ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Hebbala Flyover: ಹೆಬ್ಬಾಳ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಹೆಬ್ಬಾಳ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah: 700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರಿ ಸರ್ಕಲ್‌ ವರೆಗೆ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

Gold price today on 18th Aug 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 9,275 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 10,118 ರೂ.ಗೆ ಬಂದು ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 74,200 ರೂ. ಬಾಳಿದರೆ, 10 ಗ್ರಾಂಗೆ ನೀವು 92,750 ರೂ. ಹಾಗೂ 100 ಗ್ರಾಂಗೆ 9,27,500 ರೂ. ನೀಡಬೇಕಾಗುತ್ತದೆ.

ಮಹಿಳೆಯರ ಕೌಶಲ್ಯಕ್ಕೆ ಬ್ರ್ಯಾಂಡ್‌ ಆದ ನಾಮ್ಸ್‌ಬೆಲ್ʼನ Oyiii

ಮಹಿಳೆಯರ ಕೌಶಲ್ಯಕ್ಕೆ ಬ್ರ್ಯಾಂಡ್‌ ಆದ ನಾಮ್ಸ್‌ಬೆಲ್ʼನ Oyiii

"ಮಹಿಳೆಯರು ಕೇವಲ ಕೊಡುಗೆ ನೀಡುವುದಕ್ಕೆ ಮಾತ್ರ ಸೀಮಿತರಾಗಿಲ್ಲ, ಅವರು ರೂಪಾಂತರಕ್ಕೆ ವೇಗವರ್ಧಕರು ಎಂಬ ನಂಬಿಕೆಯ ಮೇಲೆ ಓಯಿಐಐ ನಿರ್ಮಿಸಲಾಗಿದೆ. ಅವರು ಗ್ರಾಹಕರೊಂದಿಗೆ ಆಳವಾಗಿ ಸಂಪರ್ಕ ಸಾಧಿಸುತ್ತಾರೆ, ವಿಶ್ವಾಸ ಗಳಿಸುತ್ತಾರೆ ಮತ್ತು ವಹಿವಾಟನ್ನು ಮೀರಿದ ನಿಷ್ಠೆ ಯನ್ನು ನಿರ್ಮಿಸುತ್ತಾರೆ.

Mysuru Zoo: ಮೈಸೂರು ಮೃಗಾಲಯದ ಹಿರಿಯಾನೆ ಪದ್ಮಾವತಿ ಇನ್ನಿಲ್ಲ

ಮೈಸೂರು ಮೃಗಾಲಯದ ಹಿರಿಯಾನೆ ಪದ್ಮಾವತಿ ಇನ್ನಿಲ್ಲ

Padmavathi: 1973ರಲ್ಲಿ ಖೆಡ್ಡಾ ಕಾರ್ಯಾಚರಣೆಯ ಸಮಯದಲ್ಲಿ ರಕ್ಷಿಸಲ್ಪಟ್ಟ ಪದ್ಮಾವತಿ 53 ವರ್ಷಗಳ ಕಾಲ ಮೃಗಾಲಯದ ಆರೈಕೆಯಲ್ಲಿತ್ತು. ಪದ್ಮಾವತಿಯ ಜನನ ವರ್ಷ ಸುಮಾರು 1953-54 ಎಂದು ಅಂದಾಜಿಸಲಾಗಿದೆ. ಅವಳು ಮೂರು ಮಕ್ಕಳ ತಾಯಿಯಾಗಿದ್ದಳು. ಗಜಲಕ್ಷ್ಮೀ, ಕೋಮಲ ಮತ್ತು ಅಭಿಮನ್ಯು ಎಂದು ಮೂರು ಮಕ್ಕಳು.

KRS dam: ಭಾರೀ ಮಳೆ, ಕೆಆರ್‌ಎಸ್‌ ಡ್ಯಾಂನಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ

ಭಾರೀ ಮಳೆ, ಕೆಆರ್‌ಎಸ್‌ ಡ್ಯಾಂನಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Mandya: 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್‌ಎಸ್‌ ಜಲಾಶಯ (KRS dam) ಜೂನ್ ಮೊದಲ ವಾರದಲ್ಲೇ ಭರ್ತಿಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಿಂದಾಗಿ ಡ್ಯಾಂನ ಒಳಹರಿವು ಹೆಚ್ಚಾಗಿದೆ. ಕಾವೇರಿ ನದಿ (Cauvery River) ಪಾತ್ರದಲ್ಲಿ ಮತ್ತೆ ಪ್ರವಾಹ (flood) ಭೀತಿ ಎದುರಾಗಿದೆ.

President Draupadi Murmu: ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ

ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ

Mysuru: ಮಾನಸಗಂಗೋತ್ರಿಯಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎಐಐಎಸ್ಎಚ್) ವಜ್ರಮಹೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗವಹಿಸುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಎಐಐಎಸ್ ನಿರ್ದೇಶಕಿ ಎಂ.ಪುಷ್ಪಾವತಿ ತಿಳಿಸಿದ್ದಾರೆ

Dharmasthala Case: ಮಧ್ಯಂತರ ವರದಿ ಬಿಡುಗಡೆ ಮಾಡಲು ಸಂಸದ ಯದುವೀರ್‌ ಆಗ್ರಹ

ಧರ್ಮಸ್ಥಳ ಕೇಸ್: ಮಧ್ಯಂತರ ವರದಿ ಬಿಡುಗಡೆ ಮಾಡಲು ಸಂಸದ ಯದುವೀರ್‌ ಆಗ್ರಹ

Yaduveer Wadiyar:‌ ಜನರು ಶ್ರೀ ಕ್ಷೇತ್ರದ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಪವಿತ್ರ ದೇವಾಲಯದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ವಿರೋಧಿಸುತ್ತಿದ್ದಾರೆ. ಇಂತಹ ಅಪಪ್ರಚಾರವನ್ನು ಕೊನೆಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಬಿಜೆಪಿ, ಸರ್ಕಾರದಿಂದ ಉತ್ತರವನ್ನು ಕೋರಿದೆ ಎಂದಿದ್ದಾರೆ ಯದುವೀರ್.

POCSO case: ಮುಸ್ಲಿಂ ಯುವಕನಿಂದ ಕೊಲೆಯಾದ ಗವಿಸಿದ್ದಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್

ಕೊಲೆಯಾದ ಗವಿಸಿದ್ದಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್

Koppla: ತಮ್ಮ ಮಗಳು ಅಪ್ರಾಪ್ತಳಾಗಿದ್ದು, ಕೊಲೆಯಾದ ಗವಿನಾಯಕ ಪ್ರೀತಿಸುವುದಾಗಿ ಹಿಂದೆ ಬಿದ್ದಿದ್ದ. ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ನನಗೆ ಜೀವಬೆದರಿಕೆ ಹಾಕಿದ್ದ. ಮಗಳ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಈ ಬಗ್ಗೆ ಆತನ ತಂದೆ, ತಾಯಿ, ಪಾಲಕರಿಗೆ ತಿಳಿಸಿದರೂ ಅವರೂ ಜೀವ ಬೆದರಿಕೆ ಹಾಕಿದ್ದರೆಂದು ದೂರಲಾಗಿದೆ.

Krishna Chaitanya: ಕನ್ನಡ ಚಿತ್ರ ನಿರ್ಮಾಪಕ ಕೃಷ್ಣ ಚೈತನ್ಯ ವಿರುದ್ಧ ಎಫ್‌ಐಆರ್‌

ಕನ್ನಡ ಚಿತ್ರ ನಿರ್ಮಾಪಕ ಕೃಷ್ಣ ಚೈತನ್ಯ ವಿರುದ್ಧ ಎಫ್‌ಐಆರ್‌

ಆರೋಪಿಗಳಾದ ಕೃಷ್ಣ ಚೈತನ್ಯ, ಸತ್ಯನಾರಾಯಣ ರೆಡ್ಡಿ ಹಾಗೂ ಅವರ ಐದಾರು ಮಂದಿ ಸಹಚರರು ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿದ್ದು, ನಕಲಿ ದಾಖಲೆ ತೋರಿಸಿ ಕೂಡಲೇ ಜಮೀನು ಖಾಲಿ ಮಾಡುವಂತೆ ಗಲಾಟೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. ಕೃಷ್ಣ ಚೈತನ್ಯ ʼದಿಯಾʼ ಫಿಲಂ ನಿರ್ಮಾಪಕರು.

Karnataka Weather: ರೆಡ್‌ ಅಲರ್ಟ್‌; ಇಂದು ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ!

ರೆಡ್‌ ಅಲರ್ಟ್‌; ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C ಮತ್ತು 20°C ಇರುವ ಸಾಧ್ಯತೆ ಇದೆ.

Chikkaballapur News: ಸತ್ಯ ಸಾಯಿ ಗ್ರಾಮದಲ್ಲಿ ‘ಒಂದು ವಿಶ್ವ ಒಂದು ಕುಟುಂಬ ವಿಶ್ವ ಸಾಂಸ್ಕೃತಿಕ ಉತ್ಸವ 2025

೧೦೦ ದಿನ, ೧೦೦ ದೇಶ, ಜಾಗತಿಕ ಸಾಮರಸ್ಯದ ಮುನ್ನುಡಿ ಬರೆದ ಕಾರ್ಯಕ್ರಮ ಸಂಪನ್ನ

ಪವಿತ್ರ ಪರಂಪರೆಗಳಿಂದ ಆಧುನಿಕ ಅಭಿವ್ಯಕ್ತಿಗಳವರೆಗೆ, ವಿಭಿನ್ನ ಶ್ರದ್ಧೆಗಳ ಸಂವಾದದಿಂದ ಕಲಾತ್ಮಕ ಪ್ರದರ್ಶನಗಳವರೆಗೆ, ಉತ್ಸವವು ಸರಳವಾದ ಸತ್ಯವನ್ನು ಪುನರುಚ್ಚರಿಸಲು ಪ್ರಯತ್ನಿಸು ತ್ತದೆ. ಗಡಿಗಳು ಮತ್ತು ವಿಭಜನೆಗಳ ಹೊರತಾಗಿಯೂ, ಪ್ರಪಂಚವು ಒಂದು ಕುಟುಂಬವಾಗಿ ಒಟ್ಟಿಗೆ ನಿಲ್ಲಬಹುದು ಎಂದು ಸಾರಿಹೇಳುವ ಪ್ರಯತ್ನಕ್ಕೆ ಸಾಕ್ಷಿಯಾಯಿತು.

Chikkaballapur News: ದ್ರಾವಿಡ ನೆಲದ ಸಾಹಿತ್ಯ ಓದಿ ತಿಳಿಯುವ ಅಗತ್ಯವಿದೆ : ಕಸಾಪ ತಾಲೂಕು ಅಧ್ಯಕ್ಷ ಜನಾರ್ಧನ್‌ಮೂರ್ತಿ

ದಕ್ಷಿಣ ದಿಕ್ಕಿಗೆ ಎಂಬ ಅನುವಾದಿತ ಕಾದಂಬರಿ ಲೋಕಾರ್ಪಣೆ

ತೆಲುಗಿನ ಮೂಲ ಕಾದಂಬರಿಯನ್ನು ಕನ್ನಡ ಭಾಷೆಗೆ ಭಾಷಾಂತರ ಮಾಡುವ ಮೂಲಕ ದಕ್ಷಿಣ ದಿಕ್ಕಿನೆಡೆಗೆ ಕಾದಂಬರಿಗೆ ಹೊಸ ರೂಪ ನೀಡಿರುವ ಪದ್ಮ ಪ್ರಕಾಶ್ ಅವರ ಪ್ರಯತ್ನ ನಿಜಕ್ಕೂ ಶ್ಲಾಘ ನೀಯವಾಗಿದೆ. ಈ ರೀತಿಯಾಗಿ ಹೆಚ್ಚು ಕೃತಿ, ಕಾದಂಬರಿ ಮತ್ತು ಲೇಖನಗಳು ಕನ್ನಡ ಭಾಷೆಗೆ ಪರಿಚಯ ವಾದಲ್ಲಿ ಮತ್ತಷ್ಟು ಸಾಹಿತಿಗಳು ಮತ್ತು ಸಾಹಿತ್ಯಾಭಿಮಾನಿಗಳನ್ನು ಕಾಣಲು ಸಾಧ್ಯವಾಗುತ್ತದೆ.

Chikkaballapur News: ಶ್ರೀ ಕೃಷ್ಣ ದೇವಾಲಯ ಸ್ಥಾಪನೆಯ 3ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

ಕಡಶೀಗೇಹಳ್ಳಿಯಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ

ಶ್ರೀಕೃಷ್ಣ ಜಯಂತಿ ಅಂಗವಾಗಿ ಬೆಳಿಗ್ಗೆಯಿಂದ ದೇವಾಲಯದಲ್ಲಿ ಅರ್ಚಕರಿಂದ ದೇವತಾ ಕಾರ್ಯಗಳು ಸಾಂಗವಾಗಿ ನಡೆದವು.ಬೆಳ್ಳಂಬೆಳಿಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ,ಹೊವಿನ ಅಲಂಕಾರ,ಆಭರಣ ಅಲಂಕಾರ, ಧಾರ್ಮಿಕ ಕೈಂಕರ್ಯಗಳು ನಡೆದಿದ್ದು ಬಳಿಕ ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಿತು.

ಬೆಂಗಳೂರಲ್ಲಿ ಅಕ್ರಮ ನಿರ್ಮಾಣಕ್ಕೆ ಕಡಿವಾಣ; ವಾಸಯೋಗ್ಯ ಪ್ರಮಾಣ ಪತ್ರವಿಲ್ಲದ 4 ಲಕ್ಷ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕಕ್ಕೆ ತಡೆ

ಅವೈಜ್ಞಾನಿಕ ನಿರ್ಮಾಣ, ದುರ್ಬಲ ಕಟ್ಟಡಗಳನ್ನು ಗುರುತಿಸಿ ನೋಟಿಸ್ ಜಾರಿ

DK Shivakumar: ಬೆಂಗಳೂರಿನ ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ ಘಟನಾ ಸ್ಥಳ ಹಾಗೂ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

Sri Raghavendra Swamy Mutt: ಮಂತ್ರಾಲಯದ ಮೂಲ ರಾಮ ದೇವರಿಗೆ ನವರತ್ನ ಹಾರ ಸಮರ್ಪಿಸಿದ ಜಿ.ವಿ. ರಾಮಕೃಷ್ಣ ದಂಪತಿ

ಮಂತ್ರಾಲಯದ ಮೂಲ ರಾಮ ದೇವರಿಗೆ ನವರತ್ನ ಹಾರ ಸಮರ್ಪಣೆ

Sri Raghavendra Swamy Mutt: ಗುರು ರಾಯರ ಪೂರ್ವಾರಾಧನೆ ಸಂದರ್ಭದಲ್ಲಿ ಬೆಂಗಳೂರಿನ ಜಿ.ವಿ. ರಾಮಕೃಷ್ಣ ಮತ್ತು ಪತ್ನಿ ಕವಿತಾ ರಾಮಕೃಷ್ಣ ಅವರು ಮಂತ್ರಾಲಯದ ಮೂಲ ರಾಮ ದೇವರಿಗೆ ಅಪರೂಪದ ನವರತ್ನ ಹಾರವನ್ನು ಸಮರ್ಪಿಸಿದ್ದಾರೆ. ಜಿ.ವಿ. ರಾಮಕೃಷ್ಣ ಅವರು 2007ರಿಂದ ಒಮಾನ್ ಪ್ರಮುಖ ಬ್ಯಾಂಕ್‌‌ವೊಂದರ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕರ್ನಾಟಕ ಫೋಟೋಗ್ರಾಫರ್ ಅಂಡ್ ವಿಡಿಯೋಗ್ರಾಫರ್ ಅಸೋಸಿಯೇಷನ್ ನಿಂದ ರಾಜ್ಯ ಸಮಾವೇಶ

ಛಾಯಾಗ್ರಾಹಕರ ಕಲ್ಯಾಣ ಮಂಡಳಿ ಸ್ಥಾಪಿಸಲು ಆಗ್ರಹ

ನಾವು ಸುಂದರವಾಗಿ ಕಾಣಲು, ನಾಯಕರಾಗಿ ಬೆಳೆಯಲು ಮತ್ತು ಇತಿಹಾಸದ ಅನೇಕ ಘಟನೆ ಗಳನ್ನು ನೆನಪಿಸಿಕೊಳ್ಳುವ ಕೆಲಸವನ್ನು ನೀವು ಮಾಡುತ್ತಿರಾ. ಎಲ್ಲರ ಬದುಕನ್ನು ಬೆಳಗಿಸುವ ಛಾಯಾಗ್ರಾಹಕ ಸಮುದಾಯದ ಬದುಕು ಕತ್ತಲೆಯಲ್ಲಿ ಇದೆ. ನಾನು ಈ ಹಂತಕ್ಕೆ ತಲುಪಲು ಕ್ಯಾಮರಾಮನ್ ಗಳೇ ಕಾರಣ ಹಾಗಾಗಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಸಚಿವರಲ್ಲಿ ಕೋರು ತ್ತೇನೆ

Actor Darshan: ಜೈಲಿನಲ್ಲಿನ ದರ್ಶನ್‌ ಪೋಟೊ ವೈರಲ್‌ ಮಾಡಿದ್ಯಾರು?; ಪೊಲೀಸರಿಗೆ ಪುನೀತ್‌ ಕೆರೆಹಳ್ಳಿ ಪ್ರಶ್ನೆ

ದರ್ಶನ್‌ ಪೋಟೊ ವೈರಲ್‌ ಮಾಡಿದ್ಯಾರು?; ಪುನೀತ್‌ ಕೆರೆಹಳ್ಳಿ

Actor Darshan: ವೈರಲ್ ಆದ ಫೋಟೊದಲ್ಲಿ ದರ್ಶನ್ ತಲೆ ಬೋಳಿಸಿಕೊಂಡಿರುವುದನ್ನು ನೋಡಬಹುದು. ದರ್ಶನ್ ಇತ್ತೀಚೆಗೆ ಮಾದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮುಡಿಕೊಟ್ಟಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದರಿಂದ ಟೀಕೆಗಳು ವ್ಯಕ್ತವಾಗಿವೆ. ಫೋಟೊ ವೈರಲ್‌ ಮಾಡಿದವರ ವಿರುದ್ಧ ಕ್ರಮವಾಗಲಿ ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ನಾಳೆ ʼಧರ್ಮಸ್ಥಳದ ಮೇಲಿನ ಷಡ್ಯಂತ್ರ; ಸತ್ಯ-ಮಿಥ್ಯಗಳ ಅನಾವರಣʼ ವಿಚಾರಗೋಷ್ಠಿ

ನಾಳೆ ʼಧರ್ಮಸ್ಥಳದ ಮೇಲಿನ ಷಡ್ಯಂತ್ರ; ಸತ್ಯ-ಮಿಥ್ಯಗಳ ಅನಾವರಣʼ ವಿಚಾರಗೋಷ್ಠಿ

ಆಗಸ್ಟ್‌ 18ರಂದು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಟೌನ್ ಹಾಲ್‌ನಲ್ಲಿ 'ಧರ್ಮಸ್ಥಳದ ಮೇಲಿನ ಷಡ್ಯಂತ್ರ; ಸತ್ಯ-ಮಿಥ್ಯಗಳ ಅನಾವರಣʼ ವಿಚಾರಗೋಷ್ಠಿ ಆಯೋಜಿಸಲಾಗಿದೆ. ವಿಚಾರಗೋಷ್ಠಿಯಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡರು, ಪತ್ರಕರ್ತರು, ಚಿಂತಕರು, ಬರಹಗಾರರು ಮುಂತಾದವರು ಭಾಗವಹಿಸಲಿದ್ದಾರೆ.

Pralhad Joshi: ಹಿಂದೂಗಳ ಗುಡಿ ಗುಂಡಾರ ಹೊಡೆಯುತ್ತಿದ್ದರೆ ಸಮ್ಮನಿರಬೇಕಾ?: ಪ್ರಲ್ಹಾದ್ ಜೋಶಿ ಕಿಡಿ

ಹಿಂದೂಗಳ ಗುಡಿ ಗುಂಡಾರ ಹೊಡೆಯುತ್ತಿದ್ದರೆ ಸಮ್ಮನಿರಬೇಕಾ?: ಪ್ರಲ್ಹಾದ್ ಜೋಶಿ

Dharmasthala Case: ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಸ್ಥಾನದಲ್ಲಿದ್ದು, ಒಂದೆಡೆ SIT ರಚನೆಯಲ್ಲಿ ಪ್ರಮುಖ ಭಾಗವಾಗಿದ್ದರೆ, ಈಗ 'ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ' ಎನ್ನುತ್ತಿದ್ದಾರೆ. ಹೀಗೆ ಎರೆಡು ದೋಣಿ ಮೇಲೆ ಕಾಲಿಟ್ಟು ಸಾಗುವ ಪ್ರಯತ್ನ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಚಾಟಿ ಬೀಸಿದರು.

CT Ravi: ಧರ್ಮಸ್ಥಳ ಕುರಿತ ಷಡ್ಯಂತ್ರ ಬಹಿರಂಗಪಡಿಸಿ: ಸಿಎಂ, ಡಿಸಿಎಂಗೆ ಸಿಟಿ ರವಿ ಆಗ್ರಹ

ಧರ್ಮಸ್ಥಳ ಕುರಿತ ಷಡ್ಯಂತ್ರ ಬಹಿರಂಗಪಡಿಸಿ: ಸಿಎಂಗೆ ಸಿಟಿ ರವಿ ಆಗ್ರಹ

CT Ravi: ಧರ್ಮಸ್ಥಳದ ಪ್ರಕರಣದಲ್ಲಿ ಷಡ್ಯಂತ್ರ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಆ ಷಡ್ಯಂತ್ರ ಏನು ಎಂಬುದನ್ನು ಬಹಿರಂಗಪಡಿಸಬೇಕು, ಸತ್ಯ ಹೇಳುವುದಕ್ಕೆ ನಿಮಗೆ ಹೆದರಿಕೆಯೇ ಉಪಮುಖ್ಯಮಂತ್ರಿಗಳೇ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

Sapna Rao: ನಟ ಅಜಯ್‌ ರಾವ್‌ ಡಿವೋರ್ಸ್ ಪ್ರಕರಣಕ್ಕೆ ಟ್ವಿಸ್ಟ್; ಮತ್ತೆ ಒಂದಾಗಲು ಬಯಸಿದ ಪತ್ನಿ ಸಪ್ನಾ!

ಅಜಯ್‌ ರಾವ್‌ ಡಿವೋರ್ಸ್ ಕೇಸ್‌; ಪತ್ನಿ ಫಸ್ಟ್‌ ರಿಯಾಕ್ಷನ್ ಏನು?

Ajay Rao Divorce: ಈ ವಿಷಯವು ನಮ್ಮ ವೈಯಕ್ತಿಕ, ಆಳವಾದ ಭಾವನಾತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂಧಿಸಿದ್ದು ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ. ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್‌ನಿರ್ಮಿಸಿಕೊಳ್ಳಲು ನಿಮ್ಮ ಹಾರೈಕೆಗಳು ಮತ್ತು ಪ್ರಾರ್ಥನೆಗಳು ಇರಲಿ ಎಂದು ಕೇಳಿಕೊಳ್ಳುತ್ತಿದೇನೆ ಎಂದು ನಟ ಅಜಯ್‌ ರಾವ್‌ ಪತ್ನಿ ಸಪ್ನಾ ರಾವ್‌ ತಿಳಿಸಿದ್ದಾರೆ.

Karnataka Rains: ರೆಡ್‌ ಅಲರ್ಟ್; ನಾಳೆ ಕರಾವಳಿ, ಮಲೆನಾಡು ಭಾಗದಲ್ಲಿ ಆರ್ಭಟಿಸಲಿದ್ದಾನೆ ವರುಣ!

ರೆಡ್‌ ಅಲರ್ಟ್; ನಾಳೆ ಕರಾವಳಿ, ಮಲೆನಾಡು ಭಾಗದಲ್ಲಿ ಆರ್ಭಟಿಸಲಿದ್ದಾನೆ ವರುಣ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C ಮತ್ತು 20°C ಇರುವ ಸಾಧ್ಯತೆ ಇದೆ.

Bellary Accident: ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವು, 12 ಮಂದಿಗೆ ಗಾಯ

ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವು

Road Accident: ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಗಾಯಾಳುಗಳನ್ನು ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ಮತ್ತು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Heavy Rain in Hassan: ಹಾಸನದಲ್ಲಿ ಮಳೆ ಆರ್ಭಟ; 15 ಕಡೆ ಭೂಕುಸಿತವಾಗಿ ರೈಲು ಸಂಚಾರ ಸ್ಥಗಿತ

ಹಾಸನದಲ್ಲಿ ಮಳೆ ಆರ್ಭಟ; 15 ಕಡೆ ಭೂಕುಸಿತ, ರೈಲು ಸಂಚಾರ ಸ್ಥಗಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಎಡಕುಮಾರಿ ಬಳಿ ಹಳಿ ಮೇಲೆ ಮಣ್ಣು ಹಾಗೂ ಗಿಡಗಳು ಜಾರಿಬಿದ್ದ ಪರಿಣಾಮ, ಬೆಂಗಳೂರು–ಮಂಗಳೂರು ರೈಲು ಮಾರ್ಗದಲ್ಲಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಸುಮಾರು ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಹಳಿ ಮೇಲೆ ದೊಡ್ಡ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ.

Loading...