ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Cauvery River Tragedy: ಫೋಟೊ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೊ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಮುಳುಗಿ ಐವರ ಸಾವು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಬುಧವಾರ ಸಂಜೆ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಇಳಿದು ಫೋಟೋಗೆ ಪೋಸ್ ನೀಡುತ್ತಿದ್ದ ವೇಳೆ ನೀರಿನ ಸೆಳೆತ ಹೆಚ್ಚಾಗಿ, ಒಬ್ಬರ ರಕ್ಷಣೆಗೆ ಮತ್ತೊಬ್ಬರು ಮುಂದಾದ ಪರಿಣಾಮ ಐವರು ನೀರಿನಲ್ಲಿ ಮುಳುಗಿ ದುರಂತ ಸಂಭವಿಸಿದೆ.

Bengaluru Metro: ಮೆಟ್ರೋ ಕೈಕೊಟ್ಟಿದ್ದಕ್ಕೆ ಲಾರಿ ಹತ್ತಿದ ಪ್ರಯಾಣಿಕರು; ಥರ್ಡ್‌ ಕ್ಲಾಸ್‌ ಆಡಳಿತ ಎಂದು ತೇಜಸ್ವಿ ಸೂರ್ಯ ಕಿಡಿ

ಮೆಟ್ರೋ ಕೈಕೊಟ್ಟಿದ್ದಕ್ಕೆ ಲಾರಿ ಹತ್ತಿದ ಪ್ರಯಾಣಿಕರು! Video ವೈರಲ್‌

ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಮನೆ ಸೇರಲು ಲಾರಿ, ಟ್ರಕ್‌ ಹತ್ತಿಕೊಂಡು ಹೋಗುತ್ತಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

MLA MT Krishnappa: ಬಿಡದಿ ಟೌನ್ ಶಿಪ್ ನಲ್ಲಿ ಕಾಂಗ್ರೆಸ್ ಪಾಲುದಾರಿಕೆ ಇರುವಂತಿದೆ: ಎಂ.ಟಿ.ಕೃಷ್ಣಪ್ಪ

ಬಿಡದಿ ಟೌನ್ ಶಿಪ್ ನಲ್ಲಿ ಕಾಂಗ್ರೆಸ್ ಪಾಲುದಾರಿಕೆ ಇರುವಂತಿದೆ

ಬಿಡದಿ ಬಳಿಯ ಟೌನ್ ಶಿಪ್ ಯೋಜನೆಯ ಭಾಗದ ರೈತರು ಕೇವಲ ಅರ್ಧ ಎಕರೆ ಜಮೀನನ್ನು ಹೊಂದಿದ್ದಾರೆ. ಹಸು ಕಟ್ಟಿಕೊಂಡು ಬದುಕು ನಡೆಸಿದ್ದಾರೆ. ಅಂತಹ ಸಣ್ಣ ರೈತರ ತಲೆ ಹೊಡೆ ಯುವ ಕೆಲಸ ಕಾಂಗ್ರೆಸ್ ಮಾಡಲು ಮುಂದಾಗಿದೆ ಎಂದು ಕಿಡಿಕಾರಿದ ಅವರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಬಿಡದಿ ಭಾಗದ ಯುವಕರಿಗೆ ಕೃಷಿ ಮತ್ತು ಹೈನುಗಾರಿಕೆ ಜೀವನ ಕಟ್ಟಿಕೊಂಡಿದ್ದಾರೆ.

Support Price for Mangoes: ರಾಜ್ಯದ ರೈತರಿಗೆ ಸಿಹಿ ಸುದ್ದಿ; ತಕ್ಷಣವೇ ಮಾವಿಗೆ ಬೆಂಬಲ ಬೆಲೆ ಘೋಷಿಸುವ ಭರವಸೆ ಕೊಟ್ಟ ಕೇಂದ್ರ ಕೃಷಿ ಸಚಿವ

ಮಾವಿಗೆ ಬೆಂಬಲ ಬೆಲೆ ಘೋಷಿಸುವ ಭರವಸೆ ಕೊಟ್ಟ ಕೇಂದ್ರ ಕೃಷಿ ಸಚಿವ

ಪ್ರಸಕ್ತ ಹಂಗಾಮಿನಲ್ಲಿ ರೈತರು ಎದುರಿಸುತ್ತಿರುವ ಬೆಲೆ ಕುಸಿತ ಸಂಕಷ್ಟವನ್ನು ತಗ್ಗಿಸಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಮೂಲಕ ನೆರವಾಗಬೇಕು ಹಾಗೂ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಅಡಿಯಲ್ಲಿ ಬೆಂಬಲ ಬೆಲೆ ನೀಡಬೇಕು ಎಂದು ಕೇಂದ್ರ ಕೃಷಿ ಸಚಿವರನ್ನು ಸಚಿವ ಕುಮಾರಸ್ವಾಮಿ ಅವರು ಕೋರಿದ್ದಾರೆ. ಇದಕ್ಕೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದಾರೆ.

Gubbi News: ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಜೂ.29ರಂದು ಜಾಗೃತಿ ಸಂವಾದ

ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಜೂ.29ರಂದು ಜಾಗೃತಿ ಸಂವಾದ

ಆಹಾರ ತಜ್ಞ ಡಾ.ಖಾದರ್ ವಿದೇಶದಲ್ಲಿ ಹತ್ತಾರು ಲಕ್ಷ ವೇತನ ಪಡೆಯುವ ಅವಕಾಶ ತೊರೆದು ನಮ್ಮ ನೆಲದ ವಿಷಯುಕ್ತ ಮಣ್ಣು, ಪ್ಲಾಸ್ಟಿಕ್ ಹಾವಳಿ, ಅನಾರೋಗ್ಯಕರ ಆಹಾರ ಪದ್ಧತಿ, ವಿಷಯುಕ್ತ ಆಹಾರ ಈ ಬಗ್ಗೆ ಅಧ್ಯಯನ ನಡೆಸಿ ಉತ್ತಮ ಆರೋಗ್ಯಕ್ಕೆ ಆಹಾರ ಪದ್ಧತಿ ಹಾಗೂ ರಾಸಾಯನಿಕ ಮುಕ್ತ ಕೃಷಿ ಬಗ್ಗೆ ಜಾಗೃತಿ ಮೂಡಿಸುತ್ತಾ ಮನೆ ಮಾತಾಗಿದ್ದಾರೆ.

Puttur News: ನಾಪತ್ತೆಯಾಗಿದ್ದ ಸಾಕು ನಾಯಿ ‘ಚಿನ್ನು’ ಹುಡುಕಿಕೊಟ್ಟ ವ್ಯಕ್ತಿಗೆ 50 ಸಾವಿರ ರೂ. ಬಹುಮಾನ ನೀಡಿದ ಮಾಲೀಕ!

ಸಾಕು ನಾಯಿ 'ಚಿನ್ನು' ಹುಡುಕಿಕೊಟ್ಟ ವ್ಯಕ್ತಿಗೆ 50 ಸಾವಿರ ಬಹುಮಾನ!

ಮೂರು ವಾರಗಳ ಹಿಂದೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ನಾಯಿಯನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಪುತ್ತೂರಿನ ಶ್ವಾನಪ್ರೇಮಿ ಗಣೇಶ್ ಕೇರ ಅವರು ಜಾಹೀರಾತು ನೀಡಿದ್ದರು. ಇದಾದ ಬಳಿಕ ಪೋಳ್ಯ ಪರಿಸರದವರೇ ಆದ ಪುರಂದರ ಎಂಬುವವರು ಈ ನಾಯಿಯನ್ನು ಯಶಸ್ವಿಯಾಗಿ ಹುಡುಕಿಕೊಟ್ಟಿದ್ದಾರೆ. ಅವರಿಗೆ ನಾಯಿಯ ಮಾಲೀಕ 50 ಸಾವಿರ ನಗದು ಬಹುಮಾನ ನೀಡಿದ್ದಾರೆ.

Tumkur Murder Case: 30 ಲಕ್ಷ ರೂ. ವಿಮೆ ಹಣದ ಆಸೆಗಾಗಿ ತಮ್ಮನನ್ನೇ ಕೊಂದ ಪಾಪಿ ಅಣ್ಣ!

30 ಲಕ್ಷ ರೂ. ವಿಮೆ ಹಣದ ಆಸೆಗಾಗಿ ತಮ್ಮನನ್ನೇ ಕೊಂದ ಪಾಪಿ ಅಣ್ಣ!

ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಮೇಶ್‌ ಎಂಬಾತನ ಕೊಲೆ ನಡೆದಿತ್ತು. ಮೊದಲಿಗೆ ಅಪಘಾತದಲ್ಲಿ ನನ್ನ ಸಹೋದರ ಮೃತಪಟ್ಟಿದ್ದಾನೆ ಎಂದು ಅಣ್ಣ ದೂರು ನೀಡಿದ್ದ. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು, ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗದಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಸ್ಥಾಪಿಸಿ: ಸಿಎಂಗೆ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ನಿಯೋಗ ಮನವಿ

ಶಿವಮೊಗ್ಗದಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಸ್ಥಾಪಿಸಲು ಸಿಎಂಗೆ ಮನವಿ

BY Raghavendra: ವಿಧಾನಸೌಧದಲ್ಲಿ ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ಶಿವಮೊಗ್ಗ ಜನಪ್ರತಿನಿಧಿಗಳು ಹಾಗೂ ವಕೀಲರ ನಿಯೋಗವು, ಶಿವಮೊಗ್ಗದಲ್ಲಿ ಉಚ್ಚ ನ್ಯಾಯಾಲಯದ ಸರ್ಕ್ಯೂಟ್ (ಸಂಚಾರಿ) ಪೀಠ ಸ್ಥಾಪಿಸುವ ಕುರಿತು ಮನವಿ ಸಲ್ಲಿಸಲಾಯಿತು.

ನನ್ನ ಹೆಸರಿನಲ್ಲಿರುವುದು 32 ಎಕರೆ ಜಮೀನು ಮಾತ್ರ, 100 ಎಕರೆ ಅಲ್ಲ: ಸಚಿವ ಎಂ.ಬಿ.ಪಾಟೀಲ್‌ಗೆ ಅನಿತಾ ಕುಮಾರಸ್ವಾಮಿ ತಿರುಗೇಟು

ನನ್ನ ಹೆಸರಿನಲ್ಲಿರುವುದು 32 ಎಕರೆ ಜಮೀನು ಮಾತ್ರ: ಅನಿತಾ ಕುಮಾರಸ್ವಾಮಿ

Anitha Kumaraswamy: ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಸೇರಿದ ಸುಮಾರು 100 ಎಕರೆ ಜಮೀನು, ಬಿಡದಿ ಟೌನ್‌ಶಿಪ್‌ ವ್ಯಾಪ್ತಿಯಲ್ಲಿ ಬರುತ್ತದೆ. ಈಗ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ನಾಟಕ ಎಂದು ಎಂ.ಬಿ.ಪಾಟೀಲ್ ಟೀಕಿಸಿದ್ದರು. ಇದಕ್ಕೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಸ್ಟಾರ್ಟ್‌ಅಪ್‌ ಆರಂಭಿಸಲು 15 ವರ್ಷಗಳ ಬಳಿಕ ಅಮೆರಿಕದಿಂದ ಬೆಂಗಳೂರಿಗೆ ಮರಳಿದ ದಂಪತಿ

H-1B ಅನಿಶ್ಚಿತತೆಗೆ ಬೇಸತ್ತು ಬೆಂಗಳೂರು ವಾಪಸಾದ ದಂಪತಿ

Bengaluru News: 15 ವರ್ಷಗಳ ಕಾಲ ಅಮೆರಿಕದಲ್ಲಿ ವಾಸಿಸಿದ್ದ ಬೆಂಗಳೂರು ಮೂಲದ ಕಾರ್ತಿಕ್ ಮತ್ತು ಆಸ್ಥಾ ದಂಪತಿ ಗ್ರೀನ್ ಕಾರ್ಡ್ ವಿಳಂಬ, H-1B ವೀಸಾ ಅನಿಶ್ಚಿತತೆಯಿಂದ ಬೇಸತ್ತು ಭಾರತಕ್ಕೆ ಮರಳಿದ್ದಾರೆ. ಬೆಂಗಳೂರಿನಲ್ಲಿ ಬೆಳೆಯುತ್ತಿರುವ ಸ್ಟಾರ್ಟ್‌ಅಪ್ ಅವಕಾಶಗಳ ಹಿನ್ನೆಲೆಯಲ್ಲಿ ತಮ್ಮದೇ ಉದ್ಯಮ ಆರಂಭಿಸಲಿದ್ದಾರೆ.

"ತಾಯಿ ನನ್ನನ್ನು ಕಂಟ್ರೋಲ್‌ ಮಾಡುತ್ತಿದ್ದಳು"; ಕುಟುಂಬಸ್ಥರ ಕೊಲೆ ಬಗ್ಗೆ ಹಂತಕಿ ಶ್ವೇತಾ ಹೇಳಿದ್ದೇನು?

ಕುಟುಂಬಸ್ಥರ ಕೊಲೆ ಬಗ್ಗೆ ಹಂತಕಿ ಶ್ವೇತಾ ಹೇಳಿದ್ದೇನು?

ಕೆ.ಆರ್. ಪುರಂನ ಶೀಗೆಹಳ್ಳಿಯ ಸಾಯಿ ಗ್ರೀನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಶ್ವೇತಾಳನ್ನು ತಮಿಳುನಾಡಿನ ಪುದುಚೆರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆಕೆಯ ವಿಚಾರಣೆ ನಡೆಸಲಾಗುತ್ತಿದ್ದು, ಆಕೆ ಕೊಲೆ ಬಗ್ಗೆ ಹಲವು ಹೇಳಿಕೆಯನ್ನು ನೀಡಿದ್ದಾಳೆ. ಕೊಲೆಯ ನಂತರ ಶ್ವೇತಾ ಮತ್ತು ಆಕೆಯ ಬಾಯ್‌ಫ್ರೆಂಡ್ ಕೆನತ್ ಪ್ರತ್ಯೇಕವಾಗಿ ಹೋಗಿದ್ದರು.

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮುಂಭಾಗದಲ್ಲೂ ವಿಜೃಂಭಣೆಯಿಂದ ಆಚರಿಸಬೇಕು: ಡಾ. ಎಸ್. ಸಂಗಮೇಶ್

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮುಂಭಾಗದಲ್ಲೂ ಆಚರಿಸಬೇಕು

ಬೆಂಗಳೂರು ನಗರ ನಿರ್ಮಾತೃ, ದೂರದೃಷ್ಟಿಯ ಆಡಳಿತಗಾರ ಹಾಗೂ ಕನ್ನಡ ನಾಡಿನ ಹೆಮ್ಮೆಯ ಪ್ರತೀಕವಾಗಿರುವ ನಾಡಪ್ರಭು ಕೆಂಪೇಗೌಡರ ಕೊಡುಗೆಗಳನ್ನು ಮುಂದಿನ ಯುವ ಪೀಳಿಗೆಗೆ ಪರಿಚಯಿ ಸುವುದು ಸರ್ಕಾರದ ಕರ್ತವ್ಯವಾಗಿದೆ. ಅವರ ಆದರ್ಶಗಳು, ಆಡಳಿತ ದಕ್ಷತೆ ಹಾಗೂ ಅಭಿವೃದ್ಧಿ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಸ್ಮರಣಾರ್ಥ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಬೇಕು

Tumkur News: ಜಿಲ್ಲೆಯಲ್ಲಿ ಉಪಶಮನ ಆರೈಕೆ ಬೆಂಬಲಿಸಲು ತುಮಕೂರು ಜಿಲ್ಲಾಡಳಿತ ಮತ್ತು NIRAM ಸಹಯೋಗ

ಜಿಲ್ಲೆಯಲ್ಲಿ ಉಪಶಮನ ಆರೈಕೆ ಬೆಂಬಲಿಸಲು ಸಹಯೋಗ

ಸಾರ್ವಜನಿಕ ಆರೋಗ್ಯ ಮತ್ತು ಉಪಶಮನ ಆರೈಕೆಯಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟ ನಾಯಕ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದೊಂದಿಗೆ ಕೇಂದ್ರವು ತಾಂತ್ರಿಕ ಪಾಲುದಾರಿಕೆಯನ್ನು ಹೊಂದಿದೆ. ಪ್ಯಾಲಿಯೇಟಿವ್ ಕೇರ್ ಎನ್ನುವುದು ಗಂಭೀರ, ದೀರ್ಘಕಾಲದ ಅಥವಾ ಮಾರಕ ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ರೋಗಲಕ್ಷಣದ ಪರಿಹಾರ, ಸೌಕರ್ಯ ಮತ್ತು ಬೆಂಬಲವನ್ನು ಒದಗಿಸಲು ಪ್ರಯತ್ನಿಸುವ ವಿಶೇಷ ಮತ್ತು ಸಮಗ್ರ ಆರೈಕೆಯ ರೂಪವಾಗಿದೆ.

ಸಚಿವ ಸತೀಶ್‌ ಜಾರಕಿಹೊಳಿ ಭಾವ ವೈ. ಮಂಜುನಾಥ್‌ ಮನೆ ಮೇಲೆ ಇಡಿ ದಾಳಿ

ಜಾರಕಿಹೊಳಿ ಸಹೋದರಿ ಪತಿ ವೈ. ಮಂಜುನಾಥ್‌ ಮನೆ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಗೆ ಇಡಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರ ನಿವಾಸ ಸೇರಿದಂತೆ 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ವೈ.ಮಂಜುನಾಥ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಯಾಗಿದ್ದು, ಅಬಕಾರಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

ದಾವಣಗೆರೆಯಲ್ಲಿ ಪಾಕ್‌ನೊಂದಿಗೆ ಸಂಪರ್ಕದಲ್ಲಿದ್ದ ಶಂಕಿತ ಉಗ್ರನ ಬಂಧನ

ದಾವಣಗೆರೆಯಲ್ಲಿ ಪಾಕ್‌ನೊಂದಿಗೆ ಸಂಪರ್ಕದಲ್ಲಿದ್ದ ಶಂಕಿತ ಉಗ್ರನ ಬಂಧನ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ವ್ಯಾಪ್ತಿಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಕೇವಲ 18 ದಿನಗಳ ಅಂತರದಲ್ಲಿ ಜಿಲ್ಲೆಯಲ್ಲಿ ಶಂಕಿತ ಉಗ್ರನನ್ನು ಪತ್ತೆ ಹಚ್ಚಿದ ಎರಡನೇ ಪ್ರಕರಣ ಇದಾಗಿದೆ. ಉತ್ತರ ಪ್ರದೇಶದ ಶಹಜಾನ್‌ಪುರ ಮೂಲದ ಹಾಗೂ ಹರಿಹರ ತಾಲೂಕು ಬನ್ನಿಕೋಡು ಗ್ರಾಮದಲ್ಲಿ ವಾಸವಿದ್ದ ಎನ್ನಲಾದ ಸುಹೇಲ್‌ (20) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ

ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ

ರಾಜ್ಯದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮಳೆ ಅಬ್ಬರಿಸುತ್ತಿದೆ. ಮುಂದಿನ 4 ದಿನವೂ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯ ಸೂಚನ ಇದ್ದು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಜೂನ್‌ 25 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಚುರುಕು ಪಡೆಯಲಿದೆ.

ಅಡ್ಡಮತೀಯರ ಪಟ್ಟಿ ಇಂದೇ ನೀಡಿ: ಬಿಜೆಪಿ ವರಿಷ್ಠರ ಸೂಚನೆ

ಅಡ್ಡಮತೀಯರ ಪಟ್ಟಿ ಇಂದೇ ನೀಡಿ: ಬಿಜೆಪಿ ವರಿಷ್ಠರ ಸೂಚನೆ

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದು, ಅಡ್ಡಮತದಾನ ಮಾಡಿದ ಶಾಸಕರನ್ನು ಪತ್ತೆ ಮಾಡಲು ಇನ್ನಿಲ್ಲದ ಕಸರತ್ತು ನಡೆದಿದೆ. ಇನ್ನೊಂದೆಡೆ ಬಿಜೆಪಿ ವರಿದಿಷ್ಠರು ಸಹ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ ಅವರನ್ನು ದೆಹಲಿಗೆ ಕರೆಯಿಸಿಕೊಂಡು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಗಂಭೀರ ಮಾತುಕತೆ ಮಾಡಿದ್ದಾರೆ. ಅಲ್ಲದೇ ಸೂಕ್ತ ಕ್ರಮದ ಬಗ್ಗೆಯೂ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

2850 ಎಕರೆ ಭೂಸ್ವಾಧೀನ ವಿರೋಧಿಸಿ ಶತದಿನೋತ್ಸವ ಪ್ರತಿಭಟನೆ – “ಭೂಮಿ ಕಸಿದರೆ ಸರ್ಕಾರವನ್ನೇ ಕಸಗುಡಿಸುತ್ತೇವೆ” ಎಚ್ಚರಿಕೆ

ಭೂಮಿ ಕಸಿದರೆ ಸರ್ಕಾರವನ್ನೇ ಕಸಗುಡಿಸುತ್ತೇವೆ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಡೆಯುತ್ತಿರುವ “ನಮ್ಮ ಭೂಮಿ–ನಮ್ಮ ಹಕ್ಕು”(Our land – our right) ಹೋರಾಟದ ಶತದಿನೋತ್ಸವದಲ್ಲಿ ನೂರಾರು ರೈತರು, ಮಹಿಳೆಯರು ಭಾಗವಹಿಸಿ ಸರ್ಕಾರದ ಭೂಸ್ವಾಧೀನ ನೀತಿಯನ್ನು ಖಂಡಿಸಿ ದರು. ಪ್ರತಿಭಟನೆಯ ವೇಳೆ ಮಹಿಳೆಯರು ಪೊರಕೆ ಪ್ರದರ್ಶಿಸಿ ತಮ್ಮ ಆಕ್ರೋಶ ಹೊರ ಹಾಕಿದ್ದು ಗಮನ ಸೆಳೆಯಿತು.

Bengaluru Murder Case: ಆಸ್ತಿ ವಿಚಾರಕ್ಕೆ ಜಗಳ; ಪುತ್ರನ ಜತೆ ಸೇರಿ ಹೆತ್ತ ತಾಯಿಯನ್ನೇ ಕೊಲೆಗೈದ ಮಗಳು!

ಬೆಂಗಳೂರಿನಲ್ಲಿ ಪುತ್ರನ ಜತೆ ಸೇರಿ ಹೆತ್ತ ತಾಯಿಯನ್ನೇ ಕೊಲೆಗೈದ ಮಗಳು!

ಬೆಂಗಳೂರಿನ ಕೆಂಗೇರಿಯ ಸುಭಾಷ್ ನಗರದಲ್ಲಿ ಈ ಘಟನೆ ನಡೆದಿದೆ. ಆಸ್ತಿ ವಿಚಾರಕ್ಕೆ ನಡೆದ ಜಗಳದ ವೇಳೆ ತನ್ನ ಮಗನ ಜತೆ ಸೇರಿ ಹೆತ್ತ ತಾಯಿಯನ್ನೇ ಮಹಿಳೆಯೊಬ್ಬಳು ಕೊಲೆ ಮಾಡಿದ್ದಾಳೆ. ಕೆಂಗೇರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕೊಲೆ ವಿಚಾರ ಬಯಲಾಗಿದೆ. ಆರೋಪಿಗಳಾದ ತಾಯಿ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಕಳ್ಳಾಟ ತೆರೆದಿಟ್ಟ ಸಿಎಜಿ ವರದಿ: ಪ್ರಲ್ಹಾದ್‌ ಜೋಶಿ

ಕಾಂಗ್ರೆಸ್ ಸರ್ಕಾರದ ಕಳ್ಳಾಟ ತೆರೆದಿಟ್ಟ ಸಿಎಜಿ ವರದಿ: ಜೋಶಿ

Pralhad Joshi: ಗೃಹಲಕ್ಷ್ಮಿ ಯೋಜನೆಯಲ್ಲಿ 19,020 ಫಲಾನುಭವಿಗಳಿಗೆ ಕೇವಲ ಒಂದೇ ಒಂದು ಬ್ಯಾಂಕ್ ಖಾತೆ ಜೋಡಿಸಿ, ಜಂಟಿಯಾಗಿ ಕೋಟಿ ಕೋಟಿ ಹಣ ವರ್ಗಾವಣೆ ಮಾಡಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತದ ಪರಮಾವಧಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Shidlaghatta News: ಬಿಎಲ್‌ಒಗಳ ಕಾರ್ಯವೇ ಪ್ರಜಾಪ್ರಭುತ್ವದ ಭದ್ರ ಬುನಾದಿ: ರಾಜೀವ್ ಗೌಡ

ಬಿಎಲ್‌ಒಗಳ ಕಾರ್ಯವೇ ಪ್ರಜಾಪ್ರಭುತ್ವದ ಭದ್ರ ಬುನಾದಿ: ರಾಜೀವ್ ಗೌಡ

ಬಿಎಲ್‌ಒ-1 ಮತ್ತು ಬಿಎಲ್‌ಒ-2 ಪರಸ್ಪರ ಸಹಕಾರ, ಸಮನ್ವಯ ಮತ್ತು ತಂಡದ ಮನೋಭಾವ ದೊಂದಿಗೆ ಕಾರ್ಯನಿರ್ವಹಿಸಿದಾಗ ಮಾತ್ರ ಮತದಾರರ ಪಟ್ಟಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆ ಕಾಪಾಡಲು ಸಾಧ್ಯವಾಗುತ್ತದೆ. ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಮತದಾರರಿಗೆ ಅಗತ್ಯ ಸೇವೆಗಳನ್ನು ಸಮಯಕ್ಕೆ ತಲುಪಿಸಲು ಆದ್ಯತೆ ನೀಡಲಾಗುವುದು

ಬಿಡದಿ ಟೌನ್‌ಶಿಪ್ ವಿರೋಧದ ಹಿಂದೆ ಜೆಡಿಎಸ್ ರಾಜಕೀಯ ಹಿತಾಸಕ್ತಿಯಿದೆ: ಎಂ.ಬಿ. ಪಾಟೀಲ್‌ ಆರೋಪ

ಬಿಡದಿ ಟೌನ್‌ಶಿಪ್ ವಿರೋಧದ ಹಿಂದೆ ಜೆಡಿಎಸ್ ರಾಜಕೀಯ ಹಿತಾಸಕ್ತಿಯಿದೆ: ಎಂಬಿಪಿ

MB Patil: ವಿಜಯಪುರದಲ್ಲಿ ಬಿಡದಿ ಟೌನ್‌ಶಿಪ್ ವಿಚಾರ ಕುರಿತು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಅವರಿಂದಲೇ ಬಿಡದಿ ಟೌನ್‌ಶಿಪ್ ಘೋಷಣೆಯಾಗಿತ್ತು. ಅವರು ಆಗಲೇ ನೋಟಿಫಿಕೇಷನ್ ಕೈಬಿಡಬೇಕಿತ್ತು. ಆದರೆ ಆಗ ಏನೂ ಮಾಡದೇ ಈಗ ಹೋರಾಟ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

Gudibande News: ವಿದ್ಯುತ್ ಖಾಸಗೀಕರಣ ವಿರೋಧಿಸಿ ಗುಡಿಬಂಡೆಯಲ್ಲಿ ರೈತ ಸಂಘದ ಪ್ರತಿಭಟನೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಗುಡಿಬಂಡೆಯಲ್ಲಿ ರೈತ ಸಂಘದ ಪ್ರತಿಭಟನೆ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಕ್ರಮ ಹಾಗೂ ಟಾಟಾ ಪವರ್ ಕಂಪನಿಗೆ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ನೀಡುವ ಸರ್ಕಾರದ ನಿರ್ಧಾರ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆ.ಪಿ.ಆರ್.ಎಸ್) ನೇತೃತ್ವದಲ್ಲಿ ಗುಡಿಬಂಡೆ ಪಟ್ಟಣದ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಆರೆಸ್ಸೆಸ್ ಟೀಕಿಸುವುದು ಬಿಟ್ಟು ನೀವೇನು ಮಾಡಿದ್ದೀರಿ?: ಪ್ರಿಯಾಂಕ್‌ ಖರ್ಗೆ ವಿರುದ್ಧ ಶೋಭಾ ಕರಂದ್ಲಾಜೆ ಟೀಕೆ

ಆರೆಸ್ಸೆಸ್ ಟೀಕಿಸುವುದು ಬಿಟ್ಟು ನೀವೇನು ಮಾಡಿದ್ದೀರಿ?: ಕರಂದ್ಲಾಜೆ

Shobha Karandlaje: ಆರೆಸ್ಸೆಸ್ ಅನ್ನು ಟೀಕಿಸುವುದನ್ನು ಬಿಟ್ಟು ನೀವೇನು ಮಾಡಿದ್ದೀರೆಂದು ಸ್ಪಷ್ಟಪಡಿಸಿ ಎಂದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Loading...