ಗಂಡನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಕೆಯ ಮೇಲೆ ಆಸಿಡ್ ಹಾಕಿದ ಪತ್ನಿ
ಪತಿಯ ಜತೆ ಅಕ್ರಮ ಸಂಬಂಧ ಹೊಂದಿದ್ದಾಕೆಯ ಮೇಲೆ ಪತ್ನಿ ಆಸಿಡ್ ಎರೆಚಿದ ಘಟನೆ ಕೋಲಾರದ ಆಜಾದ್ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ. ಆರೋಪಿ ಆಯೇಷಾ ಹಾಗೂ ಗಾಯಾಳು ಮುಸ್ಕಾನ್ ಇಬ್ಬರೂ ಪರಸ್ಪರ ಸಂಬಂಧಿಕರು ಎಂದು ಹೇಳಲಾಗಿದೆ.
ಅಧ್ಯಯನವು ಸಂಚಾರ ಚಲನವಲನ, ಪಾದಚಾರಿಗಳ ನಡೆ, ರಸ್ತೆ ವಿನ್ಯಾಸದ ಪರಿಣಾಮ ಹಾಗೂ ಯೋಜನಾ ಸುಧಾರಣೆಗಳ ಬಗ್ಗೆ ಪ್ರಮುಖ ತಿಳುವಳಿಕೆ ನೀಡಿದ್ದು, ಸಂಚಾರ ಮಾರ್ಗ ವಿಭಜನೆ, ಪಾದಚಾರಿಗಳ ಸುರಕ್ಷಿತ ರಸ್ತೆ ದ್ವೀಪಗಳು, ಸಿಗ್ನಲ್ ವ್ಯವಸ್ಥೆ ಸುಧಾರಣೆ ಮತ್ತು ಸೂಚನಾ ಫಲಕಗಳ ಅಭಿವೃದ್ಧಿ ಸೇರಿದಂತೆ ಕಡಿಮೆ ವೆಚ್ಚದ ಕ್ರಮಗಳನ್ನು ಶಿಫಾರಸು ಮಾಡಲಾಗಿದೆ.
ಜನಸಾಂಖ್ಯಿಕವಾಗಿ ಕರ್ನಾಟಕವು ಚುರುಕಾದ ಚಿತ್ರಣವನ್ನು ನೀಡುತ್ತದೆ. 15-59 ವರ್ಷದ ಕಾರ್ಯನಿರತ ವಯೋಮಾನದ ವರ್ಗವು ಸುಮಾರು 65% ಇದ್ದು, ಇದು ಜನ ಸಾಂಖ್ಯಿಕ ಲಾಭವನ್ನು ಸೂಚಿಸುತ್ತದೆ. ಇದೇ ಸಮಯದಲ್ಲಿ, 60 ವರ್ಷ ಮೇಲ್ಪಟ್ಟ ಹಿರಿಯರ ಪ್ರಮಾಣ 10% ಕ್ಕಿಂತ ಹೆಚ್ಚು ಆಗುವ ಸಾಧ್ಯತೆಯಿದ್ದು, ವೃದ್ಧಾಪ್ಯ ಆರೈಕೆ ಮತ್ತು ಸಾಮಾಜಿಕ ಭದ್ರತಾ ವ್ಯವಸ್ಥೆಗಳ ಅಗತ್ಯತೆಯನ್ನು ಸೂಚಿಸುತ್ತದೆ.
ಈ ಹಿಂದೆ ನಗರದ ಎಪಿಎಂಸಿಯ ರೈತ ಭವನದಲ್ಲಿ ನಡೆದ ರೈತ ಪರ, ದಲಿತ ಪರ, ಪ್ರಗತಿ ಪರ ಸಂಘಟನೆಗಳು ಎಲ್ಲಾ ಸೇರಿ ಸಂಯುಕ್ತ ಹೋರಾಟ ಮಾಡಬೇಕು. ಆಗಮಾತ್ರ ನಾವು ನಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಸಾಧ್ಯ ಎಂದು ಸಂಯುಕ್ತ ಹೋರಾಟ ರಂಗ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯ ಪಟ್ಟಣ ಹೋಬ ಳಿಯ 13 ಹಳ್ಳಿಗಳ ರೈತರ ಜಮೀನನ್ನು ಕೆಐಡಿಬಿಯ ವಶದಿಂದ ಮತ್ತೆ ರೈತರಿಗೆ ನೀಡುವಂತೆ ಮಾಡಿದೆವು ಎಂದರು.
ಜಾಗತಿಕವಾಗಿ ಅನಿಮೆ ಕಲಾ ಸ್ಪರ್ಧೆಯೊಂದಕ್ಕೆ ನೀಡಲಾಗುತ್ತಿರುವ ಅತ್ಯಂತ ದೊಡ್ಡ ಮೊತ್ತವಾದ ₹3 ಕೋಟಿ ಬಹುಮಾನದ ನಿಧಿಯನ್ನು ಈ ಸ್ಪರ್ಧೆಯು ಒಳಗೊಂಡಿದೆ. ‘ದಿ ಜೈಂಟ್ ಹಂಟ್’ ಸ್ಪರ್ಧೆಯು ವ್ಯಾಪ್ತಿ, ಮಾನ್ಯತೆ ಮತ್ತು ಅವಕಾಶಗಳನ್ನು ಮೇಳೈಸಿದ್ದು, ಭಾಗವಹಿಸುವವರಿಗೆ ಅಂತರಾಷ್ಟ್ರೀಯ ಮಟ್ಟದ ಗುರುತು ಮತ್ತು ಉದ್ಯಮದ ಮಾನ್ಯತೆ ಪಡೆಯಲು ಉತ್ತಮ ಅವಕಾಶವನ್ನು ನೀಡುತ್ತದೆ.
ತಾಲೂಕಿನ ಬಲಿಜ ಸಂಘವು ಸಹಾ ಈ ದೇವಾಲಯ ನಿರ್ಮಾಣ ಕಾರ್ಯಕ್ಕೆ ಕೈಜೋಡಿಸಲಿದೆ ಎಂದು ಜಿಲ್ಲಾ ಬಲಿಜ ಘರ್ಜನೆ ಅಧ್ಯಕ್ಷರಾದ ಪ್ರದೀಪ್ ತಿಳಿಸಿದರು. ತಾತಯ್ಯನವರ ಕೀರ್ತನೆ ಗಳು ಇಂದಿನ ಸಮಾಜಕ್ಕೆ ಮಾರ್ಗದರ್ಶನ, ಅವರು 17ನೇ ಶತಮಾನದಲ್ಲಿ ಜೀವಿಸಿದ್ದು ಅವರು ಬರೆದ ಕಾಲಜ್ಞಾನ ಎಂದಿಗೂ ನಿಜವಾಗಿದೆ ಎಂಬುದು ಭಕ್ತರ ಅನಿಸಿಕೆಯಾಗಿದೆ.
ಧರ್ಮಸ್ಥಳದಲ್ಲಿನ ಅಸಹಜ ಸಾವುಗಳ ತನಿಖೆಗೆ ಸಂಬಂಧಿಸಿ ಕಾಲ್ಪನಿಕ ವಿಚಾರಗಳನ್ನು ಆಧರಿಸಿ ವಿಡಿಯೊ ಹರಿಬಿಟ್ಟ ಸಂಬಂಧ ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ರದ್ದುಪಡಿಸುವಂತೆ ಕೋರಿ ಎಂ.ಡಿ. ಸಮೀರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ತನಿಖೆಗೆ ತಡೆ ನೀಡಿದೆ.
Bag purchase scam: ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಅರೋಪ ಕೇಳಿಬಂದಿತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ 10ರಿಂದ 13ಗೆ ರೂಪಾಯಿಗೆ ಸಿಗುವ ಬ್ಯಾಗ್ಗಳನ್ನು ಜಿಲ್ಲಾಧಿಕಾರಿ 52 ರೂ. ನೀಡಿ ಖರೀದಿಸಿದ್ದರು ಎನ್ನಲಾಗಿತ್ತು. ಈ ಸಂಬಂಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
Swift Student Challenge 2026: ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಅನನ್ಯಾ ಬಾಬು ಪ್ರಸಾದ್ ಅವರಿಗೆ ಅಂತಾರಾಷ್ಟ್ರೀಯ ಮಟ್ಟದ ಮನ್ನಣೆ ಲಭಿಸಿದೆ. ಟೆಕ್ ದೈತ್ಯ, ಅಮೆರಿಕ ಮೂಲದ ಆ್ಯಪಲ್ ಐಎನ್ಸಿ ನಡೆಸಿದ ಸ್ವಿಫ್ಟ್ ಸ್ಟುಡೆಂಟ್ ಚಾಲೆಂಜ್ 2026ರ ಟಾಪ್ 50 ವಿಜೇತರ ಪೈಕಿ ಅನನ್ಯಾ ಕೂಡ ಒಬ್ಬರು ಎಂದು ತಿಳಿಸಿದೆ.
Pralhad Joshi: ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು ಮಹಾನ್ ಸಂತರಷ್ಟೇ ಅಲ್ಲ ಅವರೊಂದು ದಿವ್ಯಶಕ್ತಿ. ಅವರು ಪ್ರಾರಂಭಿಸಿದ "ಅನ್ನದಾಸೋಹ'' ಕೇವಲ ಊಟವಲ್ಲ. ಸಮಾನತೆಯ ಸಂದೇಶ. ಜಾತಿ-ಧರ್ಮ-ಬಡತನವೆಂಬ ಬೇಧ ತೊಡೆದು ಹಾಕಿ ಜಗತ್ತಿಗೆ ಮಾನವೀಯ ಮಂತ್ರವನ್ನು ಸಾರಿದ ದೈವಪುರುಷರು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಸ್ಮರಿಸಿದ್ದಾರೆ.
ಶಿಕ್ಷಣ ಮತ್ತು ನವೀಕರಿಸಬಹುದಾದ ಇಂಧನಕ್ಕೆ ಆದ್ಯತೆ ಈ ಮಹತ್ವಾಕಾಂಕ್ಷಿ ಯೋಜನೆಯು ಶಿಕ್ಷಣ, ನವೀಕರಿಸಬಹುದಾದ ಇಂಧನ ಮತ್ತು ಜೀವನೋಪಾಯದ ಕ್ಷೇತ್ರಗಳಲ್ಲಿ ಗ್ರಾಮಗಳನ್ನು ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶ ಹೊಂದಿದೆ. ಹವಾಮಾನ ಬದಲಾವಣೆಯ ಸವಾಲು ಗಳನ್ನು ಎದುರಿಸಲು ಸಕಾರಾತ್ಮಕ ಹೆಜ್ಜೆ ಇಡುವುದು ಮತ್ತು ಸುಸ್ಥಿರ ಅಭಿವೃದ್ಧಿಯ ಮಾದರಿ ಗ್ರಾಮಗಳನ್ನು ರೂಪಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ
Karnataka’s Tax Share: ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೂಗಿಕೂಗಿ ಹೇಳಿದ್ದೇವೆ. ಆಗ ಬಾಯಿ ಮುಚ್ಚಿಕೊಂಡು ಏಳುಕೋಟಿ ಕನ್ನಡಿಗರಿಗೆ ದ್ರೋಹಬಗೆದಿರುವ ಬಿಜೆಪಿ ನಾಯಕರು ಈಗ ನಮ್ಮ ವಿರುದ್ಧ ಕೂಗು ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಶಿಡ್ಲಘಟ್ಟದಲ್ಲಿ ನಡೆದಾಡುವ ದೇವರು ಎಂದೇ ಪ್ರಸಿದ್ಧರಾದ ಶಿವಕುಮಾರ ಸ್ವಾಮೀಜಿಗಳು ನಗರೇಶ್ವರ ದೇವಾಲಯಕ್ಕೆ ಸಂಬಂಧಿಸಿದ ನಗರೇಶ್ವರ ಕಲ್ಯಾಣ ಮಂಟಪ ಉದ್ಘಾಟನೆ ಮಾಡಿ ದ್ದು ಸ್ಥಳೀಯರ ನೆನಪಿನಲ್ಲಿ ಇಂದಿಗೂ ವಿಶೇಷ ಸ್ಥಾನ ಪಡೆದಿದೆ ಎಂದರು. ಆ ಸಂದರ್ಭದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ, ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದರು
CM Siddaramaiah: ಬಿಜೆಪಿಯವರ ಅಪಪ್ರಚಾರದ ನಡುವೆಯೂ ಹಿಂದೆ ನಡೆದ 3 ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇವೆ. ಮಾಜಿ ಮುಖ್ಯಮಂತ್ರಿಗಳ ಪುತ್ರರು ನಿಂತಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ನ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈಗ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ನಾವು ಒಳ್ಳೆಯ ಕೆಲಸಗಳನ್ನು ಮಾಡಿದ್ದೇವೆ ಹೀಗಾಗಿ ಜನರು ಮತ ಹಾಕುತ್ತಾರೆ ಎಂಬ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
CM Siddaramaiah: ಕಾಂಗ್ರೆಸ್ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ? ಅದು ಕುಟುಂಬ ರಾಜಕಾರಣ ಅಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.