ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಬೆಂಗಳೂರಿನಲ್ಲಿ ಅತ್ಯಾಧುನಿಕ ಶೋರೂಮ್, ಮೇಬ್ಯಾಕ್ ಲಾಂಜ್ - ವಿವಾ ಸ್ಟಾರ್ ಉದ್ಘಾಟನೆ

ಕರ್ನಾಟಕದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿಕೊಂಡ ಮರ್ಸಿಡಿಸ್- ಬೆಂಜ್

ಬೆಂಗಳೂರಿನ ವಿವಾ ಸ್ಟಾರ್‌ ಕರ್ನಾಟಕದ ಮೊತ್ತ ಮೊದಲ ಎಕ್ಸ್ ಕ್ಲೂಸಿವ್ ‘ಮರ್ಸಿಡಿಸ್- ಮೇಬ್ಯಾಕ್ ಲಾಂಜ್’ ಅನ್ನು ಹೊಂದಿದ್ದು, ಇದು ಉನ್ನತ ದರ್ಜೆಯ ಗ್ರಾಹಕರಿಗೆ ಮತ್ತು ಐಷಾರಾಮಿ ಕಾರು ಪ್ರಿಯರಿಗೆ ವಿಶಿಷ್ಟವಾದ ಮೇಬ್ಯಾಕ್ ಬ್ರ್ಯಾಂಡ್ ಅನುಭವವನ್ನು ಒದಗಿಸು ತ್ತದೆ. ಈ ‘ಮೇಬ್ಯಾಕ್ ಲಾಂಜ್’ ಕರ್ನಾಟಕದಲ್ಲಿ ಮೊದಲ ಬಾರಿಗೆ 'ಮೇಬ್ಯಾಕ್ ಶಾಪ್-ಇನ್- ಶಾಪ್' ಪರಿಕಲ್ಪನೆಯನ್ನು ಪರಿಚಯಿಸುತ್ತಿದ್ದು, ನವೀನವಾದ 'ಮೇಬ್ಯಾಕ್ ರಿಟೇಲ್ ಕಿಟ್' ಮೂಲಕ ವಿಶಿಷ್ಟವಾದ ರೀಟೇಲ್ ಅಂಶಗಳನ್ನು ಗ್ರಾಹಕರಿಗೆ ಪರಿಚಯಿಸುತ್ತಿದೆ

ಅಂಕೋಲಾದಲ್ಲಿ ಗುಂಡು ಹಾರಿಸಿಕೊಂಡು ಫಾರ್ಮಾಸಿಸ್ಟ್ ಆತ್ಮಹತ್ಯೆ; ವೈರಲ್‌ ವಿಡಿಯೋದಿಂದ ಮನನೊಂದು ಸಾವಿಗೆ ಶರಣು

ಅಂಕೋಲಾದಲ್ಲಿ ಗುಂಡು ಹಾರಿಸಿಕೊಂಡು ಫಾರ್ಮಾಸಿಸ್ಟ್ ರಾಜೀವ ಪಿಕಳೆ ಆತ್ಮಹತ್ಯೆ

Ankola News: ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿದ್ದ ರಾಜೀವ ಪಿಕಳೆ ಅವರು ಕೆಲ ದಿನಗಳ ಹಿಂದೆ ಅವಧಿ ಮೀರಿದ ಮಾತ್ರೆ ನೀಡಿದ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಈ ಘಟನೆಯಿಂದ ನೊಂದಿದ್ದ ರಾಜೀವ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಕೇಸ್‌ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗಳಿಗೆ ನಗದು ಬಹುಮಾನ ಘೋಷಣೆ

ಪ್ರಜ್ವಲ್‌ ರೇವಣ್ಣ ಕೇಸ್‌ ತನಿಖೆ ನಡೆಸಿದ ಪೊಲೀಸರಿಗೆ ನಗದು ಬಹುಮಾನ

ಡಿಜಿ ಮತ್ತು ಐಜಿಪಿ ಶ್ರೇಣಿಯ ಅಧಿಕಾರಿಗಳಿಗೆ ತಲಾ 20,000 ರೂ.ನಂತೆ ಒಟ್ಟು 25 ಲಕ್ಷ ರೂ. ನೀಡಲಾಗುತ್ತದೆ. ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ ಶ್ರೇಣಿಯ ಅಧಿಕಾರಿಗಳಿಗೆ ತಲಾ 8,000 ರೂ.ನಂತೆ ಒಟ್ಟು 3 ಲಕ್ಷ ರೂ., ಇಲಾಖೆಯ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಲಾ 5,000 ರೂ.ನಂತೆ ಒಟ್ಟು 2 ಲಕ್ಷ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ 5,000 ರೂ.ನಂತೆ 1 ಲಕ್ಷ ನೀಡಲಾಗುತ್ತದೆ.

Kalaburagi News: ಮದುವೆ ಬಳಿಕ ಗಂಡನೊಂದಿಗೆ ಹಳ್ಳಿಯಲ್ಲಿ ನೆಲೆಸಲು ಇಷ್ಟವಿಲ್ಲದೆ ನವವಿವಾಹಿತೆ ಆತ್ಮಹತ್ಯೆ

ಗಂಡನೊಂದಿಗೆ ಹಳ್ಳಿಯಲ್ಲಿ ನೆಲೆಸಲು ಇಷ್ಟವಿಲ್ಲದೆ ನವವಿವಾಹಿತೆ ಆತ್ಮಹತ್ಯೆ

ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮದುವೆಯ ನಂತರ ಗಂಡನೊಂದಿಗೆ ಹಳ್ಳಿಯಲ್ಲಿ ವಾಸಿಸುವುದಕ್ಕೆ ಯುವತಿಗೆ ಇಷ್ಟವಿರಲಿಲ್ಲ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

Bharat Connect ಮೂಲಕ ಸರಳೀಕೃತ EV ವಾಲೆಟ್ ರೀಚಾರ್ಜ್ ಮೂಲಕ NBBL ಮೊಬಿಲಿಟಿ ಕ್ಷೇತ್ರಕ್ಕೆ ಶಕ್ತಿ

EV ವಾಲೆಟ್‌ಗಳನ್ನು ಸುಗಮವಾಗಿ ರೀಚಾರ್ಜ್ ಮಾಡುವ ಅವಕಾಶ

ನೀತಿ ಆಯೋಗದ ವರದಿಯ ಪ್ರಕಾರ, ಭಾರತದಲ್ಲಿ EVಗಳ ಮಾರಾಟವು 2016ರಲ್ಲಿ 50,000 ರಿಂದ 2024ರಲ್ಲಿ 2.08 ಮಿಲಿಯನ್‌ಗೆ ಹೆಚ್ಚಾಗಿದೆ. ವರದಿ ಮುಂದುವರೆದು, 2030ರ ವೇಳೆಗೆ ಮಾರಾಟವಾಗುವ ಒಟ್ಟು ವಾಹನಗಳಲ್ಲಿ 30% ಪಾಲನ್ನು ವಿದ್ಯುತ್ ವಾಹನಗಳು ಹೊಂದುವ ಗುರಿಯನ್ನು ಭಾರತ ಹೊಂದಿದೆ ಎಂದು ತಿಳಿಸುತ್ತದೆ.

ವೈರಲ್ ಉಸಿರಾಟದ ಸೋಂಕು: ಆರಂಭಿಕ ಹಂತದ ವೈದ್ಯಕೀಯ ಚಿಕಿತ್ಸೆ ಪಡೆಯಲು ಕನ್ನಿಂಗ್‌ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆ ವೈದ್ಯರ ಸಲಹೆ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವೈರಲ್ ಉಸಿರಾಟದ ಸೋಂಕು

ವೈರಲ್ ಉಸಿರಾಟದ ಸೋಂಕುಗಳು ಚಳಿಗಾಲದಲ್ಲಿ ಸಾಮಾನ್ಯವಾಗಿದ್ದರೂ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಪ್ರಕರಣಗಳ ಸಂಖ್ಯೆ ಬಹಳಷ್ಟು ಹೆಚ್ಚಾಗಿದೆ ಎಂದು ಕನ್ನಿಂಗ್‌ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ವಿಶೇಷವಾಗಿ ಮಕ್ಕಳು, ಹಿರಿಯ ನಾಗರಿಕರು ಮತ್ತು ಮೊದಲೇ ಆರೋಗ್ಯ ಸಮಸ್ಯೆ ಇರುವವರಲ್ಲಿ ಈ ರೋಗ ಲಕ್ಷಣಗಳು ದೀರ್ಘಕಾಲದವರೆಗೆ ಕಂಡುಬರುತ್ತಿವೆ.

ಕರ್ನಾಟಕ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ 2024–25ರ ಉದ್ಘಾಟನಾ ವಾರ್ಷಿಕ ಪ್ರಶಸ್ತಿಗಳಲ್ಲಿ ಬಿ ಎಲ್ ಕಶ್ಯಪ್ & ಸನ್ಸ್ ಬೆಂಬಲಿತ ರೂಟ್ಸ್ ಫುಟ್ಬಾಲ್ ಕ್ಲಬ್ʼಗೆ ಗೌರವ

ಬಿ ಎಲ್ ಕಶ್ಯಪ್ & ಸನ್ಸ್ ಬೆಂಬಲಿತ ರೂಟ್ಸ್ ಫುಟ್ಬಾಲ್ ಕ್ಲಬ್ʼಗೆ ಗೌರವ

ಅತ್ಯುತ್ತಮ ಯುವ ಅಭಿವೃದ್ಧಿ ಕ್ಲಬ್ ಮತ್ತು ಅತ್ಯುತ್ತಮ ಫುಟ್ಬಾಲ್ ಅಕಾಡೆಮಿ ಗೌರವ ಗಳನ್ನು ರೂಟ್ಸ್ ಫುಟ್ಬಾಲ್ ಕ್ಲಬ್ ಪಡೆದುಕೊಂಡಿತು. ಉರಾ ದಿಮ್ರಿ ಅವರನ್ನು ವರ್ಷದ ಉದಯೋ ನ್ಮುಖ ಆಟಗಾರ್ತಿ (ಮಹಿಳೆಯರು) ಎಂಬ ಗೌರವಕ್ಕ ಪಾತ್ರರಾಗಿದ್ದು, ಕ್ಲಬ್ನ ಮಹಿಳಾ ಫುಟ್ಬಾಲ್ ಕಾರ್ಯಕ್ರಮಕ್ಕೆ ಮಹತ್ವದ ಮೈಲಿಗಲ್ಲನ್ನು ಸೂಚಿಸುತ್ತದೆ.

ದ್ವಿಚಕ್ರ ವಾಹನಗಳನ್ನು ಟ್ಯಾಕ್ಸಿಯಾಗಿ ಬಳಸಬಹುದು ಎಂದ ಹೈಕೋರ್ಟ್

ಬೈಕ್‌ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆ

ದ್ವಿಚಕ್ರ ವಾಹನಗಳನ್ನು ಟ್ಯಾಕ್ಸಿಯಾಗಿ ಬಳಸಬಹುದು ಎಂದು ಹೈಕೋರ್ಟ್ ಹೇಳಿದ್ದು, ಇದರಿಂದ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾದಂತಾಗಿದೆ. ರಾಜ್ಯ ಸರ್ಕಾರದ ಆದೇಶವನ್ನು ಈ ಹಿಂದೆ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಆದರೆ ಇದೀಗ ಅದನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಬೆಂಗಳೂರಿನಲ್ಲಿ ಶುರುವಾಯ್ತು ಮೈಸೂರಿನ ಮೈಲಾರಿ ಹೋಟೆಲ್;  ಉದ್ಘಾಟಿಸಿ, ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಶುರುವಾಯ್ತು ಮೈಸೂರಿನ ಮೈಲಾರಿ ಹೋಟೆಲ್‌

ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ 'ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು.

ಸಮವಸ್ತ್ರದ ಆಚೆಗೂ ಮುಂದುವರಿಯುವ ಧ್ಯೇಯ: ಭಾರತೀಯ ಸೇನೆಯಿಂದ ಎಡಬ್ಲ್ಯೂಎಸ್ ವರೆಗೆ ಕುಮಾರ್ ವಿಕ್ರಮ್ ಸಿಂಗ್ ಅವರ ಪ್ರಯಾಣ

ಭಾರತೀಯ ಸೇನೆಯಿಂದ ಎಡಬ್ಲ್ಯೂಎಸ್ ವರೆಗೆ ಕುಮಾರ್ ವಿಕ್ರಮ್ ಪ್ರಯಾಣ

ವಿಕ್ರಮ್ 2022ರಲ್ಲಿ ಎಡಬ್ಲ್ಯೂಎಸ್ ಸೇರ್ಪಡಯಾಗಿದ್ದು ಅಮೆಜಾನ್ ನಾಯಕತ್ವ ತತ್ವಗಳಲ್ಲಿ ಸಹಜವಾಗಿರುವ ಯುದ್ಧ ಮತ್ತು ಯುದ್ಧೇತರ ಹುದ್ದೆಗಳಲ್ಲಿ ಅಪಾರ ಅನುಭವ ತಂದಿದ್ದಾರೆ. “ನಾವು ಜೀವಿಸುತ್ತಿರುವ ಹಲವು ಮೌಲ್ಯಗಳಾದ ಮಾಲೀಕತ್ವ, ಲೆಕ್ಕಾಚಾರದ ರಿಸ್ಕ್-ತೆಗೆದು ಕೊಳ್ಳುವಿಕೆ ಮತ್ತು ಫಲಿತಾಂಶಗಳನ್ನು ನೀಡುವುದು ಎಲ್ಲವೂ ಅಮೆಜಾನ್ ನಾಯಕತ್ವ ತತ್ವಗಳಲ್ಲಿ ಸಂಯೋಜನೆಗೊಂಡಿವೆ” ಎಂದು ಅವರು ಹೇಳಿದರು

Fund for Badami Development: ಬಾದಾಮಿ ಅಭಿವೃದ್ಧಿಗೆ ಬರುವುದೇ ಅನುದಾನ ?

ಬಾದಾಮಿ ಅಭಿವೃದ್ಧಿಗೆ ಬರುವುದೇ ಅನುದಾನ ?

ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಯಲ್ಲಿ ಮೂರು ದಿನಗಳ ಕಾಲ ನಡೆದ ಚಾಲುಕ್ಯ ಉತ್ಸವಕ್ಕೆ ಬುಧವಾರ ರಾತ್ರಿ ತೆರೆ ಬಿದ್ದಿದೆ. ಉತ್ಸವದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದ ಪಿ.ಸಿ.ಗದ್ದಿಗೌಡರ ಅಭಿವೃದ್ಧಿಗೆ ಬದ್ಧ ಎಂಬ ಮಾತು ಗಳನ್ನು ಹೇಳಿರುವುದು ಜನರು ಸಂತಸಗೊಂಡಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣ; ಇಂದು ಶ್ರೀ ಕ್ಷೇತ್ರದ ಪರ ಸಲ್ಲಿಸಿದ ಅರ್ಜಿ ವಿಚಾರಣೆ, ಬೆಳ್ತಂಗಡಿಗೆ ಹಿರಿಯ ನ್ಯಾಯವಾದಿ ರಾಜಶೇಖರ್ ಹಿಲಿಯಾರ್  ಭೇಟಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಿರಿಯ ನ್ಯಾಯವಾದಿ ರಾಜಶೇಖರ್ ಹಿಲಿಯಾರ್ ಭೇಟಿ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ಕಂಡುಬಂದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಸಲ್ಲಿಸಲಾದ ಅರ್ಜಿ ವಿಚಾರಣೆಗಾಗಿ ಹಿರಿಯ ಹಾಗೂ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಅವರು ವಕೀಲರ ತಂಡದ ಭಾಗವಾಗಿ ಹಾಜರಾಗುತ್ತಿದ್ದು, ಈ ಹಿಂದೆ ಸಿ.ವಿ. ನಾಗೇಶ್ ಅವರು ಕ್ಷೇತ್ರದ ಪರವಾಗಿ ವಕಾಲತ್ತು ವಹಿಸಿದರು.

Bone Marrow Transplant Unit: ಸ್ಪರ್ಶ್‌ ಆಸ್ಪತ್ರೆ ಹೆಣ್ಣೂರು ರಸ್ತೆ ಶಾಖೆಯಲ್ಲಿ ಅತ್ಯಾಧುನಿಕ ಅಸ್ಥಿಮಜ್ಜೆ ಕಸಿ ಘಟಕ ಆರಂಭ

ಅತ್ಯಾಧುನಿಕ ಅಸ್ಥಿಮಜ್ಜೆ ಕಸಿ ಘಟಕ ಆರಂಭ

ಅತ್ಯಾಧುನಿಕ ಆಸ್ಪತ್ರೆಗಳಲ್ಲಿ ಒಂದಾಗಿರುವ ಹೆಣ್ಣೂರು ಸ್ಪರ್ಶ್‌ ಆಸ್ಪತ್ರೆಯು ಈ ಮೂಲಕ ಕನಾಟಕದಲ್ಲಿ ಹೆಚ್ಚುತ್ತಿರುವ ಗಂಭೀರ ರಕ್ತ ಕ್ಯಾನ್ಸರ್‌ಗಳ ಚಿಕಿತ್ಸೆಗೆ ಸುಧಾರಿತ ತಂತ್ರಜ್ಞಾನ ಹಾಗೂ ತಜ್ಞ ವೈದ್ಯರು, ವೈದ್ಯಕೀಯ ಸವಲತ್ತುಗಳೊಂದಿಗೆ ಸಜ್ಜಾಗಿದ್ದು ಕೇವಲ ರಾಜ್ಯ ಮಾತ್ರ ವಲ್ಲ ದಕ್ಷಿಣ ಭಾರತದ ಹಾಗೂ ವಿದೇಶಗಳ ರೋಗಿಗಳಿಗೂ ಕ್ಯಾನ್ಸರ್‌ನಿಂದ ಗುಣಮುಖ ರಾಗುವ ಭರವಸೆ ಮೂಡಿಸಿದೆ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಸಿವಿಲ್ ಸೇವಾ ಹುದ್ದೆಗಳ ವಯೋಮಿತಿ 5 ವರ್ಷ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು

ಸಿವಿಲ್ ಸೇವಾ ಹುದ್ದೆಗಳ ವಯೋಮಿತಿ 5 ವರ್ಷ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಮತ್ತು ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಲಾಗಿದೆ.

ಉಗ್ರ ಸಂಘಟನೆಗೆ ಯುವಕರನ್ನು ಭರ್ತಿ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗೆ 10 ವರ್ಷ ಜೈಲು

ಉಗ್ರ ಸಂಘಟನೆಯೊಂದಿಗೆ ಲಿಂಕ್‌ ಹೊಂದಿದ್ದ ವ್ಯಕ್ತಿಗೆ 10 ವರ್ಷ ಜೈಲು

ಭಯೋತ್ಪಾದಕ ಚಟುವಟಿಕೆ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯುವಕನಿಗೆ 10 ವರ್ಷ ಕಠಿಣ ಜೈಲು ವಿಧಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಶಿರಸಿ ಮೂಲದ ಸಯ್ಯದ್ ಎಂ. ಇದ್ರಿಸ್ ಎಂಬಾತನಿಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

Shidlaghatta Municipal Commissioner Amrutha: ಕಾಂಗ್ರೆಸ್ ಮುಖಂಡ ರಾಜೀವ್‌ ಗೌಡ ನಟೋರಿಯಸ್‌ ಕ್ರಿಮಿನಲ್‌, 16 ಪ್ರಕರಣಗಳು ಇದೆ, ಶೀಘ್ರವೇ ಬಂಧನ: ಎಸ್ಪಿ ಕುಶಲ್ ಚೌಕ್ಸೆ

ರಾಜೀವ್‌ ಗೌಡ ಶೀಘ್ರವೇ ಬಂಧನ: ಎಸ್ಪಿ ಕುಶಲ್ ಚೌಕ್ಸೆ

ಜನವರಿ 14 ರಂದು ರಾಜೀವ್ ಗೌಡ ವಿರುದ್ದ ಶಿಡ್ಲಘಟ್ಟ ನಗರ ಪೋಲಿಸ್ ಠಾಣೆಯಲ್ಲಿ ಎರಡು ದೂರು ದಾಖಲಾಗಿ ಎಫ್ಐಆರ್ ಆಗಿದೆ. ಅಂದಿನಿಂದ ಆತನಿಗಾಗಿ ಯಾವುದೇ ರಾಜಕೀಯ ಒತ್ತವಿಲ್ಲದೇ ಹಗಲು ರಾತ್ರಿ ಬೆಂಗಳೂರು ಸೇರಿದಂತೆ ಅಕ್ಕಪಕ್ಕ ರಾಜ್ಯಗಳಲ್ಲಿ ಪೊಲೀಸರ ಕಾರ್ಯಾ ಚರಣೆ ನಡೆಸಿ ಹುಡುಕಾಡು ತ್ತಿದ್ದೇವೆ.

Shidlaghatta News: ಸೂರಿಲ್ಲದ ಬಡವರಿಗೆ ಮನೆ ಒದಗಿಸುವಲ್ಲಿ ಸರ್ಕಾರಗಳು ವಿಫಲ: ಮಾನವ ಹಕ್ಕುಗಳ ಕಮಿಟಿ ಮುಂದಾಳತ್ವ ಸಿ.ಎಂ.ಬೈರೇಗೌಡ ಹೇಳಿಕೆ

ಸೂರಿಲ್ಲದ ಬಡವರಿಗೆ ಮನೆ ಒದಗಿಸುವಲ್ಲಿ ಸರ್ಕಾರಗಳು ವಿಫಲ

ತಾಲ್ಲೂಕಿನ ಚೀಮನಹಳ್ಳಿ ಸಿ ಎಂ ಬೈರೇಗೌಡರ ತೋಟದಲ್ಲಿ ನಡೆದ ಮಾನವ ಹಕ್ಕುಗಳ ಕಮಿಟಿ ವತಿಯಿಂದ ಬಡವರಿಗೆ ಮನೆ ನಿರ್ಮಾಣಕ್ಕಾಗಿ ಸಿಮೆಂಟ್ ಬ್ರಿಕ್ಸ್ ಮಿಷನರಿಗಳು ಪೂಜಾ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು ಇದುವರೆಗೆ ಯಾವುದೇ ಸಮಾಜ ಸೇವಕರು ಕೈ ಹಾಕದ ಮಹತ್ವದ ಕಾರ್ಯಕ್ಕೆ ಮಾನವ ಹಕ್ಕುಗಳ ಕಮಿಟಿ ಮುಂದಾಗಿದ್ದು, ಜಿಲ್ಲಾದ್ಯಂತ ಹತ್ತು ಸಾವಿರ ಮನೆಗಳ ನಿರ್ಮಾಣ ಗುರಿ ಹೊಂದಲಾಗಿದೆ

Tax Collection: ತೆರಿಗೆ ಸಂಗ್ರಹಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ

ತೆರಿಗೆ ಸಂಗ್ರಹಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ

ಚಿಕ್ಕಬಳ್ಳಾಪುರ ತಾಲ್ಲೂಕು ತೆರಿಗೆ ಸಂಗ್ರಹದಲ್ಲಿ ಶೇಕಡಾ 97.82% ರಷ್ಟು ಪ್ರಗತಿ ಸಾಧಿಸಿ ಪ್ರಥಮ ಸ್ಥಾನದಲ್ಲಿದ್ದರೆ. ಚಿಂತಾಮಣಿ ತಾಲ್ಲೂಕು ಶೇಕಡಾ 96.72%, ಗೌರಿಬಿದನೂರು ತಾಲ್ಲೂಕು ಶೇಕಡಾ 93.71% ಪ್ರಗತಿಯೊಂದಿಗೆ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದಿವೆ. ಗುಡಿಬಂಡೆ-93.65%, ಶಿಡ್ಲಘಟ್ಟ-93.39%, ಮಂಚೇನಹಳ್ಳಿ-92.88%, ಚೇಳೂರ-92.68% ಮತ್ತು ಬಾಗೇಪಲ್ಲಿ ತಾಲ್ಲೂಕು ಗಳು-92.40 % ತೆರಿಗೆ ಸಂಗ್ರಹಣೆಯಲ್ಲಿ ಪ್ರಗತಿ ಸಾಧಿಸಿವೆ.

Chimul Election: ಚಿಮೂಲ್ ಚುನಾವಣೆಗೆ ನಾಮಪತ್ರ ಸಲ್ಲಿಕೆ

ಚಿಮೂಲ್ ಚುನಾವಣೆಗೆ ನಾಮಪತ್ರ ಸಲ್ಲಿಕೆ

ಕಳೆದ ಎರಡು ದಶಕಗಳಿಂದ  ಕಾರ್ಯಕರ್ತೆಯಾಗಿ ಪಕ್ಷದ ಸಂಘಟನೆಗಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಈ ಹಿಂದೆ ಎಪಿಎಂಸಿ ಮಾರುಕಟ್ಟೆಯ ಅಧ್ಯಕ್ಷೆಯಾಗಿದ್ದಾಗ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ. ಪಕ್ಷದ ಕಾರ್ಯಕರ್ತರು ಹಾಗೂ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರ ಒತ್ತಾಯದಿಂದ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ

Chimul Election: ಜಿಲ್ಲಾ ಹಾಲು ಸಹಕಾರ ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ 44 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಕೆ

ನಿರ್ದೇಶಕ ಸ್ಥಾನಕ್ಕೆ 44 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಕೆ

ಒಕ್ಕೂಟದ 13 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಮುಂಬರುವ ಐದು ವರ್ಷಗಳ ಆಡಳಿತ ಸಮಿತಿಗೆ ಆಯ್ಕೆಗೆ ಜ.22 ರಂದು ಉಮೇದುವಾರಿಕೆ ಸಲ್ಲಿಕೆಗೆ ಕೊನೆ ದಿನವಾಗಿದ್ದು ಅಪಾರ ಬೆಂಬಲಿಗರೊಂದಿಗೆ ಪೈಪೋಟಿಯಲ್ಲಿ ಗುರುವಾರ ಮೆರವಣಿಗೆ ಬಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಿಯಮಾನುಸಾರ ಶುಕ್ರವಾರ ಉಮೇದುವಾರಿಕೆಯ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ

ವಿಶ್ವವಾಣಿ ಸಮೂಹದ 'ಲೋಕಧ್ವನಿ' ರಾಜ್ಯ ಮಟ್ಟದ ಪತ್ರಿಕೆಯಾಗಲಿ: ಸಿದ್ದರಾಮಯ್ಯ ಆಶಯ

'ಲೋಕಧ್ವನಿ' ರಾಜ್ಯ ಮಟ್ಟದ ಪತ್ರಿಕೆಯಾಗಲಿ: ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಗುರುವಾರ (ಜನವರಿ 22) ವಿಶ್ವವಾಣಿ ದಿನಪತ್ರಿಕೆ ವತಿಯಿಂದ ಆಯೋಜಿಸಲಾಗಿದ್ದ ಲೋಕಧ್ವನಿ ಹೆಮ್ಮೆಯ ಸಾಧಕ -2026 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ʼʼಪತ್ರಕರ್ತರು ಕಂದಾಚಾರಗಳು, ಮೌಢ್ಯಗಳಿಗೆ ಒತ್ತು ನೀಡದೇ, ಸಮಾಜದಲ್ಲಿ ವೈಚಾರಿಕತೆ ಮತ್ತು ವೈಜ್ಞಾನಿಕತೆಗೆ ಹೆಚ್ಚಿನ ಮಹತ್ವ ನೀಡಬೇಕುʼʼ ಎಂದರು.

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್‌; ಎಡಿಜಿಪಿ ಹಿತೇಂದ್ರ ನೇತೃತ್ವದಲ್ಲಿ ತನಿಖೆಗೆ ಆದೇಶ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್‌ ತನಿಖೆಗೆ ಡಿಜಿ-ಐಜಿಪಿ ಆದೇಶ

DGP Ramachandra rao Case: ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ ವೈರಲ್ ಆರೋಪದ ಬೆನ್ನಲ್ಲೇ ಡಿಜಿಪಿ ಡಾ. ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಲಾಗಿತ್ತು. ಕಚೇರಿಯಲ್ಲಿ ಮಹಿಳೆ ಜತೆ ಅಶ್ಲೀಲ ವರ್ತನೆಯಲ್ಲಿ ತೊಡಗಿದ್ದ ವಿಡಿಯೋ ಜನವರಿ 19 ರಂದು ವೈರಲ್ ಆಗಿತ್ತು.

Cabinet Meeting: ರಾಜ್ಯ ಸಿವಿಲ್‌ ಸೇವೆ ಹುದ್ದೆಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ

ಸಿವಿಲ್‌ ಸೇವೆ ಹುದ್ದೆಗೆ 5 ವರ್ಷ ವಯೋಮಿತಿ ಸಡಿಲಿಸಲು ಸಂಪುಟ ಒಪ್ಪಿಗೆ

ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡುವ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ.

Karnataka's Tableau: ʼಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆʼ; ದೆಹಲಿ ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆ

ದೆಹಲಿ ಗಣರಾಜ್ಯೋತ್ಸವದಲ್ಲಿ ಭಾಗಿಯಾಗುವ ರಾಜ್ಯದ ಸ್ತಬ್ಧಚಿತ್ರ ಆಯ್ಕೆ

Republic Day 2026 Parade: ಕೃಷಿಯಿಂದ ಕೈಗಾರಿಕೆಯವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು ಈ ಬಾರಿಯ ದೆಹಲಿ ಗಣರಾಜ್ಯೋತ್ಸವದ ಭಾರತ ಪರ್ವ ಪಥಸಂಚಲನದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ.

Loading...