ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MI vs PBKS: ಗಾಯಾಳು ಸೂರ್ಯಕುಮಾರ್‌ ಯಾದವ್‌ ಎರಡನೇ ಕ್ವಾಲಿಫೈಯರ್‌ ಆಡ್ತಾರಾ? ಕೋಚ್‌ ಹೇಳಿದ್ದಿದು!

ಗುಜರಾತ್‌ ಟೈಟನ್ಸ್‌ ವಿರುದ್ಧದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌ ಗಾಯದಿಂದ ಬಳಲುತ್ತಿದ್ದರು. ಆದರೆ, ಪಂದ್ಯದ ಬಳಿಕ ಮುಂಬೈ ಇಂಡಿಯನ್ಸ್‌ ಹೆಡ್‌ ಕೋಚ್‌ ಮಹೇಲಾ ಜಯವರ್ಧನೆಗೆ ಬಲಗೈ ಬ್ಯಾಟ್ಸ್‌ಮನ್‌ನ ಫಿಟ್‌ನೆಸ್‌ ಬಗ್ಗೆ ಮಾಹಿತಿ ನೀಡಿದ್ದಾರೆ.

ಗಾಯಾಳು ಸೂರ್ಯಕುಮಾರ್‌ ಫಿಟ್‌ನೆಸ್‌ ಬಗ್ಗೆ ಹೆಡ್‌ ಕೋಚ್‌ ಹೇಳಿಕೆ!

ಸೂರ್ಯಕುಮಾರ್‌ ಫಿಟ್‌ನೆಸ್‌ ಬಗ್ಗೆ ಮಹೇಲಾ ಜಯವರ್ಧನೆ ಮಾಹಿತಿ.

Profile Ramesh Kote May 31, 2025 5:49 PM

ಚಂಡೀಗಢ: ಗುಜರಾತ್‌ ಟೈಟನ್ಸ್‌ ವಿರುದ್ದ ಎಲಿಮಿನೇಟರ್‌ ಪಂದ್ಯದಲ್ಲಿ (MI vs GT) 20 ರನ್‌ಗಳಿಂದ ಗೆಲುವು ಪಡೆದಿದ್ದ ಮುಂಬೈ ಇಂಡಿಯನ್ಸ್‌ ತಂಡ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿದೆ. ಜೂನ್‌ ಒಂದರಂದು ಪಂಜಾಬ್‌ ಕಿಂಗ್ಸ್‌ ವಿರುದ್ಧ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಕಾದಾಟ ನಡೆಸಲಿದೆ. ಆದರೆ, ಈ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಗಾಯದ ಭೀತಿ ಶುರುವಾಗಿದೆ. ಹಿರಿಯ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌ (Suryakumar Yadav) ಗುಜರಾತ್‌ ಟೈಟನ್ಸ್‌ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿರುವ ರೀತಿ ಕಂಡಿದ್ದರು. ಆದರೆ, ಈ ಪಂದ್ಯದ ಬಳಿಕ ಮುಂಬೈ ಇಂಡಿಯನ್ಸ್‌ ಹೆಡ್‌ ಕೋಚ್‌ ಮಹೇಲಾ ಜಯವರ್ಧನೆ ಅವರು ಸ್ಪಷ್ಟನೆ ನೀಡಿದ್ದಾರೆ.

ಎಲಿಮಿನೇಟರ್‌ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹೇಲಾ ಜಯವರ್ಧನೆಗೆ ಸೂರ್ಯಕುಮಾರ್‌ ಯಾದವ್‌ ಅವರ ಗಾಯದ ಬಗ್ಗೆ ಸುದ್ದಿಗಾರರು ಪ್ರಶ್ನೆಯನ್ನು ಕೇಳಿದರು. ಈ ವೇಳೆ ಹೆಡ್‌ ಕೋಚ್‌ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಆ ಮೂಲಕ ಸೂರ್ಯಕುಮಾರ್‌ ಯಾದವ್‌ ಅವರು ಎರಡನೇ ಕ್ವಾಲಿಫೈಯರ್‌ನಲ್ಲಿ ಆಡಲಿದ್ದಾರೆಂದು ಮಾಹಿತಿಯನ್ನು ನೀಡಿದ್ದಾರೆ.

IPL 2025: ಸಿಕ್ಸರ್‌ ದಾಖಲೆ ಬರೆದ ಹಿಟ್‌ಮ್ಯಾನ್‌ ರೋಹಿತ್‌

"ಸದ್ಯ ಮಟ್ಟಿಗೆ ಯಾವುದೇ ರೀತಿಯ ಗಂಭೀರ ಸಮಸ್ಯೆಯಾಗಿಲ್ಲ. ಫಿಸಿಯೊ ಅವರಿಂದಲೂ ನಮಗೆ ಇಲ್ಲಿಯವರೆಗೂ ಯಾವುದೇ ಮಾಹಿತಿ ಬಂದಿಲ್ಲ. ಸೂರ್ಯಕುಮಾರ್‌ ಯಾದವ್‌ ಚೆನ್ನಾಗಿದ್ದಾರೆ. ಒಂದು ಕಾಲಿನಲ್ಲಿ ಆಡಬೇಕೆಂಬ ಪ್ರಸಂಗ ಬಂದರೂ ಅವರು ಪಂಜಾಬ್‌ ಕಿಂಗ್ಸ್‌ ಎದುರು ಆಡಲಿದ್ದಾರೆ," ಎಂದು ಮಹೇಲಾ ಜಯವರ್ಧನೆ ತಿಳಿಸಿದ್ದಾರೆ.

ಸಣ್ಣ ಗಾಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು: ಜಯವರ್ಧನೆ

ಪಂಜಾಬ್‌ ಕಿಂಗ್ಸ್‌ ವಿರುದ್ಧದ ಎರಡನೇ ಕ್ವಾಲಿಫೈಯರ್‌ ಪಂದ್ಯದ ನಿಮಿತ್ತ ಸೂರ್ಯಕುಮಾರ್‌ ಯಾದವ್‌ ಅವರ ಫಿಟ್‌ನೆಸ್‌ ಸಮಸ್ಯೆ ಇಲ್ಲ ಎಂದು ಅವರು ಹೇಳಿದ್ದಾರೆ. "ಇದು ಕಠಿಣ ವೇಳಾಪಟ್ಟಿ ಎಂದು ನಮಗೆ ಗೊತ್ತಿದೆ. ಆದರೆ, ತಂಡದ ಪ್ರತಿಯೊಬ್ಬರೂ ಫಿಟ್‌ ಆಗಿದ್ದಾರೆ ಹಾಗೂ ಆರೋಗ್ಯವಾಗಿದ್ದಾರೆ. ಹಾಗಾಗಿ ಅವರ ಸಣ್ಣ ಗಾಯದ ಬಗ್ಗೆ ನಮಗೆ ಯಾವುದೇ ತಲೆ ನೋವು ಇಲ್ಲ. ಫಿಸಿಯೊ ಅವರಿಂದ ನಮಗೆ ಯಾವುದೇ ಸುದ್ದಿ ಬಂದಿಲ್ಲ. ಆದರೆ, ಸೂರ್ಯಕುಮಾರ್‌ ಯಾದವ್‌ ಅವರು ಒಂದೇ ಕಾಲಿನಲ್ಲಿ ಬೇಕಿದ್ದರೂ ಆಡಲಿದ್ದಾರೆಂಬ ಬಗ್ಗೆ ನನಗೆ ಖಚಿತತೆ ಇದೆ. ಈ ಹುಡುಗರು ನಮಗೆ ಆಡೇ ಆಡುತ್ತಾರೆ. ತಲೆ ಕೆಡಿಸಿಕೊಳ್ಳುವುದಿಲ್ಲ," ಎಂದು ಅವರು ಹೇಳಿದ್ದಾರೆ.

PBKS vs MI Qualifier 2: ಪಿಚ್‌ ರಿಪೋರ್ಟ್‌, ಹವಾಮಾನ ವರದಿ, ಸಂಭಾವ್ಯ ತಂಡ ಹೇಗಿದೆ?

ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿ ಸೂರ್ಯಕುಮಾರ್‌

ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಸೂರ್ಯಕುಮಾರ್‌ ಯಾದವ್‌ ಮುಂಬೈ ಇಂಡಿಯನ್ಸ್‌ ಪರ ಅದ್ಭುತ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದಾರೆ. ಇಲ್ಲಿಯ ತನಕ ಆಡಿದ 15 ಪಂದ್ಯಗಳಿಂದ ಅವರು 67.30ರ ಸರಾಸರಿಯಲ್ಲಿ 673 ರನ್‌ಗಳನ್ನು ಸಿಡಿಸಿದ್ದಾರೆ. ಆ ಮೂಲಕ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಗುಜರಾತ್‌ ಟೈಟನ್ಸ್‌ ತಂಡದ ಸಾಯಿ ಸುದರ್ಶನ್‌ ಅವರು 759 ರನ್‌ಗಳನ್ನು ಗಳಿಸಿದ್ದು ಅಗ್ರ ಸ್ಥಾನದಲ್ಲಿದ್ದಾರೆ.

ಸಾಯಿ ಸುದರ್ಶನ್‌ ಅವರನ್ನು ಹಿಂದಿಕ್ಕಲು ಸೂರ್ಯಕುಮಾರ್‌ ಯಾದವ್‌ಗೆ ಇನ್ನೂ 87 ರನ್‌ಗಳ ಅಗತ್ಯವಿದೆ. ಎರಡನೇ ಕ್ವಾಲಿಫೈಯರ್‌ ಹಾಗೂ ಫೈನಲ್‌ ಸೇರಿ ಇನ್ನೂ ಎರಡು ಪಂದ್ಯಗಳು ಬಾಕಿ ಇವೆ. ಎಲ್ಲಾ ಅಂದುಕೊಂಡಂತೆ ನಡೆದರೆ ಸೂರ್ಯಕುಮಾರ್‌ ಯಾದವ್‌ ಈ ಎರಡು ಪಂದ್ಯಗಳಲ್ಲಿ ರನ್‌ ಗಳಿಸಿ ಆರೆಂಜ್‌ ಕ್ಯಾಪ್‌ ಮುಡಿಗೇರಿಸಿಕೊಳ್ಳಲಿದ್ದಾರೆ.