ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆ್ಯಕ್ಷನ್ ವಾಕ್-ರನ್

ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆ್ಯಕ್ಷನ್ ವಾಕ್-ರನ್

Climate Action Walk & Run 2026: ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಭಾಗವಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ಸಂಪೂರ್ಣ ಪ್ಲಾಸ್ಟಿಕ್-ಮುಕ್ತ 'ಕ್ಲೈಮೇಟ್ ಆಕ್ಷನ್ ವಾಕ್ & ರನ್–2026' ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಸಸಿಗಳನ್ನು ನೆನಪಿನ ಕಾಣಿಕೆಯಾಗಿ ವಿತರಿಸಲಾಯಿತು.

S. Janaki's last rites: ಗಾನಕೋಗಿಲೆ ಎಸ್‌.ಜಾನಕಿ ಪಂಚಭೂತಗಳಲ್ಲಿ ಲೀನ; ಚಿತೆಗೆ ಮೊಮ್ಮಗಳು ಅಪ್ಸರಾ ಅಗ್ನಿಸ್ಪರ್ಶ

ಪಂಚಭೂತಗಳಲ್ಲಿ ಎಸ್‌.ಜಾನಕಿ ಲೀನ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದ ತೋಟದಲ್ಲಿ ಭಾನುವಾರ ಸಂಜೆ ತೆಲುಗು ಬ್ರಾಹ್ಮಣ ಸಂಪ್ರದಾಯ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್‌.ಜಾನಕಿ ಅರ ಅಂತ್ಯ ಸಂಸ್ಕಾರ ನಡೆಸಲಾಗಿದೆ. ಮೊಮ್ಮಗಳು ಅಪ್ಸರಾ ಅವರು ಅಂತಿಮ ವಿಧಿವಿಧಾನ ನೆರವೇರಿಸಿದರು.

RSS Baithak In Belagavi: ರಾಮ ಮಂದಿರ ಹುಂಡಿ‌ ಹಣ ಕಳ್ಳತನ ಪ್ರಕರಣ; ದುಃಖ ವ್ಯಕ್ತಪಡಿಸಿದ ಆರ್‌ಎಸ್‌ಎಸ್‌

ರಾಮ ಮಂದಿರ ಹುಂಡಿ‌ ಹಣ ಕಳ್ಳತನ; ದುಃಖ ವ್ಯಕ್ತಪಡಿಸಿದ ಆರ್‌ಎಸ್‌ಎಸ್‌

ಬೆಳಗಾವಿ ನಗರದಲ್ಲಿ ಕಳೆದ ಮೂರು ದಿನಗಳಿಂದ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್ ಭಾನುವಾರ ಮುಕ್ತಾಯವಾಯಿತು. ಈ‌ ಮಹತ್ವದ ಸಭೆಯಲ್ಲಿ ಅಯೋಧ್ಯೇ ರಾಮ ಮಂದಿರದಲ್ಲಿ ಉಂಟಾದ ಹುಂಡಿ ಹಣ ಕಳ್ಳತನ ಪ್ರಕರಣದ ಕುರಿತು ಗಂಭೀರ ಚರ್ಚೆ ಮಾಡಲಾಗಿದೆ.

ವೀಸಾ ಅವಧಿ ಮುಗಿದ ನಂತರವೂ ಚಿಕ್ಕಬಳ್ಳಾಪುರದಲ್ಲಿ ಉಳಿದ ಪಾಕಿಸ್ತಾನ ಮಹಿಳೆ, ಪುತ್ರ;  ಭಾರತೀಯ ಗುರುತಿನ ದಾಖಲೆ ಪಡೆದುಕೊಂಡಿದ್ದೇಗೆ?

ವೀಸಾ ಅವಧಿ ಮುಗಿದ ನಂತರವೂ ಚಿಕ್ಕಬಳ್ಳಾಪುರದಲ್ಲಿ ಉಳಿದ ಪಾಕ್ ಮಹಿಳೆ

Pakistani Woman arrested: ವೀಸಾ ಅವಧಿ ಮುಗಿದ ನಂತರವೂ ಚಿಕ್ಕಬಳ್ಳಾಪುರದಲ್ಲಿ ಉಳಿದುಕೊಂಡು ಭಾರತೀಯ ಪೌರತ್ವ ಪಡೆಯದೆ ಭಾರತೀಯ ಗುರುತಿನ ದಾಖಲೆಗಳನ್ನು ಹೊಂದಿದ ಆರೋಪದ ಮೇಲೆ ಪಾಕಿಸ್ತಾನಿ ಮಹಿಳೆ ಮತ್ತು ಆಕೆಯ ಮಗನನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಆರೋಪಿಗಳನ್ನು ಫರ್ಹಾನಾಜ್ ಮತ್ತು ಆಕೆಯ ಹಿರಿಯ ಮಗ ಮೊಹಮ್ಮದ್ ಫರ್ದೀನ್ ಖಾನ್ ಎಂದು ಗುರುತಿಸಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; 4 ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿತ್ತು. ಕೃತ್ಯ ಎಸಗಿದ್ದ ಮುಖ್ಯ ಶೂಟರ್‌ಗಳು ಹಾಗೂ ಪ್ರಮುಖ ಆರೋಪಿಗಳಿಗೆ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ ಇಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

S Janaki: ಸರ್ಕಾರ ಎಸ್. ಜಾನಕಿ ನೆನಪಿಗಾಗಿ ಸ್ಮಾರಕ ನಿರ್ಮಾಣ ಮಾಡಲಿ: ಬಸವರಾಜ ಬೊಮ್ಮಾಯಿ

ಸರ್ಕಾರ ಎಸ್. ಜಾನಕಿ ಅವರ ಸ್ಮಾರಕ ನಿರ್ಮಾಣ ಮಾಡಲಿ: ಬೊಮ್ಮಾಯಿ

ಎಸ್. ಜಾನಕಿ ಅವರಿಗೆ ಮೈಸೂರಿನ ಬಗ್ಗೆ ಅಪಾರವಾದ ಒಲವಿತ್ತು. ತಮ್ಮ ಕೊನೆಯ ದಿನಗಳನ್ನು ಮೈಸೂರಿನಲ್ಲೇ ಕಳೆಯಬೇಕೆಂಬ ಇಚ್ಛೆ ಹೊಂದಿದ್ದರು. ಕರ್ನಾಟಕದ ಜನತೆಯ ಹೃದಯದಲ್ಲಿ ಅವರು ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ. ರಾಜ್ಯ ಸರ್ಕಾರ ಮೈಸೂರಿನಲ್ಲಿ ಎಸ್.‌ ಜಾನಕಿ ಅವರ ನೆನಪಿಗಾಗಿ ಒಂದು ಸುಸಜ್ಜಿತ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶೌಚಾಲಯ ಬಳಸುವುದಾಗಿ ಹೇಳಿ ಮಹಿಳೆಯ ಮನೆಗೆ ನುಗ್ಗಿ ಗುಪ್ತಾಂಗ ಪ್ರದರ್ಶಿಸಿದ ಡೆಲಿವರಿ ಬಾಯ್; ಬೆಂಗಳೂರಿನಲ್ಲೊಬ್ಬ ವಿಕೃತ ಕಾಮಿ

ಮನೆಗೆ ನುಗ್ಗಿದ ಡೆಲಿವರಿ ಬಾಯ್ ಅಸಭ್ಯ ವರ್ತನೆ: ಮಹಿಳೆ ಆರೋಪ

Misconduct allegation: ಮಹಿಳೆಯೊಬ್ಬರು ತಮ್ಮ ಮನೆಗೆ ಡೆಲಿವರಿ ಬಾಯ್ ಒಬ್ಬ ನುಗ್ಗಿ ಆಕೆಯ ಮುಂದೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಡೆಲಿವರಿ ಬಾಯ್ ಪಾರ್ಸೆಲ್ ನೀಡಲು ತಮ್ಮ ಮನೆಗೆ ಬಂದಿದ್ದಾಗ ಶೌಚಾಲಯ ಬಳಸಲು ಅನುಮತಿ ಕೇಳಿದ್ದಾಗಿ ತಿಳಿಸಿದ್ದಾರೆ. ಮಹಿಳೆ ಅದಕ್ಕೆ ನಿರಾಕರಿಸಿದಾಗ, ಆತ ಬಲವಂತವಾಗಿ ಮನೆಗೆ ನುಗ್ಗಿದ್ದಾನೆ ಎಂದು ಆರೋಪಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ಕೆಜಿ ಗಾಂಜಾ ಜಪ್ತಿ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ 12 ಕೆಜಿ ಗಾಂಜಾ ಜಪ್ತಿ

Kempegowda international Airport Bengaluru: ವಿದೇಶದಿಂದ ಕಳ್ಳಸಾಗಾಣೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಕಸ್ಟಮ್ಸ್​​ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಒಣಗುತ್ತಿರುವ ಬೆಳೆ, ಅನ್ನದಾತ ಕಂಗಾಲು

ಒಣಗುತ್ತಿರುವ ಬೆಳೆ, ಅನ್ನದಾತ ಕಂಗಾಲು

ಭೂಮಿಯನ್ನು ಹಸನುಗೊಳಿಸಿ, ಸಾಲ-ಸೋಲ ಮಾಡಿ ಬೀಜ-ಗೊಬ್ಬರ ಹಾಕಿ ಬಿತ್ತನೆ ಮಾಡಿದ ಕೃಷಿಕರು ಈಗ ಕೈಚೆಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೂನ್ ಆರಂಭದಲ್ಲಿ ಬಿದ್ದ ಅಲ್ಪ-ಸ್ವಲ್ಪ ಮಳೆಯನ್ನು ನಂಬಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ರೈತರು ತೊಗರಿ, ಹತ್ತಿ ಇತ್ಯಾದಿ ಬೀಜ ಬಿತ್ತನೆ ಕಾರ್ಯವನ್ನು ಪೂರ್ಣಗೊಳಿಸಿದ್ದರು.

ಕನಸಿನ ಮನೆಗೆ ಎಂ.ಬಿ.ಪಾಟೀಲ್ ಹೆಸರಿಟ್ಟ ರೈತ

ಕನಸಿನ ಮನೆಗೆ ಎಂ.ಬಿ.ಪಾಟೀಲ್ ಹೆಸರಿಟ್ಟ ರೈತ

ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಗ್ರಾಮದ ಹಿರೇಮಠ ಕುಟುಂಬದ ಸಿದ್ದಯ್ಯ, ಸಾತಯ್ಯ, ಮಲ್ಲಯ್ಯ, ಬಸಯ್ಯ ಹಾಗೂ ಚಂದ್ರವ್ವ ಎಂಬ 30ಕ್ಕೂ ಹೆಚ್ಚು ಜನ ಇರುವ ಅವಿಭಕ್ತ ಕುಟುಂಬವು ವಿಜಯಪುರದ ರಾಜಕುಮಾರ್ ಬಡಾವಣೆಯಲ್ಲಿ ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸ್ವಂತ ಮನೆಗೆ ಸಚಿವ ಎಂ.ಬಿ.ಪಾಟೀಲರ ಹೆಸರನ್ನು ಇಡುವ ಮೂಲಕ ತಮ್ಮ ಭೂಮಿಗೆ ನೀರುಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಡೀಲ್‌ ಮಾಡ್ಕೊಂಡರೆ ಜೋಕೆ, ಪೊಲೀಸರಿಗೆ ಡಿಕೆ ಎಚ್ಚರಿಕೆ

ಡೀಲ್‌ ಮಾಡ್ಕೊಂಡರೆ ಜೋಕೆ, ಪೊಲೀಸರಿಗೆ ಡಿಕೆ ಎಚ್ಚರಿಕೆ

ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರಿಂದ ನಮ್ಮ ರಾಜ್ಯ ಹಾಗೂ ದೇಶ ನೆಮ್ಮದಿ ಯಾಗಿ ಬದುಕಲು ಸಾಧ್ಯವಾಗುತ್ತಿದೆ. ಸಾಧನೆ ಸಾಮರ್ಥ್ಯಕ್ಕಿಂತ ನಿಮ್ಮ ಗುರಿ ನಿರ್ಧಾರ ಮಾಡಿದಾಗ ಜಯ ನಿಮ್ಮದಾಗಲಿದೆ ಎಂದರು. ನಮ್ಮ ಪೊಲೀಸ್ ಇಲಾಖೆಗೆ ದೇಶದ ದಕ್ಷ ಇಲಾಖೆ ಎಂದು ಹೆಸರು ಪಡೆದಿದೆ. ಪೊಲೀಸ್ ಸಿಬ್ಬಂದಿಗಳ ಪರಿಶ್ರಮ, ನಿಷ್ಠೆ, ಕಾರ್ಯಕ್ಷಮತೆಯಿಂದ ಈ ಹೆಸರು ಬಂದಿದೆ.

ಅಕ್ಟೋಬರ್‌ʼನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಈಶ್ವರ್ ಖಂಡ್ರೆ

ಅಕ್ಟೋಬರ್‌ʼನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಈಶ್ವರ್ ಖಂಡ್ರೆ

ರಾಜ್ಯದ ಬಹುತೇಕ ಗ್ರಾಮ ಪಂಚಾಯತ್‌ಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಕೆಲವು ಪಂಚಾಯತ್‌ಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನರ್‌ವಿಂಗಡಣೆ ಮಾಡಬೇಕಾಗಿದೆ. ಜುಲೈ, ಆಗಸ್ಟ್ ನಲ್ಲಿ ಈ ಪ್ರಕ್ರಿಯೆ ಮುಗಿಸಿ, ಮೀಸಲು ನಿರ್ಧರಿಸಿ, ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು. ಚುನಾವಣಾ ಆಯೋಗ 45 ದಿನಗ ಳಲ್ಲಿ ಚುನಾವಣೆ ನಡೆಸುತ್ತದೆ

ಜಮೀರ್‌ʼಗೆ ʼಲೋಕಾʼ ಸಂಕಷ್ಟ

ಜಮೀರ್‌ʼಗೆ ʼಲೋಕಾʼ ಸಂಕಷ್ಟ

ಜಮೀರ್ ವಾರ್ಷಿಕ ಆದಾಯಕ್ಕಿಂತ ಸುಮಾರು 25 ಕೋಟಿ ರು. ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಗಳಿಸಿರುವುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ (ಅಭಿಯೋಜನೆ)ಗೆ ಅನುಮತಿ ನೀಡಿದರೆ, ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಜಮೀರ್ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗುತ್ತದೆ. ಈ ಪ್ರಕರಣ ಈಗ ರಾಜ್ಯಪಾಲರ ಅಂಗಳಕ್ಕೆ ಬಂದಿದೆ ಎಂದು ರಾಜ್ಯ ಗೃಹ ಇಲಾಖೆಯ ಮೂಲಗಳು ತಿಳಿಸಿವೆ

ಮತ್ತೆ ದುರ್ಬಲಗೊಂಡ ಮುಂಗಾರು; ದಕ್ಷಿಣ ಕನ್ನಡ, ಉಡುಪಿ ಕೊಡಗಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಕೊಡಗಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather: ಜೂನ್‌ನಲ್ಲಿ ದುರ್ಬಲಗೊಂಡಿದ್ದ ಮುಂಗಾರು ಜುಲೈನಲ್ಲಿ ಆರ್ಭಟಿಸಿತ್ತು, ಆದರೆ ಇದೀಗ ಮತ್ತ ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಭಾಗದಲ್ಲಿ ಕಳೆದ ವಾರವರೆಲ್ಲ ಭಾರಿ ಗಾಳಿ-ಮಳೆ ಆಗುತ್ತಿತ್ತು. ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ.

Byrathi Suresh conducts reality check on BMTC bus: ಬಿಎಂಟಿಸಿಯಲ್ಲಿ ಸಂಚರಿಸಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಮಾಸ್ಕ್ ಧರಿಸಿ ಬಸ್ ಸಂಚಾರ ವ್ಯವಸ್ಥೆಯ ಅವಲೋಕನ

ಬಿಎಂಟಿಸಿಯಲ್ಲಿ ಸಂಚರಿಸಿ ಬೈರತಿ ಸುರೇಶ್ ರಿಯಾಲಿಟಿ ಚೆಕ್

ಮಾಸ್ಕ್ ಹಾಕಿ ಪ್ರಯಾಣ ಮಾಡಿದ್ದರಿಂದ ಬಸ್ ನಲ್ಲಿದ್ದ ಪ್ರಯಾಣಿಕರಿಗಾಗಲೀ ಅಥವಾ ಚಾಲಕ, ಕಂಡ ಕ್ಟರ್ ಗೆ ಆಗಲೀ ಇವರು ಸಚಿವರು ಎಂಬುದು ಗಮನಕ್ಕೆ ಬರಲಿಲ್ಲ. ಪ್ರತಿಯೊಂದು ಬಸ್ ಗೂ ನಿಗದಿತ ಹಣ ನೀಡಿ ಪ್ರಯಾಣಿಸಿದ ಸಚಿವರು, ಕೆಲವು ಪ್ರಯಾಣಿಕ ರೊಂದಿಗೆ ಬಸ್ ಸಂಚಾರದ ಬಗ್ಗೆ ವಿಚಾರಿಸಿ ದರು.

ಜನರ ಮನೆ ಬಾಗಿಲಿಗೆ ಸರ್ಕಾರ ಕೊಂಡೊಯ್ಯಲು ಪ್ರಜಾಸೇವೆ ಇಲಾಖೆ: ಸಿಎಂ

ಜನರ ಮನೆ ಬಾಗಿಲಿಗೆ ಸರ್ಕಾರ ಕೊಂಡೊಯ್ಯಲು ಪ್ರಜಾಸೇವೆ ಇಲಾಖೆ: ಸಿಎಂ

CM DK Shivakumar: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ಅರಮನೆ ಮೈದಾನದಲ್ಲಿ ಶನಿವಾರ ನಡೆದ ನಮ್ಮಭಿಮಾನದ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್‌, ನನ್ನ ಹಾಗೂ ಪರಮೇಶ್ವರ್ ಅವರ ಮುಂದೆ ಬೇಡಿಕೆಗಳನ್ನು ಇಟ್ಟಿದ್ದೀರಿ. ಅದರ ಬಗ್ಗೆ ನಾವು ಆಲೋಚನೆ ಮಾಡುತ್ತೇವೆ. ಸಮಿತಿಯ ವರದಿ ಬಂದ ಮೇಲೆ ಕ್ಯಾಬಿನೆಟ್ ಅಲ್ಲಿ ಚರ್ಚೆ ನಡೆಸಿ ನಂತರ ನಿಮ್ಮ ಜತೆಯೂ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ 40 ದಿನದಿಂದ ಕಾಣೆ; ಡಿಕೆಶಿ ಹುಡುಕುತ್ತಿದ್ದಾರೆ ಎಂದು ಪ್ರಲ್ಹಾದ್‌ ಜೋಶಿ ಲೇವಡಿ

ರಾಹುಲ್‌ ಗಾಂಧಿ 40 ದಿನದಿಂದ ಕಾಣೆ: ಪ್ರಲ್ಹಾದ್‌ ಜೋಶಿ

Pralhad Joshi: ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ 40 ದಿನ ಕಳೆದರೂ ಪೂರ್ಣ ಸಚಿವ ಸಂಪುಟ ರಚನೆ ಮಾಡಲಾಗಿಲ್ಲ. ರಾಹುಲ್‌ ಗಾಂಧಿಗಾಗಿ ಕಾಯುತ್ತಿದ್ದಾರೆ. ಆದರೆ, ಅವರು ನೋಡಿದರೆ ಕಾಣೆಯಾಗಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದ್ದಾರೆ.

Indi News: ಜು.13-14ರವರೆಗೆ ಶ್ರೀಮಾತಾ ದುರ್ಗಾದೇವಿಯ ಜಾತ್ರೆ ಅದ್ದೂರಿ ಆಚರಣೆ

ಜು.13-14ರವರೆಗೆ ಶ್ರೀಮಾತಾ ದುರ್ಗಾದೇವಿಯ ಜಾತ್ರೆ ಅದ್ದೂರಿ ಆಚರಣೆ

ನವಮಿ ಮಂಗಲ ಕಾರ್ಯಾಲಯದ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಜು.13ರಂದು ರಾತ್ರಿ ಮರಾಠಿ ಕಲಾಪತ್ರ ಕೋಲ್ಹಾಪೂರ ಇವರಿಂದ ಮನಂರಜಾ ಕಾರ್ಯ ಕ್ರಮ ಮತ್ತು ಜು.14 ರಂದು ಬೆಳಿಗ್ಗೆ 5 ಗಂಟೆಗೆ ಶ್ರೀದುರ್ಗಾಮಾತೆಗೆ ಮಹಾ ಮಂಗಳಾರತಿ , ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಧ್ಯಪ್ರದೇಶ, ರಾಜಸ್ಥಾನ, ಅಂತರಾಷ್ಟ್ರೀಯ ಕಲಾವಿದ ರಿಂದ ಹಾಗೂ ಕರ್ನಾಟಕ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಗಳು ಜರುಗುವವು,

S. Janaki: ನಾಳೆ ಸಂಜೆ ಮೈಸೂರಿನಲ್ಲಿ ಎಸ್‌. ಜಾನಕಿ ಅಂತ್ಯಸಂಸ್ಕಾರ; ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ನಾಳೆ ಸಂಜೆ ಮೈಸೂರಿನಲ್ಲಿ ಎಸ್‌. ಜಾನಕಿ ಅಂತ್ಯಸಂಸ್ಕಾರ

S Janaki's funeral: ತಮ್ಮ ಅಂತ್ಯಸಂಸ್ಕಾರವು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಯೇ ನಡೆಯಬೇಕು ಎಂಬುದು ಸ್ವತಃ ಎಸ್. ಜಾನಕಿ ಅವರ ಆಸೆಯಾಗಿತ್ತು. ಅವರ ಆ ಇಚ್ಛೆಯಂತೆಯೇ ಅವರ ಕುಟುಂಬ ಸದಸ್ಯರ ಒಪ್ಪಿಗೆಯ ಮೇರೆಗೆ ಮೈಸೂರಿನಲ್ಲಿಯೇ ಅಂತ್ಯಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ.

ಆರೋಗ್ಯದ ಸಮಗ್ರ ಪರಿಕಲ್ಪನೆಗೆ ಯೋಗವೇ ಮಾರ್ಗ: ನ್ಯಾಯಮೂರ್ತಿ ಡಾ.ವಿ.ಶ್ರೀಶಾನಂದ

ಆರೋಗ್ಯದ ಸಮಗ್ರ ಪರಿಕಲ್ಪನೆಗೆ ಯೋಗವೇ ಮಾರ್ಗ

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶ್ರೀ ಪ್ರಸನ್ನ ವೀರಾಂಜನೇಯ ಯೋಗ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಮಾತನಾಡಿದ ಅವರು, ಆಯುರ್ವೇದದ ಪ್ರಕಾರ ಮನುಷ್ಯನ ದೇಹವು ವಾತ, ಪಿತ್ತ ಮತ್ತು ಕಫ ಎಂಬ ಮೂರು ಮೂಲ ಧಾತುಗಳ ಮೇಲೆ ನಿಂತಿದೆ

Chinthamani News: ವಯೋನಿವೃತ್ತ ವೆಂಕಟಚಲಪತಿ ಎನ್.ದಂಪತಿಗೆ ಗಣ್ಯರಿಂದ ಆತ್ಮೀಯ ಸನ್ಮಾನ

ಮೂರು ದಶಕಗಳ ಸಾರ್ಥಕ ಸೇವೆಗೆ ಗೌರವದ ವಿದಾಯ

1986ರಿಂದ 1992ರವರೆಗೆ ದಿನಸಿ ಅಂಗಡಿ ಹಾಗೂ ಕಡಲೆಕಾಯಿ ವ್ಯಾಪಾರ ನಡೆಸಿ ಸ್ವಾವಲಂಬಿ ಬದುಕು ಕಟ್ಟಿಕೊಂಡ ಅವರು, 1992ರ ಆಗಸ್ಟ್ 29ರಂದು ಶಿಡ್ಲಘಟ್ಟ ತಾಲೂಕಿನ ಕ್ಯಾಸಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸರ್ಕಾರಿ ಸೇವೆಗೆ ಸೇರ್ಪಡೆಯಾದರು. 1998ರ ಜೂನ್ 22ರಂದು ಬುರುಡಗುಂಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡು ಸೇವೆ ಮುಂದು ವರಿಸಿದರು.

Chikkaballapur News: ದೇಶದ ಮೊದಲ ಅಂತಾರಾಷ್ಟ್ರೀಯ ಎಂಡೋಸ್ಕೋಪಿಕ್–ರೋಬೋಟಿಕ್ ಶಸ್ತ್ರಚಿಕಿತ್ಸಾ ಸಮ್ಮೇಳನಕ್ಕೆ ಚಾಲನೆ

ಪರೋಪಕಾರ ಸೇವೆಗೆ ಶ್ರೀ ಮಧುಸೂಧನ್ ಸಾಯಿ ಆಸ್ಪತ್ರೆ ಮಾದರಿ

ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಆಶ್ರಯದಲ್ಲಿ, ಮಣಿಪಾಲ್ ಆಸ್ಪತ್ರೆ ಹಾಗೂ ಎಸ್‌ಎಸ್ ಇನ್ನೋ ವೇಷನ್ಸ್ ಸಹಯೋಗದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಭಾರತ, ಗ್ರೀಸ್, ಅಮೆರಿಕ, ಚೀನಾ, ಬ್ರೆಜಿಲ್, ಉಕ್ರೇನ್, ಜರ್ಮನಿ ಹಾಗೂ ವಿಯೆಟ್ನಾಂ ಸೇರಿದಂತೆ ಹಲವು ರಾಷ್ಟ್ರಗಳ ಹೃದಯ ಶಸ್ತ್ರ ಚಿಕಿತ್ಸಾ ತಜ್ಞರು, ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ಸಂಗತಿ ಎಂದು ಹೇಳಿದರು

ಹಾಡು ನಿಲ್ಲಿಸಿದ ʻಕೋಗಿಲೆʼ; ಎಸ್‌.ಜಾನಕಿ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಗಣ್ಯರ ಸಂತಾಪ

ಎಸ್‌.ಜಾನಕಿ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಗಣ್ಯರ ಸಂತಾಪ

Singer S. Janaki: ಖ್ಯಾತ ಗಾಯಕಿ ಎಸ್‌.ಜಾನಕಿ ಅವರು (88) ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಅವರು ಶನಿವಾರ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಇವರು ತೆಲುಗು, ತಮಿಳು, ಕನ್ನಡ, ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.

Actress Haripriya & Actor Vashishta Simha: 18ನೇ ಈಶ ಗ್ರಾಮೋತ್ಸವಕ್ಕೆ ಹರಿಪ್ರಿಯಾ, ವಸಿಷ್ಠ ಸಿಂಹ ಹಾಗೂ ಆರ್‌ಜೆ ಅಮಿತ್ ಚಾಲನೆ

ಈಶ ಗ್ರಾಮೋತ್ಸವದಲ್ಲಿ ಭಾಗಿ: ಶಾಲಾ ದಿನಗಳ ಸ್ಮರಿಸಿದ ನಟಿ ಹರಿಪ್ರಿಯಾ

ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಈಶ ಗ್ರಾಮೋತ್ಸವವು ಅತ್ಯುತ್ತಮ ಉಪಕ್ರಮವಾಗಿದ್ದು, ಕ್ರೀಡೆಯ ಮೂಲಕ ಗ್ರಾಮೀಣ ಸಮಾಜದಲ್ಲಿ ಆತ್ಮವಿಶ್ವಾಸ ಮತ್ತು ಒಗ್ಗಟ್ಟನ್ನು ಬೆಳೆಸುವ ಕೆಲಸ ಮಾಡುತ್ತಿದೆ. ಭಾಗವಹಿಸುವ ಪ್ರತಿಯೊಬ್ಬರೂ ವಿಜೇತರೇ. ಎಲ್ಲ ತಂಡಗಳಿಗೂ ಶುಭವಾಗಲಿ ಎಂದು ಹರಿಪ್ರಿಯಾ ಹಾರೈಸಿದರು.

Loading...