ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

DK Shivakumar: ಖಾಸಗಿ, ಸರ್ಕಾರಿ ಕಟ್ಟಡಗಳಲ್ಲಿ ತಿಂಗಳಿಡೀ ಕನ್ನಡ ಧ್ವಜ ಹಾರಾಟ ಕಡ್ಡಾಯ ; ಡಿಕೆ ಶಿವಕುಮಾರ್‌

ಖಾಸಗಿ, ಸರ್ಕಾರಿ ಕಟ್ಟಡಗಳಲ್ಲಿ ತಿಂಗಳಿಡೀ ಕನ್ನಡ ಧ್ವಜ ಹಾರಾಟ ಕಡ್ಡಾಯ

ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಸಾರುವ ಸಲುವಾಗಿ ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್‌ ತಿಂಗಳಿಡೀ ಕನ್ನಡ ಬಾವುಟ ಹಾರಿಸುವ ಕುರಿತು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಎಲ್ಲಾ ಕನ್ನಡಿಗರನ್ನು ಒಗ್ಗೂಡಿಸಬೇಕು. ಕನ್ನಡಿಗರ ತ್ಯಾಗ, ಬಲಿದಾನ, ಶ್ರಮವನ್ನು ನಾವುಗಳು ಮರೆಯಬಾರದು. ಅನೇಕ ಹಿರಿಯರು ಈ ಭಾಷೆ, ನೆಲ,‌ ಜಲ, ಬಾವುಟದ ಗೌರವವನ್ನು ಕಾಪಾಡಿದ್ದಾರೆ. ದೇಶದ ಯಾವ ರಾಜ್ಯವೂ ಧ್ವಜ, ನಾಡಗೀತೆ ಹೊಂದಿಲ್ಲ. ಆದರೆ ನಾವು ಇವೆರಡನ್ನೂ ಹೊಂದಿದ್ದೇವೆ ಎಂದು ಅವರು ಹೇಳಿದರು.

Mehandi Awareness 2025: ಹೆಚ್ಚಾದ ಬೀದಿ ಬದಿ ಮದರಂಗಿ ಹಾಕುವ ಕಲಾಕಾರರು

ಹೆಚ್ಚಾದ ಬೀದಿ ಬದಿ ಮದರಂಗಿ ಹಾಕುವ ಕಲಾಕಾರರು

Mehandi Awareness: ಇತ್ತೀಚೆಗೆ ಉದ್ಯಾನನಗರಿ ಮಾತ್ರವಲ್ಲ, ರಾಜ್ಯದ ನಾನಾ ಕಡೆಯ ಪ್ರಮುಖ ಬೀದಿ ಬದಿಗಳಲ್ಲಿಯೂ ಕೈಗಳಿಗೆ ಮದರಂಗಿ ಚಿತ್ತಾರ ಮೂಡಿಸುವ ಉತ್ತರ ಭಾರತದ ಕಲಾಕಾರರ ಸಂಖ್ಯೆ ಮೊದಲಿಗಿಂತ ಹೆಚ್ಚಾಗಿದೆ. ದೂರದ ಉತ್ತರ ಭಾರತದಿಂದ ಬಂದಂತಹ ಇಂತಹ ಸಾಕಷ್ಟು ಮಂದಿ ಮೆಹೆಂದಿ ಕಲಾಕಾರರು ಇದೀಗ ಬೆಂಗಳೂರಿನಲ್ಲಿ ಮಾತ್ರವಲ್ಲ, ರಾಜ್ಯದ ನಾನಾ ಕಡೆಗಳಲ್ಲಿ ಸ್ಟ್ರೀಟ್ ಶಾಪಿಂಗ್ ಪ್ರಿಯ ಮಹಿಳೆಯರನ್ನು ಸೆಳೆಯತೊಡಗಿದ್ದಾರೆ. ಈ ಕುರಿತಂತೆ ಇಲ್ಲಿದೆ ವರದಿ.

Road Accident: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಗುದ್ದಿದ ಆ್ಯಂಬುಲೆನ್ಸ್‌; ದಂಪತಿ ಸ್ಥಳದಲ್ಲಿಯೇ ಸಾವು

ರಸ್ತೆ ಅಪಘಾತ; ದಂಪತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆ್ಯಂಬುಲೆನ್ಸ್‌ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ರೆಡ್‌ ಸಿಗ್ನಲ್‌ ಇದ್ದರಿಂದ ಬೈಕ್‌ ಸವಾರ ಬೈಕ್‌ ನಿಲ್ಲಿಸಿದ್ದ. ರಿಚ್ಮಂಡ್ ಸರ್ಕಲ್ ಕಡೆಯಿಂದ ವೇಗವಾಗಿ ಬಂದ ಆ್ಯಂಬುಲೆನ್ಸ್‌ ನಿಯಂತ್ರಣ ತಪ್ಪಿ ಬೈಕ್‌ ಸವಾರನಿಗೆ ಗುದ್ದಿದೆ.

Karnataka Weather: ಇಂದಿನ ಹವಾಮಾನ; ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಣ ಹವೆ ಸಾಧ್ಯತೆ

ಇಂದಿನ ಹವಾಮಾನ; ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಣ ಹವೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಬಹುತೇಕ ಶುಭ್ರ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 19°C ಇರುವ ಸಾಧ್ಯತೆ ಇದೆ. ಇಂದು (ನ.2) ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

70th Kannada Rajyotsava: ಅದ್ದೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ

ಅದ್ದೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ

ಜನನಿ ಹಾಗೂ ಜನ್ಮಭೂಮಿ ಸ್ವರ್ಗಕ್ಕಿಂತ ದೊಡ್ಡದು ಎಂಬಂತೆ ನಮ್ಮ ಮಾತೃಭಾಷೆ ಕನ್ನಡ ಅಭಿಮಾನ ಬೆಳೆಸಿಕೊಳ್ಳಬೇಕು. 1956 ರಂದು ಭಾಷಾವಾರು ವಿಂಗಡಿಸಿ ಮೈಸೂರು ರಾಜ್ಯ ಕನ್ನಡನಾಡು ಆಗಿತ್ತು. 1973 ರಲ್ಲಿ ಕರ್ನಾಟಕ ಹೆಸರು ಅಧಿಕೃತ ನಾಮಕರಣ ಮಾಡಲಾಯಿತು. ಎರಡು ಸಾವಿರ ವರ್ಷಗಳ ಇತಿಹಾಸ ಕನ್ನಡ ಭಾಷೆಗಿದೆ.

Gubbi News: ಹಳ್ಳಿಕಾರ್ ತಳಿ ರಾಸುಗಳ ಪಾಲಕ ಸಿ.ಜಿ.ಕೃಷ್ಣಮೂರ್ತಿ ನಿಧನ

ಹಳ್ಳಿಕಾರ್ ತಳಿ ರಾಸುಗಳ ಪಾಲಕ ಸಿ.ಜಿ.ಕೃಷ್ಣಮೂರ್ತಿ ನಿಧನ

ಸಿ.ಎಸ್.ಪುರ ಗ್ರಾಮದ ವಿಪ್ರ ಸಮಾಜದ ಮುಖಂಡರಾದ ಮೃತರು ಉತ್ತಮ ಕೃಷಿಕರಾಗಿ ಹೈನುಗಾರಿಕೆ ಯಲ್ಲಿ ವಿಶೇಷ ಹೆಗ್ಗಳಿಕೆ ಪಡೆದಿದ್ದರು. ಹಳ್ಳಿಕಾರ್ ತಳಿಯ ರಾಸುಗಳನ್ನು ವಿಶೇಷ ಕಾಳಜಿಯಲ್ಲಿ ಸಾಕು ಸಲಹಿದ್ದರು. ಹೋಬಳಿಯ ಹಲವು ರೈತರಿಗೆ ರಾಸುಗಳ ಆರೈಕೆ ಬಗ್ಗೆ ತಿಳಿವಳಿಕೆ ನೀಡುತ್ತಿದ್ದರು.

Bagepally News: ವಯೋ ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಪುಸ್ತಕ ಬಿಡುಗಡೆ

ವಯೋ ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಪುಸ್ತಕ ಬಿಡುಗಡೆ

ರಾಮಚಂದ್ರಪ್ಪ ಒಬ್ಬ ಶಿಸ್ತಿನ ಸಿಪಾಯಿ ಇದ್ದಂತೆ. ನೇರ ನುಡಿ, ಮಿತ ಭಾಷೆ, ಸರಳ ವ್ಯಕ್ತಿತ್ವ, ಸದಾ ವೈಜ್ಞಾನಿಕ ಚಿಂತನೆ ಹಾಗೂ ಸಮಾಜವಾದಿ ಚಿಂತನೆಗಳಿಂದ ತಮ್ಮ ವ್ಯಕ್ತಿತ್ವ ರೂಪಿಸಿಕೊಂಡವರು. ಡಾ| ಹೆಚ್. ನರಸಿಂಹಯ್ಯ, ಕಾಂ॥ ಜಿ.ವಿ. ಶ್ರೀ ರಾಮರೆಡ್ಡಿ ಹಾಗೂ ಅವರ ಒಡನಾಡಿ ಹಾಗೂ ರವರ ಆಲೋಚನೆಗಳಿಂದ ಪ್ರಭಾವಿತರಾದವರು.

MLA S.N. Subbareddy: ಬಾಗೇಪಲ್ಲಿಯಲ್ಲಿ ಅದ್ದೂರಿಯಾಗಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ : ಶಾಸಕ ಭಾಗಿ

ಬಾಗೇಪಲ್ಲಿಯಲ್ಲಿ ಅದ್ದೂರಿಯಾಗಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ಬಾಗೇಪಲ್ಲಿಯನ್ನು ಬಾಗ್ಯನಗರ ಎಂದು ನಾಮಕರಣ ಮಾಡಬೇಕೆಂಬುದು ಬಾಗೇಪಲ್ಲಿ ತಾಲೂಕಿನ  ಕನ್ನಡ ಪರ ಹೋರಾಟಗಾರರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದ್ದು, ಭಾಗ್ಯನಗರವನ್ನಾಗಿ ನಾಮಕರಣ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೆ ಕೇಂದ್ರ ಸರ್ಕಾರದ ಒಪ್ಪಿಗೆ ಸಿಗಬೇಕಾಗಿದ್ದು ಅದನ್ನು ಶೀಘ್ರವಾಗಿ ನೇರವೇರಿಸುತ್ತೇನೆ

Chikkaballapur News: ಕನ್ನಡ ಭಾಷೆ ಹಾಗೂ ಸಾಹಿತ್ಯದ ಒಳಗೊಳ್ಳುವ ಗುಣ ಮನುಕುಲಕ್ಕೆ ಮಾದರಿ

ಕನ್ನಡ ಭಾಷೆ ಹಾಗೂ ಸಾಹಿತ್ಯದ ಒಳಗೊಳ್ಳುವ ಗುಣ ಮನುಕುಲಕ್ಕೆ ಮಾದರಿ

ಕನ್ನಡ ನೆಲದಲ್ಲಿ ಬಾಳಿ ಬದುಕಿರುವ ಕ್ರಿಶ್ಚಿಯನ್ ಗುರುಗಳು ಆಂಗ್ಲ ಅಧಿಕಾರಿಗಳು ಸಹ ಕನ್ನಡ ಕಲಿತು ಕೃತಿಗಳನ್ನು ರಚಿಸಿದ್ದಾರೆಂದರೆ ನಾವೇಕೆ ಕನ್ನಡ ಕಲಿಯಬಾರದು, ಕನ್ನಡವೆಂಬ ಮಾತೃ ಸ್ವರೂಪದ ಭೂನಾದಿಯ ಬೇರುಗಳ ಮೇಲೆ ಅಗತ್ಯವಿದ್ದರೆ ಬೇರೆ ಭಾಷೆಗಳನ್ನು ಕಲಿಯಬಹುದು ಎಂದು ಅಭಿಪ್ರಾಯಪಟ್ಟರು.

Belagavi Stabbing Case: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ; ಉದ್ವಿಗ್ನ ಸ್ಥಿತಿ

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ

Kannada Rajyotsava in Belagavi: ಬೆಳಗಾವಿ ನಗರದ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ಶನಿವಾರ ರಾತ್ರಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ.

Dr. M. C Sudhakar: ಭಕ್ತರಹಳ್ಳಿ -ಅರಸನ ಕೆರೆ ವ್ಯಾಪ್ತಿಯಲ್ಲಿ 100mcft ನೀರು ಸಂಗ್ರಹಕ್ಕೆ ಯೋಜನೆ : ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಸಿ ಸುಧಾಕರ್

ಭಕ್ತರಹಳ್ಳಿ -ಅರಸನ ಕೆರೆ ವ್ಯಾಪ್ತಿಯಲ್ಲಿ 100mcft ನೀರು ಸಂಗ್ರಹಕ್ಕೆ ಯೋಜನೆ

ಪ್ರಸ್ತುತ ಭಕ್ತರಹಳ್ಳಿ ಅರಸನಕೆರೆಗೆ 27 ಎಂಸಿಎಫ್ ಟಿ ನೀರು ಸಂಗ್ರಹ ಆಗಿ ಕೋಡಿ ಹೋಗಿದೆ. ಈ ಕೆರೆಯ ಹೂಳು ತೆಗೆದರೆ 37 ಎಂಸಿಎಫ್ ಟಿ ನೀರು ಸಂಗ್ರಹಿಸಬಹುದು ಇದಲ್ಲದೆ ಭಕ್ತರ ಅರಸನಹಳ್ಳಿ ಕೆರೆ ವ್ಯಾಪ್ತಿಯ ಕೆಳಭಾಗದಲ್ಲಿ ಮತ್ತೊಂದು ಕೆರೆಯನ್ನು ನಿರ್ಮಾಣ ಮಾಡಿ ಅಲ್ಲಿಯೂ ನೀರನ್ನು ಸಂಗ್ರಹಿಸುವ ಕೆಲಸ ಆಗಲಿದೆ. ಆಗ 100ಎಂಸಿಎಫ್‌ಟಿ ನೀರು ಸಂಗ್ರಹವಾಗಿ ಚಿಂತಾಮಣಿ ನಗರಕ್ಕೆ ಹಾಗೂ ಸುತ್ತಮುತ್ತಲ ಹಳ್ಳಿಗಳಿಗೆ ನೀರು ಪೂರೈಸುವ ಕೆಲಸ ಆಗಲಿದೆ.

Gudibande News: ಕನ್ನಡ ಭಾಷೆಯನ್ನು ಪ್ರೀತಿಯಿಂದ ಕಲಿಯಬೇಕು, ಒತ್ತಡದಿಂದಲ್ಲ: ಶಾಸಕ ಸುಬ್ಬಾರೆಡ್ಡಿ

ಕನ್ನಡ ಭಾಷೆಯನ್ನು ಪ್ರೀತಿಯಿಂದ ಕಲಿಯಬೇಕು, ಒತ್ತಡದಿಂದಲ್ಲ

ಇಂಗ್ಲೀಷ್ ವ್ಯಾಮೋಹದಿಂದ ಇಂದು ಕನ್ನಡಕ್ಕೆ ಕುತ್ತು ಬರುತ್ತಿದೆ. ವ್ಯವಹಾರಿಕ ಭಾಷೆ ಯಾವುದೇ ಇರಲಿ ಎಲ್ಲರೂ ಕನ್ನಡವನ್ನು ಮಾತನಾಡಬೇಕು. ಅದರಲ್ಲೂ ಮುಖ್ಯವಾಗಿ ಇಂದಿನ ಮಕ್ಕಳು ಮೊಬೈಲ್ ಗಳಲ್ಲೆ ಪ್ರಪಂಚ ನೋಡುತ್ತಾರೆ ಇದರಿಂದ ಕನ್ನಡ ಕಲಿಯಲು ಸಾಧ್ಯವಿಲ್ಲ. ತಾವುಗಳು ಸದಾ ಪುಸ್ತಕ ಗಳನ್ನು ಓದುತ್ತಿದ್ದರೇ ಕನ್ನಡ ಭಾಷೆಯನ್ನು ನೀವು ಚೆನ್ನಾಗಿ ಕಲಿಯುತ್ತೀರಿ.

Kannada Rajyotsava: ಗಡಿ ಭಾಗವಾದರೂ ಪಾವಗಡದ ಜನರಿಗೆ ಕನ್ನಡದ ಬಗ್ಗೆ ಅಭಿಮಾನ ಹೆಚ್ಚು: ಶಾಸಕ ವೆಂಕಟೇಶ್

ಪಾವಗಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆ

Pavagada News: ಪಾವಗಡ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ತಾಲೂಕು ಆಡಳಿತ, ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಚ್.ವಿ. ವೆಂಕಟೇಶ್, ಪಟ್ಟಣದಲ್ಲಿ ಸರ್ಕಾರಿ ಐಟಿಐ ಕಾಲೇಜಿಗೆ ಐದು ಕೋಟಿ ವೆಚ್ಚದಲ್ಲಿ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದ್ದು ಡಿಪ್ಲೋಮೋ ಕಾಲೇಜನ್ನು ಸಹ ಪ್ರಾರಂಭಿಸಲಾಗುತ್ತದೆ, ತಿರುಮಣಿಯಲ್ಲಿ ನಿರ್ಮಾಣವಾಗಿರುವ ಸೋಲಾರ್ ಪಾರ್ಕ್ ಇಂದ ಪಾವಗಡ ತಾಲೂಕು ಪ್ರಪಂಚದ ಭೂಪಟದಲ್ಲಿ ರಾರಾಜಿಸುತ್ತಿದೆ ಎಂದು ತಿಳಿಸಿದರು.

Kannada Rajyotsava award 2025: ಪ್ರಕಾಶ್‌ ರಾಜ್‌ ಸೇರಿ 70 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ಪ್ರಶಸ್ತಿಗೆ ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ ಎಂದ ಸಿಎಂ

70 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

Karnataka Rajyotsava 2025: ನಟ ಪ್ರಕಾಶ್‌ ರಾಜ್‌, ನಟಿ ವಿಜಯಲಕ್ಷ್ಮಿ ಸಿಂಗ್‌, ಲೇಖಕ ರಹಮತ್‌ ತರೀಕೆರೆ, ಸಮಾಜ ಸೇವಕಿ ಸೂಲಗಿತ್ತಿ ಈರಮ್ಮ ಸೇರಿ 70 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2025 ಪ್ರದಾನ ಮಾಡಲಾಗಿದೆ. ಯಾರೆಲ್ಲಾ ಸಾಧಕರು ಪ್ರಶಸ್ತಿ ಪಡೆದಿದ್ದಾರೆ ಎಂಬ ಕುರಿತ ಮಾಹಿತಿ ಇಲ್ಲಿದೆ.

Kannada New Movie: ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ʼಆಲ್ಫಾ #ಮೆನ್ ಲವ್ ವೈಲೆನ್ಸ್#ʼ ಚಿತ್ರದ ಶೂಟಿಂಗ್‌ ಮುಕ್ತಾಯ

ʼಆಲ್ಫಾ #ಮೆನ್ ಲವ್ ವೈಲೆನ್ಸ್#ʼ ಚಿತ್ರದ ಶೂಟಿಂಗ್‌ ಮುಕ್ತಾಯ

Sandalwood News: ವಿಜಯ್ ನಿರ್ದೇಶನದ, ಹೇಮಂತ್ ಕುಮಾರ್ ಎಂಬ ನೂತನ ಪ್ರತಿಭೆ ನಾಯಕನಾಗಿ ಅಭಿನಯಿಸುವ ʼಆಲ್ಫಾ #ಮೆನ್ ಲವ್ ವೈಲೆನ್ಸ್#ʼ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರದ ನಾಯಕಿಯಾಗಿ ಗೋಪಿಕಾ ಸುರೇಶ್ ಹಾಗೂ ಅಯನಾ ನಟಿಸಿದ್ದಾರೆ. ʼಬಿಗ್ ಬಾಸ್ʼ ಖ್ಯಾತಿಯ ಕಾರ್ತಿಕ್ ಮಹೇಶ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ ಬೆಂಗಳೂರು, ಮಂಗಳೂರು ಹಾಗೂ ಮಾಲೂರಿನಲ್ಲಿ 70ಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ನಡೆದಿದೆ. ಈಗಾಗಲೇ ಮೊದಲ ಪೋಸ್ಟರ್‌ನಲ್ಲೇ ಮೋಡಿ ಮಾಡಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳು ಸದ್ಯದಲ್ಲೇ ಅನಾವರಣವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

Separate Kalyana Karnataka state: ರಾಜ್ಯೋತ್ಸವದಂದೇ ಪ್ರತ್ಯೇಕ 'ಕಲ್ಯಾಣ ಕರ್ನಾಟಕ' ಧ್ವಜಾರೋಹಣಕ್ಕೆ ಯತ್ನ: ಹಲವರ ಬಂಧನ

ಪ್ರತ್ಯೇಕ 'ಕಲ್ಯಾಣ ಕರ್ನಾಟಕ' ಧ್ವಜಾರೋಹಣಕ್ಕೆ ಯತ್ನ: ಹಲವರ ಬಂಧನ

Kalaburagi News: ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಮೀಸಲಾತಿ ನೀಡುವ 371(ಜೆ) ಕಲಂ ಅನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸದಿರುವುದು, ನೇಮಕಾತಿ ಮತ್ತು ಬಡ್ತಿಯಲ್ಲಿ ಆಗುತ್ತಿರುವ ಅನ್ಯಾಯ ಹಾಗೂ ಸ್ಥಳೀಯ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡದಿರುವುದು ಈ ಭಾಗಕ್ಕೆ ಸರ್ಕಾರಗಳು ತೋರುತ್ತಿರುವ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.

Karnataka Weather: ಹವಾಮಾನ ವರದಿ; ನಾಳೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಒಣ ಹವೆ

ಹವಾಮಾನ ವರದಿ; ನಾಳೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಒಣ ಹವೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಶುಕ್ರವಾರ ಕಲಬುರಗಿ, ಹಾಸನ ಎಡಬ್ಲ್ಯೂಎಸ್, ಶಕ್ತಿ ನಗರದಲ್ಲಿ ಗರಿಷ್ಠ ತಾಪಮಾನ 31.8 ಡಿಗ್ರಿ ಸೆ. ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಮೈಸೂರಿನಲ್ಲಿ ಅತಿ ಕನಿಷ್ಠ ತಾಪಮಾನ 16.0 ಡಿಗ್ರಿ ಸೆ. ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Bangalore News: ಅಪೋಲೊ ಕ್ಯಾನ್ಸರ್ ಸೆಂಟರ್‌ಗಳ ಹೊಸ ಕ್ಯಾಂಪೇನ್ ‘ಚೆಕ್-ಒಲೇಟ್’ ಸಿಹಿಯಾದ ಚಾಕೊಲೇಟ್‌ನಲ್ಲಿ ಆರೋಗ್ಯದ ಸಂದೇಶ

‘ಚೆಕ್-ಒಲೇಟ್’ ಸಿಹಿಯಾದ ಚಾಕೊಲೇಟ್‌ನಲ್ಲಿ ಆರೋಗ್ಯದ ಸಂದೇಶ

ಎಲ್ಲರಿಗೂ ಚಾಕೊಲೇಟ್ ಇಷ್ಟ. ಅದು ಸಂತೋಷ ಕೊಡುತ್ತದೆ. ‘ಚೆಕ್-ಒಲೇಟ್’ ಇದರ ಮೂಲಕ ಚಾಕೊಲೇಟ್ ಒಂದು ಸಿಹಿ ನೆನಪಾಗಿ ಮಹಿಳೆಯರಿಗೆ ಸ್ವಯಂ ಆರೈಕೆಯ ಮಹತ್ವವನ್ನು ನೆನಪಿಸುತ್ತದೆ. ಇದು ಅರಿವನ್ನು ಕ್ರಿಯೆಯಾಗಿ ಪರಿವರ್ತಿಸುವ ಕ್ರಿಯಾತ್ಮಕ ಹಾಗೂ ಮನಮುಟ್ಟುವ ವಿಧಾನ.”

ನ.8ಕ್ಕೆ ಶ್ರೀಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ

ನ.8ಕ್ಕೆ ಶ್ರೀಕನಕದಾಸ ಜಯಂತಿ ಅರ್ಥಪೂರ್ಣ ಆಚರಣೆ

ಶ್ರೀಕನಕದಾಸರ ಜಯಂತಿಯ ಅಂಗವಾಗಿ ನ.೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಚಿಕ್ಕಬಳ್ಳಾಪುರ ನಗರದ ಮರುಳು ಸಿದ್ದೇಶ್ವರ ದೇವಾಲಯದಿಂದ ಅದ್ದೂರಿ ಮೆರವಣಿಗೆ ಆಯೋಜಿಸಿ ಜಾನಪದ ಕಲಾ ತಂಡಗಳು ಹಾಗೂ ಪಲ್ಲಕ್ಕಿಗಳೊಂದಿಗೆ ನಡೆಸಲಾಗುವುದು. ಮೆರವಣಿಗೆಯು ಎಂ. ಜಿ ರಸ್ತೆ,ಬಿ.ಬಿ ರಸ್ತೆ ಮೂಲಕ ಕನ್ನಡ ಭವನದವರೆಗೆ ಸಾಗಲಿದೆ,

Karnataka Rajyotsava 2025: ಮಾತೃಭಾಷೆಯಲ್ಲಿ ಶಿಕ್ಷಣ ಬೇಕಿದೆ, ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ: ಸಿಎಂ ಘೋಷಣೆ

ರಾಜ್ಯದ ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ: ಸಿಎಂ ಘೋಷಣೆ

CM Siddaramaiah: ರಾಜ್ಯದ 800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ. ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆಯಿರುವುದರಿಂದ ಇದಕ್ಕಾಗಿ ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Belagavi News: ಎಂಇಎಸ್ ಮುಖಂಡರ ಜತೆ ಸೆಲ್ಫಿ ತೆಗೆದುಕೊಂಡ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ: ಗೃಹ ಸಚಿವ ಪರಮೇಶ್ವರ್‌

ಎಂಇಎಸ್ ಮುಖಂಡರ ಜತೆ ಸೆಲ್ಫಿ; ಸಿಪಿಐ ವಿರುದ್ಧ ಕ್ರಮ ಎಂದ ಪರಮೇಶ್ವರ್

Selfie with MES leaders: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದಂದು ಕಪ್ಪು ಬಟ್ಟೆ ಧರಿಸಿ ಕರಾಳ ದಿನಾಚರಣೆ ಆಚರಿಸಲು ಬಂದಿದ್ದ ಎಂಇಎಸ್ ಮುಖಂಡರ ಜತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್ ಪಾಷಾ ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಎಡವಟ್ಟು ಮಾಡಿಕೊಂಡಿದ್ದರು. ಹೀಗಾಗಿ ಅವರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದರು. ಇದೀಗ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಅವರು ಪ್ರತಿಕ್ರಿಯಿಸಿದ್ದಾರೆ.

DK Shivakumar: ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿ.ಕೆ. ಶಿವಕುಮಾರ್

ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ

Tunnel Road Project: ಟನಲ್ ರಸ್ತೆ ವಿಚಾರವಾಗಿ ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ಅಶೋಕ್ ಅವರು ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಗೆದ್ದಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ರಚಿಸಿದ ಸಮಿತಿಯೇ ಸರ್ಕಾರಕ್ಕೆ ಸಲಹೆ, ನಿರ್ದೇಶನ ನೀಡಲಿ. ಟನಲ್ ಯೋಜನೆಯನ್ನು ಅವರೂ ಗಮನಿಸಲಿ. ಅಶ್ವತ್ಥ ನಾರಾಯಣ್ ಸೇರಿ ಬೇರೆ ಯಾರ ಹೆಸರನ್ನು ಸೂಚಿಸಿದರು ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು.‌ ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ ಎಂದು ಅವರು ತಿಳಿಸಿದ್ದಾರೆ.

Kannada Rajyotsava: ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ: ಎಚ್‌.ಡಿ.ಕುಮಾರಸ್ವಾಮಿ

ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ: ಎಚ್‌ಡಿಕೆ

HD Kumaraswamy: ಸಾರ್ವಜನಿಕ ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಮಾಡುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೂಡಲೇ ಆರಂಭಿಸಬೇಕು. ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಸರ್ಕಾರ ಭಾಷಾಭಿಮಾನ ಬೆಳೆಸುವ, ಸಾಹಿತ್ಯಾಸಕ್ತಿ ಸೃಷ್ಟಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ, ನಾಲ್ಕೈದು ವರ್ಷಗಳಿಂದ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲವೆಂದು ಕೇಳಿದ್ದೇನೆ. ಮಾಧ್ಯಮಗಳಲ್ಲಿಯೂ ನಾನು ಈ ಬಗ್ಗೆ ವರದಿಗಳನ್ನು ಓದಿದ್ದೇನೆ. ಕನ್ನಡ ಪುಸ್ತಕಗಳನ್ನು ಖರೀಸಲಾಗದಷ್ಟು ದುಸ್ಥಿತಿಯಲ್ಲಿ ರಾಜ್ಯ ಇಲ್ಲ ಎಂದು ಅವರು ಹೇಳಿದ್ದಾರೆ.

Kannada Rajyotsava: ಕನ್ನಡ ಭಾಷೆ ಹೆಚ್ಚು ಬಳಸಿ, ಬೆಳೆಸಿ: ಬಿ.ವೈ. ವಿಜಯೇಂದ್ರ

ಕನ್ನಡ ಭಾಷೆ ಹೆಚ್ಚು ಬಳಸಿ, ಬೆಳೆಸಿ: ಬಿ.ವೈ. ವಿಜಯೇಂದ್ರ

BY Vijayendra: ಶಿಕಾರಿಪುರದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ನಮ್ಮ ಹೆಗ್ಗುರುತು. ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿ, ಉಳಿಸಿ, ಬೆಳೆಸುವ ಮೂಲಕ ನಾವೆಲ್ಲರೂ ಕನ್ನಡಮ್ಮನ ಸೇವೆ ಮಾಡೋಣ ಎಂದು ತಿಳಿಸಿದ್ದಾರೆ.

Loading...