'ಕಾಂತಾರ: ಚಾಪ್ಟರ್ 1' ಚಿತ್ರತಂಡಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ
Rishab Shetty: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಬಹು ನಿರೀಕ್ಷಿತ ʼಕಾಂತಾರ: ಚಾಪ್ಟರ್ 1ʼ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಶೂಟಿಂಗ್ ನಡೆಸುತ್ತಿದ್ದಾಗ ಜಲಾಶಯದಲ್ಲಿ ದೋಣಿ ಮಗುಚಿದೆ. ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ. ಆದರೆ ಕ್ಯಾಮೆರಾಕ್ಕೆ ಹಾನಿಯಾಗಿದೆ ಎನ್ನಲಾಗಿದೆ.