ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಪ್ರಮಾಣವಚನಕ್ಕೂ ಮುನ್ನಾ ದೇವೇಗೌಡ, ಯಡಿಯೂರಪ್ಪರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಡಿಕೆಶಿ

ದೇವೇಗೌಡ, ಯಡಿಯೂರಪ್ಪರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಡಿಕೆಶಿ

DK Shivakumar oath ceremony: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಡಿಕೆಶಿ ಅವರೊಂದಿಗೆ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Gold Price Today On 3rd June 2026: ಸತತ 2ನೇ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಇಷ್ಟಿದೆ

ಸತತ 2ನೇ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Gold Silver Price Today: ಬೆಲೆ ಇಳಿಕೆಯ ಮೂಲಕ ಜೂನ್‌ ಆರಂಭದಲ್ಲೇ ಗುಡ್‌ನ್ಯೂಸ್‌ ನೀಡಿದ್ದ ಚಿನ್ನ ಇಂದು ಕೂಡ ಗ್ರಾಹಕರ ಮೊಗದಲ್ಲಿ ನಗು ಮೂಡಿಸಿದೆ. ಬುಧವಾರ (ಜೂನ್‌ 3) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 14,320 ರುಪಾಯಿ ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15,622 ರುಪಾಯಿ ಕಂಡು ಬಂದಿದೆ.

Karnataka Cabinet: ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್‌ಗೆ ಡಿಸಿಎಂ ಸ್ಥಾನ; ಯಾರೆಲ್ಲಾ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ?

ಡಿ.ಕೆ.ಶಿವಕುಮಾರ್‌ ಜತೆ ಯಾರೆಲ್ಲಾ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ?

ಡಿ.ಕೆ. ಶಿವಕುಮಾರ್ ಅವರ ಸರ್ಕಾರದಲ್ಲಿ ಹಿರಿಯ ದಲಿತ ನಾಯಕ, ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರಿಗೂ ಸಚಿವ ಸ್ಥಾನ ಒಲಿದಿದ್ದು, ಯಾರೆಲ್ಲಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

ಮತ್ತೆ ಬೆಲೆ ಏರಿಕೆ; ಜೇಬಿಗೆ ಕತ್ತರಿ ಹಾಕಲಿದೆ ಹೋಟೆಲ್ ಊಟ, ತಿಂಡಿ

ಹೋಟೆಲ್ ಊಟ, ತಿಂಡಿ ಮತ್ತಷ್ಟು ಬೆಲೆ ಏರಿಕೆಗೆ ಸಿದ್ಧತೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಎಲ್‌ಪಿಜಿ ದರ ನಿರಂತರ ಹೆಚ್ಚಳವಾಗುತ್ತಿದೆ. ಇದು ಹೋಟೆಲ್ ತಿಂಡಿ ತಿನಿಸುಗಳ ಮೇಲೆಯೂ ಪರಿಣಾಮ ಬೀರುತ್ತಿದೆ. ಈಗಾಗಲೇ ಹೋಟೆಲ್ ತಿನಿಸುಗಳ ದರ ಹೆಚ್ಚಳದಿಂದ ಕಂಗೆಟ್ಟಿರುವ ಹೋಟೆಲ್ ಗ್ರಾಹಕರಿಗೆ ಮತ್ತೊಮ್ಮೆ ಬರೆ ಎಳೆಯಲು ಹೋಟೆಲ್ ಮಾಲೀಕರು ಸಿದ್ದತೆ ನಡೆಸುತ್ತಿದ್ದಾರೆ. ಇತ್ತೀಚೆಗೆಷ್ಟೇ ಹೋಟೆಲ್ ತಿಂಡಿ, ತಿನಿಸುಗಳ ಬೆಲೆ ಹೆಚ್ಚಿಸಲಾಗಿದ್ದು, ಇದನ್ನು ಇನ್ನಷ್ಟು ಹೆಚ್ಚಿಸುವ ಸಿದ್ಧತೆ ನಡೆಯುತ್ತಿದೆ.

ಕಾಂಗ್ರೆಸ್ ಭವನ ಶಂಕುಸ್ಥಾಪನೆ ನಡೆಯೋದಿಲ್ಲ, ಇಂದು ಸಚಿವರ ಪಟ್ಟಿಬಿಡುಗಡೆ:  ಡಿ.ಕೆ. ಶಿವಕುಮಾರ್

ಇಂದು ಸಚಿವರ ಪಟ್ಟಿ ಪ್ರಕಟ: ಡಿ.ಕೆ. ಶಿವಕುಮಾರ್

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬಳಿಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಸಚಿವರ ಪಟ್ಟಿ ಬುಧವಾರ ಮಧ್ಯಾಹ್ನದೊಳಗೆ ಬಿಡುಗಡೆಯಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲಿ ಕೆಲವು ಹೆಸರುಗಳು ಪ್ರಕಟವಾಗಿದ್ದು, ಇದು ಅಧಿಕೃತವಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಭವನ ಶಂಕುಸ್ಥಾಪನೆ ಬುಧವಾರ ಸಂಜೆ ನಡೆಯುವುದಿಲ್ಲ ಎಂದು ಕೂಡ ಅವರು ಸ್ಪಷ್ಟಪಡಿಸಿದ್ದಾರೆ.

ಕಮರ್ಷಿಯಲ್ ಶೆಡ್ಡುಗಳ ನಿರ್ಮಾಣ ಕಣ್ಮುಚ್ಚಿ ಕುಳಿತ ನಗರಸಭೆ, ಸಾರ್ವಜನಿಕರ ಆಕ್ರೋಶ: ಜನವಸತಿ ಪ್ರದೇಶಗಳಲ್ಲಿ ಅನಧಿಕೃತ ಕಮರ್ಷಿಯಲ್ ಶೆಡ್ಡುಗಳು!

Tiptur News: ಜನವಸತಿ ಪ್ರದೇಶಗಳಲ್ಲಿ ಅನಧಿಕೃತ ಕಮರ್ಷಿಯಲ್ ಶೆಡ್ಡುಗಳು!

ನಗರ ಪ್ರದೇಶದಲ್ಲಿ ಕೆಲ ಸೈಟಿನ ಮಾಲೀಕರು ಹಣ ಮಾಡುವ ಆಸೆಯಿಂದಾಗಿ ಶೆಡ್ಡು ಗಳನ್ನು ನಿರ್ಮಿಸಿ ಬಾಡಿಗೆಗೆ ಅಥವಾ ಜಾಗವನ್ನು ಭೋಗ್ಯಕ್ಕೆ ಕೊಡುತ್ತಿದ್ದಾರೆ. ಅಂತಹ ಶೆಡ್ಡುಗಳ ಬಾಡಿಗೆದಾರರು ಯಾವ ರೀತಿಯಲ್ಲಿ ಅದನ್ನು ಬಳಸಿಕೊಳ್ಳುತ್ತಿದ್ದಾರೆ, ಇದರಿಂದ ಅಕ್ಕಪಕ್ಕ ದವರಿಗೆ ತೊಂದರೆಯಾಗುತ್ತಿದೆಯೇ ಎಂಬುದನ್ನು ಅರಿಯಬೇಕಿದೆ.

ಜೀರಿಗೆ ನೀರು ಅಥವಾ ಮೆಂತ್ಯ ನೀರು: ಬೊಜ್ಜು ಕರಗಿಸಲು ಯಾವುದು ಉತ್ತಮ?

ಜೀರಾ ಅಥವಾ ಮೆಂತ್ಯ ನೀರು: ಯಾವ ಪಾನೀಯ ಹೊಟ್ಟೆಯ ಕೊಬ್ಬನ್ನು ಸುಡುತ್ತದೆ?

Health Tips: ಹೊಟ್ಟೆಯ ಬೊಜ್ಜು ಅನ್ನೋದು ಹೆಚ್ಚಿನವರಿಗೆ ಬಹುದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಹೀಗಾಗಿ ಇದನ್ನು ಪರಿಹರಿಸಲು ಯುವಕ- ಯುವತಿಯರು ನಾನಾ ರೀತಿಯ ಸಾಹಸವನ್ನು ಮಾಡುತ್ತಲೇ ಇರುತ್ತಾರೆ. ಜಿಮ್ ,ವರ್ಕೌಟ್ ಎಂದು ದಿನನಿತ್ಯ ಹೋರಾಡಿದರೂ ಬೊಜ್ಜು ನಿವಾರಣೆಯಾಗುತ್ತಿಲ್ಲ.ಆದರೆ ಇಷ್ಟೆಲ್ಲ ಕಷ್ಟ ಪಡುವ ಬದಲು ನೈಸರ್ಗಿಕ ಮನೆ ಮದ್ದುಗಳನ್ನು ಬಳಸುವ ಮೂಲಕ ಇದಕ್ಕೆ ಪರಿಹಾರ ಪಡೆಯಬಹುದು. ಬೆಳಗ್ಗಿನ ಸಮಯದಲ್ಲಿ ಖಾಲಿ ಹೊಟ್ಟೆಗೆ ಮೆಂತ್ಯೆ ನೀರು ಅಥವಾ ಜೀರಿಗೆ ನೀರು ಕುಡಿಯ‌ ಬಹುದು‌. ಆದರೆ ಇವೆರಡರಲ್ಲಿ ಯಾವುದು ಹೆಚ್ಚು ವೇಗವಾಗಿ ಕೆಲಸ ಮಾಡುತ್ತದೆ ಎಂದು ತಜ್ಞರೊಬ್ಬರು ಸಲಹೆ ನೀಡಿದ್ದಾರೆ

Chikkaballapur News: ಮೊಬೈಲ್ ಮೋಹಕ್ಕೆ ಒಳಗಾದವರಿಗೆ ಖಂಡಿತವಾಗಿ ಭವಿಷ್ಯವಿಲ್ಲ: ಪ್ರೊ.ಡಾ.ಶಂಕರ್ ಅಭಿಮತ

ಮೊಬೈಲ್ ಮೋಹಕ್ಕೆ ಒಳಗಾದವರಿಗೆ ಖಂಡಿತವಾಗಿ ಭವಿಷ್ಯವಿಲ್ಲ

ಪದವಿ ಶಿಕ್ಷಣ ಎಂಬುದು ಕೇವಲ ಡಿಗ್ರಿ ಮಾತ್ರವಲ್ಲ ಬದಲಿಗೆ ಬದುಕು ಕಟ್ಟಿಕೊಳ್ಳಲು ಇಡುವ ಮಹತ್ವದ ಹೆಜ್ಜೆಯಾಗಿದೆ. ಒಂದು ದಿನವೂ ಗೈರುಹಾಜರಾಗದೆ ತರಗತಿಗಳಿಗೆ ಬರಬೇಕು. ಮನವಿಟ್ಟು ಉಪನ್ಯಾಸ ಕೇಳಬೇಕು. ಯಾರೋ ಕೊಡುವ ನೋಟ್ಸ್ ಮೇಲೆ ಅವಲಂಬಿತ ರಾಗಬೇಡಿ.

ಕೆಐಎಡಿಬಿ ವಿರುದ್ಧ ರೈತರ ರಣಕಹಳೆ: ಜೂ.4ರಿಂದ ಬೀದಿಗಿಳಿಯಲಿರುವ ಅನ್ನದಾತರು!

ಜೂ.4ರಿಂದ ಬೀದಿಗಿಳಿಯಲಿರುವ ಅನ್ನದಾತರು!

ಜೂ.4ರಿಂದ ಪಂಜಿನ ಮೆರವಣಿಗೆ, ಜೂ.5 ರಿಂದ 13 ಹಳ್ಳಿಗಳ ರೈತ ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭವಾಗಲಿದೆ. ಈ ಹೋರಾಟಕ್ಕೆ ತಾಲ್ಲೂಕಿನ ಎಲ್ಲಾ ಪಕ್ಷಾತೀತ, ಜಾತೀತ, ದಲಿತ ಪರ ಹಾಗೂ ಕನ್ನಡ ಪರ ಸಂಘಟನೆಗಳು ಮತ್ತು ರೈತ ಬಾಂಧವರು ಬೆಂಬಲ ನೀಡಿ ಭಾಗವಹಿಸಬೇಕಾಗಿ ಕೋರಿದರು.

ಜೂ.4, 5 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾಕೂಟ

ಜೂ.4, 5 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾಕೂಟ

ಜೂ.4ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದೆ. 08, 10, 12, 14, 16 ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟ ನಡೆಯುತ್ತಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾ ಪಟುಗಳು ಜೂ.4ರ ಬೆಳಿಗ್ಗೆ ೬ ಗಂಟೆಗೆ ಕಂಠೀರವ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕಿದೆ.

World Milk Day: 1 ಲಕ್ಷ 50 ಸಾವಿರ ಲೀಟರ್ ಹಾಲು ಉತ್ಪಾದನೆಯ ಶ್ರೇಯ ಶ್ರಮಜೀವಿ ಮಹಿಳೆಯರಿಗೆ ಸಲ್ಲಬೇಕು : ಊಲವಾಡಿ ಅಶ್ವತ್ಥನಾರಾಯಣ

ಮಹಿಳೆಯರಿಗೆ ಹಾಲು ಉತ್ಪಾದನೆಯ ಶ್ರೇಯ ಸಲ್ಲಬೇಕು

ಆಸ್ಪತ್ರೆಯ ಒಳರೋಗಿಗಳಿಗೆ ಹಾಲು ವಿತರಿಸಿ ಮಾತನಾಡಿದ ಚಿಮುಲ್ ನಿರ್ದೇಶಕರಾದ ಊಲವಾಡಿ ಅಶ್ವಥನಾರಾಯಣಬಾಬು ಮಾತನಾಡಿ ಜೂನ್ ಒಂದನೇ ದಿನಾಂಕವನ್ನು ವಿಶ್ವ ಹಾಲು ದಿನವನ್ನಾಗಿ ಘೋಷಿಸಿರುವದರಿಂದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮೊಟ್ಟ ಮೊದಲನೆಯದಾಗಿ ಇಂದು ವಿಶ್ವಹಾಲು ದಿನಾಚರಣೆಯನ್ನು ಸರ್ಕಾರಿ ಆಸ್ಪತ್ರೆ ಯಲ್ಲಿ ಬಡ ರೋಗಿಗಳಿಗೆ ಆಚರಣೆ ಮಾಡುತ್ತಿರುವುದಾಗಿ ಹೇಳಿದರು

Siddaramaiah: ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ ನೀಡಿದ ಕಾಂಗ್ರೆಸ್ ಹೈಕಮಾಂಡ್

ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ ನೀಡಿದ ಹೈಕಮಾಂಡ್

ನವದೆಹಲಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿದ್ದರಾಮಯ್ಯ ಅವರು ಮಂಗಳವಾರ ಭೇಟಿಯಾದ ಬಳಿಕ ಈ ತೀರ್ಮಾನ ಪ್ರಕಟವಾಗಿದೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರಿಗೆ ಎಐಸಿಸಿಯಲ್ಲಿ ಸ್ಥಾನ ದೊರೆತಿದೆ.

Chinthamani News: ಜೂ.5 ರಂದು ರೈತ ಸಂಘದಿಂದ ವಿಧಾನ ಸೌಧ ಮುತ್ತಿಗೆ

ಜೂ.5 ರಂದು ರೈತ ಸಂಘದಿಂದ ವಿಧಾನ ಸೌಧ ಮುತ್ತಿಗೆ

ರೈತರಿಗೆ ಮಾರಕ ವಾದ ಭೂಸ್ವಾಧೀನ ಕಾಯ್ದೆಯನ್ನು ಕೇಂದ್ರ ಸರ್ಕಾರವು ವಾಪಸ್ ಪಡೆಯಿತು. ಅಂದು ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೆ ತಂದಿದ್ದು ವಾಪಸ್ ಪಡೆಯಲಿಲ್ಲ.ಅಂದಿನ ವಿರೋಧಪಕ್ಷದಲ್ಲಿದ್ದ ಇಂದಿನ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಭರವಸೆ ನೀಡಿದ್ದರು

CM oath ceremony: ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ ಹಿನ್ನೆಲೆ ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ಡಿಕೆಶಿ ಪ್ರಮಾಣ ವಚನ ಹಿನ್ನೆಲೆ ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವ ಸಂತಸದಲ್ಲಿ ತಾಲೂಕಿನ ಪ್ರತಿ ಮನೆಗೂ ಸಿಹಿ ಹಂಚಲು ಉದ್ದೇಶಿಸಲಾಗಿದೆ. ನೆಲಮಂಗಲದಲ್ಲಿ ಲಾಡುಗಳ ತಯಾರಿಕೆಯನ್ನು ಶಾಸಕ ಶ್ರೀನಿವಾಸ್ ಮಂಗಳವಾರ ಪರಿಶೀಲನೆ ನಡೆಸಿದರು. ಪ್ರತಿ ಮನೆಗೆ ಮುಕ್ಕಾಲು ಕೆಜಿ ಸಿಹಿ ಬಾಕ್ಸ್‌ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Eshwar Khandre: ಈಶ್ವರ ಖಂಡ್ರೆಗೆ ಉಪಮುಖ್ಯ ಮಂತ್ರಿ ಸ್ಥಾನ ನೀಡಬೇಕೆಂದು ವೀರಶೈವ ಮಹಾಸಭಾ ಮುಖಂಡರ ಆಗ್ರಹ

ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ

ಬಿಜೆಪಿ ಸರ್ಕಾರದಲ್ಲಿ ನಮ್ಮ ಸಮುದಾಯವನ್ನು ಗೌರವದಿಂದ ನಡೆಸಿಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲೂ ಕೂಡ ಇದೇ ರೀತಿ ಈಶ್ವರ್ ಖಂಡ್ರೆ ಅವರನ್ನು ಉಪಮುಖ್ಯಮಂತ್ರಿ, ಉಳಿದ ನಾಲ್ಕು ಮಂದಿಗೆ ಸಚಿವ ಸ್ಥಾನ ನೀಡಬೇಕು ಆ ಮೂಲಕ ಅತ್ಯಂತ ಬಲಾಢ್ಯ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿದಂತಾಗುತ್ತದೆ

World Environment Day: ವಿಶ್ವ ಪರಿಸರ ದಿನದ ಅಂಗವಾಗಿ ಜಾಲಾರಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಈಶ ಸ್ವಯಂಸೇವಕರಿಂದ ಸ್ವಚ್ಛತಾ ಅಭಿಯಾನ

ದೇವಸ್ಥಾನದಲ್ಲಿ ಈಶ ಸ್ವಯಂಸೇವಕರಿಂದ ಸ್ವಚ್ಛತಾ ಅಭಿಯಾನ

ಬೆಟ್ಟದ ಮೇಲಿರುವ ದೇವಾಲಯದ ಆವರಣ, ಬೆಟ್ಟದ ತಪ್ಪಲು ಹಾಗೂ ದೇವಸ್ಥಾನಕ್ಕೆ ಹೋಗುವ ಹಾದಿಯನ್ನು ಒಳಗೊಂಡಿತ್ತು. ಒಟ್ಟು ಸುಮಾರು 95 ಸ್ವಯಂ ಸೇವಕರು ಇದರಲ್ಲಿ ಭಾಗವಹಿಸಿದ್ದು, ಈ ಪ್ರದೇಶದಿಂದ 40ಕ್ಕೂ ಹೆಚ್ಚು ಚೀಲಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಕಸವನ್ನು ಸಂಗ್ರಹಿಸಿ ವಿಲೇವಾರಿ ಮಾಡಿದರು.

ಕರ್ನಾಟಕದಲ್ಲಿ ಹೊಸ ಯುವ ಯುಗ ಆರಂಭವಾಗಲಿದೆ: ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಹೊಸ ಯುವ ಯುಗ ಆರಂಭವಾಗಲಿದೆ: ಡಿ.ಕೆ. ಶಿವಕುಮಾರ್

DK Shivakumar: ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ನಾನು ತುಂಬಾ ಬದ್ಧನಾಗಿದ್ದೇನೆ ಮತ್ತು ನಾನು ಬಹಳಷ್ಟು ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರಗಳನ್ನು ಈಡೇರಿಸುತ್ತೇನೆ. ದಾರಿ ಅಷ್ಟು ಸುಲಭವಾಗಿಲ್ಲ. ಆದರೂ ಇದನ್ನು ನಿರ್ವಹಿಸಬೇಕು. ನಾನು ನನ್ನ ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ, ಸಮರ್ಪಣಾಭಾವದಿಂದ ಮಾಡುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಡಿಕೆಶಿ ಸಂಪುಟದಲ್ಲಿ ಪುಟ್ಟರಂಗಶೆಟ್ಟಿಗೆ ಮಂತ್ರಿಗಿರಿ ನೀಡಿ: ರಾಜ್ಯ ಉಪ್ಪಾರ ಸಂಘ ಒತ್ತಾಯ

ಸಿ. ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ: ಉಪ್ಪಾರ ಸಂಘ ಒತ್ತಾಯ

Chikkanayakanahalli News: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಡಿ.ಕೆ. ಶಿವಕುಮಾರ್‌ ಅವರ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಉಪ್ಪಾರ ಸಂಘದ ಉಪಾಧ್ಯಕ್ಷ ಕಲ್ಲೇಶ್ ಒತ್ತಾಯಿಸಿದ್ದಾರೆ.

ನಾಳೆ ಸರ್ವ ಧರ್ಮ ಗುರುಗಳ ಸಮ್ಮುಖದಲ್ಲಿ ಸಿಎಂ ಆಗಿ ಡಿಕೆಶಿ ಪದಗ್ರಹಣ; ರೈತರಿಂದ ಹಿಡಿದು ಹೈಕಮಾಂಡ್‌ ನಾಯಕರವರೆಗೆ, ಆಹ್ವಾನಿತರ ಪಟ್ಟಿ ಇಲ್ಲಿದೆ

ನಾಳೆ ನೂತನ ಸಿಎಂ ಪದಗ್ರಹಣ; ವಿದ್ಯಾರ್ಥಿಗಳು, ರೈತರಿಗೂ ಡಿಕೆಶಿ ಆಹ್ವಾನ

CM oath-taking ceremony: ಡಿ.ಕೆ.ಶಿವಕುಮಾರ್‌ ಅವರು ನೂತನ ಸಿಎಂ ಆಗಿ ನಾಳೆ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಳಿನ ಕಾರ್ಯಕ್ರಮಕ್ಕೆ ಸಾಮಾನ್ಯರಿಂದ ಹಿಡಿದು ಹೈಕಮಾಂಡ್‌ ಮಟ್ಟದ ನಾಯಕರವರೆಗೆ ಆಹ್ವಾನ ನೀಡಿರುವುದು ವಿಶೇಷವಾಗಿದೆ. ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬ ಪಟ್ಟಿ ಇಲ್ಲಿ ನೀಡಲಾಗಿದೆ.

Shidlaghatta News: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ: ಪುಟ್ಟು ಅಂಜಿನಪ್ಪ

ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ

ಡಿ.ಕೆ. ಶಿವಕುಮಾರ್(D K Shivakumar) ಅವರ ಪ್ರಮಾಣವಚನ ರಾಜ್ಯದ ರಾಜಕೀಯ ಇತಿಹಾಸ ದಲ್ಲಿ ಮಹತ್ವದ ಘಟ್ಟವಾಗಿದೆ ಎಂದು ಹೇಳಿದರು. ಸಾಮಾನ್ಯ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಮ್ಮೆಯ ವಿಷಯವಾಗಿದೆ

Chikkaballapu News: ಮಲಿನವಾದ ಮನಸ್ಸಿನಲ್ಲಿ ಶುದ್ಧ ಚೈತನ್ಯರೂಪದ ಆತ್ಮದರ್ಶನ ಸಾಧ್ಯವಿಲ್ಲ : ಧರ್ಮಾಧಿಕಾರಿಗಳಾದ ಡಾ||ಎಂ.ಆರ್.ಜಯರಾಮ್

ಮಲಿನ ಮನಸ್ಸಿನಲ್ಲಿ ಶುದ್ಧ ಚೈತನ್ಯರೂಪದ ಆತ್ಮದರ್ಶನ ಸಾಧ್ಯವಿಲ್ಲ

ತನ್ನನ್ನು ತಾನು ಅರಿಯಬೇಕು ಎಂದು ಎಲ್ಲಾ ಸಂತರು ಉಪದೇಶ ಮಾಡಿದ್ದಾರೆ. ತನ್ನನ್ನು ತಾನು ಅರಿಯುವುದೇ ಮೋಕ್ಷ. ದುರ್ಗುಣಗಳನ್ನು ಒಳಗೊಂಡಿರುವ ಮನಸ್ಸು ಈ ಸಾಧನೆ ಮಾಡಲು ಬಿಡುವುದಿಲ್ಲ. ಮನಸ್ಸು ಕನ್ನಡಿಯ ಹಾಗೆ. ಧೂಳು ಮುಚ್ಚಿದ ಕನ್ನಡಿಯಲ್ಲಿ ಪ್ರತಿಬಿಂಬವೂ ಮಲಿನವಾಗಿ ಕಾಣುವಂತೆ, ದುರ್ಗುಣಗಳಿಂದ ಕೂಡಿ, ಮಲಿನವಾದ ಮನಸ್ಸಿ ನಲ್ಲಿ ಶುದ್ಧ ಚೈತನ್ಯರೂಪದ ಆತ್ಮದರ್ಶನ ಸಾಧ್ಯವಿಲ್ಲ

Karnataka's New Cabinet: ದೆಹಲಿಯಲ್ಲಿ ರಾಹುಲ್‌ ಗಾಂಧಿ ಜತೆ ಡಿಕೆಶಿ, ಸಿದ್ದರಾಮಯ್ಯ ಮಹತ್ವದ ಸಭೆ; ಸಚಿವರ ಪಟ್ಟಿ ಫೈನಲ್‌, ಯಾರಿಗೆಲ್ಲಾ ಸ್ಥಾನ?

ಡಿ.ಕೆ.ಶಿವಕುಮಾರ್‌ ನೇತೃತ್ವದ ಸಂಪುಟ ಫೈನಲ್‌, ಯಾರಿಗೆಲ್ಲಾ ಸ್ಥಾನ?

ನಾಳೆ ಸಂಜೆ 4 ಗಂಟೆಗೆ ಬೆಂಗಳೂರಿನ ಲೋಕ ಭವನದಲ್ಲಿ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಇಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಇನ್ನು ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಬೃಹತ್‌ ಬ್ಯಾನರ್‌, ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.

ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಜೊತೆ ಶ್ರೀರಾಮ್ ಫೈನಾನ್ಸ್ ಮೈತ್ರಿ!

ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಜೊತೆ ಶ್ರೀರಾಮ್ ಫೈನಾನ್ಸ್ ಮೈತ್ರಿ!

ಶ್ರೀರಾಮ್ ಗ್ರೂಪ್‌ನ ಪ್ರಮುಖ ಸಂಸ್ಥೆ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ (SFL), ಭಾರತದ ತಳಮಟ್ಟದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವ ಉದ್ದೇಶ ದೊಂದಿಗೆ ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ (PSB) ಜೊತೆ ಪ್ರಸ್ತುತ ಪ್ರಾಯೋಜಕ ರಾಗಿ ಕಾರ್ಯತಂತ್ರದ ಮೈತ್ರಿಯನ್ನು ಘೋಷಿಸಿದೆ.

Bengaluru traffic restrictions: ನೂತನ ಸಿಎಂ ಪ್ರಮಾಣ ವಚನ; ನಾಳೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ನಾಳೆ ಬೆಂಗಳೂರಿನ ಈ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಬುಧವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಕಬ್ಬನ್‌ಪಾರ್ಕ್‌ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಲೋಕಭವನದ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭವನ್ನು ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ.

Loading...