ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Mandya News: ಕಾರು ಅಪಘಾತದಲ್ಲಿ ಯುವತಿ ಅನುಮಾನಾಸ್ಪದ ಸಾವು; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಆರೋಪ!

ಯುವತಿ ಅನುಮಾನಾಸ್ಪದ ಸಾವು; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಆರೋಪ!

ಹುಟ್ಟುಹಬ್ಬ ಆಚರಣೆ ನೆಪದಲ್ಲಿ ಮಗಳನ್ನು ಕರೆದೊಯ್ದ ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮಗಳು ಅದಕ್ಕೆ ಒಪ್ಪದಿದ್ದಾಗ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌; ದಾಖಲೆಗಳು ಬೆಂಕಿಗಾಹುತಿ

ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌

Pavagada News: ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪವಿರುವ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಚೇರಿಯಲ್ಲಿದ್ದ ಕೆಲವು ದಾಖಲೆಗಳು ಹಾಗೂ ಕಡತಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

Adigas Yatra: ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ-ಖಾಸಗಿ ಸಂಸ್ಥೆಗಳು ಕೈ ಜೋಡಿಸಬೇಕು: ನಾಗರಾಜ ಅಡಿಗ

ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ-ಖಾಸಗಿ ಸಂಸ್ಥೆಗಳು ಕೈ ಜೋಡಿಸಬೇಕು

Tourism Development: ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ನಿರ್ಮಿಸಲು ಸಾಧ್ಯ. ಆದ್ದರಿಂದ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಕೈ ಜೋಡಿಸಬೇಕಾದ ಅವಶ್ಯಕತೆ ಇದೆ ಎಂದು ಅಡಿಗಾಸ್‌ ಯಾತ್ರಾ ಮುಖ್ಯ ವ್ಯವಸ್ಥಾಪಕ ನಾಗರಾಜ ಅಡಿಗ ಅವರು ತಿಳಿಸಿದ್ದಾರೆ.

ಕೈತಪ್ಪಿದ ಸಚಿವ ಸ್ಥಾನ; ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಎಸ್‌.ಆರ್. ಶ್ರೀನಿವಾಸ್‌ ರಾಜೀನಾಮೆ ಘೋಷಣೆ

ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಆರ್. ಶ್ರೀನಿವಾಸ್‌ ರಾಜೀನಾಮೆ

Karnataka cabinet expansion: ಜನ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಕೇಳುತ್ತಾರೆ. ಆದರೆ ರಾಜಕೀಯದಲ್ಲಿ ನಮ್ಮಂಥ ಸಾಮಾನ್ಯ ರೈತನ ಮಗ ಮೇಲೆ ಬರೋದು ಕಷ್ಟ. ನಮಗೆ ಯೋಗ್ಯತೆ ಇಲ್ಲ ಅಂತ ಅರ್ಥ. ಹಾಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಗುಬ್ಬಿ ಶಾಸಕ ಎಸ್‌.ಆರ್.ಶ್ರೀನಿವಾಸ್‌ ಬೇಸರ ಹೊರಹಾಕಿದ್ದಾರೆ.

Utthana Katha Spardhe 2026: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ-2026ಕ್ಕೆ ಕಥೆಗಳ ಆಹ್ವಾನ; ಅ.10 ಕೊನೆಯ ದಿನ

ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳ ಆಹ್ವಾನ

Utthana Katha Spardhe 2026: ಉತ್ಥಾನ ಮಾಸಪತ್ರಿಕೆಯು ಕಳೆದ 6 ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ 2026ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ಶಾಸಕರಿಗೆ ʼವಿಆರ್‌ಎಸ್ʼ ದಾರಿ ತೋರಿದ ಕಾಂಗ್ರೆಸ್

ಶಾಸಕರಿಗೆ ʼವಿಆರ್‌ಎಸ್ʼ ದಾರಿ ತೋರಿದ ಕಾಂಗ್ರೆಸ್

ಎರಡು ತಿಂಗಳ ವಿಳಂಬದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ನಿರೀಕ್ಷೆಯಂತೆ ಅನೇಕ ಸಂಪುಟದಿಂದ ಕೊಕ್ ನೀಡಲಾಗಿದ್ದು, ಇದು ಅನಿರೀಕ್ಷಿತವೇ ಆಗಿದೆ. ಆದರೆ ಮತ್ತೊಂದು ದಿಢೀರ್ ಬೆಳವಣಿಗೆ ಎಂದರೆ, ಶಾಸಕರ ರಾಜ ಕೀಯ ಸ್ವಯಂ ನಿವೃತ್ತಿ, ಅಂದರೆ ಸಂಪುಟ ವಿಸ್ತರಣೆ ಯ ಪರಿಣಾಮ ಸುಮಾರು 15ಕ್ಕೂ ಹೆಚ್ಚು ಶಾಸಕರು ಇದೀಗ ಸ್ವಯಂ ನಿವೃತ್ತಿ ಹಾದಿಯಲಿದ್ದಾರೆ.

ಸಭಾಪತಿ ಸ್ಥಾನಕ್ಕೂ ಸಾಂವಿಧಾನಿಕ ಸಂಕಟ

ಸಭಾಪತಿ ಸ್ಥಾನಕ್ಕೂ ಸಾಂವಿಧಾನಿಕ ಸಂಕಟ

ಸಭಾಪತಿ ಹಾಗೂ ಉಪಸಭಾಪತಿಗಳಾಗಿ ಸಲೀಂ ಅಹಮದ್ ಹಾಗೂ ಉಮಾಶ್ರೀ ಅವರ ಹೆಸರುಗಳು ಮುಂಚೂಣಿಗೆ ಬಂದಿದ್ದರೂ, ಬಸವರಾಜ್ ಹೊರಟ್ಟಿ ಅವರ ಕಾನೂನಾತ್ಮಕ ನಿಲುವಿನಿಂದ ಮೇಲ್ಮನೆ ಯ ಸಭಾಪತಿ ಗಾದಿಯ ಬದಲಾವಣೆ ಪ್ರಕ್ರಿಯೆ ಅಷ್ಟು ಸುಲಭವಾಗಿಲ್ಲ ಎನ್ನುವ ಮಾತುಗಳು ಕೇಳಿ ಬಂದಿದೆ. ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ಕಠಿಣ ಸಂಸದೀಯ ನಿಯಮಗಳಿವೆ.

ತಾಳ್ಮೆ ಇರಲಿ, ಎಲ್ಲರಿಗೂ ಅವಕಾಶ ಸಿಗಲಿದೆ: 133 ಶಾಸಕರೂ ಸಚಿವರಾಗಲೂ ಅರ್ಹರು: ಸಿಎಂ ಡಿಕೆ ಶಿವಕುಮಾರ್

ತಾಳ್ಮೆ ಇರಲಿ, ಎಲ್ಲರಿಗೂ ಅವಕಾಶ ಸಿಗಲಿದೆ

ಒಂದು ಅವಧಿಯಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಕಾಶ ಸಿಕ್ಕಿರಲಿಲ್ಲ ಎಂದರು. ನೂತನ ವಾಗಿ ಅಧಿಕಾರ ಸ್ವೀಕರಿಸಿರುವ ಸಚಿವರಿಗೆ ವಿಶ್ರಮಿಸುವ ಸಮಯವಿಲ್ಲ. ಎಲ್ಲ ಸಚಿವರಿಗೆ ಬೆಂಗಳೂರಿ ನಲ್ಲಿ ತಮ್ಮ ಕೆಲಸಗಳನ್ನು ಮುಗಿಸಲು ಕೇವಲ ಒಂದು ದಿನದ ಕಾಲಾವಕಾಶ ನೀಡಲಾಗಿದೆ. ಮರುದಿನ ದಿಂದಲೇ ಅವರು ತಮಗೆ ನಿಯೋಜಿಸಲಾದ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರಾಗಿ, ಕ್ಷೇತ್ರ ಭೇಟಿ ಮಾಡುವುದು ಅವರ ಪ್ರಮುಖ ಜವಾಬ್ದಾರಿಯಾಗಿದೆ.

ಸಚಿವರಿಗೆ ಜಿಲ್ಲಾವಾರು ಬರ ಪರಿಶೀಲನೆ ಜವಾಬ್ದಾರಿ ಹಂಚಿಕೆ;  ಯಾವ ಜಿಲ್ಲೆಗೆ ಯಾರು ಉಸ್ತುವಾರಿ? ಇಲ್ಲಿದೆ ಮಾಹಿತಿ

ಸಚಿವರಿಗೆ ಜಿಲ್ಲಾವಾರು ಬರ ಪರಿಶೀಲನೆ ಜವಾಬ್ದಾರಿ ಹಂಚಿಕೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಂಡುಬರುತ್ತಿರುವ ಅತಿವೃಷ್ಟಿ ಮತ್ತು ಅನಾವೃಷ್ಠಿಯಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸಿಎಂ ಡಿಕೆ ಶಿವಕುಮಾರ್‌ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಪುಟದ ನೂತನ ಸಚಿವರಿಗೆ ಇದೀಗ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ಸರಕಾರದಲ್ಲಿ ಶೇ.67ರಷ್ಟು ಪಾಲು ಅಹಿಂದಕ್ಕೆ ಮೀಸಲು

ಸರಕಾರದಲ್ಲಿ ಶೇ.67ರಷ್ಟು ಪಾಲು ಅಹಿಂದಕ್ಕೆ ಮೀಸಲು

ಆರ್.ಬಿ.ತಿಮ್ಮಾಪೂರ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಹೈ ಕಮಾಂಡ್ ಅಂತಿಮವಾಗಿ ಬಸಂತಪ್ಪಗೆ ಅವಕಾಶ ನೀಡಿದೆ. ಇನ್ನು ದಲಿತ ಬಲ ಸಮುದಾಯದ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿಗೆ ವಿಸ್ತರಿತ ಮಂತ್ರಿಮಂಡಲದಲ್ಲಿ ಅವಕಾಶ ಸಿಕ್ಕಿದೆ. ಅದೇ ರೀತಿ ಉಪಸಭಾಧ್ಯಕ್ಷ ರಾಗಿದ್ದ ರುದ್ರಪ್ಪ ಲಮಾಣಿಗೂ ಈ ಬಾರಿ ಸಚಿವ ಸ್ಥಾನ ನೀಡಲಾಗಿದೆ.

MLA Ajay Singh: ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ: ಅಜಯ್ ಸಿಂಗ್‌ಗೆ ಸಚಿವ ಸ್ಥಾನ: ಪಟಾಕಿ ಸಿಡಿಸಿ ಸಿಹಿ ಹಂಚಿದ ಕಾರ್ಯಕರ್ತರು

ಅಜಯ್ ಸಿಂಗ್‌ಗೆ ಸಚಿವ ಸ್ಥಾನ: ಪಟಾಕಿ ಸಿಡಿಸಿ ಸಿಹಿ ಹಂಚಿದ ಕಾರ್ಯಕರ್ತರು

ಸಚಿವ ಸ್ಥಾನ ಲಭಿಸಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯ ಕರ್ತರು ಅಂಬೇಡ್ಕರ್ ವೃತ್ತದಲ್ಲಿ ಸೇರಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪರ ಘೋಷಣೆಗಳನ್ನು ಕೂಗಿ, ಪಕ್ಷದ ನಾಯಕತ್ವದ ನಿರ್ಧಾರವನ್ನು ಸ್ವಾಗತಿಸಿದರು.

ಸಚಿವ ಸಂಪುಟದಲ್ಲಿ ಮಹಿಳೆಯರಿಗೇಕಿಲ್ಲ ಸ್ಥಾನ? ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ಸಚಿವ ಸಂಪುಟದಲ್ಲಿ ಮಹಿಳೆಯರಿಗೇಕಿಲ್ಲ ಸ್ಥಾನ? ಸಿಎಂ ಹೇಳಿದ್ದೇನು?

ಬುಧವಾರದಿಂದಲೇ ನೂತನ ಸಚಿವರುಗಳು ತಮಗೆ ಜವಾಬ್ದಾರಿ ವಹಿಸುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಅಲ್ಲಿನ ಸ್ಥಳಗಳಿಗೆ ಹೋಗಿ, ಪರಿಶೀಲನೆ ಮಾಡಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು.

ಕರಾವಳಿಯಲ್ಲಿ ಮುಂದುವರಿದ ಮಳೆಯಾರ್ಭಟ; ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿಯಲ್ಲಿ ಮುಂದುವರಿದ ಮಳೆಯಾರ್ಭಟ

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿಯೇ ಇದೆ. ಬೆಂಗಳೂರು ಸೇರಿ ಒಂದಷ್ಟು ಜಿಲ್ಲೆಗಳಲ್ಲಿ ಮಳೆಯೇ ಮಾಯವಾದಂತೆ ಆಗಿದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Chikkaballapur News: ಒಂದೇ ಕಂತಿನಲ್ಲಿ ಭೂ ಪರಿಹಾರ ಬಿಡುಗಡೆ ಬಳಿಕ 135 ದಿನಗಳ ಧರಣಿ ಹಿಂಪಡೆದ ರೈತಸಂಘ

ಕೆಐಎಡಿಬಿ ಭೂಸ್ವಾಧೀನ ಹೋರಾಟಕ್ಕೆ ತಾತ್ಕಾಲಿಕ ತೆರೆ

ಜಂಗಮಕೋಟೆ ಹೋಬಳಿಯ 13 ಗ್ರಾಮಗಳ ಸುಮಾರು 2850 ಎಕರೆ ಭೂಮಿಯಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಪ್ರಾಥಮಿಕ ಅಧಿಸೂಚನೆ ಹೊರಬಿದ್ದ ದಿನದಿಂದಲೇ ಪರ-ವಿರೋಧ ಚಳವಳಿಗಳು ತೀವ್ರ ಗೊಂಡಿದ್ದವು. ಒಂದೆಡೆ ಕೋಡಿಹಳ್ಳಿ ಚಂದ್ರಶೇಖರ್ ಬಣದ ಕರ್ನಾಟಕ ರಾಜ್ಯ ರೈತಸಂಘ ಫಲವತ್ತಾದ ಕೃಷಿಭೂಮಿಯನ್ನು ಯಾವುದೇ ಕಾರಣಕ್ಕೂ ಕೈಗಾರಿಕೆಗೆ ನೀಡಬಾರದು ಎಂದು ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಕೈಗಾರಿಕೆ ಬೇಕು

Gubbi News: ಗುಬ್ಬಿ ತಾಲ್ಲೂಕಿನ ಕೆರೆಗಳಿಗೆ ಶೀಘ್ರ ಹೇಮೆ ಹರಿಸಿ : ಗುಬ್ಬಿ ಬಿಜೆಪಿಗರ ಒತ್ತಾಯ

ಗುಬ್ಬಿ ತಾಲ್ಲೂಕಿನ ಕೆರೆಗಳಿಗೆ ಶೀಘ್ರ ಹೇಮೆ ಹರಿಸಿ : ಬಿಜೆಪಿಗರ ಒತ್ತಾಯ

ಗುಬ್ಬಿ ತಾಲೂಕಿನಾದ್ಯಂತ ಎಲ್ಲಾ ಕೆರೆಗಳು ನೀರು ಇಲ್ಲದೆ ಬರಿದಾಗಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ರೈತರ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವಜಲವಾಗಿದ್ದ ಹೇಮಾವತಿ ನೀರು ಬರಬೇಕಿತ್ತು. ಈ ಬಾರಿ ಜುಲೈ ತಿಂಗಳು ಕಳೆದರೂ ಹೇಮೆ ನಮ್ಮತ್ತ ಹರಿದಿಲ್ಲ. ಮುಂಗಾರು ಕೈ ಕೊಟ್ಟಿದೆ. ಆದರೆ ಕೆಲ ದಿನದಿಂದ ಮಲೆನಾಡು ಭಾಗದಲ್ಲಿ ಮಳೆ ಬೀಳುತ್ತಿದೆ

Gubbi News: ಮಕ್ಕಳಲ್ಲಿನ ಬಹುಮುಖ ಪ್ರತಿಭೆ ಗುರುತಿಸುವುದೇ ನಿಜ ಶಿಕ್ಷಣ: ಬಿಇಓ ನಟರಾಜು

ಮಕ್ಕಳಲ್ಲಿನ ಬಹುಮುಖ ಪ್ರತಿಭೆ ಗುರುತಿಸುವುದೇ ನಿಜ ಶಿಕ್ಷಣ

ಕ್ರೀಡಾ ಶಿಕ್ಷಣ ಮಕ್ಕಳಲ್ಲಿ ಮನರಂಜನೆ, ದೈಹಿಕ ಕಸರತ್ತು, ಸಹಕಾರ, ಸ್ಪರ್ಧಾ ಮನೋಭಾವ, ಸಾಮಾಜಿಕ ಜೀವನ ಎಲ್ಲವನ್ನೂ ಕಲಿಸುತ್ತದೆ. ಕ್ರೀಡೆಯಿಂದ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆದ ಮಕ್ಕಳು ನಮ್ಮ ಕಣ್ಮುಂದೆ ನಿದರ್ಶನವಾಗಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳ ಕ್ರೀಡೆಗೆ ಸೂಕ್ತ ತರಬೇತಿ ನೀಡಿ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ಸಲಹೆ ನೀಡಿ ಕ್ರೀಡಾಕೂಟದಿಂದ ಮನೆಗೆ ಮಕ್ಕಳನ್ನು ಸುರಕ್ಷಿತವಾಗಿ ತಲುಪಿಸುವ ಹೊಣೆಗಾರಿಕೆ ಶಿಕ್ಷಕರದ್ದಾಗಿದೆ ಎಂಬುದು ನೆನಪಿರಲಿ

ಅವಳಿ ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಿದ ನಿರಾಸೆ; ಅಭಿವೃದ್ಧಿ ಕನಸಿಗೂ ಹಿನ್ನಡೆಯ ಆತಂಕ

'ಕೈʼ ನ ಏಳು ಶಾಸಕರಿದ್ದರೂ ಸಂಪುಟದಲ್ಲಿ ಪ್ರಾತಿನಿಧ್ಯ ಇಲ್ಲ: ಪ್ರತಿಭಟನೆ

ಇನ್ನು ಕೋಲಾರ ಜಿಲ್ಲೆಯ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿ, ಪಕ್ಷದ ಹಿರಿಯ ನಾಯಕರ ವಿರುದ್ಧವೇ ಆರೋಪ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್‌ನ ಆಂತರಿಕ ಅಸಮಾಧಾನವೂ ಬಹಿರಂಗ ಗೊಂಡಿದೆ.

Pro-tem Speaker: ವಿಧಾನಸಭೆ ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ನೇಮಕ

ವಿಧಾನಸಭೆ ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ನೇಮಕ

ಕರ್ನಾಟಕ ವಿಧಾನಸಭೆ ನೂತನ ಸಭಾಧ್ಯಕ್ಷರನ್ನು ಸಂವಿಧಾನಬದ್ಧವಾಗಿ ಚುನಾಯಿಸುವವರೆಗೂ ಟಿ.ಬಿ. ಜಯಚಂದ್ರ ಅವರು ಸ್ಪೀಕರ್ ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ. ಹಂಗಾಮಿ ಅಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ಅವರನ್ನು ನೇಮಿಸಿ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯದ ಸರ್ಕಾರದ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Chikkaballapur News: 50 ದಿನ ಪೂರೈಸಿದ ಸಿಂಗಾಡಿ ಕದಿರೇನಹಳ್ಳಿ ಭೂ ಹೋರಾಟ: ಅರಣ್ಯ ಇಲಾಖೆಗೆ ಮುಂಭಾಗ ಸಂತ್ರಸ್ಥರ ಆಕ್ರೋಶ

50 ದಿನ ಪೂರೈಸಿದ ಸಿಂಗಾಡಿ ಕದಿರೇನಹಳ್ಳಿ ಭೂ ಹೋರಾಟ

ನಗರ ಹೊರವಲಯ ಸೂಲಾಲಪ್ಪನ ದಿನ್ನೆಯ ಬಳಿಯಿರುವ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿ ಕಾರಿಗಳ ಕಚೇರಿ ಎದುರು ಕಳೆದ 50 ದಿನಗಳಿಂದ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಹೋರಾಟವು ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಚೇರಿಗೆ ತೆರಳದಂತೆ ಬಾಗಿಲಿಗೆ ಅಡ್ಡಕುಳಿತು ತೀವ್ರ ಆಕ್ರೋಶ ಹೊರಹಾಕಿದರು.

Afzalpur News: ಶಾಸಕ ಎಂ.ವೈ.ಪಾಟೀಲರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ: ಇಬ್ಬರ ವಿರುದ್ಧ ಎಫ್‌ಐಆರ್

ಶಾಸಕ ಎಂ.ವೈ.ಪಾಟೀಲರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ

ಶಾಸಕರಿಗೆ ಉದ್ದೇಶಪೂರ್ವಕವಾಗಿ ಅವಮಾನವಾಗುವ ರೀತಿಯಲ್ಲಿ sandipAfz007 ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ganeshjalde07 ಎಂಬ ಇನ್‌ಸ್ಟಾಗ್ರಾಮ್ ಖಾತೆ ಯಿಂದ ಶಾಸಕರನ್ನು ಉದ್ದೇಶಿಸಿ ಕೀಳುಮಟ್ಟದ ಹಾಗೂ ಅಶ್ಲೀಲ ಭಾಷೆಯಲ್ಲಿ ಕಾಮೆಂಟ್ ಮಾಡಲಾಗಿದೆ ಎನ್ನಲಾಗಿದೆ.

Vinay Kulkarni: ವಿನಯ್‌ ಕುಲಕರ್ಣಿಗೆ ಗುಡ್‌ ನ್ಯೂಸ್‌; ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಶಾಸಕ ಸ್ಥಾನ ಮರುಸ್ಥಾಪನೆ

ವಿನಯ್‌ ಕುಲಕರ್ಣಿಗೆ ಗುಡ್‌ನ್ಯೂಸ್‌; ಶಾಸಕ ಸ್ಥಾನ ಮರುಸ್ಥಾಪನೆ

ವಿನಯ್ ಕುಲಕರ್ಣಿ ಅವರು ಧಾರವಾಡ ಕ್ಷೇತ್ರದ ಶಾಸಕರಾಗಿ ತಮ್ಮ ಅಧಿಕೃತ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲು ಹಸಿರು ನಿಶಾನೆ ಸಿಕ್ಕಿದೆ. ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಆದೇಶ ಹೊರಡಿಸಿದೆ. ಈ ಪ್ರತಿಯನ್ನು ಭಾರತೀಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೂ ರವಾನಿಸಲಾಗಿದೆ.

ಬೆಂಗಳೂರಿನಲ್ಲಿ ಡೆಲಿವರಿ ಬಾಯ್‌ಯ ಮತ್ತೊಂದು ಅಸಭ್ಯ ವರ್ತನೆ; ಕುಡಿತದ ಮತ್ತಿನಲ್ಲಿ ಮಹಿಳೆಯ ಮನೆಗೆ ನುಗ್ಗಲು ಯತ್ನ: ಭಯಾನಕ ವಿಡಿಯೊ ವೈರಲ್‌

ಕುಡಿದ ಮತ್ತಿನಲ್ಲಿ ಮಹಿಳೆಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್

Viral Video: ಮಹಿಳೆಯರ ಸುರಕ್ಷತೆಯನ್ನು ಪ್ರಶ್ನಿಸುವ ಮಾಡುವ ಮತ್ತೊಂದು ಅಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಮನೆಗೆ ಬಂದ ಉಬರ್ ಪಾರ್ಸಲ್ ಡೆಲಿವರಿ ಬಾಯ್ ಕುಡಿತದ ಮತ್ತಿನಲ್ಲಿ ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಚಾರ ಶೇರ್ ಮಾಡಿದ ಮಹಿಳೆ ಆತನ ನಡವಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭ್ರಷ್ಟರಿಗೆ ಬಹುಮಾನ, ಪೇಮೆಂಟ್ ಕೊಟ್ಟವರಿಗೆ ಸಚಿವ ಸ್ಥಾನ: ಡಿಕೆಶಿ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಟೀಕೆ

ಕಾಂಗ್ರೆಸ್‌ನಲ್ಲಿ ಪೇಮೆಂಟ್ ಕೊಟ್ಟವರಿಗೆ ಸಚಿವ ಸ್ಥಾನ: ಬಿಜೆಪಿ ಟೀಕೆ

Karnataka cabinet expansion: ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಬಿಜೆಪಿ ಟೀಕಿಸಿದೆ. ಲೂಟಿಕೋರ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟರಿಗೆ ಮಾತ್ರ ಆದ್ಯತೆ, ಮಾನ್ಯತೆ. ಭ್ರಷ್ಟ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಪೇಮೆಂಟ್‌ ಕೊಟ್ರೆ ಸಾಕು ಸಚಿವರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆಗುತ್ತೆ ಎಂದು ಬಿಜೆಪಿ ಆರೋಪಿಸಿದೆ.

Chikkaballapur News: ಹಿರಿಯರು ಸಮಾಜದ ಅನುಭವದ ಸಂಪತ್ತು; ಗೌರವವೇ ಭಾರತೀಯ ಸಂಸ್ಕೃತಿಯ ಜೀವಾಳ: ನ್ಯಾ. ಟಿ.ಪಿ. ರಾಮಲಿಂಗೇಗೌಡ

ಹಿರಿಯರು ಸಮಾಜದ ಅನುಭವದ ಸಂಪತ್ತು

ಭಾರತೀಯ ಸಂಸ್ಕೃತಿಯ ಮೂಲ ಮೌಲ್ಯಗಳನ್ನು ಉಲ್ಲೇಖಿಸಿದ ಅವರು, "ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ" ಎಂಬ ಸಂದೇಶಗಳು ಕೇವಲ ಉಲ್ಲೇಖಗಳಲ್ಲ; ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ಜೀವನ ಮೌಲ್ಯಗಳಾಗಿವೆ ಎಂದು ಹೇಳಿದರು. ಹಿರಿಯರ ಅನುಭವ, ಜ್ಞಾನ ಮತ್ತು ಮಾರ್ಗದರ್ಶನದಿಂದ ಸಮಾಜ ಸದೃಢವಾಗಿ ಬೆಳೆಯುತ್ತದೆ. ಆದ್ದರಿಂದ ಅವರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ

Loading...