ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಶಿವಮೊಗ್ಗ
Pahalgam Terror Attack: ಪಾಕ್‌ ಪ್ರೇರಿತ ಭಯೋತ್ಪಾದನಾ ಕೃತ್ಯಕ್ಕೆ ಪ್ರತೀಕಾರ ಶತಸಿದ್ಧ: ಪ್ರಲ್ಹಾದ್‌ ಜೋಶಿ

ಪಾಕ್‌ ಪ್ರೇರಿತ ಭಯೋತ್ಪಾದನಾ ಕೃತ್ಯಕ್ಕೆ ಪ್ರತೀಕಾರ ಶತಸಿದ್ಧ: ಜೋಶಿ

Pahalgam Terror Attack: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಭಯೋತ್ಪಾದನೆಗೆ ಇತಿಶ್ರೀ ಹಾಡಲು ಸಂಕಲ್ಪ ತೊಟ್ಟಿದೆ. ಪಹಲ್ಗಾಮ್‌ನಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಮಾಯಕರನ್ನು ಬಲಿ ಪಡೆದಿರುವ ಪಾಕ್‌ ಉಗ್ರರನ್ನು ಸೆದೆ ಬಡಿಯುತ್ತದೆ. ದುಷ್ಕೃತ್ಯವೆಸಗಿದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಮೊದಲ ಹೆಜ್ಜೆ ಎನ್ನುವಂತೆ ರಾಜತಾಂತ್ರಿಕವಾಗಿ 5 ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Pahalgam Terror Attack: ಜೀವದ ಹಂಗು ತೊರೆದು ಶಿವಮೊಗ್ಗದ ಮಂಜುನಾಥ್‌ ಪುತ್ರನ ರಕ್ಷಿಸಿದ ಕಾಶ್ಮೀರಿ ಯುವಕನ ವಿಡಿಯೋ ಈಗ ವೈರಲ್‌

ಜೀವದ ಹಂಗು ತೊರೆದು ಬಾಲಕನ ರಕ್ಷಿಸಿದ ಕಾಶ್ಮೀರಿ ಯುವಕನ ವಿಡಿಯೋ ಈಗ ವೈರಲ್‌

ಭಯೋತ್ಪಾದಕರ ಕೈಯಿಂದ ಬದುಕುಳಿದ ಮಂಜುನಾಥ್ ಅವರ ಪುತ್ರ ಅಭಿಜಯ್‌ನನ್ನು ಸ್ಥಳೀಯ ವ್ಯಕ್ತಿಯೊಬ್ಬರು ಬೆನ್ನ ಮೇಲೆ ಹೊತ್ತುಕೊಂಡು ಓಡುತ್ತಾ ಸುರಕ್ಷಿತ ಸ್ಥಳಕ್ಕೆ ಕರೆತಂದಿದ್ದರು. ಇದರ ವಿಡಿಯೋ ಇದೀಗ ವೈರಲ್ ಆಗಿದ್ದು "ಇದು ನಿಜವಾದ ಕಾಶ್ಮೀರ" ಎಂದು ಕೊಂಡಾಡಲಾಗುತ್ತಿದೆ.

Pahalgam Terror Attack: ಬೆಂಗಳೂರು ತಲುಪಿದ ಪಹಲ್‌ಗಾಂ ದಾಳಿ ಮೃತರ ಶರೀರಗಳು, ಸಿಎಂರಿಂದಲೂ ಅಂತಿಮ ದರ್ಶನ

ಬೆಂಗಳೂರು ತಲುಪಿದ ಪಹಲ್‌ಗಾಂ ದಾಳಿ ಮೃತರ ಶರೀರಗಳು, ಸಿಎಂರಿಂದ ಅಂತಿಮ ದರ್ಶನ

ಹಾವೇರಿ ಮೂಲದ ಭರತ್ ಭೂಷಣ್ ಮೃತದೇಹ ಬೆಂಗಳೂರಿನಲ್ಲಿರುವ ಮತ್ತಿಕೆರೆ ನಿವಾಸ ತಲುಪಿದೆ. ಮತ್ತಿಕೆರೆಯ ಸುಂದರನಗರದಲ್ಲಿ ಭರತ್ ಅಂತಿಮ ದರ್ಶನವನ್ನು ಸಂಬಂಧಿಕರು ಪಡೆಯುತ್ತಿದ್ದಾರೆ. ಆ್ಯಂಬುಲೆನ್ಸ್ ಮೂಲಕ ಎಸ್ಕಾರ್ಟ್ ಭದ್ರತೆಯಲ್ಲಿ ಮಂಜುನಾಥ್ ಮೃತದೇಹ ಶಿವಮೊಗ್ಗದತ್ತ ಸಾಗಿದ್ದು, ಮಧ್ಯಾಹ್ನ ಅಲ್ಲಿಗೆ ತಲುಪಲಿದೆ.

Pahalgam Terror Attack: ಉಗ್ರರ ದಾಳಿ; ಕಾಶ್ಮೀರದಿಂದ ಶಿವಮೊಗ್ಗ ಉದ್ಯಮಿ ಮೃತದೇಹ ತರಲು ರಾಜ್ಯ ಸರ್ಕಾರ ವ್ಯವಸ್ಥೆ

ಕಾಶ್ಮೀರದಿಂದ ಶಿವಮೊಗ್ಗ ಉದ್ಯಮಿ ಮೃತದೇಹ ತರಲು ರಾಜ್ಯ ಸರ್ಕಾರ ವ್ಯವಸ್ಥೆ

Pahalgam Terror Attack: ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ ಕೂಡ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Pahalgam Terror Attack: ಪತ್ನಿ, ಮಗನೆದುರೇ ಶಿವಮೊಗ್ಗ ಉದ್ಯಮಿ ತಲೆಗೆ ಹೊಕ್ಕ ಗುಂಡು; ಹೋಗಿ ಮೋದಿಗೆ ಹೇಳಿ ಎಂದ ಉಗ್ರರು!

ಪ್ರವಾಸಿಗರ ಮೇಲೆ ದಾಳಿ ನಡೆಸಿ, ಹೋಗಿ ಮೋದಿಗೆ ಹೇಳಿ ಎಂದ ಉಗ್ರರು!

Pahalgam Terror Attack: ರಾಜ್ಯದ ಪ್ರವಾಸಿಗರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿರುವ ಅಧಿಕಾರಿಗಳ ತಂಡವನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲು ರಾಜ್ಯ ಸರ್ಕಾರ ಸೂಚಿಸಿದೆ. ಇನ್ನು ಶಿವಮೊಗ್ಗದ ಉದ್ಯಮಿ ಮೃತದೇಹವನ್ನು ಇಲ್ಲಿಗೆ ತರಲು ಅಗತ್ಯ ವ್ಯವಸ್ಥೆ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

Monkey fever death: ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬ ಬಾಲಕಿ ಬಲಿ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬ ಬಾಲಕಿ ಬಲಿ

ರಚಿತ್ ಆರೋಗ್ಯ ಚೇತರಿಸದೇ ಇದ್ದುದರಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ರಚಿತ್ ಮರಣ ಹೊಂದಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಈ ಮರಣ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ.

CET 2025: ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್‌; ಅಧಿಕಾರಿ ವಿರುದ್ಧ ಕಂಪ್ಲೇಂಟ್‌, ಈವರೆಗೆ ಏನೇನು ಬೆಳವಣಿಗೆ ಆಗಿದೆ?

ಶಿವಮೊಗ್ಗದಲ್ಲಿ ಜನಿವಾರ ವಿವಾದ; ಅಧಿಕಾರಿ ವಿರುದ್ಧ ಕಂಪ್ಲೇಂಟ್‌

CET 2025: ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ವೇಳೇ ವಿದ್ಯಾರ್ಥಿಗಳ ಜನಿವಾರ ಮತ್ತು ಕಾಶಿದಾರ ತೆಗೆಸಿದ್ದನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಬ್ರಾಹ್ಮಣ ಮಹಾಸಭಾದ ಪ್ರಮುಖರು ಮನವಿ ಸಲ್ಲಿಸಿದರು. ಹೀಗಾಗಿ ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಪಡೆದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

CET 2025: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದ ಅಧಿಕಾರಿ ಸಸ್ಪೆಂಡ್

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದ ಅಧಿಕಾರಿ ಸಸ್ಪೆಂಡ್

CET 2025: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಬಲವಂತದಿಂದ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿ, ಅಧಿಕಾರಿಗಳು ಕಳುಹಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅಧಿಕಾರಿ ಅಮಾನತಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿಸಿದ್ದಾರೆ.

CET Exam: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಬಿಚ್ಚಿಸಿದ ಅಧಿಕಾರಿಗಳು: ಕ್ರಮಕ್ಕೆ ಮಧು ಬಂಗಾರಪ್ಪ ಸೂಚನೆ

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಕಟ್‌: ಕ್ರಮಕ್ಕೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈ ರೀತಿ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅಲ್ಲದೆ ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಹಾಗಾಗಿ ಸಂಬಂಧಪಟ್ಟ ಇಲಾಖೆ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುತ್ತದೆ. ನನ್ನ ಇಲಾಖೆ ಇಲ್ಲ ಅಂದರೂ ಕೂಡ ಸಂಬಂಧಪಟ್ಟ ಇಲಾಖೆಗೆ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಆಗಿರುವುದರಿಂದ ಕಠಿಣವಾದ ಕ್ರಮ ತೆಗೆದುಕೊಳ್ಳುವ ಸೂಚನೆ ನೀಡಿದ್ದೇನೆ ಎಂದರು.

CET Exam: ಸಿಇಟಿ ಪರೀಕ್ಷೆಗೆ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು, ಖಂಡನೆ

ಸಿಇಟಿ ಪರೀಕ್ಷೆಗೆ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು, ಖಂಡನೆ

ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

ವಿದೇಶದಲ್ಲಿ ಮೃತಪಟ್ಟ ಇಬ್ಬರು ಕನ್ನಡಿಗರ ಮೃತದೇಹ ತರಲು ಎನ್ಆರ್‌ಐ ಫೋರಂ ನೆರವು

ವಿದೇಶದಿಂದ ಇಬ್ಬರು ಕನ್ನಡಿಗರ ಮೃತದೇಹ ತರಲು ಎನ್ಆರ್‌ಐ ಫೋರಂ ನೆರವು

ಆಫ್ರಿಕಾ ದೇಶದ ಎರಡು ಪ್ರತ್ಯೇಕ ಘಟನೆಗಳಲ್ಲಿ ಮೃತ ಹೊಂದಿದ ಕನ್ನಡಿಗರ ಮೃತದೇಹವನ್ನು ಭಾರತಕ್ಕೆ ಕರೆತರುವ ಪ್ರಯತ್ನದಲ್ಲಿ ಅನಿವಾಸಿ ಭಾರತೀಯ ಸಮಿತಿಯು ಯಶಸ್ವಿಯಾಗಿದೆ. ಕರ್ನಾಟಕ ಸರ್ಕಾರದ ಭಾರತೀಯ ಎನ್ಆರ್‌ಐ ಫೋರಂ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ನೇತೃತ್ವದಲ್ಲಿ ಇಬ್ಬರು ಮೃತ ಕನ್ನಡಿಗರ ಕುಟುಂಬಕ್ಕೆ ಸಹಾಯ ದೊರೆತಂತಾಗಿದೆ.

Congress Protest: ಬಿಜೆಪಿ ಜನಾಕ್ರೋಶ ಯಾತ್ರೆ ವಿರುದ್ಧ ಪ್ರತಿಭಟನೆ; ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಶಿವಮೊಗ್ಗದಲ್ಲಿ ಪ್ರತಿಭಟನೆ; ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Shivamogga News: ಬಿಜೆಪಿ ಜನಾಕ್ರೋಶ ಯಾತ್ರೆ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ ನಡೆಲಾಯಿತು. ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಜೀವನದ ಮೇಲೆ ಗದಾಪ್ರಹಾರ ಮಾಡುತ್ತಿರುವ ಬಿಜೆಪಿಗೆ ಜನಾಕ್ರೋಶ ಯಾತ್ರೆ ಮಾಡುವ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ನೈತಿಕತೆ ಇಲ್ಲ ಎಂದು ಕಾಂಗ್ರೆಸ್‌ ಮುಖಂಡ ಹರ್ಷಿತ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

DCC bank scam: ನಕಲಿ ಚಿನ್ನ ಹಗರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಮಂಜುನಾಥ್‌ ಗೌಡ ಬಂಧನ

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಮಂಜುನಾಥ್‌ ಗೌಡ ಬಂಧನ

ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಗೌಡ ಅವರನ್ನು ಏ.9ರಂದು ಅಧಿಕೃತವಾಗಿ ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ 1ನೇ ಸಿಸಿಹೆಚ್​ ನ್ಯಾಯಾಲಯ​, ಆರೋಪಿಯನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ. ಮಂಜುನಾಥ ಗೌಡಗೆ ಆರೋಗ್ಯ ಸಮಸ್ಯೆ ಹಿನ್ನೆಲೆ ಅಗತ್ಯ ವೈದ್ಯಕೀಯ ಸವಲತ್ತು ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ED Raid: ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಹಗರಣ: ಮಾಜಿ ಅಧ್ಯಕ್ಷ ಮಂಜುನಾಥ್‌ ಗೌಡ ಮನೆ ಸೇರಿ 3 ಕಡೆ ಇಡಿ ದಾಳಿ

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಹಗರಣ: 3 ಕಡೆ ಇಡಿ ದಾಳಿ

2014ರಲ್ಲಿ ಶಿವಮೊಗ್ಗದ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವು ಇಟ್ಟುಕೊಂಡು 62 ಕೋಟಿ ರೂಪಾಯಿ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಳಿ ನಡೆದಿದೆ. ಅಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಮಂಜುನಾಥ್‌ ಗೌಡ ಹಾಗೂ ಮ್ಯಾನೇಜರ್ ಆಗಿದ್ದ ಶೋಭಾ ಮನೆ ಮೇಲೆ ಇಡಿ ದಾಳಿ ನಡೆದಿದೆ.

Missing Case: ಕಾಲುವೆಯಲ್ಲಿ ಮೀನು ಹಿಡಿಯಲು ಹೋಗಿ ನಾಪತ್ತೆ, ರಾತ್ರಿಯಿಡೀ ಟೆನ್ಷನ್‌ ಕೊಟ್ಟ 5 ಮಕ್ಕಳು!

ಮೀನು ಹಿಡಿಯಲು ಹೋಗಿ ನಾಪತ್ತೆ, ರಾತ್ರಿಯಿಡೀ ಟೆನ್ಷನ್‌ ಕೊಟ್ಟ 5 ಮಕ್ಕಳು!

ನಿನ್ನೆ ಸಂಜೆ ಕಾಲುವೆಯಲ್ಲಿ ಮೀನು ಹಿಡಿಯಲು ಹೋದ ಐವರು ಮಕ್ಕಳು ಮನೆಗೆ ಮರಳಿರಲಿಲ್ಲ. ಪಾಲಕರು ಗಾಬರಿಯಾಗಿ ಸುತ್ತಮುತ್ತ ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್‌ ದೂರು ನೀಡಲಾಗಿದೆ. ಹೇಳದೆ ಕೇಳದೆ ಮೀನು ಹಿಡಿಯಲು ಹೋಗಿದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಗಾಬರಿಯಾದ ಮಕ್ಕಳು ದೇಗುಲದಲ್ಲಿಯೇ ಉಳಿದುಕೊಂಡಿದ್ದರು.

Face Recognition: ಶಾಲೆಗಳಲ್ಲಿ ಮುಂದಿನ ವರ್ಷದಿಂದ ʼಫೇಸ್‌ ರೆಕಗ್ನಿಷನ್‌ ಹಾಜರಾತಿ ವ್ಯವಸ್ಥೆʼ ಜಾರಿ: ಮಧು ಬಂಗಾರಪ್ಪ

ಶಾಲೆಗಳಲ್ಲಿ ಮುಂದಿನ ವರ್ಷದಿಂದ ʼಫೇಸ್‌ ರೆಕಗ್ನಿಷನ್‌ ಹಾಜರಾತಿ ವ್ಯವಸ್ಥೆ

Face Recognition: ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದ ಬಾರೆಹಳ್ಳ ಜಲಾಶಯದ ಕೋಡಿ ದುರಸ್ತಿ ಕಾಮಗಾರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚಾಲನೆ ನೀಡಿ ಮಾತನಾಡಿದ್ದಾರೆ. ಸರ್ಕಾರದ ಮುಂದಿನ ಅವಧಿಯಲ್ಲಿ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

Shivamogga News: ವಿಶ್ವ ಕಿಡ್ನಿ ದಿನ: ಎನ್‌ಯು ಆಸ್ಪತ್ರೆಗೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಎಂದು ಮರುನಾಮಕರಣ

ಎನ್‌ಯು ಆಸ್ಪತ್ರೆಗೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಎಂದು ಮರುನಾಮಕರಣ

Shivamogga News: ಇನ್ನು ಮುಂದೆ ಎನ್‌ಯು ಆಸ್ಪತ್ರೆಯು ಮಲೆನಾಡು ಭಾಗದಾಚೆಗೂ ಯುರಾಲಜಿ ಮತ್ತು ನೆಫ್ರಾಲಜಿ ಸಂಬಂಧಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಜಿಸಿದ್ದು, ಶಿವಮೊಗ್ಗ ಕಿಡ್ನಿ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿದೆ ಎಂದು ಅಸೋಸಿಯೇಟ್ ಮೆಡಿಕಲ್ ಡೈರೆಕ್ಟರ್ ಅಂಡ್ ಟ್ರಾನ್ಸ್ ಪ್ಲಾಂಟ್ ಫಿಸಿಷಿಯನ್ ಡಾ. ಪ್ರವೀಣ್ ಮಾಳವದೆ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

HD Deve Gowda: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ವೇಗ ನೀಡಲು ಎಚ್.ಡಿ.ದೇವೇಗೌಡ ಆಗ್ರಹ

ಕರ್ನಾಟಕದ ರೈಲ್ವೇ ಯೋಜನೆಗಳಿಗೆ ವೇಗ ನೀಡಿ: ಎಚ್.ಡಿ. ದೇವೇಗೌಡ

HD Deve Gowda: ಹಿಂದಿನ ಸರ್ಕಾರಗಳು ಕರ್ನಾಟಕದ ಹಲವಾರು ನಿರ್ಣಾಯಕ ರೈಲ್ವೆ ಯೋಜನೆಗಳನ್ನು ನಿರ್ಲಕ್ಷಿಸಿವೆ. ಅದಾಗ್ಯೂ ಪ್ರಸ್ತುತ ಸರ್ಕಾರದ ಅಡಿಯಲ್ಲಿ ರಾಜ್ಯಕ್ಕೆ ರೈಲ್ವೇ ಅನುದಾನ ಹಂಚಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಂಚಿಕೆಯು 800 ಕೋಟಿ ರೂ.ಯಿಂದ 7,000 ಕೋಟಿ ರೂ.ಗೂ ಮೀರಿ ಹೆಚ್ಚಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.

Murder Case: ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ ಚಿನ್ನ ದೋಚಿದ ಮೂವರಿಗೆ ಜೀವಾವಧಿ ಶಿಕ್ಷೆ

ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ ಚಿನ್ನ ದೋಚಿದ ಮೂವರಿಗೆ ಜೀವಾವಧಿ ಶಿಕ್ಷೆ

2020ರಲ್ಲಿ ಸಾಗರ ತಾಲೂಕು ಸಿರಿವಂತೆ ಗ್ರಾಮದ 44 ವರ್ಷದ ಮಹಿಳೆಯ ಕತ್ತು ಕೊಯ್ದ ದುಷ್ಕರ್ಮಿಗಳು, ಆಕೆಯ ಬಳಿ ಇದ್ದ ಚಿನ್ನಾಭರಣ ದೋಚಿದ್ದರು. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಕೋರ್ಟ್‌ ಶಿಕ್ಷೆ ಪ್ರಕಟಿಸಿದೆ.

Tiger Death: ತಾವರೆಕೊಪ್ಪ ಹುಲಿಧಾಮದ ಆಕರ್ಷಣೆಯಾಗಿದ್ದ ಏಕೈಕ ಗಂಡುಹುಲಿ ಸಾವು

ತಾವರೆಕೊಪ್ಪ ಹುಲಿಧಾಮದ ಆಕರ್ಷಣೆಯಾಗಿದ್ದ ಏಕೈಕ ಗಂಡುಹುಲಿ ಸಾವು

ವಿಜಯ ಹುಲಿ ನಿಧನದಿಂದ ಹುಲಿ-ಸಿಂಹಧಾಮಕ್ಕೆ ಭಾರಿ ನಷ್ಟ ಉಂಟಾಗಿದೆ. ವಿಜಯ ಹುಲಿ ಇಲ್ಲಿನ ಸಿಬ್ಬಂದಿಗೆ, ಪ್ರವಾಸಿಗರಿಗೆ ಹಾಗೂ ಶೈಕ್ಷಣಿಕ ಮತ್ತು ಮನರಂಜನಾ ಕೇಂದ್ರವಾಗಿತ್ತು. ಸರ್ಕಾರದ ನಿರ್ದೇಶನ ಹಾಗೂ ವನ್ಯಜೀವಿ ಕಾಯ್ದೆಯ ಪ್ರಕಾರವೇ ಮೃತ ಹುಲಿಯ ಅಂತಿಮ ಸಂಸ್ಕಾರ ಮಾಡಲಾಗಿದೆ.

Bhadravathi News: ತಡರಾತ್ರಿ ಆಸ್ಪತ್ರೆಯಲ್ಲಿ ಮಹಿಳೆ ಸಾವು; ಬೆಳಗ್ಗೆ ಪುನಃ ಬಂತು ಜೀವ!

ತಡರಾತ್ರಿ ಆಸ್ಪತ್ರೆಯಲ್ಲಿ ಮಹಿಳೆ ಸಾವು; ಬೆಳಗ್ಗೆ ಪುನಃ ಬಂತು ಜೀವ!

Bhadravathi News: ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಗೃಹಿಣಿಯೊಬ್ಬರು ಮೃತಪಟ್ಟಿದ್ದರು. ಹೀಗಾಗಿ ಅಂತ್ಯ ಸಂಸ್ಕಾರಕ್ಕೆಂದು ಮೃತದೇಹವನ್ನು ಕುಟುಂವಸ್ಥರು ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ, ಮಹಿಳೆ ಮತ್ತೆ ಕಣ್ತೆರೆದು, ಉಸಿರಾಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

KFD disease: ಮಂಗನಕಾಯಿಲೆಗೆ ರಾಜ್ಯದಲ್ಲಿ ಮೊದಲ ಬಲಿ, ಮಹಿಳೆ ಸಾವು

ಮಂಗನಕಾಯಿಲೆಗೆ ರಾಜ್ಯದಲ್ಲಿ ಮೊದಲ ಬಲಿ, ಮಹಿಳೆ ಸಾವು

ತೀರ್ಥಹಳ್ಳಿ ತಾಲೂಕನ ಕೊನೇರಿಪುರ ಗ್ರಾಮದ ಮಹಿಳೆಯೊಬ್ಬರು ಹಲವು ದಿನಗಳಿಂದ ಕೆಎಫ್‌ಡಿ ಸೋಂಕಿನಿಂದ ಬಳಲುತ್ತಿದ್ದರು. ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಂಗನ ಕಾಯಿಲೆ ಎಂದೇ ಕರೆಯಲಾಗುವ ಕ್ಯಾಸನೂರು ಕಾಡಿನ ಕಾಯಿಲೆ (KFD) ಈ ವರ್ಷದ ಮೊದಲ ಬಲಿ ಪಡೆದಿದೆ.

IAF officer dies: ಪ್ಯಾರಾಚೂಟ್ ವೈಫಲ್ಯದಿಂದ ವಾಯುಸೇನೆ ಅಧಿಕಾರಿ ಸಾವು; ಶಿವಮೊಗ್ಗ ತಲುಪಿದ ಪಾರ್ಥಿವ ಶರೀರ

ತರಬೇತಿ ವೇಳೆ ವಾಯುಸೇನೆ ಅಧಿಕಾರಿ ಸಾವು; ಶಿವಮೊಗ್ಗ ತಲುಪಿದ ಪಾರ್ಥಿವ ಶರೀರ

IAF officer dies: ಉತ್ತರ ಪ್ರದೇಶದ ಆಗ್ರಾದ ವಾಯುಸೇನೆಯ ಪ್ಯಾರಾಟ್ರೂಪರ್‌ ಟ್ರೈನಿಂಗ್‌ ಸ್ಕೂಲ್‌ನಲ್ಲಿ (ಪಿಟಿಎಸ್) ಶುಕ್ರವಾರ ಬೆಳಗ್ಗೆ ತರಬೇತಿ ವೇಳೆ ಪ್ಯಾರಾಚೂಟ್ ವೈಫಲ್ಯದಿಂದ ಶಿವಮೊಗ್ಗ ಜಿಲ್ಲೆ ಹೊಸನಗರ ಮೂಲದ ಜೂನಿಯರ್‌ ವಾರಂಟ್‌ ಆಫೀಸರ್ ಮಂಜುನಾಥ್‌ ಮೃತಪಟ್ಟಿದ್ದರು.

Mahakumbh 2025: ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗರಾಜ್‌ನ ಮಹಾಕುಂಭ ಮೇಳದ ತ್ರಿವೇಣಿ ಸಂಗಮದ ಭವ್ಯ ದಿವ್ಯವಾಗಿ ನಿರ್ಮಿಸಿರುವ ನೂತನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಭೇಟಿ ನೀಡಿದ ಶ್ರೀ ಸುತ್ತೂರುಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಕನ್ನಡ ನಾಡಿನ ವಿವಿಧ ಮಠ ಪೀಠಗಳ ಮಠಾಧೀಶರುಗಳನ್ನು ಪರಮಾರ್ಥ ನಿಕೇತನ ಆಶ್ರಮದ ಶ್ರೀ ಸ್ವಾಮಿ ಚಿದಾನಂದ ಸರಸ್ವತಿಜೀ ಹಾಗೂ ಸಾದ್ವಿ ಭಗವತಿ ಸರಸ್ವತಿಜೀ ಅವರು ಸ್ವಾಗತಿಸಿದರು.