಲಿ ತಿಂಡಿ ಮಾಡಿಕೊಂಡು ಹಾಸ್ಟೆಲ್​​ ಟೆರೇಸ್ ಮೇಲೆ ಹೋಗಿದ್ದಾಳೆ. ಆದರೆ, ಸ್ವಲ್ಪ ಹೊತ್ತಿನ ಬಳಿಕ ಟ್ಯಾಂಕ್ ಪಕ್ಕದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮನಿಷಾ ಶವ ಪತ್ತೆಯಾಗಿದೆ. ಟೆರೇಸ್ ಮೇಲೆ ಬಟ್ಟೆ ಹಾಕಲು ಹೋಗಿದ್ದ ವಿದ್ಯಾರ್ಥಿನಿಯರು ನೋಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಮಗಳ ಸಾವಿನ ಸುದ್ದಿ ತಿಳಿದ ಹೆತ್ತವರ ಅಕ್ರಂದನ ಮುಗಿಲು ಮುಟ್ಟಿದೆ. ಆತ್ಮಹತ್ಯೆ ಮಾಡಿಕೊಳ್ಳುವಂತಹ ಯಾವುದೇ ಸಮಸ್ಯೆ ಅವಳಿಗೆ ಇರಲಿಲ್ಲ ಎನ್ನುವುದು ಪೋಷಕರ ಮಾತು.

Kannada Rajyotsava: ಕನ್ನಡ ಭಾಷೆ ಹೆಚ್ಚು ಬಳಸಿ, ಬೆಳೆಸಿ: ಬಿ.ವೈ. ವಿಜಯೇಂದ್ರ

ಕನ್ನಡ ಭಾಷೆ ಹೆಚ್ಚು ಬಳಸಿ, ಬೆಳೆಸಿ: ಬಿ.ವೈ. ವಿಜಯೇಂದ್ರ

BY Vijayendra: ಶಿಕಾರಿಪುರದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ನಮ್ಮ ಹೆಗ್ಗುರುತು. ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿ, ಉಳಿಸಿ, ಬೆಳೆಸುವ ಮೂಲಕ ನಾವೆಲ್ಲರೂ ಕನ್ನಡಮ್ಮನ ಸೇವೆ ಮಾಡೋಣ ಎಂದು ತಿಳಿಸಿದ್ದಾರೆ.

National Unity Day 2025: ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶಿಕಾರಿಪುರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ರಾಷ್ಟ್ರೀಯ ಏಕತಾ ನಡಿಗೆ

ಶಿಕಾರಿಪುರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ರಾಷ್ಟ್ರೀಯ ಏಕತಾ ನಡಿಗೆ

Shikaripura News: ಬೆಜೆಪಿ ವತಿಯಿಂದ ಶುಕ್ರವಾರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿಕಾರಿಪುರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ರಾಷ್ಟ್ರೀಯ ಏಕತಾ ನಡಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಅಂಗವಾಗಿ “ಒಂದೇ ಭಾರತ - ಆತ್ಮನಿರ್ಭರ ಭಾರತ” ಘೋಷವಾಕ್ಯದ ಅಡಿಯಲ್ಲಿ ದೇಶಾದ್ಯಂತ ನಡೆಯುತ್ತಿರುವ ಏಕತಾ ನಡಿಗೆಯ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು. ಶಿಕಾರಿಪುರದ ಬಸವೇಶ್ವರ ಪಾರ್ಕ್‌ನ ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

Loading...