ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

YouTuber Amuku Dumuku: ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ; ಅಮುಕು ಡುಮುಕು ಮಂಜು ವಿರುದ್ಧ ಎಫ್‌ಐಆರ್‌

ಮಹಿಳೆ ಜತೆ ಅನುಚಿತ ವರ್ತನೆ; ಅಮುಕು ಡುಮುಕು ವಿರುದ್ಧ ಎಫ್‌ಐಆರ್‌

ಬೆಂಗಳೂರಿನ ರೆಸ್ಟೋ ಬಾರ್‌ನಲ್ಲಿಊಟ ಮತ್ತು ಮದ್ಯ ಸೇವನೆ ಮಾಡಿದ ಬಳಿಕ ಬಿಲ್ ಕೇಳಿದ ಮಹಿಳಾ ಸಿಬ್ಬಂದಿ ಜೊತೆಗೆ ಮಂಜು ಅಲಿಯಾಸ್ ಅಮುಕು ಡುಮುಕು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Gauribidanur News: ಕುಡುಮಲಕುಂಟೆಯಲ್ಲಿ ಔಷಧಿ ಕಾರ್ಖಾನೆಯಿಂದ ರಾಸಾಯನಿಕ ತ್ಯಾಜ್ಯ ವಿಲೇವಾರಿ ಆರೋಪ: ಆರೋಗ್ಯ, ಪರಿಸರಕ್ಕೆ ಅಪಾಯದ ಆತಂಕ

ಔಷಧಿ ಕಾರ್ಖಾನೆಯಿಂದ ರಾಸಾಯನಿಕ ತ್ಯಾಜ್ಯ ವಿಲೇವಾರಿ ಆರೋಪ

ಕಾರ್ಖಾನೆಯ ಹಿಂಭಾಗದಲ್ಲಿ ರಾಸಾಯನಿಕ ತ್ಯಾಜ್ಯ ನಿರಂತರವಾಗಿ ಹರಿಯುತ್ತಿರುವ ಪರಿಣಾಮ ಎಕರೆಗಟ್ಟಲೆ ಭೂಮಿ ಹಾನಿಗೊಳಗಾಗಿದ್ದು, ಮಣ್ಣಿನ ಫಲವತ್ತತೆ ಕುಂಠಿತವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ರಾಸಾಯನಿಕ ಹರಡಿರುವ ಪ್ರದೇಶದ ಸುತ್ತಮುತ್ತಲಿನ ಸಸ್ಯಗಳು ಒಣಗಿದ್ದು, ಭೂಮಿಯಲ್ಲಿ ಹುಲ್ಲು ಸಹ ಬೆಳೆಯದ ಸ್ಥಿತಿ ನಿರ್ಮಾಣವಾಗಿದೆ

MLA K H PuttaswamyGowda: ಎಲ್ಲಾ ಸಮುದಾಯಕ್ಕೂ ಸಮಾನ ಅವಕಾಶ, ನ್ಯಾಯ ಒದಗಿಸುವುದು ನನ್ನ ಕರ್ತವ್ಯ: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

ಎಲ್ಲಾ ಸಮುದಾಯಕ್ಕೂ ಸಮಾನ ಅವಕಾಶ, ನ್ಯಾಯ ಒದಗಿಸುವುದು ನನ್ನ ಕರ್ತವ್ಯ

ಈ ಭಾಗದ ಮುಸ್ಲಿಂ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಶಾದಿ ಮಹಲ್ ನಿರ್ಮಾಣಕ್ಕೆ ಇಂದು ಅಡಿಪಾಯ ಹಾಕಲಾಗುತ್ತಿದೆ. ಇದು ಸಮಾಜದ ಅಭಿವೃದ್ಧಿಗೆ ಪೂರಕವಾದ ಪುಣ್ಯದ ಕಾರ್ಯ ವಾಗಿದ್ದು, ಸಮುದಾಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಸುಸಜ್ಜಿತ ಶಾದಿ ಮಹಲ್ ಅಗತ್ಯವಾಗಿತ್ತು

Chinthamani News: ಕೃಷಿ ಇಲಾಖೆ ನೇಮಕಾತಿ ನಿಯಮ ಉಲ್ಲಂಘನೆ ಆರೋಪ: ಕೃಷಿ ಪದವೀಧರರಿಂದ ಬೃಹತ್ ಪ್ರತಿಭಟನೆ!

ಕೃಷಿ ಪದವೀಧರರಿಂದ ಬೃಹತ್ ಪ್ರತಿಭಟನೆ!"

2024 ಹಾಗೂ 2026ರ ಕೆಪಿಎಸ್‌ಸಿ ಮತ್ತು ಕೆಇಎ ಅಧಿಸೂಚನೆಗಳಲ್ಲೂ ಯಾವುದೇ ಖಾಸಗಿ ಅಥವಾ ತಾಂತ್ರಿಕ ಪದವೀಧರರಿಗೆ ಅವಕಾಶವಿರಲಿಲ್ಲ.ಆದರೆ ಇತ್ತೀಚೆಗೆ ಹೊರಡಿಸಲಾದ ಜೂನ್ 2026ರ ಹೆಚ್ಚು ವರಿ ಸುತ್ತೋಲೆಗಳ ಮೂಲಕ ರೈಟೆಕ್ ಖಾಸಗಿ ವಿಶ್ವವಿದ್ಯಾಲಯದ ಕೃಷಿ ಪದವೀಧರರಿಗೆ ಹಾಗೂ ಬಿ.ಇ(ಬಯೋಟೆಕ್ನಾಲಜಿ) ಪದವೀಧರರಿಗೆ ನಿಯಮಬಾಹಿರವಾಗಿ ಅರ್ಹತೆ ವಿಸ್ತರಿಸಲಾಗಿದೆ

Jyotiba Phule-2026 Award: ಶಿಕ್ಷಕಿ ಗೀತಾ ಲೋಕೇಶ್ ಅವರಿಗೆ ಜ್ಯೋತಿಬಾ ಫುಲೆ-2026 ಪ್ರಶಸ್ತಿ

ಶಿಕ್ಷಕಿ ಗೀತಾ ಲೋಕೇಶ್ ಅವರಿಗೆ ಜ್ಯೋತಿಬಾ ಫುಲೆ-2026 ಪ್ರಶಸ್ತಿ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಪಲಮನೇರು ಲಯನ್ಸ್ ಕ್ಲಬ್ ವತಿಯಿಂದ ಮಹಾತ್ಮ ಜ್ಯೋತಿಬಾ ಫುಲೆ -2026 ಅವಾರ್ಡ್ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕ ಮತ್ತು ಕೇರಳದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 60 ಜನ ಸಾಧಕರನ್ನು ಆಯ್ಕೆ ಮಾಡಿ ಸನ್ಮಾನಿಸಲಾಯಿತು.

Bantwal Murder: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ಯುವಕ! Video

ಯುವತಿಯನ್ನು ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ಯುವಕ!

ಯುವತಿ ನಿರಾಕರಿಸಿದರೂ ಪ್ರೀತಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ. ಇಂದು ಬಂಟ್ವಾಳದ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಹಿಂಬಾಲಿಸಿದ ಆರೋಪಿ, ಬಸ್ಸಿನಿಂದ ಇಳಿಸಿ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಕತಾರ್‌ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿ ಬೆಂಬಲ: ಹರೀಶ್ ಪಾಂಡೆ

ಕತಾರ್‌ ಶಾಲೆಗಳಲ್ಲಿ ಕನ್ನಡಭಾಷೆ ಅನುಷ್ಠಾನಕ್ಕೆ ಬೆಂಬಲ: ಹರೀಶ್ ಪಾಂಡೆ

ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಪಠ್ಯಕ್ರಮದ ಭಾಗವಾಗಿ ಅನುಷ್ಠಾನಗೊಳಿಸಲು ಭಾರತೀಯ ರಾಯಭಾರ ಕಚೇರಿಯಿಂದ ಅಗತ್ಯವಿರುವ ಎಲ್ಲಾ ರೀತಿಯ ಆಡಳಿತಾತ್ಮಕ ಮತ್ತು ಸಾಂಸ್ಥಿಕ ಬೆಂಬಲವನ್ನು ನೀಡುವುದಾಗಿ ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ (ಶಿಕ್ಷಣ ಮತ್ತು ಸಾಂಸ್ಕೃತಿಕ) ಹರೀಶ್ ಪಾಂಡೆ ತಿಳಿಸಿದ್ದಾರೆ.

Shidlaghatta News: ಹೊಸ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ, ತಾಂತ್ರಿಕ ಸಮಸ್ಯೆಗಳಿದ್ದರೆ ಮಾತ್ರ ಕಚೇರಿಗೆ ಭೇಟಿ ನೀಡಿ: ಸಿಡಿಪಿಒ ವಿದ್ಯಾ ವಸ್ತ್ರದ್

ಹೊಸ ಅರ್ಜಿ ಅಗತ್ಯವಿಲ್ಲ; ತಾಂತ್ರಿಕ ಸಮಸ್ಯೆಗಳಿದ್ದರೆ ಕಚೇರಿಗೆ ಭೇಟಿ ನೀಡಿ

ಯೋಜನೆಯ ಹಣ ಖಾತೆಗೆ ಜಮೆಯಾಗದಿರುವುದು, ಬ್ಯಾಂಕ್ ಖಾತೆ-ಆಧಾರ್ ಜೋಡಣೆ, ಇ-ಕೆವೈಸಿ ಅಥವಾ ಇತರೆ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಮಾತ್ರ ಸಂಬಂಧಿತ ದಾಖಲೆಗಳೊಂದಿಗೆ ಸಿಡಿಪಿಒ ಕಚೇರಿಗೆ ಭೇಟಿ ನೀಡಬೇಕು. ಅಂತಹ ಪ್ರಕರಣಗಳನ್ನು ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ

MP Dr K Sudhakar: 'ಪಕ್ಷ ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದರೂ ಅವರನ್ನೇ ನನ್ನ ಪ್ರತಿನಿಧಿ ಎಂದು ಭಾವಿಸಿ ಗೆಲ್ಲಿಸಿ'; ಕಾರ್ಯಕರ್ತರಿಗೆ ಕರೆ

2028ರ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ

'ಪಕ್ಷ ನನ್ನನ್ನು ಸಂಸದನಾಗಿಯೇ ಮುಂದುವರಿಸಿದರೆ ಹಾಗೆಯೇ ಇರುತ್ತೇನೆ. ವಿಧಾನಸಭೆಗೆ ಪಕ್ಷದ ಹೈಕಮಾಂಡ್ ಹಾಗೂ ಸ್ಥಳೀಯ ಮುಖಂಡರು ಚರ್ಚಿಸಿ ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದರೂ ಅವರನ್ನೇ ನನ್ನ ಪ್ರತಿನಿಧಿ ಎಂದು ಭಾವಿಸಿ ಗೆಲ್ಲಿಸಬೇಕು. ಅವರು ಗೆದ್ದರೆ ನಾನೇ ಗೆದ್ದಂತೆ. ಕ್ಷೇತ್ರದ ಅಭಿವೃದ್ಧಿ ಇದೇ ರೀತಿ ಮುಂದುವರಿಯಲಿದೆ' ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು

ರೈತರ ಬೆಳೆ ವಿಮೆ ನೋಂದಣಿ ಅವಧಿ 15 ದಿನ ವಿಸ್ತರಣೆ: ಜೋಶಿ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರು

ರೈತರ ಬೆಳೆ ವಿಮೆ ನೋಂದಣಿ ಅವಧಿ 15 ದಿನ ವಿಸ್ತರಣೆ

Pralhad Joshi: ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿಯನ್ನು 15 ದಿನಗಳ ಕಾಲ ವಿಸ್ತರಿಸಿ ನೆರವಾಗಿದೆ.

ʼಒಂದು ರಾಷ್ಟ್ರ, ಒಂದು ಸಮಯ'ಕ್ಕೆ ಇಸ್ರೋ ಸಹಯೋಗ ಅನನ್ಯ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ

ʼಒಂದು ರಾಷ್ಟ್ರ, ಒಂದು ಸಮಯ'ಕ್ಕೆ ಇಸ್ರೋ ಸಹಯೋಗ ಅನನ್ಯ: ಜೋಶಿ

Pralhad Joshi: ಹೆಮ್ಮೆಯ ಇಸ್ರೋ ಸಂಸ್ಥೆ ಭಾರತದ ವೈಜ್ಞಾನಿಕ ಶ್ರೇಷ್ಠತೆ ಮತ್ತು ನಾವೀನ್ಯತೆಯ ಸಂಕೇತವಾಗಿದೆ. ಇದೀಗ ನಿಖರ, ಸುರಕ್ಷಿತ, ಸ್ಥಿತಿಸ್ಥಾಪಕ ಮತ್ತು ಸ್ಥಳೀಯ ಸಮಯ ಪ್ರಸರಣ ವ್ಯವಸ್ಥೆ ನಿರ್ಮಾಣದತ್ತ ಮಹತ್ವದ ಹೆಜ್ಜೆಯಿರಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

Bengaluru Lift Tragedy: ಬೆಂಗಳೂರಿನಲ್ಲಿ ಘೋರ ಘಟನೆ; ಲಿಫ್ಟ್‌ ಡೋರ್‌ನಲ್ಲಿ ತಲೆ ಸಿಲುಕಿ ಯುವಕ ಸಾವು

ಬೆಂಗಳೂರಿನಲ್ಲಿ ಘೋರ ಘಟನೆ; ಲಿಫ್ಟ್‌ ಡೋರ್‌ನಲ್ಲಿ ತಲೆ ಸಿಲುಕಿ ಯುವಕ ಸಾವು

ಬೆಂಗಳೂರಿನ ಜಯನಗರದ ದಕ್ಷಿಣ ಉಪಹಾರ ಹೋಟೆಲ್‌ನಲ್ಲಿ ಸೋಮವಾರ ದುರ್ಘಟನೆ ನಡೆದಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ತನಿಖೆ ಆರಂಭಿಸಿದ್ದಾರೆ. ಈ ದುರ್ಘಟನೆಯು ಲಿಫ್ಟ್ ಸುರಕ್ಷತೆ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ.

ಯಾರೂ ಜೈಲಿಗೆ ಕಳಿಸಲು ನೋಡುತ್ತಿಲ್ಲ, ಅನುಕಂಪ ಗಿಟ್ಟಿಸಿಕೊಳ್ಳೋ ಯತ್ನ: ಸಿಎಂ ಡಿಕೆಶಿ ಹೇಳಿಕೆಗೆ ಜೋಶಿ ತಿರುಗೇಟು

ಡಿ.ಕೆ. ಶಿವಕುಮಾರ್‌ಗೆ ಏಕೆ ಜೈಲಿಗೆ ಹೋಗುವ ಭಯ?: ಜೋಶಿ

Pralhad Joshi: ಯಾರೇ ಆಗಲಿ ಅಪರಾಧ ಮಾಡಿದವರು ಮಾತ್ರ ಜೈಲಿಗೆ ಹೋಗುತ್ತಾರೆ. ಹಾಗಾದರೆ ಸಿಎಂ ಡಿ.ಕೆ. ಶಿವಕುಮಾರ್‌ ಏನು ತಪ್ಪು ಮಾಡಿದ್ದಾರಾ? ಭ್ರಷ್ಟಾಚಾರ ಎಸಗಿದ್ದಾರಾ? ವಿನಾಕಾರಣ ಅವರಿಗೇಕೆ ಜೈಲಿಗೆ ಹೋಗುವ ಭಯ? ಈಗೇಕೆ ಆ ಮಾತನಾಡುತ್ತಿದ್ದೀರಿ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

Bengaluru Murder: ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಕೊಂದು ಪತಿಯೂ ಆತ್ಮಹತ್ಯೆ!

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಕೊಂದ ಪತಿ!

ಬೆಂಗಳೂರು ನಗರದ ಸಿಕೆ ಅಚ್ಚುಕಟ್ಟು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಗರ್ಭಿಣಿ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

MK Pranesh: ಉಪಸಭಾಪತಿ ಎಂ.ಕೆ. ಪ್ರಾಣೇಶ್ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿದ ಸುಪ್ರೀಂ‌ ಕೋರ್ಟ್

ಎಂ.ಕೆ. ಪ್ರಾಣೇಶ್ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿದ ಸುಪ್ರೀಂ‌ ಕೋರ್ಟ್

ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಎಂ.ಕೆ. ಪ್ರಾಣೇಶ್ ಅವರ ಆಯ್ಕೆಯನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕು ಕುರಿತ ಕಾನೂನು ಹೋರಾಟದಲ್ಲಿ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರಿಗೆ ಅಂತಿಮ ಜಯ ದೊರೆತಿದೆ.

Bengaluru Murder: ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಗೆ ತಮ್ಮನಿಂದ ಚಾಕು ಇರಿತ; ಚಿಕಿತ್ಸೆ ಫಲಿಸದೆ ಲಾ ವಿದ್ಯಾರ್ಥಿನಿ ಸಾವು

ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆಗೈದ ತಮ್ಮ!

​ಬೆಂಗಳೂರಿನ ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಾ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಪ್ರೀತಿಸುತ್ತಿದ್ದ. ಆದರೆ, ಆಕೆ ದೂರವಾದ ಹಿನ್ನೆಲೆಯಲ್ಲಿ ಯುವತಿಗೆ ತಮ್ಮ ಚಾಕುವಿನಿಂದ ಇರಿದಿದ್ದಾನೆ. ಯುವತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

Forest Watcher Recruitment: ಅರಣ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ; 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

750 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 'ಅರಣ್ಯ ವೀಕ್ಷಕ' ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆದಿದೆ. ಇಲಾಖೆಯು ನೇರ ನೇಮಕಾತಿಗೆ ಕರಡು ಅಧಿಸೂಚನೆಯನ್ನು ಸಿದ್ಧಪಡಿಸಿದ್ದು, ಆರ್ಥಿಕ ಇಲಾಖೆಯ ಸಹಮತಿಯೂ ದೊರೆತಿದೆ. ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

Gudibande News: ಬಿಜೆಪಿ ಮುಖಂಡ ಸಿ.ಮುನಿರಾಜು ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ

ಬಿಜೆಪಿ ಮುಖಂಡರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ

ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಸಿ. ಮುನಿರಾಜು ರವರ 48ನೇ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ತಾಲೂಕು ಘಟಕ ಹಾಗೂ ಮಹಿಳಾ ಮೋರ್ಚಾ ಘಟಕದ ವತಿಯಿಂದ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಅನ್ನ ಸಂತರ್ಪಣೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

Gold Price Today On 16th July 2026: ಮತ್ತೆ ಇಳಿದ ಚಿನ್ನದ ಬೆಲೆ; ಬೆಂಗಳೂರಿನ ಇಂದಿನ ದರ ಚೆಕ್‌ ಮಾಡಿ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

Gold Silver Price Today: ಬುಧವಾರ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆಯ ಹಾದಿಯಲ್ಲಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 25 ರುಪಾಯಿ ಕಡಿಮೆಯಾಗಿ 13,135 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 28 ರುಪಾಯಿ ಅಗ್ಗವಾಗಿ, 14,329 ರುಪಾಯಿಗೆ ಬಂದಿದೆ.

ಶಾಸಕರ ಬಗ್ಗೆ ಅಪಪ್ರಚಾರ ಹಾಗೂ ತೇಜೋವಧೆ ಮಾಡುವುದು ಸರಿಯಲ್ಲ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ

ಶಾಸಕರ ಬಗ್ಗೆ ಅಪಪ್ರಚಾರ ಹಾಗೂ ತೇಜೋವಧೆ ಮಾಡುವುದು ಸರಿಯಲ್ಲ

ಈ ಭೂಮಿ ಈ ಹಿಂದೆ ಶ್ಯಾನುಭೋಗರು ಹಾಗೂ ಪಟೇಲರ ಹೆಸರಲ್ಲಿತ್ತು. ಈ ಭಾಗದಲ್ಲಿ ಕೆಲ ಪರಿಶಿಷ್ಟರು ಉಳುಮೆ ಮಾಡುತ್ತಿದ್ದರು. ಅದನ್ನು ಬೇರೆಯವರು ಖರೀದಿಸಿದ್ದಾರೆ. ಆದರೆ ಅದನ್ನು ಶಾಸಕ ಸುಬ್ಬಾ ರೆಡ್ಡಿಯವರೇ ಖರೀದಿ ಮಾಡಿದಂತೆ, ಅಲ್ಲಿನ ಸರ್ಕಾರಿ ಜಮೀನು ಒತ್ತುವರಿ ಮಾಡಿ ಕೊಂಡಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಇಂತಹ ಆಧಾರ ರಹಿತ ಆರೋಪಗಳನ್ನು ಕೂಡಲೇ ನಿಲ್ಲಿಸಬೇಕು

ಏಟ್ರಿಯಾ ರಿನ್ಯೂಎಬಲ್ ಮೈಸೂರಿಗೆ ವಿಸ್ತರಣೆ; ಕರ್ನಾಟಕದಲ್ಲಿ ರೂಫ್‌ಟಾಪ್ ಸೌರಶಕ್ತಿ ಸೇವೆ ಮತ್ತಷ್ಟು ಬಲ

ಕರ್ನಾಟಕದಲ್ಲಿ ರೂಫ್‌ಟಾಪ್ ಸೌರಶಕ್ತಿ ಸೇವೆ ಮತ್ತಷ್ಟು ಬಲ

ವಸತಿ ಹಾಗೂ ವಾಣಿಜ್ಯ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ತೊಂದರೆಯಿಲ್ಲದ ರೂಫ್‌ ಟಾಪ್ ಸೌರಶಕ್ತಿ ಪರಿಹಾರಗಳನ್ನು ಒದಗಿಸುತ್ತಿರುವ ಏಟ್ರಿಯಾ ರಿನ್ಯೂಎಬಲ್, ಹೆಚ್ಚಿನ ಸೌರ ವ್ಯವಸ್ಥೆಗಳ ಅಳವಡಿಕೆಯನ್ನು ಕೇವಲ 5 ರಿಂದ 6 ಗಂಟೆಗಳೊಳಗೆ ಪೂರ್ಣಗೊಳಿಸುತ್ತದೆ. ಪ್ರತಿಯೊಂದು ಸೌರಶಕ್ತಿ ವ್ಯವಸ್ಥೆಗೆ 30 ವರ್ಷಗಳ ವಾರಂಟಿ ಹಾಗೂ 5 ವರ್ಷಗಳ ಉಚಿತ ನಿರ್ವಹಣಾ ಸೇವೆ ಒದಗಿಸಲಾಗುತ್ತಿದ್ದು, ಗ್ರಾಹಕರು ವಿಶ್ವಾಸದಿಂದ ಸೌರಶಕ್ತಿಯನ್ನು ಅಳವಡಿಸಿಕೊಳ್ಳಲು ಇದು ನೆರವಾಗಲಿದೆ.

Gauribidanur News: ಛಾಯಾಗ್ರಾಹಕರು ತಂತ್ರಜ್ಞಾನ ಅಳವಡಿಸಿಕೊಳ್ಳುವ ಜತೆಗೆ ಸಂಘಟನೆಯ ಬಲ ಹೆಚ್ಚಿಸಬೇಕು: ಎನ್.ಎ. ರಾಮಚಂದ್ರ

ಛಾಯಾಗ್ರಾಹಕರು ತಂತ್ರಜ್ಞಾನ ಜತೆಗೆ ಸಂಘಟನೆಯ ಬಲ ಹೆಚ್ಚಿಸಬೇಕು

ಸಂಘಟನೆಯ ಮೂಲಕ ಸರ್ಕಾರದ ವಿವಿಧ ಸೌಲಭ್ಯಗಳು, ತರಬೇತಿ ಕಾರ್ಯಕ್ರಮಗಳು ಹಾಗೂ ವೃತ್ತಿ ಅಭಿವೃದ್ಧಿಗೆ ಅಗತ್ಯವಾದ ಅವಕಾಶಗಳನ್ನು ಪರಿಣಾಮಕಾರಿಯಾಗಿ ಪಡೆಯಬಹುದು. ಛಾಯಾ ಗ್ರಾಹಕರ ಸಮಸ್ಯೆಗಳ ಪರಿಹಾರ, ಕಲ್ಯಾಣ ಮತ್ತು ವೃತ್ತಿ ಅಭಿವೃದ್ಧಿಗಾಗಿ ಸಂಘಟನೆ ನಿರಂತರವಾಗಿ ಶ್ರಮಿಸುತ್ತಿದ್ದು, ಎಲ್ಲ ಛಾಯಾಗ್ರಾಹಕರೂ ಸದಸ್ಯತ್ವ ಪಡೆದು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು

Gauribidanur News: ಜು.18ರೊಳಗೆ ಹಂದಿಗಳನ್ನು ನಗರದಿಂದ ಸ್ಥಳಾಂತರಿಸಿ: ಸಾಕಾಣೆದಾರರಿಗೆ ನಗರಸಭೆ ಕಟ್ಟುನಿಟ್ಟಿನ ಸೂಚನೆ

ಜು.18ರೊಳಗೆ ಹಂದಿಗಳನ್ನು ನಗರದಿಂದ ಸ್ಥಳಾಂತರಿಸಿ

ಹಂದಿಗಳನ್ನು ನಗರದಿಂದ ಕನಿಷ್ಠ ಒಂದು ಕಿಲೋಮೀಟರ್ ದೂರಕ್ಕೆ ಸ್ಥಳಾಂತರಿಸಿ, ಅವುಗಳನ್ನು ಮುಕ್ತವಾಗಿ ಬಿಡದೆ ಸೂಕ್ತ ಗೂಡುಗಳಲ್ಲಿ ಸಾಕಬೇಕು. ನಗರ ವ್ಯಾಪ್ತಿಯಲ್ಲಿ ಹಂದಿಗಳು ಸಂಚರಿಸು ತ್ತಿರುವುದು ಕಂಡುಬಂದರೆ ಕಾನೂನಿನ ಪ್ರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

100ಕ್ಕೂ ಹೆಚ್ಚು ದೇಶಗಳಿಗೆ 'ಬಿಎಲ್‌ಎಸ್ ಇಂಟರ್‌ನ್ಯಾಷನಲ್' ಸೇವೆ ವಿಸ್ತರಣೆ, ₹2,998 ಕೋಟಿ ಆದಾಯದೊಂದಿಗೆ ಹೊಸ ಮೈಲಿಗಲ್ಲು

100ಕ್ಕೂ ಹೆಚ್ಚು ದೇಶಗಳಿಗೆ 'ಬಿಎಲ್‌ಎಸ್ ಇಂಟರ್‌ನ್ಯಾಷನಲ್' ಸೇವೆ ವಿಸ್ತರಣೆ

ಕಳೆದ ಎರಡು ದಶಕಗಳಿಂದ ಈ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯು 100 ದೇಶಗಳ ಗಡಿ ದಾಟಿರುವುದು ಮಹತ್ವದ ಮೈಲಿಗಲ್ಲಾಗಿದೆ. ಹೊಸ ಮಾರುಕಟ್ಟೆಗಳ ಪ್ರವೇಶ, ವಿವಿಧ ಸರ್ಕಾರ ಗಳೊಂದಿಗಿನ ದೃಢವಾದ ಪಾಲುದಾರಿಕೆ, ಕಾರ್ಯತಂತ್ರದ ಸ್ವಾಧೀನಗಳು ಹಾಗೂ ತಂತ್ರಜ್ಞಾನ ಆಧಾರಿತ ನಾವೀನ್ಯತೆಯೇ ಈ ಬೃಹತ್ ಬೆಳವಣಿಗೆಗೆ ಕಾರಣವಾಗಿದೆ.

Loading...