ಬೆಂಗಳೂರು ನಾಗರಿಕರಿಗೆ ಡಿಸಿಎಂ ಅವರಿಂದ ಭೂ ಗ್ಯಾರಂಟಿಯ ಬಂಪರ್ ಘೋಷಣೆ
"ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾದ 'ಭೂ ಗ್ಯಾರಂಟಿ' ಮೂಲಕ ಬೆಂಗಳೂರು ನಾಗರಿಕರಿಗೆ 'ಇ' ಖಾತಾ ವಿತರಣೆ, ಕಟ್ಟಡ ಉಲ್ಲಂಘನೆ ವಿನಾಯಿತಿ ಮಿತಿ ಶೇ.5 ರಿಂದ ಶೇ.15 ಕ್ಕೆ ಹೆಚ್ಚಳ, 100 ದಿನದಲ್ಲಿ 'ಎ' ಯಿಂದ 'ಬಿ' ಖಾತಾ ಶುಲ್ಕ ಪಾವತಿಸಿದರೆ ಶೇ. 60 ರಷ್ಟು ರಿಯಾಯಿತಿ, ಶಿವರಾಂ ಕಾರಂತ ಬಡಾವಣೆಯ ಭೂ ಮಾಲೀಕರಿಗೆ 18 ಸಾವಿರ ನಿವೇಶನ ಹಂಚಿಕೆ, ʼಗ್ರೀನ್ ಬೆಂಗಳೂರುʼ ಕಾರ್ಯಕ್ರಮ, ಬಿಡಿಎ ಮನೆಗಳ ಮಾರಾಟ ಸೇರಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ನಾಗರಿಕರಿಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಬಂಪರ್ ಕೊಡುಗೆಯಾಗಿ ಘೋಷಿಸಿದ್ದಾರೆ.