ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Karnataka Bypolls: ಉಪಚುನಾವಣೆ; ಬಾಗಲಕೋಟೆಯಲ್ಲಿ ಶೇ.68.66, ದಾವಣಗೆರೆ ದಕ್ಷಿಣದಲ್ಲಿ ಶೇ.68.43 ಮತದಾನ ದಾಖಲು

ಬಾಗಲಕೋಟೆಯಲ್ಲಿ ಶೇ.68.66, ದಾವಣಗೆರೆ ದಕ್ಷಿಣದಲ್ಲಿ ಶೇ.68.43 ಮತದಾನ

Voter Turnout: ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಗುರುವಾರ ಉಪಚುನಾವಣೆ ನಡೆದಿದೆ. ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಇಲ್ಲಿದೆ.

Bangalore News: ಜನಗಣತಿಯಲ್ಲಿ ಸರ್ಕಾರಿ ನೌಕರರ ಬಳಕೆ: ಆಡಳಿತ ವ್ಯವಸ್ಥೆಯ ಮೇಲೆ ಕರಿನೆರಳು

ಜನಗಣತಿಯಲ್ಲಿ ಸರ್ಕಾರಿ ನೌಕರರ ಬಳಕೆ

ಬೇಸಿಗೆಯ ಸುಡುಬಿಸಿಲಿನಲ್ಲಿ ಸಿಬ್ಬಂದಿಗಳು ಜನಗಣತಿಯಲ್ಲಿ ತೊಡಗಿದ್ದು, ಗಣತಿ ಆರಂಭಗೊಂಡ ನಾಲ್ಕು ದಿನಗಳಲ್ಲಿಯೇ ಬಸವಳಿದಿದ್ದಾರೆ.ಈಗ ಅಂತರ್ಜಾಲದಲ್ಲೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಸ್ವಯಂಪ್ರೇರಿತರಾಗಿ ಮಾಹಿತಿಯನ್ನು ಅಪ್ಲೋಡ್‌ ಮಾಡುತ್ತಿದ್ದು, ಇದೇ 15 ರವರೆಗೆ ಅವಕಾಶ ಇದೆ. ನಂತರದ ದಿನಗಳಲ್ಲಿ ಸರ್ಕಾರಿ ಸಿಬ್ಬಂದಿಗಳು ನಿಗದಿತ ಸಮಯದಲ್ಲಿ ಈ ಗಣತಿ ಕಾರ್ಯವನ್ನು ಮುಗಿಸಬೇಕಾಗಿದೆ.

ತಮಿಳುನಾಡಿನ 5,000 ಯುವಕರಿಗೆ AI-ಚಾಲಿತ ಭವಿಷ್ಯಕ್ಕಾಗಿ ಪ್ರಮಾಣೀಕರಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್

ತರಗತಿ ಕೊಠಡಿಗಳಿಂದ ವೃತ್ತಿಜೀವನದವರೆಗೆ AI-ಚಾಲಿತ ಭವಿಷ್ಯ

ಮದ್ರಾಸ್ ವಿಶ್ವವಿದ್ಯಾಲಯ, ಅನ್ನಾ ವಿಶ್ವವಿದ್ಯಾಲಯ, ಕ್ವೀನ್ ಮೇರಿ ಕಾಲೇಜು (ಚೆನ್ನೈ), ಮೊಹಮ್ಮದ್ ಸತಕ್ ಎಜೆ ಕಾಲೇಜ್ ಆಫ್ ಎಂಜಿನಿಯರಿಂಗ್ (ಚೆನ್ನೈ), ಮತ್ತು ಕೆಪಿಆರ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿ ಯರಿಂಗ್ ಮತ್ತು ತಂತ್ರಜ್ಞಾನ (ಕೊಯಮತ್ತೂರು) ಸೇರಿದಂತೆ ರಾಜ್ಯಾದ್ಯಂತದ ಪ್ರಮುಖ ಸಂಸ್ಥೆಗಳ ಸಹಯೋಗದೊಂದಿಗೆ ತರಬೇತಿ ಮತ್ತು ಪ್ರಮಾಣೀಕರಣವನ್ನು ನಡೆಸಲಾಯಿತು.

ಬಿರ್ಲಾ-ನು  ಏರೋಕಾನ್ ‘ದಿ ಎಲೆಮೆಂಟ್ಸ್ ಕಲೆಕ್ಷನ್’ ಅನಾವರಣ: ಸಂರಚನಾ ದೃಢತೆ ಮತ್ತು ಶಾಶ್ವತ ಸೌಂದರ್ಯ ಸೇರುವ ಸ್ಥಳ

ಬಿರ್ಲಾ-ನು ಏರೋಕಾನ್ ‘ದಿ ಎಲೆಮೆಂಟ್ಸ್ ಕಲೆಕ್ಷನ್’ ಅನಾವರಣ

ಬಿರ್ಲಾ-ನು, ಆಧುನಿಕ ಹಾಗೂ ಸುಸ್ಥಿರ ಮನೆ ಮತ್ತು ಕಟ್ಟಡ ಪರಿಹಾರಗಳಲ್ಲಿ ಜಾಗತಿಕ ನಾಯಕ, ಇಂದು “ದಿ ಎಲೆಮೆಂಟ್ಸ್ ಕಲೆಕ್ಷನ್” ಅನ್ನು ಪರಿಚಯಿಸಿದೆ. ಬಿರ್ಲಾ-ನು ಏರೋಕಾನ್ ಪೋರ್ಟ್‌ ಫೋಲಿಯೊಳಗಿನ ಈ ಕ್ಯೂರೆಟೆಡ್ ಡಿಸೈನರ್ ಸಿಮೆಂಟ್ ಬೋರ್ಡ್ ಶ್ರೇಣಿ, ವಾಸ್ತುಶಿಲ್ಪ ಮೇಲ್ಮೈಗಳಲ್ಲಿ ಮಹತ್ವದ ಬದಲಾವಣೆಯನ್ನು ಸೂಚಿಸುತ್ತದೆ, ಅಕ್ಷಯ ಕಾರ್ಯ ಕ್ಷಮತೆಯನ್ನು ಉನ್ನತ ಮಟ್ಟದ ಸೌಂದರ್ಯಕ್ಕೆ ಸೇರ್ಪಡೆ ಮಾಡುತ್ತದೆ.

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶ: ತುಮಕೂರಿನ ವಿದ್ಯಾನಿಧಿ ಕಾಲೇಜು ಅತ್ಯುತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ವಿದ್ಯಾನಿಧಿ ಕಾಲೇಜು ಉತ್ತಮ ಸಾಧನೆ

Tumkur News: ವಿದ್ಯಾನಿಧಿ ಕಾಲೇಜಿನ ರೋಹನ್‌ ಮತ್ತು ಪೂರ್ವಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 597 ಅಂಕಗಳನ್ನು ಗಳಿಸುವುದರೊಂದಿಗೆ 2025-26ನೇ ಸಾಲಿನ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ವಿಜ್ಞಾನ ವಿಭಾಗದ ಗಿರಿಜಾ 593 ಅಂಕಗಳೊಂದಿಗೆ ರಾಜ್ಯಕ್ಕೆ ಏಳನೇ ರ‍್ಯಾಂಕ್ ಪಡೆದಿದ್ದಾರೆ.

Second PU Result: ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳಗಾವಿ ಕುವರಿ

ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳಗಾವಿ ಕುವರಿ

ಬೆಳಗಾವಿ ನಗರದ ಗೋಗಟೆ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಧ್ವನಿ ಕುಲಕರ್ಣಿ ಕಾಮರ್ಸ್ ವಿಭಾಗದಲ್ಲಿ 599 ಅಂಕ ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾರೆ. ಇಂಗ್ಲಿಷ್ ವಿಷಯದಲ್ಲಿ 100 ಕ್ಕೆ 99 ಅಂಕ ಪಡೆದಿದ್ದರೆ ಇನ್ನುಳಿದ ವ್ಯವಹಾರ ಅಧ್ಯಯನ, ಸಂಖ್ಯಾ ಶಾಸ್ತ್ರ, ಲೆಕ್ಕಶಾಸ್ತ್ರ, ಬೇಸಿಕ್ ಮ್ಯಾಥ್ಸ್ ಹಾಗೂ ಸಂಸ್ಕೃತ ವಿಷಯಗಳಲ್ಲಿ 100 ಕ್ಕೆ 100 ಅಂಕ ಪಡೆದಿದ್ದಾರೆ.

ಮರ್ಕ್'ನಿಂದ ಫಿಲ್ಟ್ರೇಷನ್ ಡಿವೈಸ್ ಗಳ ಜಾಗತಿಕ ಪೂರೈಕೆ ಉತ್ತೇಜಿಸಲು ಬೆಂಗಳೂರು ಸೌಲಭ್ಯದ ವಿಸ್ತರಣೆ

ಫಿಲ್ಟ್ರೇಷನ್ ಡಿವೈಸ್ ಗಳ ಜಾಗತಿಕ ಪೂರೈಕೆ ಉತ್ತೇಜಿಸಲು ಸೌಲಭ್ಯದ ವಿಸ್ತರಣೆ

ಮರ್ಕ್ ನ ಪೆಲಿಕಾನ್®2 ಅಲ್ಟ್ರಾಫಿಲ್ಟರೇಷನ್ ಕ್ಯಾಸೆಟ್ ಉನ್ನತ ಗುಣಮಟ್ಟದ ಶುದ್ಧೀಕರಣಕ್ಕೆ ವಿಶ್ವಾ ಸಾರ್ಹ ಪರಿಹಾರವಾಗಿದ್ದು ಅದಕ್ಕೆ ಫಾರ್ಮ ಮತ್ತು ಲೈಫ್ ಸೈನ್ಸ್ ಉದ್ಯಮಗಳಲ್ಲಿ ವಿಸ್ತಾರ ಶ್ರೇಣಿಯ ಅಪ್ಲಿಕೇಷನ್ ಗಳ ಬೆಂಬಲ ಪಡೆದಿದೆ. ಪೀಣ್ಯ ಘಟಕವು 2006ರಿಂದಲೂ ಜಾಗತಿಕ ಫಿಲ್ಟ್ರೇಷನ್ ಹಾರ್ಡ್ ವೇರ್ ಉತ್ಪಾದನೆಗೆ ಕೇಂದ್ರವಾಗಿದೆ ಮತ್ತು 2022ರಿಂದ ಪ್ರಿಫಿಲ್ಟರ್ ಕ್ಯಾಟ್ರಿಡ್ಜ್ ಒಳಗೊಂಡು ಬಳಸಬಲ್ಲ ಉತ್ಪನ್ನಗಳ ಉತ್ಪಾದನೆ ಪ್ರಾರಂಭಿಸಿದೆ.

2nd PUC Results 2026 Toppers: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ; ಈ ಬಾರಿಯ ಟಾಪರ್ಸ್‌ ಇವರೇ ನೋಡಿ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ; ಈ ಬಾರಿಯ ಟಾಪರ್ಸ್‌ ಇವರೇ ನೋಡಿ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಟಾಪರ್: ಶೇ. 83.65ರಷ್ಟು ಬಾಲಕರು ಮತ್ತು ಶೇ. 88.70ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ. 44 ಸಾವಿರ ಮಕ್ಕಳು ಒಂದು ವಿಷಯದಲ್ಲಿ ಫೇಲ್​​ ಆಗಿದ್ದರೆ, ಎರಡು ವಿಷಯದಲ್ಲಿ 18 ಸಾವಿರ ಮಕ್ಕಳು ಅನುತ್ತೀರ್ಣರಾಗಿದ್ದಾರೆ. ಹಾಗೆಯೇ ಎಲ್ಲ ವಿಷಯಗಳಲ್ಲಿಯೂ ಫೇಲ್​​ ಆದವರ ಸಂಖ್ಯೆ 1,772ಕ್ಕೆ ಇಳಿದಿದೆ.

Karnataka 2nd PUC Results 2026: ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳಗಾವಿ ಕುವರಿ

ದ್ವಿತೀಯ ಪಿಯುಸಿ ಫಲಿತಾಂಶ; ರಾಜ್ಯಕ್ಕೆ 2ನೇ ಸ್ಥಾನ ಪಡೆದ ಬೆಳಗಾವಿ ಕುವರಿ

Karnataka 2nd PUC Results 2026: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Results 2026) ಪ್ರಕಟವಾಗಿದ್ದು ಬೆಳಗಾವಿ ವಿದ್ಯಾರ್ಥಿನಿ ಕಾಮರ್ಸ್ ವಿಭಾಗದಲ್ಲಿ 600 ಕ್ಕೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶ: ಕಲಾ ವಿಭಾಗದಲ್ಲಿ ಕಲಬುರಗಿ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಾ ವಿಭಾಗದಲ್ಲಿ ಕಲಬುರಗಿ ವಿದ್ಯಾರ್ಥಿನಿ ಸೃಷ್ಟಿ ರಾಜ್ಯಕ್ಕೆ ಪ್ರಥಮ

Kalaburagi News: 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಬುರಗಿ ನಗರದ ಶ್ರೀಮತಿ ವೀರಮ್ಮ ಗಂಗಸಿರಿ (ವಿಜಿ) ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ಅವರು ಕಲಾ ವಿಭಾಗದಲ್ಲಿ ಒಟ್ಟು 600 ಅಂಕಗಳಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆಯುವ ಮೂಲಕ ಅಸಾಧಾರಣ ಸಾಧನೆ ಮಾಡಿದ್ದಾರೆ.

2nd PUC District Wise Result 2026: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್; ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್

ಕರ್ನಾಟಕ ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶ 2026: ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಶೇ.72.86, ವಾಣಿಜ್ಯ ವಿಭಾಗದಲ್ಲಿ 88.04 ಹಾಗೂ ವಿಜ್ಞಾನ 91.69 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ಎಂಬ ಮಾಹಿತಿ ಇಲ್ಲಿದೆ.

Bengaluru Airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲುಗಲ್ಲು: ಅಂತಾರಾಷ್ಟ್ರೀಯ ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ, ಪ್ರಯೋಗ ಯಶಸ್ವಿ!

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಅಂತಾರಾಷ್ಟ್ರೀಯ ಪ್ರಯಾಣಕ್ಕೂ ಬಯೋಮೆಟ್ರಿಕ್

Kempegowda international Airport: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್), ಇಂಡಿಗೋ, ಡಿಜಿ ಯಾತ್ರಾ ಫೌಂಡೇಶನ್ ಹಾಗೂ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘಟನೆ (ಐಎಟಿಎ) ಜಂಟಿಯಾಗಿ, ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಟಿಕೆಟ್ ಬುಕಿಂಗ್‌ನಿಂದ ಹಿಡಿದು ಬೋರ್ಡಿಂಗ್‌ವರೆಗಿನ ಸಂಪೂರ್ಣ ಸಂಪರ್ಕ ರಹಿತ ಪ್ರಯಾಣದ ತಾಂತ್ರಿಕ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿವೆ.

Bengaluru News: ಬೆಂಗಳೂರಿನಲ್ಲಿ ಆಟವಾಡುವಾಗ 3ನೇ ಮಹಡಿಯಿಂದ ಕೆಳಗೆ ಬಿದ್ದ ಮಗು; ಆಘಾತಕಾರಿ ವಿಡಿಯೋ ಇಲ್ಲಿದೆ!

ಬೆಂಗಳೂರಿನಲ್ಲಿ ಆಟವಾಡುವಾಗ 3ನೇ ಮಹಡಿಯಿಂದ ಕೆಳಗೆ ಬಿದ್ದ ಮಗು!

ಬೆಂಗಳೂರು ನಗರದ ನಾಯಂಡಹಳ್ಳಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ನವೀನ್ ಮತ್ತು ಜಯಶ್ರೀ ದಂಪತಿಯ ಒಂದೂವರೆ ವರ್ಷದ ಪುತ್ರಿ ಸಹನಾ ಆಟವಾಡುತ್ತಿದ್ದ ವೇಳೆ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾಳೆ. ಸದ್ಯ ಮಗುವಿಗೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Karnataka 2nd PUC Results 2026: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;  ಶೇ.86 ವಿದ್ಯಾರ್ಥಿಗಳು ಉತ್ತೀರ್ಣ, ರಿಸಲ್ಟ್‌ ಹೀಗೆ ಚೆಕ್‌ ಮಾಡಿ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್‌ ಹೀಗೆ ಚೆಕ್‌ ಮಾಡಿ

Karnataka 2nd PUC Result 2026 Declared: 2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ-1 ಫೆ.28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ. ಫಲಿತಾಂಶ ನೋಡುವುದು ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

Yogesh Gowda murder: ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ಏಪ್ರಿಲ್‌ 15ರಂದು

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ಏಪ್ರಿಲ್‌ 15ರಂದು

2016ರಲ್ಲಿ ಕೊಲೆ ನಡೆದಾಗ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಅಲ್ಲದೇ ಜೈಲಿನಲ್ಲಿ ಇದ್ದುಕೊಂಡೇ ಯೋಗಿಶ್‌ ಗೌಡ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರಿಂದ ಹೈಪ್ರೊಫೈಲ್ ಕೇಸ್ ಆಗಿತ್ತು. ಈ ಕೊಲೆಯಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದ ವಿನಯ್‌ ಕುಲಕರ್ಣಿ ಹೆಸರು ಬಂದಿದ್ದರಿಂದ ಮತ್ತಷ್ಟು ಸಂಚಲನ ಮೂಡಿಸಿತ್ತು.

Chikkamagaluru: ಬೆಂಗಳೂರಿನಲ್ಲಿ ಮಗ, ದುಬೈನಲ್ಲಿ ಮಗಳು; ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ

ಬೆಂಗಳೂರು, ದುಬೈಯಲ್ಲಿ ಮಗ, ಮಗಳು; ಪತಿಯ ಕೊಳೆತ ಶವದೊಂದಿಗೆ 10 ದಿನ ಪತ್ನಿ!

77 ವರ್ಷದ ಸಿರಿಲ್ ಮೋನಿಸ್ ಅವರು ವಯೋಸಹಜ ಅನಾರೋಗ್ಯದಿಂದ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಆದರೆ ಮನೆಯಲ್ಲಿದ್ದ ಮಾನಸಿಕ ಅಸ್ವಸ್ಥ ಪತ್ನಿಗೆ ತನ್ನ ಪತಿ ಮೃತಪಟ್ಟಿದ್ದಾರೆ ಎಂಬ ಅರಿವೇ ಬಂದಿಲ್ಲ. ಇಂಥ ಪರಿಸ್ಥಿತಿಯಲ್ಲಿ ಪತಿ ಬದುಕಿದ್ದಾರೆ, ಮಲಗಿದ್ದಾರೆಂದೇ ಭಾವಿಸಿ ಪತ್ನಿ ಪತಿಯ ಶವದ ಪಕ್ಕದಲ್ಲೇ 10 ದಿನ ಕಳೆದಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಯುದ್ಧ: ವಿಶ್ವಶಾಂತಿಗಾಗಿ ವಿಶ್ವ ನವಕರ ಮಹಾಮಂತ್ರ ದಿನ ಆಚರಣೆ

ಮನುಕುಲದ ಒಳಿತಿಗೆ ಯುದ್ಧ ಕೊನೆಗೊಳ್ಳಬೇಕು: ಸಚಿವ ದಿನೇಶ್ ಗುಂಡೂರಾವ್

ಜಗತ್ತಿನಲ್ಲಿ ಯುದ್ಧ ಕೊನೆಗೊಂಡು ಶಾಂತಿ ನೆಲೆಸುವುದು ಮನುಕುಲಕ್ಕೆ ಅತ್ಯಂತ ಅಗತ್ಯವಾಗಿದೆ. ಜಗತ್ತಿನ ಒಳಿತಿಗೆ ಮಾಡುತ್ತಿರುವ ಈ ಸೇವೆ ಅತ್ಯಂತ ಶ್ಲಾಘನೀಯ. ಶಾಂತಿ, ಪ್ರೀತಿ, ಸಹೋದರತ್ವದಿಂದ ಬಾಳಬೇಕು. ಹಿಂಸೆಯಿಂದ ದೂರ ಇರಬೇಕು. ಹಿಂಸೆ ಹಾನಿಕಾರಕ. ಇಡೀ ವಿಶ್ವದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಂತಹ ಚಿಂತನೆಯಿಂದ ದೇಶದಲ್ಲಿ ಗಮನಾರ್ಹ ಬದಲಾವಣೆ ತರಬಹುದು

ಈ ಗ್ರಾಮದಲ್ಲಿ ಹೆಣ್ಣು ಹುಟ್ಟಿದರೆ 5500 ರು. ಠೇವಣಿ !

ಈ ಗ್ರಾಮದಲ್ಲಿ ಹೆಣ್ಣು ಹುಟ್ಟಿದರೆ 5500 ರು. ಠೇವಣಿ !

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿ ಗ್ರಾಮ ಪಂಚಾಯತಿ ತನ್ನ ವಿನೂತನ ಕಾರ್ಯದಿಂದ ರಾಜ್ಯದ ಗಮನ ಸೆಳೆದಿದೆ. ಹೆಣ್ಣು ಮಕ್ಕಳಿಗೆ ಆರ್ಥಿಕ ಹಾಗೂ ಸಮಾಜಿಕವಾಗಿ ಭದ್ರತೆ ನೀಡುವ ಉದ್ದೇಶ ದಿಂದ ‘ಕುಮಾರಿ ಸಮೃದ್ಧಿ’ ಎಂಬ ವಿನೂತನ ಯೋಜನೆ ಮೂಲಕ ಮಹತ್ವದ ಯೋಜನೆ ಜಾರಿಗೆ ತಂದಿದ್ದು, ಇದರ ಫಲವಾಗಿ ಈವರೆಗೂ 49 ಹೆಣ್ಣುಮಕ್ಕಳು ಆರ್ಥಿಕ ಭದ್ರತೆ ಪಡೆದುಕೊಂಡಿದ್ದಾರೆ.

Kalaburagi Murder Case: ಕೇಳಿದ್ದೆಲ್ಲ ಕೊಡಿಸಿದರೂ 57ರ ಶಿಕ್ಷಕಿಯನ್ನು ಸುಟ್ಟು ಹಾಕಿದ್ದೇಕೆ 27 ವರ್ಷದ ಪಾಗಲ್‌ ಪ್ರೇಮಿ?

ಕೇಳಿದ್ದೆಲ್ಲ ಕೊಡಿಸಿದರೂ 57ರ ಶಿಕ್ಷಕಿಯ ಸುಟ್ಟು ಹಾಕಿದ 27 ವರ್ಷದ ಪ್ರೇಮಿ!

27ರ ಹರೆಯದ ಅಮರನಿಗೆ ಮದುವೆಯಾಗಿ ಹೆಂಡತಿ ಮಕ್ಕಳಿದ್ದರೂ, 57ರ ಪ್ರಾಯದ ಟೀಚರ್ ಜ್ಯೋತಿ ನೀಡುತ್ತಿದ್ದ ಹಣದ ಆಮಿಷಕ್ಕೆ ಬಿದ್ದು ಆಕೆಯೊಂದಿಗೆ ಸಂಬಂಧ ಮುಂದುವರಿಸಿದ್ದ. ಜ್ಯೋತಿ ನೀಡಿದ್ದ ಸುಮಾರು 15 ರಿಂದ 20 ಲಕ್ಷ ರೂಪಾಯಿ ಹಣದಲ್ಲಿ ಅಮರ್ ಐಷಾರಾಮಿ 'ಥಾರ್' ಕಾರನ್ನು ಕೂಡ ಖರೀದಿಸಿದ್ದ.

2nd PUC Results: ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ

ಇಂದು ಮಧ್ಯಾಹ್ನ 3ಕ್ಕೆ ದ್ವಿತೀಯ ಪಿಯು ಫಲಿತಾಂಶ, ರಿಸಲ್ಟ್ ಹೀಗೆ ಚೆಕ್ ಮಾಡಿ

ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಸಂಬಂಧಿತ ಕಾಲೇಜುಗಳಿಗೂ ಸಹ ದಿನಾಂಕ 09-04-2026ರ ಮಧ್ಯಾಹ್ನ 3.00 ಗಂಟೆಗೆ ಫಲಿತಾಂಶ ಪಟ್ಟಿಯನ್ನು ಲಭ್ಯಗೊಳಿಸಲಾಗುವುದು. ಕರ್ನಾಟಕ ಒನ್ ಮೊಬೈಲ್ ಆಪ್ (KarnatakaOne Mobile App) ನಲ್ಲಿಯೂ ಇದನ್ನು ಪಡೆಯಬಹುದು.

Karnataka By Elections: ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮುಂಜಾನೆ ಮತದಾನ ಆರಂಭವಾಗಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Drowned: ಭೂತನಾಳ ಕೆರೆಯಲ್ಲಿ ದುರಂತ: ಒಬ್ಬನನ್ನು ಬದುಕಿಸಲು ಹೋಗಿ ಮೂವರು ನೀರುಪಾಲು

ಭೂತನಾಳ ಕೆರೆಯಲ್ಲಿ ದುರಂತ: ಒಬ್ಬನನ್ನು ಬದುಕಿಸಲು ಹೋಗಿ ಮೂವರು ನೀರುಪಾಲು

ಕುಟುಂಬ ಸಮೇತ ಒಟ್ಟು 14 ಜನರು ವಿಜಯಪುರಕ್ಕೆ ಪ್ರವಾಸಕ್ಕಾಗಿ ಆಗಮಿಸಿ ಭೂತನಾಳ ಕೆರೆಯ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಬಾಲಕ ಮಹಮ್ಮದ್ ಹಯಾತ್ ನೀರಿಗೆ ಇಳಿದಾಗ ಆಕಸ್ಮಿಕವಾಗಿ ಮುಳುಗಿದ್ದಾನೆ. ಬಾಲಕನನ್ನು ರಕ್ಷಿಸಲು ಹೈದರ್ ಪಾಶಾ ಹಾಗೂ ಅಬ್ದುಲ್ ಖುದ್ದುಸ್ ನೀರಿಗೆ ಇಳಿದಾಗ ಮೂವರು ಮುಳುಗಿ ಅನಾಹುತ ಸಂಭವಿಸಿದೆ.

Jain Mission Hospital: ಏ.12ಕ್ಕೆ 3 ಜೈನ್ ಮಿಷನ್ ಆಸ್ಪತ್ರೆಯ ಹೊಸ ಬ್ಲಾಕ್‌ಗಳ ಲೋಕಾರ್ಪಣೆ : ಸಂತೋಷ್ ಹೆಗ್ಡೆ ಭಾಗಿ

ಏ.12ಕ್ಕೆ 3 ಜೈನ್ ಮಿಷನ್ ಆಸ್ಪತ್ರೆಯ ಹೊಸ ಬ್ಲಾಕ್‌ಗಳ ಲೋಕಾರ್ಪಣೆ

ನಗರ ಹೊರವಲಯದ ಜೈನ್ ಮಿಷನ್ ಆಸ್ಪತ್ರೆ(Jain Mission Hospital)ಯ 3 ಹೊಸ ಬ್ಲಾಕ್‌ಗಳ ಲೋಕಾರ್ಪಣೆ ಕಾರ್ಯಕ್ರಮ ಏ.12ರಂದು ಭಾನುವಾರ ಜೈನ್ ಮಿಷನ್ ಆಸ್ಪತ್ರೆ ಆವರಣದಲ್ಲಿ ನಡೆಯ ಲಿದ್ದು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ(Retired Lokayukta Santosh Hegde) ಭಾಗಿಯಾಗಲಿದ್ದಾರೆ ಎಂದು ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಜೈನ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಭೇಟಿ

ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಭೇಟಿ

ಇಲ್ಲಿನ ತಾಲ್ಲೂಕು ಕಚೇರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಜಿಲ್ಲಾಧಿಕಾರಿ ಜಿ.ಪ್ರಭು(Deputy Commissioner G.Prabhu) ಅವರು ಆಕಸ್ಮಿಕ ಭೇಟಿ ನೀಡಿದ್ದು ಕಡತ ವಿಲೇವಾರಿ ಪ್ರಕ್ರಿಯೆ, ಅರ್ಜಿ ಸ್ವೀಕರಣ ವ್ಯವಸ್ಥೆ ಮತ್ತು ಅಭಿಲೇಖಾಲಯದ ನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು.

Loading...