ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಜಿ.ಪ್ರಭು ಸೂಚನೆ
ಬಸವ ಜಯಂತಿ, ಭಗೀರಥ ಜಯಂತಿಗಳ ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಶಿಷ್ಟಾಚಾರದ ರೀತ್ಯ ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವ ಜಯಂತಿ, ಭಗೀರಥ ಜಯಂತಿಗಳ ಅಂಗವಾಗಿ ಬುಧವಾರ ನಡೆದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಸಮುದಾಯದ ಮುಖಂಡರಿಂದ ಸಲಹೆಗಳನ್ನು ಸ್ವೀಕರಿಸಿದ ನಂತರ ಮಾತನಾಡಿದರು.