ಭೂ ಪರಿಹಾರ ಕೊಡದೇ ಸತಾಯಿಸುತ್ತಿದ್ದ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ರೈತ!
ಮುಳುಗಡೆ ಭೂಮಿಗೆ ಹಲವು ವರ್ಷಗಳಿಂದ ಪರಿಹಾರ ಕೊಡದೇ ಆಟಾಡಿಸುತ್ತಿದ್ದ ಅಧಿಕಾರಿಗಳ ವರ್ತನೆಗೆ ಬೇಸರಗೊಂಡ ಬಾಗಲಕೋಟೆ ರೈತರೊಬ್ಬರು ಅಧಿಕಾರಿಗೆ ಚಪ್ಪಲಿಯಲ್ಲಿ ಥಳಿಸಿ ಆಕ್ರೋಶ ಹೊರಹಾಕಿದ್ದಾರೆ. ಬಾಗಲಕೋಟೆ ನಗರವನ್ನು ಸಂಪರ್ಕಿಸುವ ರಸ್ತೆ ಯೋಜನೆಗಾಗಿ 2004 ರಲ್ಲಿ ದಾದೇನವರ್ ವೃತ್ತದ ಬಳಿ ಇದ್ದ ರೈತ ಬಸವರಾಜ ದೊಡ್ಡಮನಿ ಎಂಬುವವರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು.