ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಭಾರತ ಟೆಸ್ಟ್‌ ತಂಡಕ್ಕೆ ಶ್ರೇಯಸ್‌ ಅಯ್ಯರ್‌ ಏಕಿಲ್ಲ? 4 ಪದಗಳ ಜವಾಬು ಕೊಟ್ಟ ಗಂಭೀರ್‌!

ಇಂಗ್ಲೆಂಡ್‌ ವಿರುದ್ಧ ಮುಂಬರುವ ಐದು ಪಂದ್ಯಗಳ ಟೆಸ್ಟ್‌ ಸರಣಿಯ ಭಾರತ ತಂಡದಿಂದ ಶ್ರೇಯಸ್‌ ಅಯ್ಯರ್‌ ಅವರನ್ನು ಕೈ ಬಿಡಲಾಗಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇತ್ತೀಚೆಗೆ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ಅವರಿಗೆ ಈ ಪ್ರಶ್ನೆಯನ್ನು ಕೇಳಲಾಗಿತ್ತು. ಅದಕ್ಕೆ ಅವರು ಕೇವಲ ಪದಗಳನ್ನು ಉತ್ತರವನ್ನು ನೀಡಿದ್ದಾರೆ.

ಶ್ರೇಯಸ್‌ ಅಯ್ಯರ್‌ಗೆ ಟೆಸ್ಟ್‌ ತಂಡದಲ್ಲಿ ಸ್ಥಾನ ಏಕಿಲ್ಲ? ಗಂಭೀರ್‌

ಶ್ರೇಯಸ್‌ ಅಯ್ಯರ್ ಬಗ್ಗೆ ಗೌತಮ್‌ ಗಂಭೀರ್‌ ಪ್ರತಿಕ್ರಿಯೆ!

Profile Ramesh Kote May 28, 2025 9:36 PM

ನವದೆಹಲಿ: ಇಂಗ್ಲೆಂಡ್ ಪ್ರವಾಸದ ಟೆಸ್ಟ್‌ ಸರಣಿಗೆ (IND vs ENG) ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮುಂದಿನ ತಿಂಗಳು (ಜೂನ್‌ 20) ಉಭಯ ತಂಡಗಳ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ರೋಹಿತ್ ಶರ್ಮಾ ಟೆಸ್ಟ್‌ ನಿವೃತ್ತಿಯ ನಂತರ, ಶುಭಮನ್ ಗಿಲ್ ಅವರನ್ನು ಭಾರತ ಟೆಸ್ಟ್‌ ತಂಡದ ಹೊಸ ನಾಯಕರನ್ನಾಗಿ ನೇಮಿಸಲಾಗಿದೆ. ಆದರೆ, ಫಾರ್ಮ್‌ನಲ್ಲಿರುವ ಶ್ರೇಯಸ್ ಅಯ್ಯರ್ (Shreyas Iyer) ಅವರನ್ನು ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ ಆಯ್ಕೆದಾರರು ಮತ್ತೊಮ್ಮೆ ಕಡೆಗಣಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟೀಮ್‌ ಇಂಡಿಯಾ ಹೆಡ್‌ ಕೋಚ್ ಗೌತಮ್ ಗಂಭೀರ್ (Gautam Gambhir) ಹೇಳಿಕೆಯೊಂದನ್ನು ನೀಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾದ 18 ಸದಸ್ಯರ ತಂಡದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಿಲ್ಲ. 30ರ ವಯಸ್ಸಿನ ಬ್ಯಾಟ್ಸ್‌ಮನ್ ಇದುವರೆಗೆ ಭಾರತ ಪರ 14 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ ಅವರು ಒಂದು ಶತಕ ಮತ್ತು ಐದು ಅರ್ಧಶತಕಗಳ ಸಹಾಯದಿಂದ 811 ರನ್ ಗಳಿಸಿದ್ದಾರೆ. ಕಳೆದ ವರ್ಷ ಭಾರತಕ್ಕೆ ಪ್ರವಾಸಕ್ಕೆ ಬಂದಾಗ ಇಂಗ್ಲೆಂಡ್ ವಿರುದ್ಧ ಈ ಸ್ವರೂಪದಲ್ಲಿ ಅವರು ಕೊನೆಯ ಬಾರಿ ಆಡಿದ್ದರು. ಭಾರತೀಯ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ಶ್ರೇಯಸ್ ಅಯ್ಯರ್ ಅವರನ್ನು ಏಕೆ ಕೈ ಬಿಡಲಾಗಿದೆ ಎಂದು ಪ್ರಶ್ನೆ ಕೇಳಿದಾಗ, ಅವರು- "ನಾನು ಆಯ್ಕೆದಾರನಲ್ಲ" ಎಂದು ಹೇಳಿದ್ದಾರೆ.

IND vs ENG: ಭಾರತ ಟೆಸ್ಟ್‌ ತಂಡದಲ್ಲಿ ಶಮಿಗೆ ಸ್ಥಾನ ನೀಡದೇ ಇರಲು ಕಾರಣ ತಿಳಿಸಿದ ಅಜಿತ್‌ ಅಗರ್ಕರ್‌!

2024-25ರ ರಣಜಿ ಟ್ರೋಫಿ ಟೂರ್ನಿಯಲ್ಲಿ ಶ್ರೇಯಸ್‌ ಅಯ್ಯರ್‌ ಅದ್ಭುತ ಪ್ರದರ್ಶನ ತೋರಿದ್ದಾರೆ. ಅವರು ಮುಂಬೈ ಪರ ಏಳು ಇನಿಂಗ್ಸ್‌ಗಳಲ್ಲಿ 480 ರನ್ ಗಳಿಸಿದ್ದಾರೆ ಮತ್ತು 68.57ರ ಸರಾಸರಿಯಲ್ಲಿ ಎರಡು ಶತಕಗಳನ್ನು ಗಳಿಸಿದ್ದರು. ಈಗ ಅವರು 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ ಮತ್ತು ಬಲವಾದ ಫಾರ್ಮ್‌ನಲ್ಲಿ ಕಾಣುತ್ತಿದ್ದಾರೆ. 14 ಇನಿಂಗ್ಸ್‌ಗಳಲ್ಲಿ ಶ್ರೇಯಸ್ ಅಯ್ಯರ್‌ 171.90ರ ಸ್ಟ್ರೈಕ್ ರೇಟ್‌ನಲ್ಲಿ 514 ರನ್ ಗಳಿಸಿದ್ದಾರೆ. ಅವರ ನಾಯಕತ್ವದಲ್ಲಿ ಪಂಜಾಬ್ ಕಿಂಗ್ಸ್‌ ತಂಡವು ಈಗ ಪ್ಲೇಆಫ್ಸ್‌ನಲ್ಲಿ ಆಡಲಿದೆ.

2025ರ ಐಪಿಎಲ್ ಫೈನಲ್‌ ಪಂದ್ಯಕ್ಕೆ ಮೂವರು ಸೇನಾ ಮುಖ್ಯಸ್ಥರೊಂದಿಗೆ ಸಿಡಿಎಸ್ ಆಹ್ವಾನವನ್ನು ಗಂಭೀರ್ ಶ್ಲಾಘಿಸಿದ್ದಾರೆ. ಇದಕ್ಕಾಗಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು (ಬಿಸಿಸಿಐ) ಶ್ಲಾಘಿಸಿದರು. "ಇದು ಅದ್ಭುತ ಹೆಜ್ಜೆ. ಬಿಸಿಸಿಐ ಉತ್ತಮ ಉಪಕ್ರಮವನ್ನು ತೆಗೆದುಕೊಂಡಿದೆ. ಇಡೀ ದೇಶವು ಒಂದಾಗಿದೆ ಮತ್ತು ನಮ್ಮ ಸಶಸ್ತ್ರ ಪಡೆಗಳಿಗೆ ನಮಸ್ಕರಿಸುತ್ತಿದೆ. ಯಾವುದೇ ಸ್ವಾರ್ಥವಿಲ್ಲದೆ ನಮ್ಮನ್ನು ರಕ್ಷಿಸಿದ್ದಕ್ಕಾಗಿ ನಾನು ಸಶಸ್ತ್ರ ಪಡೆಗಳಿಗೆ ಕ್ರೆಡಿಟ್ ನೀಡುತ್ತೇನೆ," ಎಂದು ಗುಣಗಾಣ ಮಾಡಿದ್ದಾರೆ.

India's Test Squad: ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ, ಶುಭಮನ್‌ ಗಿಲ್‌ ನೂತನ ನಾಯಕ!

ಮೇ 29 ರಂದು ಪ್ಲೇಆಫ್ಸ್‌ ಪಂದ್ಯಗಳು ಆರಂಭ

2025ರ ಐಪಿಎಲ್‌ ಟೂರ್ನಿಯ ಗುಂಪು ಹಂತದ ಪಂದ್ಯಗಳು ಇದೀಗ ಮುಗಿದಿವೆ ಮತ್ತು ಗುರುವಾರದಿಂದ ಪ್ಲೇಆಫ್ಸ್‌ ಪಂದ್ಯಗಳು ಪ್ರಾರಂಭವಾಗುತ್ತಿವೆ. ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮೇ 29 ರಂದು ಮೊದಲನೇ ಕ್ವಾಲಿಫೈಯರ್‌ನಲ್ಲಿ ಕಾದಾಟ ನಡೆಸಲಿವೆ. ಗುಜರಾತ್ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮೇ 30 ರಂದು ಎಲಿಮಿನೇಟರ್‌ ಪಂದ್ಯದಲ್ಲಿ ಸೆಣಸಲಿವೆ. ಕ್ವಾಲಿಫೈಯರ್ -1 ರಲ್ಲಿ ಸೋತ ತಂಡವು ಭಾನುವಾರ ಎಲಿಮಿನೇಟರ್‌ನ ವಿಜೇತ ತಂಡದ ವಿರುದ್ಧ ಎರಡನೇ ಕ್ವಾಲಿಫೈಯರ್‌ನಲ್ಲಿ ಕಾದಾಟ ನಡೆಸಲಿದೆ. ಜೂನ್ 3 ರಂದು ನಡೆಯುವ ಫೈನಲ್‌ನಲ್ಲಿ ಕ್ವಾಲಿಫೈಯರ್-1 ಮತ್ತು ಕ್ವಾಲಿಫೈಯರ್-2ರ ವಿಜೇತ ತಂಡಗಳ ನಡುವೆ ಪಂದ್ಯ ಜರುಗಲಿದೆ.