ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಭಾರತ vs ನ್ಯೂಜಿಲೆಂಡ್‌ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಇಬ್ಬರ ಬಂಧನ

T20 World Cup final: ಕಾಳ ಸಂತೆಯಲ್ಲಿ ಟಿಕೆಟ್‌ ಮಾರಾಟ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಶನಿವಾರ ಎಚ್ಚರಿಕೆ ನೀಡಿದ್ದರು. ಪಂದ್ಯದ ದಿನವೇ ಈ ಬಂಧನಗಳು ನಡೆದಿವೆ. ಅಂತಿಮ ಪಂದ್ಯಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಲಿಕ್, ಪಂದ್ಯಕ್ಕೆ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಹೇಳಿದರು.

ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಇಬ್ಬರ ಬಂಧನ

Ahmedabad Crime Branch -

Abhilash BC
Abhilash BC Mar 8, 2026 12:08 PM

ಅಹಮದಾಬಾದ್, ಮಾ.8: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬ್ಲಾಕ್‌ಬಸ್ಟರ್ ಹಣಾಹಣಿಗೆ ಮುನ್ನ, ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದ ಟಿಕೆಟ್‌ಗಳನ್ನು ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದಕ್ಕಾಗಿ ಅಹಮದಾಬಾದ್ ನಗರ ಅಪರಾಧ ಶಾಖೆ(Ahmedabad Crime Branch) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಪರಾಧ ವಿಭಾಗವು ಉಸ್ಮಾನಪುರ ಗುಜರಾತ್ ವಿದ್ಯಾಪೀಠ ಎಸ್.ಟಿ. ಬಸ್ ನಿಲ್ದಾಣದ ಬಳಿ ಬಲೆ ಬೀಸಿತು. ಅಲ್ಲಿ ಇಬ್ಬರು ವ್ಯಕ್ತಿಗಳನ್ನು ತಡೆದು ತಪಾಸಣೆ ನಡೆಸಲಾಯಿತು. ಅವರಿಂದ ಎಂಟು ಪಂದ್ಯದ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಮುಂಚಿತವಾಗಿ ಖರೀದಿಸಿ ಮೂಲ ಬೆಲೆಗಿಂತ ಮೂರು ಪಟ್ಟು ಹೆಚ್ಚು ಮಾರಾಟ ಮಾಡುತ್ತಿದ್ದರು. ಅಭಿಮಾನಿಗಳಿಗೆ ಟಿಕೆಟ್‌ಗೆ 10,000 ರೂ. ಶುಲ್ಕ ವಿಧಿಸುತ್ತಿದ್ದರು. ಎಲ್ಲಾ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಇಬ್ಬರೂ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ದಂಧೆಯಲ್ಲಿ ವ್ಯಾಪಕ ಜಾಲ ಭಾಗಿಯಾಗಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾಳ ಸಂತೆಯಲ್ಲಿ ಟಿಕೆಟ್‌ ಮಾರಾಟ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಶನಿವಾರ ಎಚ್ಚರಿಕೆ ನೀಡಿದ್ದರು. ಪಂದ್ಯದ ದಿನವೇ ಈ ಬಂಧನಗಳು ನಡೆದಿವೆ. ಅಂತಿಮ ಪಂದ್ಯಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಲಿಕ್, ಪಂದ್ಯಕ್ಕೆ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಹೇಳಿದರು.

ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ ಹವಾಮಾನ ಹೇಗಿದೆ?

"ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಐತಿಹಾಸಿಕ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕಾಗಿ ಪೊಲೀಸರು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ. 3,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಸುಮಾರು 1,000 ಗೃಹರಕ್ಷಕರನ್ನು ನಿಯೋಜಿಸುತ್ತಿದ್ದೇವೆ" ಎಂದು ಜಿ.ಎಸ್. ಮಲಿಕ್ ಪಿಟಿಐಗೆ ತಿಳಿಸಿದ್ದಾರೆ.

ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು ತವರು ನೆಲದಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡವಾಗುವ ಮತ್ತು ಸತತ ಎರಡು ಬಾರಿ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಳ್ಳುವ ಮೊದಲ ತಂಡವಾಗುವ ಅವಕಾಶವನ್ನು ಹೊಂದಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 100,000 ಕ್ಕೂ ಹೆಚ್ಚು ಅಭಿಮಾನಿಗಳು ತುಂಬಿರುವ ನಿರೀಕ್ಷೆಯಿರುವುದರಿಂದ, ಟಿಕೆಟ್‌ಗಳಿಗೆ ಬೇಡಿಕೆ ಅಗಾಧವಾಗಿದ್ದು, ತ್ವರಿತ ಲಾಭ ಗಳಿಸಲು ಕಾಳ ಸಂತೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ತಿಳಿಸುವಂತೆ ಮಲಿಕ್ ಮನವಿ ಮಾಡಿದ್ದಾರೆ.