ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಎರಡನೇ ಟೆಸ್ಟ್‌ನಲ್ಲಿ ಕುಲ್ದೀಪ್ ಯಾದವ್‌ಗೆ ಸ್ಥಾನ ನೀಡಿ ಎಂದ ಸುನೀಲ್ ಗವಾಸ್ಕರ್!

Sunil Gavaskar backs Kuldeep Yadav: ಲೀಡ್ಸ್‌ನ ಹೆಡಿಂಗ್ಲೆಯಲ್ಲಿ ನಡೆದಿದ್ದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಸಾರಥ್ಯದ ಭಾರತ ತಂಡ 5 ವಿಕೆಟ್ ಗಳಿಂದ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು. ಜೂನ್ 2 ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ಎರಡನೇ ಟೆಸ್ಟ್ ಆರಂಭಗೊಳ್ಳಲಿದ್ದು, ವೇಗಿ ಶಾರ್ದಲ್ ಠಾಕೂರ್ ಬದಲಿಗೆ ಕುಲ್ದೀಪ್ ಯಾದವ್‌ಗೆ ಸ್ಥಾನ ಕಲ್ಪಿಸಬೇಕೆಂದು ಬ್ಯಾಟಿಂಗ್‌ ದಿಗ್ಗಜ ಸುನೀಲ್ ಗವಾಸ್ಕರ್ ಸಲಹೆ ನೀಡಿದ್ದಾರೆ.

2ನೇ ಟೆಸ್ಟ್‌ಗೆ ಭಾರತ ತಂಡದಲ್ಲಿ ಒಂದು ಬದಲಾವಣೆ ಸೂಚಿಸಿದ ಗವಾಸ್ಕರ್‌!

ಕುಲ್ದೀಪ್‌ ಯಾದವ್‌ ಪರ ಬ್ಯಾಟ್‌ ಬೀಸಿದ ಸುನೀಲ್‌ ಗವಾಸ್ಕರ್‌.

Profile Ramesh Kote Jun 25, 2025 7:49 PM

ನವದೆಹಲಿ: ಎರಡು ವರ್ಷಗಳ ನಂತರ ಭಾರತ ತಂಡದ ಪರ ಟೆಸ್ಟ್‌ಗೆ ಮರಳಿದ ವೇಗಿ ಶಾರ್ದುಲ್ ಠಾಕೂರ್ (Shardul Thakur) ಲೀಡ್ಸ್ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಹಾಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ(IND vs ENG) ಶಾರ್ದುಲ್ ಠಾಕೂರ್ ಬದಲಿಗೆ ಕುಲ್ದೀಪ್ ಯಾದವ್ (Kuldeep Yadav)ಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಬೇಕೆಂದು ಲಿಟ್ಲ್ ಮಾಸ್ಟರ್ ಸುನೀಲ್ ಗವಾಸ್ಕರ್ (Sunil Gavaskar) ಆಗ್ರಹಿಸಿದ್ದಾರೆ. ಮೊದಲ ಟೆಸ್ಟ್ ಪಂದ್ಯದ ಎರಡು ಇನಿಂಗ್ಸ್‌ಗಳಲ್ಲಿ ಶಾರ್ದುಲ್ ಠಾಕೂರ್ ಕೇವಲ ಎರಡು ವಿಕೆಟ್ ಪಡೆದಿದ್ದರು. ಅವರು ಇದೀಗ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡ 0-1 ಹಿನ್ನಡೆ ಅನುಭವಿಸಿದೆ.

ಶಾರ್ದುಲ್‌ ಠಾಕೂರ್‌ ದೇಶಿ ಕ್ರಿಕೆಟ್ ಹಾಗೂ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲಖನೌ ಜಯಂಟ್ಸ್ ತಂಡದ ಪರ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ್ದರು. ಇದರ ಆಧಾರದ ಮೇಲೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶಾರ್ದುಲ್ ಠಾಕೂರ್ ಸ್ಥಾನ ಪಡೆದಿದ್ದರು. ಆದರೆ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಅವರು ಎಡವಿದ್ದರು.

ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ 6 ಓವರ್‌ಗಳಲ್ಲಿ 38 ರನ್ ನೀಡಿ ವಿಕೆಟ್ ಪಡೆಯುವಲ್ಲಿ ಎಡವಿದ್ದರು. ಆದರೆ ದ್ವಿತೀಯ ಇನಿಂಗ್ಸ್‌ನಲ್ಲಿ ಶತಕ ವೀರ ಬೆನ್ ಡೆಕಟ್ ಹಾಗೂ ಸ್ಫೋಟಕ ಆಟಗಾರ ಹ್ಯಾರಿ ಬ್ರೂಕ್ ವಿಕೆಟ್ ಪಡೆದು ಗಮನ ಸೆಳೆದರು. ಆದರೆ ಬ್ಯಾಟಿಂಗ್‌ನಲ್ಲಿ ಎರಡು ಇನಿಂಗ್ಸ್‌ಗಳಲ್ಲಿ ತಂಡಕ್ಕೆ ಆಸರೆಯಾಗದೆ ನಿರಾಸೆ ಮೂಡಿಸಿದ್ದರು.

IND vs ENG: ಸಚಿನ್ , ದ್ರಾವಿಡ್‌ರ ದೊಡ್ಡ ದಾಖಲೆ ಮುರಿಯುವ ಸನಿಹದಲ್ಲಿ ಜೋ ರೂಟ್!

ಕುಲ್ದೀಪ್ ಯಾದವ್‌ಗೆ ಸ್ಥಾನ ನೀಡಿ: ಸುನೀಲ್ ಗವಾಸ್ಕರ್

ಜೂನ್ 2 ರಂದು ಬರ್ಮಿಂಗ್‌ಹ್ಯಾಮ್‌ನ ಕಿಂಗ್ ಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಹಾಗೂ ಭಾರತ ನಡುವೆ ಎರಡನೇ ಟೆಸ್ಟ್ ಪಂದ್ಯ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ನಡೆಯಲಿದ್ದು, ಚೈನಾಮನ್‌ ಸ್ಪಿನ್ನರ್ ಕುಲ್ದೀಪ್ ಯಾದವ್‌ಗೆ ತಂಡದಲ್ಲಿ ಸ್ಥಾನ ನೀಡಬೇಕು ಎಂದು ಪೋಸ್ಟ್ ಮ್ಯಾಚ್ ಶೋನಲ್ಲಿ ಸುನೀಲ್ ಗವಾಸ್ಕರ್ ಸಲಹೆ ನೀಡಿದ್ದಾರೆ.

"ಎರಡನೇ ಟೆಸ್ಟ್ ಪಂದ್ಯದಲ್ಲಿ ಜಸ್‌ಪ್ರೀತ್ ಬುಮ್ರಾ ಆಡುತ್ತಾರೋ, ಇಲ್ಲವೋ ಎನ್ನುವುದು ಬೇರೆ ಸಂಗತಿ. ಆದರೆ ಆ ಪಂದ್ಯದಲ್ಲಿ ಕುಲ್ದೀಪ್ ಯಾದವ್ ಅವರನ್ನು ತಂಡದೊಳಗೆ ಕರೆತರಬೇಕು ಎಂಬುದು ನನ್ನ ಅನಿಸಿಕೆ. ಬರ್ಮಿಂಗ್‌ಹ್ಯಾಮ್‌ ಕ್ರೀಡಾಂಗಣವು ಸ್ಪಿನ್ನರ್‌ಗೆ ಹೆಚ್ಚು ನೆರವು ನೀಡುವುದರಿಂದ ವೇಗಿ ಶಾರ್ದುಲ್ ಠಾಕೂರ್ ಬದಲಿಗೆ ಕುಲ್ದೀಪ್ ಯಾದವ್‌ಗೆ ಸ್ಥಾನ ನೀಡಬೇಕು," ಎಂದು ಮಾಜಿ ನಾಯಕ ಸಲಹೆ ನೀಡಿದ್ದಾರೆ.

IND vs ENG: 148 ವರ್ಷಗಳ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಅನಗತ್ಯ ದಾಖಲೆ ಬರೆದ ಭಾರತ

ವಾಷಿಂಗ್ಟನ್ ಸುಂದರ್‌ಗೆ ಅವಕಾಶ ಕಲ್ಪಿಸಿ

ಮೊದಲ ಟೆಸ್ಟ್ ಪಂದ್ಯದಲ್ಲಿ ದೊಡ್ಡ ಮೊತ್ತ ಕಲೆ ಹಾಕುವಲ್ಲಿ ಸಂಪೂರ್ಣ ಎಡವಿರುವ ಸಾಯಿ ಸುದರ್ಶನ್ ಹಾಗೂ ಕರುಣ್ ನಾಯರ್ ಅವರನ್ನು ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಬೆಂಚ್ ಕಾಯಿಸಲು ನಾನು ಬಯಸುವುದಿಲ್ಲ. ಅದೇ ರೀತಿ ಬೌಲಿಂಗ್ ವೈವಿಧ್ಯತೆ ದೃಷ್ಟಿಯಿಂದ ವಾಷಿಂಗ್ಟನ್ ಸುಂದರ್‌ಗೂ ತಂಡದಲ್ಲಿ ಸ್ಥಾನ ನೀಡಬೇಕು ಎಂದು ಲಿಟ್ಲ್ ಮಾಸ್ಟರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

"ಮೊದಲ ಟೆಸ್ಟ್ ಪಂದ್ಯದಲ್ಲಿ ರನ್ ಗಳಿಸುವಲ್ಲಿ ಎಡವಿರುವ ಸಾಯಿ ಸುದರ್ಶನ್ ಹಾಗೂ ಕರುಣ್ ನಾಯರ್ ಅವರನ್ನು ಮುಂದಿನ ಪಂದ್ಯದಿಂದ ಕೈಬಿಡಲು ನಾನು ಇಷ್ಟಪಡುವುದಿಲ್ಲ. ಆದರೆ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ರನ್ ಗಳಿಸುವಲ್ಲಿ ವಿಫಲರಾದರೆ, ಆಗ ಒಬ್ಬರನ್ನು ತಂಡದಿಂದ ಹೊರಗಿಡಲು ಬಯಸುತ್ತೇನೆ. ಅಲ್ಲದೆ ತಂಡದಲ್ಲಿ ವಾಷಿಂಗ್ಟನ್ ಸುಂದರ್‌ಗೂ ಸ್ಥಾನ ಕಲ್ಪಿಸಲು ನಾನು ಎದುರು ನೋಡುತ್ತೇನೆ. ಅವರ ಸೇರ್ಪಡೆಯಿಂದ ಬ್ಯಾಟಿಂಗ್ ಬಲ ಹೆಚ್ಚುವುದಲ್ಲದೆ, ಬೌಲಿಂಗ್‌ನಲ್ಲಿ ವೈವಿಧ್ಯತೆ ಸಿಗಲಿದೆ," ಎಂದು ಸುನೀಲ್ ಗವಾಸ್ಕರ್ ಹೇಳಿದ್ದಾರೆ.

IND vs ENG: ಇಂಗ್ಲೆಂಡ್‌ ಎದುರು ಮೊದಲನೇ ಟಸ್ಟ್‌ ಪಂದ್ಯದಲ್ಲಿಯೇ ಎಡವಿದ ಭಾರತ!

ಟೆಸ್ಟ್ ಕ್ರಿಕೆಟ್‌ನಲ್ಲೂ ಉತ್ತಮ ದಾಖಲೆ ಹೊಂದಿರುವ ಕುಲ್ದೀಪ್ ಯಾದವ್, ಇಂಗ್ಲೆಂಡ್ ನೆಲದಲ್ಲಿ 2018ರಲ್ಲಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದರೂ, ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ಕುಲ್ದೀಪ್‌, ವಿಕೆಟ್ ಪಡೆಯಲು ಎಡವಿದ್ದರು. ಈಗ ಜೂನ್ 2ರಂದು ಆರಂಭವಾಗಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕುಲ್ದೀಪ್ ಯಾದವ್‌ಗೆ ಸ್ಥಾನ ಸಿಗುತ್ತದೆಯೋ ಅಥವಾ ಬೇರೊಬ್ಬ ವಿಕೆಟ್ ಟೇಕರ್ ಬೌಲರ್ ಕಡೆ ಟೀಮ್‌ ಮ್ಯಾನೇಜ್‌ಮೆಂಟ್‌ ಗಮನಹರಿಸುತ್ತದೆಯೋ ಎಂಬುದನ್ನು ಕಾದು ನೋಡಬೇಕು.