ಕರುಣೆ - ಆಯುಧಾ ಎರಡೂ ದೇವಿಯಲ್ಲಿದೆ - ರಾಘವೇಶ್ವರ ಶ್ರೀ
Navaratra Namasya: ಪ್ರಕೃತಿ ಒಳಿತು ಹಾಗೂ ಕೆಡುಕು ಎರಡರ ಸೂಚನೆಯನ್ನು ನೀಡುತ್ತದೆ. ಗ್ರಹ - ನಕ್ಷತ್ರಗಳ ಮೂಲಕ, ನಮ್ಮ ದೇಹದ ಮೂಲಕ ಮತ್ತು ಶಕುನಗಳ ಮೂಲಕ ಮೂರು ರೀತಿಯಲ್ಲಿ ಪ್ರಕೃತಿ ಮುಂದಿನ ಸೂಚನೆಯನ್ನು ನೀಡುತ್ತದೆ. ಅದನ್ನು ಅರಿತಾಗ ನಾವು ಮುಂದಿನ ದಿನಗಳನ್ನು ಇಂದೇ ಕಾಣಬಹುದು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.