ಬಾಳೆಹಣ್ಣು ಖರೀದಿಗೆ 35 ಲಕ್ಷ ಖರ್ಚು: ಬಿಸಿಸಿಐಗೆ ಹೈಕೋರ್ಟ್ ನೋಟಿಸ್!
ಸಂಜಯ್ ರಾವತ್ ಮತ್ತು ಸಹಚರರು 2024-25ರ ಹಣಕಾಸು ವರ್ಷದ ಆಧಾರದ ಮೇಲೆ ಉತ್ತರಾಖಂಡ ಕ್ರಿಕೆಟ್ ಸಂಸ್ಥೆಯ ಬ್ಯಾಂಕ್ ಖಾತೆಯ ಕುರಿತು ತನಿಖೆ ನಡೆಸುವಂತೆ ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ಉತ್ತರಾಖಂಡ ಕ್ರಿಕೆಟ್ ಸಂಸ್ಥೆಯ ಲೆಕ್ಕಪತ್ರ ವರದಿಯನ್ನು ಹೈಲೈಟ್ ಮಾಡಿ, ಆಡಿಟ್ನಲ್ಲಿನ ಖರ್ಚುಗಳಿಂದ ತಾವು ಆಘಾತಕ್ಕೊಳಗಾಗಿದ್ದೇವೆ ಎಂದು ಹೇಳಿದ್ದಾರೆ.

-

ಡೆಹ್ರಾಡೂನ್: ಉತ್ತರಾಖಂಡ್ ಕ್ರಿಕೆಟ್ ಅಸೋಸಿಯೇಷನ್ (ಸಿಎಯು) ಸರ್ಕಾರಿ ನಿಧಿಯ ₹12 ಕೋಟಿ ದುರುಪಯೋಗಪಡಿಸಿಕೊಂಡ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಉತ್ತರಾಖಂಡ ಹೈಕೋರ್ಟ್(Uttarakhand hc), ಬಿಸಿಸಿಐ(BCCI)ಗೆ ನೋಟಿಸ್ ಜಾರಿ ಮಾಡಿದೆ. ಉತ್ತರಾಖಂಡ ಲೆಕ್ಕ ಪರಿಶೋಧನಾ ವರದಿಯ ಆಧಾರದ ಮೇಲೆ ಆಟಗಾರರಿಗೆ ಬಾಳೆ ಹಣ್ಣುಗಳಿಗಾಗಿ 35 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಉತ್ತರಾಖಂಡ್ ಕ್ರಿಕೆಟ್ ಅಸೋಸಿಯೇಷನ್ ಸರ್ಕಾರದ ನಿಧಿಯಿಂದ 12 ಕೋಟಿ ರೂ. ಈ ಹಣವನ್ನು ಪಂದ್ಯಾವಳಿಗಳನ್ನು ಆಯೋಜಿಸಲು ಉದ್ದೇಶಿಸಲಾಗಿತ್ತು.
ಸಂಜಯ್ ರಾವತ್ ಮತ್ತು ಸಹಚರರು 2024-25ರ ಹಣಕಾಸು ವರ್ಷದ ಆಧಾರದ ಮೇಲೆ ಉತ್ತರಾಖಂಡ ಕ್ರಿಕೆಟ್ ಸಂಸ್ಥೆಯ ಬ್ಯಾಂಕ್ ಖಾತೆಯ ಕುರಿತು ತನಿಖೆ ನಡೆಸುವಂತೆ ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ಉತ್ತರಾಖಂಡ ಕ್ರಿಕೆಟ್ ಸಂಸ್ಥೆಯ ಲೆಕ್ಕಪತ್ರ ವರದಿಯನ್ನು ಹೈಲೈಟ್ ಮಾಡಿ, ಆಡಿಟ್ನಲ್ಲಿನ ಖರ್ಚುಗಳಿಂದ ತಾವು ಆಘಾತಕ್ಕೊಳಗಾಗಿದ್ದೇವೆ ಎಂದು ಹೇಳಿದ್ದಾರೆ. ಆಟಗಾರರಿಗೆ ಬಾಳೆ ಹಣ್ಣುಗಳನ್ನು ಒದಗಿಸಲು 35 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ರಿಪೋರ್ಟ್ನಲ್ಲಿದೆ. ಆದ್ದರಿಂದ, ರಾಜ್ಯ ಕ್ರಿಕೆಟ್ ಮಂಡಳಿಯ ಲೆಕ್ಕಪತ್ರ ವರದಿಯ ಬಗ್ಗೆ ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಕ್ರಿಕೆಟ್ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಕೆಲವರು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಆಹಾರ ವೆಚ್ಚದ ನೆಪದಲ್ಲಿ ಸಂಘವು ಕೋಟಿಗಟ್ಟಲೇ ಹಣ ದುರುಪಯೋಗ ಮಾಡಿದೆ. ಮತ್ತು ರಾಜ್ಯದ ಆಟಗಾರರಿಗೆ ಅದಕ್ಕೆ ತಕ್ಕ ಸೌಲಭ್ಯಗಳನ್ನೂ ಒದಗಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಮಧ್ಯೆ, ನ್ಯಾಯಮೂರ್ತಿ ಮನೋಜ್ ತಿವಾರಿ ಅವರ ಏಕಸದಸ್ಯ ಪೀಠವು ಈ ಅರ್ಜಿಗಳ ಮೇಲಿನ ವಾದಗಳನ್ನು ಆಲಿಸಿ ಈ ಆರೋಪಗಳನ್ನು ಪರಿಗಣನೆಗೆ ತೆಗೆದುಕೊಂಡ ವಿಚಾರಣೆ ಶುಕ್ರವಾರ ನಡೆಯಲಿದೆ.
ಇದನ್ನೂ ಓದಿ Asia Cup 2025: ಆರ್. ಅಶ್ವಿನ್ ದಾಖಲೆ ಮುರಿದ ಕುಲ್ದೀಪ್ ಯಾದವ್