ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಶಿವಮೊಗ್ಗ
Hanumantha Devara Karnika: 'ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ'; ಹನುಮಂತ ದೇವರ ಕಾರ್ಣಿಕದ ಅರ್ಥವೇನು?

'ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ'; ಹನುಮಂತ ದೇವರ ಕಾರ್ಣಿಕ

Hanumantha Devara Karnika: ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ನಡೆದ ಹನುಮಂತ ದೇವರ ಕಾರ್ಣಿಕೋತ್ಸವದಲ್ಲಿ ಹನುಮಂತ ದೇವರನ್ನು ಮೈಮೇಲೆ ಆಹ್ವಾನ ಮಾಡಿಕೊಂಡ ಗಣಮಗ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರ ಕಂಬವೇರಿ ಕಾರ್ಣಿಕ ನುಡಿದಿದ್ದಾರೆ. "ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ, ಎಚ್ಚರ" ಎಂಬುದು ಈ ಬಾರಿಯ ಕಾರ್ಣಿಕವಾಣಿಯಾಗಿದೆ.

Road Accident: ಕೆಟ್ಟು ನಿಂತ ಲಾರಿಗೆ ಬಸ್‌ ಡಿಕ್ಕಿ, ಇಬ್ಬರು ಸಾವು, 15 ಮಂದಿಗೆ ಗಾಯ

ಕೆಟ್ಟು ನಿಂತ ಲಾರಿಗೆ ಬಸ್‌ ಡಿಕ್ಕಿ, ಇಬ್ಬರು ಸಾವು, 15 ಮಂದಿಗೆ ಗಾಯ

Shivamogga: ಲಾರಿ ಯಾವುದೇ ಇಂಡಿಕೇಟರ್‌ ಇಲ್ಲದೆ ಕತ್ತಲಲ್ಲಿ ನಿಂತಿತ್ತು. ಮಳೆ ಬರುತ್ತಿದ್ದ ಕಾರಣ ಕತ್ತಲಲ್ಲಿ ನಿಂತಿದ್ದ ಲಾರಿ ಕಾಣಿಸಿರಲಿಲ್ಲ. ಹಾಗೂ ಬಸ್​ ವೇಗವಾಗಿ ಚಲಿಸುತ್ತಿತ್ತು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Charmadi Ghat trekking: ಚಾರ್ಮಾಡಿ ಘಾಟ್‌ನ ನಿಷೇಧಿತ ಪ್ರದೇಶದಲ್ಲಿ ಚಾರಣ; 103 ಮಂದಿ ಪ್ರವಾಸಿಗರ ವಿರುದ್ಧ ಎಫ್‌ಐಆರ್‌

ಚಾರ್ಮಾಡಿ ಘಾಟ್‌ನಲ್ಲಿ ಚಾರಣಕ್ಕೆ ಹೋಗಿದ್ದ 103 ಮಂದಿ ವಿರುದ್ಧ ಕೇಸ್‌

Charmadi Ghat trekking: ಚಾರ್ಮಾಡಿ ಘಾಟ್‌ನ ಬಿದಿರುತಳ ಅರಣ್ಯ ಪ್ರದೇಶಕ್ಕೆ ಬೆಂಗಳೂರು ಮೂಲದ 103 ಜನರು ಟ್ರೆಕ್ಕಿಂಗ್‌ಗೆ ತೆರಳಿದ್ದರು. ಪ್ರವಾಸಿಗರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡು, ದಂಡ ವಿಧಿಸಿದ್ದಾರೆ. ಹಾಗೆಯೇ ಸ್ಥಳೀಯರ 6 ಪಿಕಪ್ ವಾಹನಗಳ ಮೇಲೂ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ.

Shivamogga News: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌, ಪರಿಶೀಲನೆ

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌

Madhu Bangarappa: ಶಿವಮೊಗ್ಗ ನಗರದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ ಹಾಗೂ ಜನರಲ್ ಮೆಡಿಸಿನ್ ವಾರ್ಡ್ ಸೇರಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ,‌ ರೋಗಿಗಳೊಂದಿಗೆ, ಸಾರ್ವಜನಿಕರು ಹಾಗೂ ಆಸ್ಪತ್ರೆ ನಾನ್ ಕ್ಲಿನಿಕಲ್ ಸಿಬ್ಬಂದಿಗಳೊಂದಿಗೆ ಮಾತನಾಡಿ, ಕುಂದು ಕೊರತೆ ಆಲಿಸಿದರು.

CM Siddaramaiah:  ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಡಬಲ್‌ ಲಾಟರಿ;  50 ಕೋಟಿ ಮಂಜೂರಿಗೆ ಅಸ್ತು ಎಂದ ಸಿಎಂ, ಡಿಸಿಎಂ

ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಲಾಟರಿ; ಅನುದಾನ ಮಂಜೂರಿಗೆ ಸರ್ಕಾರ ಅಸ್ತು

ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡುತ್ತಿಲ್ಲ ಎಂದು ಶಾಸಕರು ಅಸಮಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪಕ್ಷದ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವ ತೀರ್ಮಾನ ಪ್ರಕಟಿಸಿದ್ದಾರೆ. ಆದರೆ ಬೇರೆ ಎಲ್ಲ ಕ್ಷೇತ್ರಗಳಿಗೆ ಹೋಲಿಸಿದರೆ, ಸಾಗರ ಕ್ಷೇತ್ರ ಬಂಪರ್‌ ಅನುದಾನವನ್ನು ಪಡೆದುಕೊಂಡಿದೆ.

ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರ ಕಡಿತಲೆ : ತನಿಖೆಗೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ

ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರ ಕಡಿತಲೆ

ಕಡಿತಲೆ ಮರಗಳ ಮೇಲೆ ಹಾಕಿರುವ ಚಾಪಾ(ಹ್ಯಾಮರ್) ಕ್ಕೂ,ಇಲಾಖೆಯಲ್ಲಿ ದಾಖಲೆಗೂ ವ್ಯತ್ಯಾಸ ಕಂಡುಬಂದಿದೆ. ಅಲ್ಲದೆ ಮರಗಳ ಅಕ್ರಮ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಿಗೆರೆ ವನ್ಯ ಜೀವಿ ವಲಯದಲ್ಲಿ ದಾಖಲಾಗಿರುವ ಪ್ರಕರಣಕ್ಕೂ ವ್ಯತ್ಯಾಸ ಕಂಡು ಬಂದಿದೆ ಎಂಬುವುದು ಮೂಲಗಳ ಮಾಹಿತಿ.

Sigandur Bridge: ಶರಾವತಿ ನೂತನ ಸೇತುವೆಗೆ ಸಿಗಂದೂರು ಚೌಡೇಶ್ವರಿ  ಹೆಸರು: ನಿತಿನ್‌ ಗಡ್ಕರಿ ಘೋಷಣೆ

ಶರಾವತಿ ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರು: ನಿತಿನ್‌ ಗಡ್ಕರಿ

Sigandur Bridge: ಇದೊಂದು ಐತಿಹಾಸಿಕ ಸೇತುವೆ. ಮಾತೆ ಸಿಗಂಧೂರು ಚೌಡೇಶ್ವರಿ ದೇವಿ ಸೇತುವೆ. ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದರು. ಇದೇ ವೇಳೆ 2 ಸಾವಿರ ಕೋಟಿಗೂ ಹೆಚ್ಚು ಮೂಲಸೌಕರ್ಯ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು.

Sigandur bridge: ಸಿಗಂದೂರು ಸೇತುವೆ ಉದ್ಘಾಟನೆ ಆಹ್ವಾನ ಸಿಎಂಗೆ ಮೊದಲೇ ನೀಡಲಾಗಿತ್ತು: ದಾಖಲೆ ಸಮೇತ ಜೋಶಿ ಸ್ಪಷ್ಟನೆ

ಸಿಗಂದೂರು ಸೇತುವೆ ಉದ್ಘಾಟನೆ ಆಹ್ವಾನ ಸಿಎಂಗೆ ಮೊದಲೇ ನೀಡಲಾಗಿತ್ತು: ಜೋಶಿ

Pralhad Joshi: ಸಿಗಂದೂರು ಸೇತುವೆ ಉದ್ಘಾಟನೆ ಸಮಾರಂಭಕ್ಕೆ ʼಆಹ್ವಾನ ನೀಡಿದ್ದರೆ ಬರುತ್ತಿದ್ದೆʼ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರತಿಕ್ರಿಯಿಸಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಹಾಗೂ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಪತ್ರದ ಮೂಲದ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರೂ ಸಿಎಂ ಆಹ್ವಾನ ನೀಡಿಲ್ಲ ಎಂದಿರುವುದು ಸರಿಯಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

ಸಿಗಂದೂರು ಸೇತುವೆಗೆ ಮಾತಾ ಶ್ರೀ ಚೌಡೇಶ್ವರಿ ದೇವಿ ಹೆಸರಿಡಿ: ನಿತಿನ್‌ ಗಡ್ಕರಿಗೆ ಜೋಶಿ ಮನವಿ

ಸಿಗಂದೂರು ಸೇತುವೆಗೆ ಶ್ರೀ ಚೌಡೇಶ್ವರಿ ದೇವಿ ಹೆಸರಿಡಿ: ಜೋಶಿ ಮನವಿ

Pralhad Joshi: ಶರಾವತಿ ನದಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ 2ನೇ ಅತಿ ಉದ್ದದ ಕೇಬಲ್ ಬ್ರಿಡ್ಜ್ ಅಂಬಾರಗೋಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ʼಮಾತಾ ಶ್ರೀ ಚೌಡೇಶ್ವರಿ ಸೇತುವೆʼ ಎಂದು ಹೆಸರಿಡುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಪ್ರಲ್ಹಾದ್‌ ಜೋಶಿ ಅವರು ಮನವಿ ಮಾಡಿದ್ದಾರೆ.

Sigandur bridge: ಸಿಗಂದೂರು ಸೇತುವೆ; ಕರ್ನಾಟಕದ ಅತಿ ಉದ್ದದ ಕೇಬಲ್‌ ಬ್ರಿಡ್ಜ್‌ನ ವಿಶೇಷತೆಗಳೇನು?

ಸಿಗಂದೂರು ಸೇತುವೆ; ರಾಜ್ಯದ ಅತಿ ಉದ್ದದ ಕೇಬಲ್‌ ಬ್ರಿಡ್ಜ್‌ನ ವಿಶೇಷತೆಗಳೇನು?

Sigandur bridge: ಸಿಗಂದೂರು ಸೇತುವೆ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಆಗಿದೆ. ಈ ಸೇತುವೆಯು ಸಾಗರ ಮತ್ತು ಸಿಗಂದೂರು ನಡುವಿನ ಪ್ರಯಾಣದ ಅವಧಿಯನ್ನು 2 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಜತೆಗೆ ಪ್ರವಾಸೋದ್ಯಮ ಹಾಗೂ ವಾಣಿಜ್ಯ ಚಟುವಟಿಗಳಿಗೆ ಉತ್ತೇಜನ ನೀಡಲಿದೆ.

Sigandur Bridge: ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ ಮಾಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ ಮಾಡಿದ ನಿತಿನ್‌ ಗಡ್ಕರಿ

Sigandur Bridge: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿಗೆ ಅಡ್ಡಲಾಗಿ ಸುಮಾರು 473 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆ ನಿರ್ಮಾಣವಾಗಿದ್ದು, ಇಂದು ಸೇತುವೆ ಉದ್ಘಾಟನೆಯಿಂದ ಮಲೆನಾಡ ಭಾಗದ ಜನರ ದಶಕಗಳ ಕನಸು ಪೂರ್ಣಗೊಂಡಿದೆ.

Satish Jarkiholi: ಸಾಗರಕ್ಕೆ ಬಂದು ಬೆಂಗಳೂರಿಗೆ ವಾಪಾಸ್‌;  ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗವಹಿಸದೇ ತೆರಳಿದ ಸತೀಶ್ ಜಾರಕಿಹೊಳಿ

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗವಹಿಸದೇ ತೆರಳಿದ ಸತೀಶ್ ಜಾರಕಿಹೊಳಿ

ಲೋಕೋಪಯೋಗಿ ಸಚಿವ ಜಾರಕಿಹೊಳೆಯವರು ಅವರು ಸಾಗರಕ್ಕೆ ಬಂದು, ಈ ಕಾರ್ಯಕ್ರಮದಲ್ಲಿ ಭಾಗವಹಿಸದೆ ಹಾಗೇ ವಾಪಾಸ್‌ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಇಂದು ವಿಜಯಪುರದಲ್ಲಿ ನಡೆಯಲಿರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಿಂದ ಸೇತುವೆ ಲೋಕಾಪರ್ಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾವಹಿಸಬಾರದು ಎಂದು ಸಿಎಂ ಆದೇಶ ನೀಡಿದ್ದಾರೆ ಎನ್ನಲಾಗಿದೆ.

Siganduru Bridge: ದಶಕಗಳ ಕನಸು ನನಸು; ಇಂದು ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ

ಇಂದು ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ

ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆಯಾಗಿರುವ ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆ ಗೊಳ್ಳಲಿದೆ. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಲಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಮೇಲೆ ನಿರ್ಮಾಣವಾಗಿರುವ ಸೇತುವೆಯ ವೆಚ್ಚ ಸುಮಾರು 473 ಕೋಟಿ ರೂ.

Shivamogga News: ಶಿವಮೊಗ್ಗ ಸೆಂಟ್ರಲ್‌ ಜೈಲಿನ ಕೈದಿ ಹೊಟ್ಟೆಯಲ್ಲಿ ಮೊಬೈಲ್‌ ಪತ್ತೆ!

ಶಿವಮೊಗ್ಗ ಜೈಲಿನ ಕೈದಿ ಹೊಟ್ಟೆಯಲ್ಲಿ ಮೊಬೈಲ್‌ ಪತ್ತೆ!

Shivamogga News: ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶುಕ್ರವಾರ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆದಿದ್ದಾರೆ. ಪ್ರಕರಣವೊಂದರಲ್ಲಿ ಬಂಧನವಾಗಿದ್ದ ವ್ಯಕ್ತಿ, ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ. ಆದರೆ, ಎಕ್ಸ್ ರೇ ಮಾಡಿದಾಗ ಕೈದಿ ಹೊಟ್ಟೆಯಲ್ಲಿ ಬೇರೆ ವಸ್ತು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್ ಫೋನ್ ಪತ್ತೆಯಾಗಿದೆ.

Sigandur Bridge: ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡಿ; ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ

ಸಿಗಂದೂರು ಸೇತುವೆಗೆ ಬಿಎಸ್‌ವೈ ಹೆಸರಿಡಿ; ಹೈಕೋರ್ಟ್‌ಗೆ ರಿಟ್ ಅರ್ಜಿ

Shivamogga News: ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲು ಕೋರಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸಾಗರದ ರೈತ ಹರನಾಥರಾವ್ ಅವರು ಈ ಅರ್ಜಿ ಸಲ್ಲಿಸಿದ್ದು, ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ನೀಡಿದ ಕೊಡುಗೆ ಹಾಗೂ ಸಿಗಂದೂರು ಸೇತುವೆ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವುದನ್ನು ಪರಿಗಣಿಸಿ, ಸಿಗಂದೂರು ಸೇತುವೆಗೆ ಬಿ.ಎಸ್‌. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಅವರು ಕೋರಿದ್ದಾರೆ.

Murder Case: ಮಹಿಳೆಯ ಮೈಮೇಲಿನ ದೆವ್ವ ಬಿಡಿಸಲು ಯದ್ವಾತದ್ವಾ ಹೊಡೆತ, ಸಾವು

ಮಹಿಳೆಯ ಮೈಮೇಲಿನ ದೆವ್ವ ಬಿಡಿಸಲು ಯದ್ವಾತದ್ವಾ ಹೊಡೆತ, ಸಾವು

Murder Case: ಆಶಾ ಎಂಬ ಮಹಿಳೆ ತಮ್ಮ ಮೇಲೆ ಚೌಡಮ್ಮ ದೇವಿ ಬರುತ್ತಾಳೆ ಎಂದು ಊರವರಲ್ಲಿ ಮೌಢ್ಯ ಹಬ್ಬಿಸಿದ್ದಳು. ಇದನ್ನೇ ನಂಬಿದ್ದ ಗೀತಮ್ಮ ಕುಟುಂಬಸ್ಥರು ದೆವ್ವ ಬಂದಿದೆ ಎಂದು ಅವರನ್ನು ಆಶಾ ಬಳಿ ಕರೆದುಕೊಂಡು ಹೋಗಿದ್ದಾರೆ.

Shivamogga News: ಗಣೇಶ ಮೂರ್ತಿಗೆ ಒದ್ದು, ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದ ಅನ್ಯಕೋಮಿನ ವ್ಯಕ್ತಿ!

ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದ ಅನ್ಯಕೋಮಿನ ವ್ಯಕ್ತಿ!

Shivamogga News: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದು ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ.

Siganduru Bridge: ದೇಶದ 2ನೇ ಅತಿದೊಡ್ಡ ತೂಗು ಸೇತುವೆ ಸಿಗಂದೂರಿನಲ್ಲಿ ಜುಲೈ 14ರಂದು ಲೋಕಾರ್ಪಣೆ

ದೇಶದ 2ನೇ ಅತಿದೊಡ್ಡ ತೂಗು ಸೇತುವೆ ಸಿಗಂದೂರಿನಲ್ಲಿ ಜುಲೈ 14ರಂದು ಲೋಕಾರ್ಪಣೆ

Siganduru Bridge: ಶಿವಮೊಗ್ಗೆ ಜಿಲ್ಲೆ ಸಾಗರ ತಾಲೂಕಿನ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವೆ ನಿರ್ಮಿಸಲಾದ ಈ ಸೇತುವೆಯು ಉದ್ಘಾಟನೆಗೊಂಡ ಬಳಿಕ, ಭಾರತದ 2ನೇ ಅತಿ ಉದ್ದದ ಕೇಬಲ್ ಸೇತುವೆ ಎಂಬ ಹಿರಿಮೆಗೂ ಪಾತ್ರವಾಗಲಿದೆ. ಇದು 2.44 ಕಿ.ಮೀ ಉದ್ದವಿದ್ದು, 16 ಮೀಟರ್ ಅಗಲವಿದೆ. 17 - ಪಿಲ್ಲರ್‌ಗಳನ್ನು ಒಳಗೊಂಡಿದೆ. 2018ರ ಫೆಬ್ರವರಿಯಲ್ಲಿ ಈ ಸೇತುವೆ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗಿತ್ತು.

KS Eshwarappa: ಅಕ್ರಮ ಆಸ್ತಿ ಗಳಿಕೆ ಆರೋಪ; ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್‌ಐಆರ್ ದಾಖಲು

ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್‌ಐಆರ್ ದಾಖಲು

KS Eshwarappa: ಕೆ.ಎಸ್‌. ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದ ವೇಳೆ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು ದಾಖಲಿಸಿದ್ದರು.

Murder Case: ತಾಯಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡವನನ್ನು ಕೊಚ್ಚಿ ಕೊಂದರು

ತಾಯಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡವನನ್ನು ಕೊಚ್ಚಿ ಕೊಂದರು

Murder Case: ಶಿವಮೊಗ್ಗದ ಕುಂಸಿಯ ಮಲ್ಲೇಶಪ್ಪ ಎಂಬವರ ಎರಡನೇ ಪತ್ನಿಯ ಜೊತೆ ಕೊಲೆಯಾದ ವ್ಯಕ್ತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಇದರಿಂದ ಮಲ್ಲೇಶಪ್ಪನ ಇಬ್ಬರು ಮಕ್ಕಳು ವ್ಯಗ್ರರಾಗಿದ್ದರು. ನಿನ್ನೆ ಇಬ್ಬರೂ ಸೇರಿಕೊಂಡು ವಸಂತನನ್ನು ಕೊಚ್ಚಿ ಕೊಂದಿದ್ದಾರೆ.

Electric shock: ಒಣಗಲು ಹಾಕಿದ್ದ ಬಟ್ಟೆ ತೆಗೆಯಲು ಹೋದಾಗ ವಿದ್ಯುತ್‌ ತಗುಲಿ ದಂಪತಿ ದಾರುಣ ಸಾವು

ಸೊರಬದಲ್ಲಿ ವಿದ್ಯುತ್‌ ತಗುಲಿ ದಂಪತಿ ದುರ್ಮರಣ

Shivamogga News: ಶಿವಮೊಗ್ಗ ಜಿಲ್ಲೆಯ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ಅವಘಡ ನಡೆದಿದೆ. ದಂಪತಿಗೆ ವಿದ್ಯುತ್ ತಗುಲಿದ್ದನ್ನು ಗಮನಿಸಿದ ಪಕ್ಕದ ಮನೆ ವ್ಯಕ್ತಿ ರಕ್ಷಿಸಲು ಮುಂದಾದಾಗ ಅವರಿಗೂ ವಿದ್ಯುತ್ ಶಾಕ್ ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ದಂಪತಿ ಕೊನೆಯುಸಿರೆಳೆದಿದ್ದಾರೆ.

BY Vijayendra: ಶ್ಯಾಮಪ್ರಸಾದ ಮುಖರ್ಜಿ, ಜೋಶಿಯವರ ಹೋರಾಟ ಪ್ರೇರಣಾದಾಯಕ: ವಿಜಯೇಂದ್ರ

ಶ್ಯಾಮಪ್ರಸಾದ ಮುಖರ್ಜಿ, ಜೋಶಿಯವರ ಹೋರಾಟ ಪ್ರೇರಣಾದಾಯಕ: ವಿಜಯೇಂದ್ರ

BY Vijayendra: ಶಿಕಾರಿಪುರ ಮಂಡಲದಲ್ಲಿ ನಡೆದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಸ್ಮೃತಿ ದಿನ ಹಾಗೂ ಜಗನ್ನಾಥ ರಾವ್ ಜೋಶಿ ಅವರ ಹುಟ್ಟುಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು, ಶ್ಯಾಮಪ್ರಸಾದ ಮುಖರ್ಜಿ ಮತ್ತು ಕರ್ನಾಟಕ ಕೇಸರಿ ಎಂದೇ ಪ್ರಸಿದ್ಧರಾಗಿದ್ದ ಜಗನ್ನಾಥ ರಾವ್ ಜೋಶಿ ಅವರು ನಮಗೆ ಪ್ರೇರಣಾದಾಯಕರು ಎಂದು ತಿಳಿಸಿದ್ದಾರೆ.

Shivamogga News: ಶಿವಮೊಗ್ಗದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರ ದುರ್ಮರಣ

ಶಿವಮೊಗ್ಗದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರ ದುರ್ಮರಣ

Shivamogga News: ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಯಡವಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಯುವಕರಿಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬ ಯುವಕ ಅಪಾಯದಿಂದ ಪಾರಾಗಿದ್ದಾನೆ. ಮೃತ ದೇಹಗಳನ್ನು ಹೊರತೆಗೆಯಲಾಗಿದೆ.

Gururaj Gantihole: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ‌ಕಾರು ಅಪಘಾತ, ಮೂರು ವಾಹನ ಜಖಂ

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ‌ಕಾರು ಅಪಘಾತ, ಮೂರು ವಾಹನ ಜಖಂ

Gururaj Gantihole: ಶಾಸಕರ ಕಾರಿನ ಮುಂದೆ ಚಲಿಸುತ್ತಿದ್ದ ಕಾರಿನ ಮುಂದೆ ಜಾನುವಾರು ಅಡ್ಡ ಬಂದ ಕಾರಣ ಅವಘಡ ನಡೆದಿದೆ. ಸರಣಿ ಅಪಘಾತದಲ್ಲಿ ಶಾಸಕರ ಕಾರು ಸೇರಿದಂತೆ 3 ಕಾರುಗಳು ಸ್ವಲ್ಪ ಮಟ್ಟಿಗೆ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

Loading...