ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chinthamani News: ನಾಯಂದ್ರಹಳ್ಳಿಯಲ್ಲಿ ಎಂ.ಎಸ್.ಡಬ್ಲ್ಯೂ ಗ್ರಾಮೀಣ ಕಲಿಕಾ ಶಿಬಿರಕ್ಕೆ ಚಾಲನೆ

ನಾಯಂದ್ರಹಳ್ಳಿಯಲ್ಲಿ ಎಂ.ಎಸ್.ಡಬ್ಲ್ಯೂ ಗ್ರಾಮೀಣ ಕಲಿಕಾ ಶಿಬಿರಕ್ಕೆ ಚಾಲನೆ

ಸ್ವಸಹಾಯ ಸಂಘಗಳು, ಮಹಿಳಾ ಸಂಘಟನೆಗಳು ಮತ್ತು ಸರ್ಕಾರದ ವಿವಿಧ ಯೋಜನೆಗಳು ಮಹಿಳೆ ಯರ ಜೀವನ ಭದ್ರತೆಯನ್ನು ಬಲಪಡಿಸಲು ಪ್ರಯತ್ನಿಸುತ್ತಿವೆ. ಮಹಿಳೆಯರಿಗೆ ಸ್ವಯಂ ಉದ್ಯೋಗ, ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಆರ್ಥಿಕ ನೆರವು ನೀಡುವ ಮೂಲಕ ಅವರ ಜೀವನ ಮಟ್ಟ ಸುಧಾರಿಸುವ ಪ್ರಯತ್ನಗಳು ನಡೆಯುತ್ತಿವೆ. ಇದನ್ನು ಎಲ್ಲಾ ಮಹಿಳೆಯರು ಉಪಯೋಗಪಡಿಸಿಕೊಂಡು ಮುಂದಕ್ಕೆ ಸಾಗಬೇಕಿದೆ

MLA Subbareddy: ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಇರೋದು ಖಚಿತ ಎಂದ ಶಾಸಕ ಸುಬ್ಬಾರೆಡ್ಡಿ

ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಇರೋದು ಖಚಿತ ಎಂದ ಶಾಸಕ ಸುಬ್ಬಾರೆಡ್ಡಿ

ನಾನು ಪಕ್ಷದ ಶಿಸ್ತಿನ ಸಿಪಾಯಿ. ಸತತವಾಗಿ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಿದ್ದೇನೆ. ಜೊತೆಗೆ ಪಕ್ಷದ ಬಲವರ್ಧನೆಯಲ್ಲೂ ಮುಂದಿದ್ದೇನೆ. ಡಿ.ಕೆ.ಶಿವಕುಮಾರ್‌ʼ ರವರು ಮುಖ್ಯಮಂತ್ರಿಯಾಗುವ ಸಮಯದಲ್ಲಿ ನಾನು ಸಹ ವರಿಷ್ಟರಲ್ಲಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದೆ. ಆಗ ಅವರು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು.

Dr.M.C.Sudhakar: ಡಾ.ಎಂ.ಸಿ.ಸುಧಾಕರ್ ಹಾಗೂ ಜಮೀರ್ ಅಹಮದ್ ಬೆನ್ನಿಗೆ ನಿಂತ ಕೈವಾರ ಗ್ರಾಮದ ಮುಖಂಡರು: ಸೂಕ್ತ ಸ್ಥಾನಮಾನಕ್ಕೆ ಆಗ್ರಹ

ಡಾ.ಎಂ.ಸಿ.ಸುಧಾಕರ್, ಜಮೀರ್ ಅಹಮದ್ ಬೆನ್ನಿಗೆ ನಿಂತ ಮುಖಂಡರು

ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರಾಗಿರುವ ಬಿ.ಜೆಡ್.ಜಮೀರ್ ಅಹಮದ್ ಖಾನ್ ಅವರು ಇಡೀ ರಾಜ್ಯಾದ್ಯಂತ ಸಂಚರಿಸಿ, ಪಕ್ಷದ ಪರವಾಗಿ ಭರ್ಜರಿ ಪ್ರಚಾರ ನಡೆಸಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ್ದಾರೆ. ಆದ್ದರಿಂದ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಸೂಕ್ತ,ಎಂದು ಹಕ್ಕೊತ್ತಾಯ ಮಾಡಿದರು

Sandalwood Actor Shivraj Kumar: ಸೀಕಲ್ ಗ್ರಾಮಕ್ಕೆ ನಟ ಶಿವಣ್ಣ ದಂಪತಿ ಭೇಟಿ

ಸೀಕಲ್ ಗ್ರಾಮಕ್ಕೆ ನಟ ಶಿವಣ್ಣ ದಂಪತಿ ಭೇಟಿ

ಅಧಿಕ ಮಾಸದಲ್ಲಿ ಲೋಕ ಕಲ್ಯಾಣಕ್ಕಾಗಿ ಚಂಡಿಕಾ ಹೋಮ ಮತ್ತು ಶ್ರೀಸತ್ಯನಾರಾಯಣಸ್ವಾಮಿ ಪೂಜೆ ನೆರವೇರಿಸಲಾಗಿದೆ. ಸಕಾಲಕ್ಕೆ ಮಳೆ ಬೆಳೆ ಸಮಸ್ತ ಜನರು ಸುಖ ಶಾಂತಿ ನೆಮ್ಮದಿಯಿಂದ ಬಾಳಲಿ ಎಂದು ದೇವರನ್ನು ಮೊರೆ ಹೋಗಿದ್ದೇವೆ. ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇ ಗೌಡ( Chamundeshwari MLA GT Deve Gowda) ,ನಟ ಶಿವರಾಜ್ ಕುಮಾರ್ ದಂಪತಿ ಮತ್ತು ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ ಭಾಗವಹಿಸಿದ್ದಾರೆ

Zameer Ahmed Khan: ಜಮೀರ್ ಅಹಮದ್ ಖಾನ್ʼಗೆ ಡಿಸಿಎಂ ನೀಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಷ್ಟ

ಜಮೀರ್ ಅಹಮದ್ ಖಾನ್ʼಗೆ ಡಿಸಿಎಂ ನೀಡದಿದ್ದರೆ ಪಕ್ಷಕ್ಕೆ ನಷ್ಟ

ಸಚಿವ ಸಂಪುಟದಲ್ಲಿ ಜಮೀರ್ ಅಹಮದ್ ಖಾನ್ ಅವರು ವಸತಿ ಮತ್ತು ವಾಕ್ಫ್ ಸಚಿವರಾಗಿ ಉತ್ತಮವಾಗಿ ಕೆಲಸ ಮಾಡುವುದರ ಜೊತೆಗೆ, ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟುವಂತಹ ಕೆಲಸ ಮಾಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದವರು ಇಂದು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂದರೆ, ಅದಕ್ಕೆ ಮೂಲ ಕಾರಣ, ಜಮೀರ್ ಅವರು. ಆದ್ದರಿಂದ ಅವರನ್ನು ಕಡ್ಡಾಯವಾಗಿ ಸಚಿವರನ್ನಾಗಿ ಮಾಡಬೇಕು. ಅವರಿಗೆ ಉತ್ತಮ ಖಾತೆ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿ ಕೊಡಬೇಕು ಎಂದರು.

Belagavi Rains: ಬೈಲಹೊಂಗಲದಲ್ಲಿ ಮಳೆ ಆರ್ಭಟ; ನೀರಿನಲ್ಲಿ ಕೊಚ್ಚಿಹೋದ ಬೈಕ್‌ಗಳು, ಜನಜೀವನ ಅಸ್ತವ್ಯಸ್ತ!

ಬೈಲಹೊಂಗಲದಲ್ಲಿ ಮಳೆ ಆರ್ಭಟ; ನೀರಿನಲ್ಲಿ ಕೊಚ್ಚಿಹೋದ ಬೈಕ್‌ಗಳು

Bailhongal News: ಬೈಲಹೊಂಗಲ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳು ನದಿಗಳಂತಾಗಿ ಹರಿದರೆ, ತಗ್ಗು ಪ್ರದೇಶಗಳು ಜಲಾವೃತಗೊಂಡು ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದರು. ಮಳೆಯ ರಭಸಕ್ಕೆ ನಗರದ ಅನೇಕ ಬಡಾವಣೆಗಳು ಮತ್ತು ಪ್ರಮುಖ ರಸ್ತೆಗಳು ನೀರಿನಿಂದ ಆವೃತಗೊಂಡಿವು.

Chikkaballapur News: ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ರೈತರಿಗೆ ರಸಗೊಬ್ಬರಗಳನ್ನು ನೀಡಲು ಮುಂದಾಗಬೇಕು: ಯಲುವಹಳ್ಳಿ ಸೊಣ್ಣೇಗೌಡ ಆಗ್ರಹ

ಕೇಂದ್ರ ರಿಯಾಯಿತಿ ದರದಲ್ಲಿ ರಸಗೊಬ್ಬರಗಳನ್ನು ನೀಡಲು ಮುಂದಾಗಬೇಕು

ಪ್ರಸ್ತುತ ರಸಗೊಬ್ಬರಗಳ ಬೆಲೆಯು ಅತ್ಯಂತ ದುಬಾರಿಯಾಗಿರುವುದು ರೈತರಿಗೆ ತೀವ್ರ ತೊಂದರೆ ಯಾಗಿದೆ. ಕೇಂದ್ರ ಸರ್ಕಾರ ಈ ಕೂಡಲೇ ರಸಗೊಬ್ಬರಗಳನ್ನು ರಿಯಾಯ್ತಿ ದರದಲ್ಲಿ ರೈತರಿಗೆ ನೀಡಲು ಕ್ರಮಕೈಗೊಳ್ಳಬೇಕು. ಹನಿ ನೀರಾವರಿ ಯಾಂತ್ರೀಕರಣ ಸಲಕರಣೆಗಳ ಮೇಲೆ ವಿಧಿಸು ತ್ತಿರುವ ಜಿ.ಎಸ್.ಟಿ ತೆರಿಗೆಯನ್ನು ಈ ಕೊಡಲೇ ರದ್ದುಪಡಿಸಬೇಕು ಎಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ ಆಗ್ರಹಿಸಿದರು

Self Harming in Bus: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ತಾಲ್ಲೂಕಿನ ಹಾಲಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ ನಿರ್ಮಲಾ ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಬೆಂಗಳೂರಿನಿದ ಚಿಕ್ಕಬಳ್ಳಾಪುರಕ್ಕೆ ತೆರಳುವ ಬಸ್ ಹತ್ತಿದ್ದರು. ಬಸ್‌ನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಸಹ ಪ್ರಯಾಣಿಕರು ನಿರ್ವಾಹಕ ನಿಗೆ ವಿಷಯ ತಿಲಿಸಿದ್ದಾರೆ. ಈ ವೇಳೆ 48 ಮಂದಿ ಪ್ರಯಾಣಿಕರಿದ್ದ ಬಸ್ ಸಮೇತ ಚಾಲಕ ಹಾಗೂ ನಿರ್ವಾಹಕ ಖಾಸಗಿ ಆಸ್ಪತ್ರೆಗೆ ತೆರಳಿ ಸಮಯ ಪ್ರಜ್ಞೆ ಮೆರೆದಿದ್ದಾರೆ.

Bagalkot Child Death: ಸಂಪ್‌ಗೆ ಬಿದ್ದು ಮಗು ಸಾವು; ಉಪ್ಪಿನ ರಾಶಿ ಮೇಲೆ ಮೃತದೇಹವಿಟ್ಟು, ಕುರಾನ್‌ ಪಠಿಸಿ ಬದುಕಿಸಲು ಪೋಷಕರ ಯತ್ನ

ಸಂಪ್‌ಗೆ ಬಿದ್ದು ಮಗು ಸಾವು; ಮೃತದೇಹ ಉಪ್ಪಿನಲ್ಲಿಟ್ಟು ಬದುಕಿಸಲು ಯತ್ನ

ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 38ರಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಗುವನ್ನು ಬದುಕಿಸಲು ಪೋಷಕರು ನಡೆಸಿದ ಪ್ರಯತ್ನದ ದೃಶ್ಯ ನೋಡುಗರ ಮನ ಕಲಕುವಂತೆ ಮಾಡಿದೆ.

ಚದಲಪುರ ಗವಿಗಾನಹಳ್ಳಿ ರಸ್ತೆಯಲ್ಲಿರುವ ಗೋದಾಮಿನ ಮೇಲೆ ದಾಳ: ರಸಗೊಬ್ಬರದ ಅಕ್ರಮ ದಾಸ್ತಾನು ಪತ್ತೆ

ಚದಲಪುರ ಗವಿಗಾನಹಳ್ಳಿ ರಸ್ತೆಯಲ್ಲಿರುವ ಗೋದಾಮಿನ ಮೇಲೆ ದಾಳ

ಯೂರಿಯಾ ಸೇರಿದಂತೆ ಯಾವುದೇ ರೀತಿಯ ರಸಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ಕೈಗಾರಿಕಾ ಉದ್ದೇಶಕ್ಕೆ ಬಳಕೆ ಮಾಡುವುದು ಕಾನೂನು ಬಾಹಿರವಾಗಿದ್ದು ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಜರುಗದಂತೆ ಕಟ್ಟೆಚ್ಚರದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಫ್ರೂಟ್ ಐಡಿ ಆಧಾರದ ಮೇಲೆ ನಿಯಮಾ ವಳಿಯಂತೆ ರೈತರಿಗೆ ರಸಗೊಬ್ಬರ ವಿತರಣೆ ಮಾಡಬೇಕು ಎಂದರು

MLA Pradeep Eshwar: 3 ಕೋಟಿ ವೆಚ್ಚದ ನಾಗರಭಾವಿ ದೇವಕೊಂಡಹಳ್ಳಿ ಸಿ.ಸಿ. ರಸ್ತೆ ಕಾಮಗಾರಿಗೆ ಶಾಸಕ ಪ್ರದೀಪ್ ಈಶ್ವರ್ ಅವರಿಂದ ಚಾಲನೆ

ಬಿಎಂಟಿಸಿ ಬಸ್ ಸೌಕರ್ಯ ಒದಗಿಸಲು ಶಾಸಕರ ಅಭಯ

ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡುವ ಮುನ್ನ ಬೆಳಂಬೆಳಗ್ಗೆಯೇ ದಲಿತರೇ ಹೆಚ್ಚಾಗಿ ವಾಸಿಸುವ ನಾಗರಬಾವಿ ಮತ್ತು ದೇವರಕೊಂಡಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ್ದ ಶಾಸಕ ಪ್ರದೀಪ್ ಈಶ್ವರ್ ಅವರು ಗ್ರಾಮಗಳಲ್ಲಿ ಸಂಚರಿಸಿ ಜನರಿಂದ ಅಹವಾಲು ಆಲಿಸಿದರು. ಗ್ರಾಮದ ಪ್ರತಿಯೊಂದು ಮನೆ ಮನೆಗೂ ಭೇಟಿ ನೀಡಿದ್ದ ಶಾಸಕರು ಅವರ ಮನೆಯ ಬಳಿಯೇ ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು

JOB ALERT: ಐಐಎಂಬಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ; 14.72 ಲಕ್ಷ ರುಪಾಯಿ ವೇತನ

ಗ್ರಂಥಾಲಯ ಮೇಲ್ವಿಚಾರಕ ಉದ್ಯೋಗಗಳಿಗೆ ಅರ್ಜಿ ಆಹ್ವಾನ

ಪ್ರತಿಷ್ಠಿತ ಐಐಎಂಬಿ ಸಂಸ್ಥೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳು ಜೂನ್ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ವಾರ್ಷಿಕ 14.72 ಲಕ್ಷ ರುಪಾಯಿ ವೇತನ ಪ್ಯಾಕೇಜ್ ದೊರೆಯಲಿದೆ.

BESCOM Online Services: ಸಾಫ್ಟ್‌ವೇರ್‌ ಅಳವಡಿಕೆ: 20 ಪಟ್ಟಣಗಳಲ್ಲಿ ಬೆಸ್ಕಾಂ ಆನ್‌ಲೈನ್‌ ಸೇವೆ ಅಲಭ್ಯ

ಸಾಫ್ಟ್‌ವೇರ್‌ ಅಳವಡಿಕೆ: 20 ಪಟ್ಟಣಗಳಲ್ಲಿ ಬೆಸ್ಕಾಂ ಆನ್‌ಲೈನ್‌ ಸೇವೆ ಅಲಭ್ಯ

ಐಪಿಡಿಎಸ್‌ ಐಟಿ ಅಪ್ಲಿಕೇಶನ್‌ ಅನ್ನು ಬೆಸ್ಕಾಂ ವ್ಯಾಪ್ತಿಯ 20 ಐಪಿಡಿಎಸ್‌ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ವಿವಿಧ ಪಟ್ಟಣ ಪ್ರದೇಶಗಳಲ್ಲಿ ಜೂನ್‌ 10ರಿಂದ 30ರವರೆಗೆ ಬೆಸ್ಕಾಂನ ಆನ್‌ಲೈನ್‌ ಸೇವೆಗಳು ಲಭ್ಯ ವಿರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

BS Yediyurappa: ಪೋಕ್ಸೊ ಕೇಸ್‌ನಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ತುಸು ರಿಲೀಫ್‌; ಜಾಮೀನು ಷರತ್ತು ಸಡಿಲಿಕೆ

ಪೋಕ್ಸೊ ಕೇಸ್‌ನಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ತುಸು ರಿಲೀಫ್‌

BS Yediyurappa: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೇಸ್‌ಗೆ ಸಂಬಂಧಿಸಿ ಜಾಮೀನು ಷರತ್ತನ್ನು ಹೈಕೋರ್ಟ್‌ ಸಡಿಲಿಕೆ ಮಾಡಿದೆ.

Haveri News: ಹಾವೇರಿಯಲ್ಲಿ ಹದಗೆಟ್ಟ ಹಳ್ಳಿ ರಸ್ತೆಗಳು; ದುರಸ್ತಿಗೆ ಸಾರ್ವಜನಿಕರ ಆಗ್ರಹ

ಹಾವೇರಿಯಲ್ಲಿ ಹದಗೆಟ್ಟ ಹಳ್ಳಿ ರಸ್ತೆಗಳು; ದುರಸ್ತಿಗೆ ಸಾರ್ವಜನಿಕರ ಆಗ್ರಹ

Haveri News: ಹಾವೇರಿ ತಾಲೂಕಿನ ಅನೇಕ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ತೀರಾ ಹದಗೆಟ್ಟು ಹೋಗಿವೆ. ಕಳೆದ ಬಾರಿಯ ಮಳೆಯಿಂದಾಗಿ ರಸ್ತೆಗಳು ಹಾಳಾಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

Koppal Horror: ಆನ್‌ಲೈನ್‌ ಗೇಮ್‌ ಆಡದಂತೆ ಬುದ್ಧಿಮಾತು; ಕೊಪ್ಪಳದಲ್ಲಿ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಬಾಲಕ!

ಕೊಪ್ಪಳದಲ್ಲಿ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಬಾಲಕ!

ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಬಾಲಕ ಮೊಬೈಲ್ ದಾಸನಾಗಿದ್ದ. ಆನ್‌ಲೈನ್ ಗೇಮ್ ಆಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕನ ತಾತ ನೀಡಿದ ದೂರಿನ ಮೇರೆಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vijayapur News: ವಿಜಯಪುರದ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ; ಮೂವರಿಗೆ ಗಾಯ

ವಿಜಯಪುರದ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ; ಮೂವರಿಗೆ ಗಾಯ

Vijayapur pan shop Blast: ಪಾನ್ ಶಾಪ್ ಒಳಗಿದ್ದ ಫ್ರಿಡ್ಜ್‌ಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ, ಈ ಸ್ಫೋಟವು ಅಂಗಡಿಯ ಒಳಗಿನ ತಾಂತ್ರಿಕ ದೋಷದಿಂದ ಆಗಿರದೆ, ಹೊರಗಡೆಯಿಂದಲೇ ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಇರಬಹುದೇ ಅಥವಾ ಬೇರೆನಾದರೂ ಸ್ಫೋಟಕ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಅಭಿವೃದ್ಧಿ ಯಾರಿಗಾಗಿ?

ಈ ಅಭಿವೃದ್ಧಿ ಯಾರಿಗಾಗಿ?

ಭಕ್ತರ ಸೌಲಭ್ಯ ಅಗತ್ಯವಿದ್ದರೂ, ಪ್ರಕೃತಿಯ ಸಮತೋಲನ ಕಾಪಾಡುವ ಜವಾಬ್ದಾರಿ ಅದಕ್ಕಿಂತಲೂ ಮುಖ್ಯವಾಗಬೇಕು. ಕುಕ್ಕೆ ಸುಬ್ರಮಣ್ಯ ಎಂಬುದು ಕೇವಲ ದೇವಾಲಯವಲ್ಲ - ಅದು ಪ್ರಕೃತಿ, ಭಕ್ತಿ ಮತ್ತು ಸಂಸ್ಕೃತಿಯ ಸಂಗಮ. ಅಲ್ಲಿನ ಕಾಡಿನ ನಿಶ್ಶಬ್ದ, ಕುಮಾರಧಾರೆ ನದಿಯ ತಣ್ಣನೆಯ ಹರಿವು, ಜನಜೀವನ ಇದೆ.

Mysuru News: ಮೈಸೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ

ಹುಣಸೂರು ಪುರಸಭೆ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪತಿಯ ಕುಟುಂಬಸ್ಥರ ವಿರುದ್ಧ ಗೃಹಿಣಿಯ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಈ ಸಂಬಂಧ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು; ಬಿ.ಎಸ್‌.ಯಡಿಯೂರಪ್ಪ ಸೇರಿ ಪ್ರಮುಖರಿಂದ ಶುಭ ಹಾರೈಕೆ

ರಾಜ್ಯಸಭೆ, ಎಂಎಲ್‌ಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು

Rajya Sabha, MLC elections: ರಾಜ್ಯಸಭಾ ಚುನಾವಣೆಗೆ ಆರ್‌ಎಸ್‌ಎಸ್ ಹಿನ್ನೆಲೆಯುಳ್ಳ ಹಿರಿಯ ಮುಖಂಡ ಪ್ರೊ. ಎಂ. ನಾಗರಾಜು ಅವರನ್ನು ಇಳಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಇನ್ನು ವಿಧಾನ ಪರಿಷತ್ ಚುನಾವಣೆಗೆ ರಘು ಕೌಟಿಲ್ಯ ಹಾಗೂ ಲಿಂಗರಾಜ ಪಾಟೀಲ ಅವರಿಗೆ ಟಿಕೆಟ್ ನೀಡಲಾಗಿದ್ದು, ಇಂದು ವಿಧಾನಸೌಧದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಹಗಲು ಬಿಡಿ ರಾತ್ರಿ 2 ಗಂಟೆಗೂ ರಸ್ತೆಯಲ್ಲಿ ವಾಹನಗಳ ಸಾಲು: ಮತ್ತೆ ಸದ್ದು ಮಾಡುತ್ತಿದೆ ಬೆಂಗಳೂರು ಟ್ರಾಫಿಕ್‌

ಬೆಂಗಳೂರಿನಲ್ಲಿ ತಡರಾತ್ರಿಯೂ ಟ್ರಾಫಿಕ್ ಜಾಮ್‌: ನೆಟ್ಟಿಗರು ಕಿಡಿ

Bengaluru Traffic: ಬೆಂಗಳೂರಿನಲ್ಲಿ ತಡರಾತ್ರಿ 2 ಗಂಟೆಯಲ್ಲೂ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮಧ್ಯರಾತ್ರಿ 2 ಗಂಟೆಯಾದರೂ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿವೆ. ತಡರಾತ್ರಿಯಲ್ಲೂ ವಾಹನ ದಟ್ಟಣೆ ಏಕೆ ಉಂಟಾಗುತ್ತಿದೆ ಎಂಬುದರ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

BJP Karnataka: ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ; ಎಚ್‌.ಡಿ.ದೇವೇಗೌಡರಿಗೆ ಇಲ್ಲ ಟಿಕೆಟ್‌!

ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

Rajya Sabha and MLC Election: ರಾಜ್ಯಸಭೆಯ 4 ಮತ್ತು ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಅಪರಾಧಗಳಿಗೆ ಕಡಿವಾಣ ಹಾಕಲು ಹೊಸ ಹೆಜ್ಜೆ: ರಾಜ್ಯಾದ್ಯಂತ ಆ್ಯಂಟಿ-ರೌಡಿ ಸ್ಕ್ವಾಡ್‌ಗಳ ರಚನೆ

ರಾಜ್ಯಾದ್ಯಂತ ಆ್ಯಂಟಿ-ರೌಡಿ ಸ್ಕ್ವಾಡ್‌ಗಳ ರಚನೆ

Anti-Rowdy Squad: ರಾಜ್ಯಾದ್ಯಂತ ತಕ್ಷಣದಿಂದಲೇ ವಿಶೇಷ ಆ್ಯಂಟಿ-ರೌಡಿ ಸ್ಕ್ವಾಡ್‌ಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ. ಜೂನ್ 4ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಚರ್ಚೆಗಳ ನಂತರ ಈ ಆದೇಶ ಹೊರಡಿಸಲಾಗಿದೆ.

Gold Price Today On 8th June 2026: ಆಭರಣ ಗ್ರಾಹಕರಿಗೆ ಗುಡ್‌ನ್ಯೂಸ್‌; ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಭಾರಿ ಇಳಿಕೆ

ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಭಾರಿ ಇಳಿಕೆ

Gold Silver Price Today: ಸೋಮವಾರ ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 95 ರುಪಾಯಿ ಕಡಿಮೆಯಾಗಿದ್ದು, 13,905ಕ್ಕೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 104 ರುಪಾಯಿ ಅಗ್ಗವಾಗಿದ್ದು, 15,169 ರುಪಾಯಿ ಇದೆ.

Loading...