ರಾಜ್ಯದಲ್ಲಿ ಹಾಲಿನ ದರ ಮತ್ತೆ ಏರಿಕೆಯಾಗುತ್ತಾ? ಸಿಎಂ ಹೇಳಿದ್ದೇನು?
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದ್ದಾರೆ.ಬೇರೆ ರಾಜ್ಯಗಳಲ್ಲಿ ಹಾಲಿನ ದರ ಹೆಚ್ಚಿದೆ. ತಮಿಳುನಾಡಿನಲ್ಲಿ 9ರಿಂದ 10 ರೂ. ಹೆಚ್ಚಳ ಮಾಡಲಾಗಿದೆ. ನಮಗೂ 8-9 ರೂ. ಜಾಸ್ತಿ ಮಾಡಿ ಎಂದು ನಮ್ಮ ರೈತರು ಮನವಿ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.