IND vs ENG: ಕನ್ನಡಿಗ ಕರುಣ್ ನಾಯರ್ಗೆ ಚಾನ್ಸ್ ನೀಡುವ ಬಗ್ಗೆ ಗೌತಮ್ ಗಂಭೀರ್ ಸುಳಿವು!
Gautam Gambhir on Karun Nair: ಜೂನ್ 20 ರಂದು ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಭಾರತ ತಂಡದಲ್ಲಿ ಕನ್ನಡಿಗ ಕರುಣ್ ನಾಯರ್ಗೆ ಅವಕಾಶ ನೀಡುವ ಬಗ್ಗೆ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಸುಳಿವು ನೀಡಿದ್ದಾರೆ. ದೇಶಿ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ತೋರಿದ್ದರ ಫಲವಾಗಿ ಟೆಸ್ಟ್ ತಂಡದಲ್ಲಿ ಕರುಣ್ ನಾಯರ್ಗೆ ಸ್ಥಾನ ನೀಡಲಾಗಿದೆ.

ಕರುಣ್ ನಾಯರ್ಗೆ ಅವಕಾಶ ನೀಡುವ ಬಗ್ಗೆ ಗಂಭೀರ್ ಸುಳಿವು.

ನವದೆಹಲಿ: ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ (IND vs ENG) ಕನ್ನಡಿಗ ಕರುಣ್ ನಾಯರ್ಗೆ (Karun Nair) ಅವಕಾಶ ಸಿಗುವ ಸಾಧ್ಯತೆ ಇದೆ. ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿದಾಯ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ಟೆಸ್ಟ್ ತಂಡದ ಪ್ಲೇಯಿಂಗ್ XIನಲ್ಲಿ ಹಲವು ಮಹತ್ವದ ಬದಲಾವಣೆಯನ್ನು ನಾವು ನೋಡಬಹುದು. ಟೆಸ್ಟ್ ಸರಣಿ ಆಡಲು ಇಂಗ್ಲೆಂಡ್ ಪ್ರವಾಸ ಹಮ್ಮಿಕೊಳ್ಳುವುದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ (Gautam Gambhir) ಕನ್ನಡಿಗ ಕರುಣ್ ನಾಯರ್ಗೆ ಅವಕಾಶ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟಸ್ಟ್ ಸರಣಿಯು ಜೂನ್ 20 ರಂದು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಅಜಿತ್ ಅಗರ್ಕರ್ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು ಕಳೆದ ತಿಂಗಳು 18 ಸದಸ್ಯರ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿತ್ತು. ಈ ತಂಡದಲ್ಲಿ ಕನ್ನಡಿಗ ಕರುಣ್ ನಾಯರ್ಗೂ ಅವಕಾಶವನ್ನು ನೀಡಲಾಗಿದೆ. ಆ ಮೂಲಕ ಏಳು ವರ್ಷಗಳ ಬಳಿಕ ಭಾರತ ಟೆಸ್ಟ್ ತಂಡದಲ್ಲಿ ಆಡಲು ಕರುಣ್ ನಾಯರ್ ಎದುರು ನೋಡುತ್ತಿದ್ದಾರೆ.
IND vs ENG: ಭಾರತ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಆಘಾತ!
ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌತಮ್ ಗಂಭೀರ್, "ನಮ್ಮ ದೇಶಿ ಕ್ರಿಕೆಟ್ ಅದ್ಭುತವಾಗಿದೆ. ಭವಿಷ್ಯದಲ್ಲಿಯೂ ದೇಶಿ ಕ್ರಿಕೆಟ್ ಶ್ರೇಷ್ಟತೆಯಿಂದ ಕೂಡಿರಲಿದೆ. ದೇಶಿ ಕ್ರಿಕೆಟ್ ಆಡುತ್ತಿರುವ ಎಲ್ಲಾ ಯುವ ಆಟಗಾರರಿಗೆ ಇದರ ಮಹತ್ವದ ಬಗ್ಗೆ ಚೆನ್ನಾಗಿ ಗೊತ್ತಿದೆ. ಅವರು ದೇಶಿ ಕ್ರಿಕೆಟ್ನಲ್ಲಿ ಚೆನ್ನಾಗಿ ಆಡುತ್ತಿದ್ದರೆ, ಎಂದಿಗೂ ರಾಷ್ಟ್ರೀಯ ತಂಡದ ಬಾಗಿಲು ಮುಚ್ಚುವುದಿಲ್ಲ," ಎಂದು ತಿಳಿಸಿದ್ದಾರೆ.
ದ್ವಿಶತಕ ಸಿಡಿಸಿದ ಕರುಣ್ ನಾಯರ್
ಕಳೆದ ತಿಂಗಳ ಅಂತ್ಯದಲ್ಲಿ ಕರುಣ್ ನಾಯರ್ ಭಾರತ ಎ ತಂಡದ ಪರ ಇಂಗ್ಲೆಂಡ್ಗೆ ತೆರಳಿದ್ದರು. ಅದರಂತೆ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೊದಲನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ದ್ವಿಶತಕ ಸಿಡಿಸಿ ಮಿಂಚಿದ್ದರು. ಆ ಮೂಲಕ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಅವರ ಗಮನವನ್ನು ಸೆಳೆದಿದ್ದರು.
"ಕೌಂಟಿ ಕ್ರಿಕೆಟ್ ಆಡಿದ ಅನುಭವವನ್ನು ಹೊಂದಿರುವ ಕರುಣ್ ನಾಯರ್ ಅವರನ್ನು ಹೊಂದಿರುವುದು ಒಳ್ಳೆಯ ಸಂಗತಿ. ಭಾರೆ ಎ ಪರ ದ್ವಿಶತಕ ಸಿಡಿಸಿದ್ದಾರೆ ಹಾಗೂ ಅಲ್ಲಿನ ಕಂಡೀಷನ್ಸ್ನಲ್ಲಿ ಸಾಕಷ್ಟು ರನ್ಗಳನ್ನು ಕಲೆ ಹಾಕಿದ್ದಾರೆ. ಇಂಗ್ಲೆಂಡ್ನಂಥಾ ಒಳ್ಳೆಯ ಪ್ರವಾಸಗಳಲ್ಲಿ ಕರುಣ್ ನಾಯರ್ ಅವರಂಥ ಆಟಗಾರರು ತಂಡದಲ್ಲಿ ಇರುವುದು ಒಳ್ಳೆಯದು," ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.
ENG vs IND Tests: ಭಾರತ ವಿರುದ್ಧದ ಮೊದಲ ಟೆಸ್ಟ್ಗೆ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್
"ಅವರ (ಕರುಣ್) ಅನುಭವ ತಂಡಕ್ಕೆ ಲಾಭವನ್ನು ನೀಡಲಿದೆ. ಅವರು ಈ ಪ್ರವಾಸದಲ್ಲಿ ಉತ್ತಮ ಪ್ರದರ್ಶನವನ್ನು ತೋರಲಿದ್ದಾರೆಂಬ ಬಗ್ಗೆ ವಿಶ್ವಾಸವಿದೆ," ಎಂದು ಹೇಳಿದ ಹೆಡ್ ಕೋಚ್, "ಎಲ್ಲದಕ್ಕಿಂತ ಮುಖ್ಯವಾಗಿ ಒಂದು ಅಥವಾ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಟಗಾರನನ್ನು ನಿರ್ಧರಿಸಲು ಸಾದ್ಯವಿಲ್ಲ. ಯಾರೆಲ್ಲಾ ಆಟಗಾರರು ದೇಶಿ ಕ್ರಿಕೆಟ್ನಲ್ಲಿ ರನ್ ಗಳಿಸಿದ್ದರೆ, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಅವಕಾಶವನ್ನು ನೀಡಲಾಗುತ್ತದೆ," ಎಂದು ಭಾರತ ತಂಡದ ಹೆಡ್ ಕೋಚ್ ಹೇಳಿದ್ದಾರೆ.