ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಲಾಕ್‌ ತುಂಡಾಗಿ 40 ಅಡಿ ಮೇಲಿಂದ ಬಿದ್ದ ಯುವಕ; ಗಂಭೀರ ಗಾಯ! Video

ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ತುಂಡಾಗಿ ಬಿದ್ದ ಯುವಕ! Video

Dandeli Zipline Accident: ದಾಂಡೇಲಿಯ 'ಸ್ಟರ್ಲಿಂಗ್​​ ರಿವರ್​ ರೆಸಾರ್ಟ್'ನಲ್ಲಿ ಜಿಪ್‌ಲೈನ್​ ಲಾಕ್‌ ತುಂಡಾಗಿ ಕೆಳಗೆ ಬಿದ್ದ ಹಿನ್ನೆಲೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸುಮಾರು 30 ರಿಂದ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರಿಂದ ಎರಡೂ ಕೈ ಹಾಗೂ ಎರಡೂ ಕಾಲುಗಳ ಎಲುಬುಗಳು ಮುರಿದಿದ್ದು, ನರಗಳಿಗೂ ತೀವ್ರ ಹಾನಿಯಾಗಿದೆ ಎನ್ನಲಾಗಿದೆ. ಗಾಯಾಳುವನ್ನು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Service charge: ಗ್ರಾಹಕರಿಗೆ ಕಡ್ಡಾಯ ಸೇವಾಶುಲ್ಕ ವಿಧಿಸಿದ 41 ರೆಸ್ಟೋರೆಂಟ್‌ಗಳಿಗೆ ದಂಡ

ಗ್ರಾಹಕರಿಗೆ ಕಡ್ಡಾಯ ಸೇವಾಶುಲ್ಕ ವಿಧಿಸಿದ 41 ರೆಸ್ಟೋರೆಂಟ್‌ಗಳಿಗೆ ದಂಡ

ನಿಯಮ ಉಲ್ಲಂಘಿಸಿ ಗ್ರಾಹಕರಿಗೆ ಕೊಡುವ ಬಿಲ್‌ನಲ್ಲಿ ಮೊದಲೇ ಸೇವಾ ಶುಲ್ಕ ಸೇರಿಸಿಯೇ ಕೊಡುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH)ಗೆ ದೂರುಗಳು ಬಂದಿದ್ದವು. ಹೀಗಾಗಿ ಗ್ರಾಹಕರಿಗೆ ಬಿಲ್‌ನಲ್ಲಿ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕ (service charge)ʼ ವಿಧಿಸುತ್ತಿದ್ದ 41 ರೆಸ್ಟೋರೆಂಟ್‌ಗಳ ವಿರುದ್ಧ CCPA ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಸೋಮವಾರ ಹೊಳೆನರಸೀಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹೊಳೆನರಸೀಪುರ ಶಾಲೆಗಳಿಗೆ ರಜೆ

Chennamma's funeral: ಸೋಮವಾರ ಮಧ್ಯಾಹ್ನ ಹೊಳೆನರಸೀಪುರದ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಲಿದೆ. ಗಣ್ಯ ವ್ಯಕ್ತಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಹೊಳೆನರಸೀಪುರ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಸಂದಣೆ, ಟ್ರಾಫಿಕ್‌ ಜಾಮ್‌ ಹೆಚ್ಚಾಗುವ ಸಾಧ್ಯತೆ ಇದೆ.

Gubbi News: ಗ್ರಾಮೀಣ ಶಾಲೆಯಲ್ಲಿ ಕಾನ್ವೆಂಟ್ ಮಾದರಿ ಶಿಕ್ಷಣ : ಡಾ.ನಾಗಭೂಷಣ್

ಗ್ರಾಮೀಣ ಶಾಲೆಯಲ್ಲಿ ಕಾನ್ವೆಂಟ್ ಮಾದರಿ ಶಿಕ್ಷಣ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲೀಷ್ ಭಾಷೆ ಅವಶ್ಯವಿದೆ. ಈ ಹಿಂದೆ ಶಿಶುವಿಹಾರ ಮೂಲಕ ಅಂಗನವಾಡಿ ಆರಂಭವಾಗಿತ್ತು. ಆಂಗ್ಲ ಮಾಧ್ಯಮ ಬಗ್ಗೆ ಅರಿತ ಸರ್ಕಾರ ಕಾನ್ವೆಂಟ್ ಮಾದರಿ ಶಿಕ್ಷಣ ಹಳ್ಳಿಯಲ್ಲಿ ಒದಗಿಸಿ ಸಮಸ್ಯೆ ಮೂಲ ಹುಡುಕಿ ಪರಿಹಾರ ಕಂಡು ಹಿಡಿಯಲು ಸ್ಥಳೀಯ ಸಮುದಾಯದ ಸಹಕಾರ ಅಗತ್ಯವಿದೆ.

ಎಫ್‌ಪಿಒ ಮಾರಾಟ ಕೇಂದ್ರದ ವಿರುದ್ಧ ದೂರು; ಐಸಿಎಲ್ ಕಂಪನಿ ಹೆಸರಿನಲ್ಲಿ ನಕಲಿ ಉತ್ಪನ್ನ ಮಾರಾಟ ಶಂಕೆ

ನಕಲಿ ರಸಗೊಬ್ಬರ ಮಾರಾಟ ಆರೋಪ: ರೈತರ ಆಕ್ರೋಶ

ರೈತರೇ ನಡೆಸುತ್ತಿರುವ ಕೃಷಿ ರೈತ ಉತ್ಪಾದಕರ  ಸಂಸ್ಥೆಯೊಂದರ ರಸಗೊಬ್ಬರ  ಮಾರಾಟ ಕೇಂದ್ರದಲ್ಲೇ ನಕಲಿ ರಸಗೊಬ್ಬರ ಮಾರಾಟವಾಗಿರುವ ಆರೋಪ ಕೇಳಿ ಬಂದಿದ್ದು, ಇದರಿಂದ ಮೋಸಕ್ಕೊಳಗಾದ ರೈತರು ಶನಿವಾರ ಅಂಗಡಿ ಎದುರು ಪ್ರತಿಭಟನೆ ನಡೆಸಿದ ಘಟನೆ ನಂದಿ ಕ್ರಾಸ್‌ನಲ್ಲಿ ನಡೆದಿದೆ

Cabinet meeting: ಕೆಪಿಎಸ್‌ಸಿ ಅಧ್ಯಕ್ಷರ ಅಮಾನತಿಗೆ ಸಚಿವ ಸಂಪುಟ ಒಪ್ಪಿಗೆ; ದಿವಂಗತ ಸುಧಾಕರ್ ಕನಸಿನ ಯೋಜನೆಗೆ 244 ಕೋಟಿ

ಕೆಪಿಎಸ್‌ಸಿ ಅಧ್ಯಕ್ಷರ ಅಮಾನತಿಗೆ ಸಚಿವ ಸಂಪುಟ ಒಪ್ಪಿಗೆ

Cabinet meeting: ವಿಧಾನಸೌಧಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಭಾನುವಾರ ಸಚಿವ ಸಂಪುಟ ಸಭೆ ನಡೆದಿದೆ. ವಿವಿಧ ಜಿಲ್ಲೆಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕ್ಯಾಬಿನೆಟ್‌ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳ ಮಾಹಿತಿ ಇಲ್ಲಿದೆ.

Chikkaballapur News: 80 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳ ಭಾಗವಹಿಸುವಿಕೆ ನಿರೀಕ್ಷೆ 1 ಕೋಟಿಗೂ ಅಧಿಕ ಬಹುಮಾನ, ಸೆಪ್ಟೆಂಬರ್‌ನಲ್ಲಿ ಮಹಾ ಫೈನಲ್

ಕರ್ನಾಟಕದ ಗ್ರಾಮೀಣ ಕ್ರೀಡಾ ಚೈತನ್ಯಕ್ಕೆ ಹೊಸ ಚೈತನ್ಯ

ಈಶ ಗ್ರಾಮೋತ್ಸವವು ಗ್ರಾಮೀಣ ಪ್ರದೇಶದ ರೈತರು, ಮೀನುಗಾರರು, ದಿನಗೂಲಿ ಕಾರ್ಮಿಕರು, ಕುಶಲಕರ್ಮಿಗಳು, ವಿದ್ಯಾರ್ಥಿಗಳು ಹಾಗೂ ಗೃಹಿಣಿಯರಿಗೆ ತಮ್ಮ ಕ್ರೀಡಾ ಸಾಮರ್ಥ್ಯ ಪ್ರದರ್ಶಿಸಲು ಅಪರೂಪದ ಅವಕಾಶ ಕಲ್ಪಿಸಿದೆ. ಪುರುಷರಿಗಾಗಿ ವಾಲಿಬಾಲ್ ಹಾಗೂ ಮಹಿಳೆಯರಿಗಾಗಿ ಥ್ರೋಬಾಲ್ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ತಂಡದ ಮನೋಭಾವ, ಆರೋಗ್ಯಕರ ಜೀವನಶೈಲಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಒತ್ತು ನೀಡಲಾಗಿದೆ.

Dr H C Mahadevappa: ಸ್ವಾಭಿಮಾನದ ಘೋಷಣೆ ಮೊಳಗಿಸಿದ ಬಲಗೈ ಸಮುದಾಯ ಸಮಾವೇಶ : 5 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಸಂವಿಧಾನ ಬದ್ದವಾಗಿ ನಡೆಯಿರಿ "ಮತ ಮಾರಬೇಡಿ, ಹಕ್ಕುಗಳಿಗಾಗಿ ಸಂಘಟಿತರಾಗಿ"

ಧರ್ಮೀಯತೆ ಮತ್ತು ಕೋಮುವಾದ ಸಂವಿಧಾನ ವಿರೋಧಿ ಶಕ್ತಿಗಳಾಗಿದ್ದು, ಅವುಗಳ ವಿರುದ್ಧ ಜನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದ ಅವರು, ಅಂಬೇಡ್ಕರ್ ನೀಡಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಸಂದೇಶವೇ ಶೋಷಿತ ಸಮುದಾಯಗಳ ಪ್ರಗತಿಗೆ ದಾರಿದೀಪ ವಾಗಿದೆ ಎಂದರು

Chikkaballapur News: ಪೆರೇಸಂದ್ರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ; ನೂರಾರು ಮಂದಿಗೆ ತಜ್ಞ ವೈದ್ಯರಿಂದ ಸೇವೆ

ಗ್ರಾಮೀಣ ಜನರ ಆರೋಗ್ಯಕ್ಕೆ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಕಾಳಜಿ

ಶಿಬಿರವನ್ನು ಬಿಜೆಪಿ ಮುಖಂಡ ಹಾಗೂ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ಬಿ. ರೆಡ್ಡಿ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಟ್ರಸ್ಟ್ ನಿರಂತರವಾಗಿ ಜನಪರ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತ್ತಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೇ, ಪ್ರತಿಯೊಬ್ಬರೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅನಿವಾರ್ಯ.

Akshay Mashelkar: ಶೈಕ್ಷಣಿಕ ಸಂಶೋಧನೆ; ಶಿರಸಿಯ ಯುವ ವಿಜ್ಞಾನಿ ಅಕ್ಷಯ್‌ ಮಶೇಲ್ಕರ್‌ ರಾಷ್ಟ್ರಮಟ್ಟದ ಗೌರವಕ್ಕೆ ಆಯ್ಕೆ

ಶಿರಸಿಯ ಅಕ್ಷಯ್‌ ಮಶೇಲ್ಕರ್ ರಾಷ್ಟ್ರಮಟ್ಟದ ಗೌರವಕ್ಕೆ ಆಯ್ಕೆ

ಪ್ರಸ್ತುತ ಬೆಂಗಳೂರಿನ ಆರ್.ವಿ. ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ಅಕ್ಷಯ್ ಮಶೆಲ್ಕರ್ ಅವರು, ಹಲವು ವರ್ಷಗಳಿಂದ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಿಜ್ಞಾನ ಮತ್ತು ಗಣಿತ ಶಿಕ್ಷಣವನ್ನು ತಲುಪಿಸುವ ಉದ್ದೇಶದಿಂದ ಸಂಶೋಧನೆ ನಡೆಸುತ್ತಿದ್ದಾರೆ.

ಹಸಿದವರಿಗೆ ಅನ್ನವೇ ದೇವರ ಸೇವೆ; ಎಪಿಎಂಸಿ ಅನ್ನಸಂತರ್ಪಣೆ ಮೂರನೇ ವರ್ಷಕ್ಕೆ ರೈತರು, ಕೂಲಿ ಕಾರ್ಮಿಕರು, ಹಮಾಲರಿಗೆ ನಿರಂತರ ಉಚಿತ ಊಟ

ಹಮಾಲರಿಗೆ ನಿರಂತರ ಉಚಿತ ಊಟ; ಭಾವುಕರಾದ ಯಲುವಳ್ಳಿ ಎನ್. ರಮೇಶ್

ಮಾರುಕಟ್ಟೆಗೆ ಬರುವ ರೈತರಿಗೆ ಕೆಲವೊಮ್ಮೆ ಬೆಳೆಗಳಿಗೆ ಸೂಕ್ತ ಬೆಲೆ ಸಿಗುವುದಿಲ್ಲ.ಕನಿಷ್ಠ ಊಟಕ್ಕೂ ಹಣವಿಲ್ಲದ ಪರಿಸ್ಥಿತಿಯನ್ನು ನಾವು ಕಂಡಿದ್ದೇವೆ. ಕೂಲಿ ಕಾರ್ಮಿಕರು ಮತ್ತು ಹಮಾಲರು ಕೂಡ ತಮ್ಮ ಸಂಪಾದನೆಯಲ್ಲಿ ಊಟಕ್ಕೆ ಖರ್ಚು ಮಾಡುವಷ್ಟು ಆರ್ಥಿಕ ಶಕ್ತಿ ಹೊಂದಿರದ ಸಂದರ್ಭ ಗಳಿವೆ. ಎಲ್ಲರ ಕಷ್ಟವನ್ನು ಅರಿತು ಹಸಿದವರಿಗೆ ಅನ್ನ ನೀಡುವ ಪುಣ್ಯದ ಕಾರ್ಯವನ್ನು ಆರಂಭಿ ಸಿರುವ ಯಲುವಳ್ಳಿ ಎನ್.ರಮೇಶ್ ಅವರಿಗೆ ದೇವರು ಆಯಸ್ಸು, ಆರೋಗ್ಯ ನೀಡಲಿ ಎಂದು ಎಲ್ಲರ ಪರವಾಗಿ ಪ್ರಾರ್ಥಿಸುತ್ತೇನೆ

Chikkaballapur News: ಅಂಬೇಡ್ಕರ್ ಸೇವಾ ಸಮಿತಿ, ಕರ್ನಾಟಕ ಅಂಬೇಡ್ಕರ್ ಸೇನೆ ಪ್ರತಿಭಟನೆ; ಜಿಲ್ಲಾಡಳಿತಕ್ಕೆ ಮನವಿ

ನಕಲಿ ಖಾತೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲು ಆಗ್ರಹ

ನಂದಿ ಹೋಬಳಿಯ ನುಗತಳ್ಳಿ, ಕುಡುವತಿ, ತಿಮ್ಮನಹಳ್ಳಿ, ಚಿಕ್ಕಬಳ್ಳಾಪುರ ಕಸಬಾ ಹೋಬಳಿಯ ಹಾರೋಬಂಡೆ ಹಾಗೂ ಶಿಡ್ಲಘಟ್ಟ ತಾಲೂಕಿನ ಕಡದನಕುಂಟೆ ಸೇರಿದಂತೆ ವಿವಿಧ ಗ್ರಾಮಗಳ ಸರ್ವೆ ನಂಬರುಗಳಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಲ ಖಾತೆದಾರರಿಗೆ ವಂಚನೆ ಮಾಡಲಾಗಿದೆ

Cabinet meeting: ಬರ ನಿರ್ವಹಣೆಗೆ ಪ್ರತಿ ಕ್ಷೇತ್ರಕ್ಕೆ 1 ಕೋಟಿ ರೂ. ಅನುದಾನ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ

ಬರ ನಿರ್ವಹಣೆಗೆ ಪ್ರತಿ ಕ್ಷೇತ್ರಕ್ಕೆ 1 ಕೋಟಿ ರೂ. ಅನುದಾನ; ಸಂಪುಟ ಒಪ್ಪಿಗೆ

Karnataka Drought: ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಭಾನುವಾರ ಸಚಿವ ಸಂಪುಟ ಸಭೆ ನಡೆದಿದೆ. 178 ತಾಲೂಕುಗಳಲ್ಲಿ ಮಳೆ ಕೊರತೆ ಇದೆ. ರಾಜ್ಯದ ಜಲಾಶಯಗಳಲ್ಲಿ ಶೇ.40 ಮಾತ್ರ ನೀರಿದೆ. ಹೀಗಾಗಿ 15 ದಿನಗಳಲ್ಲಿ ಬರ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿಯ ಮೃತದೇಹ ಪತ್ತೆ; ತಿರುಪತಿ ಯಾತ್ರೆ ಮುಗಿಸಿ ಬಂದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದೇಕೆ?

ಬೆಂಗಳೂರಿನಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಶವವಾಗಿ ಪತ್ತೆ

Paramedical student self-harming: ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಉದಯ್ ಗೌಡ ಮೃತದೇಹ ಪತ್ತೆಯಾಗಿದೆ. ಉದಯ್‌ ವಾಸವಾಗಿದ್ದ ಮನೆಯಿಂದ ಕೆಟ್ಟ ವಾಸನೆ ಬರಲು ಪ್ರಾರಂಭಿಸಿದ ನಂತರ ನೆರೆಹೊರೆಯವರು ಆತನ ಕುಟುಂಬಕ್ಕೆ ಮಾಹಿತಿ ನೀಡಿದರು. ಕೊಠಡಿ ತೆರೆದಾಗ ಆತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂತು. ಸುಮಾರು ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

B S Yediyurappa: ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ; ವಿಶೇಷ ಪೂಜೆ ಸಲ್ಲಿಕೆ

ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ; ವಿಶೇಷ ಪೂಜೆ ಸಲ್ಲಿಕೆ

Kurudumale Ganesha Temple: ಬರದ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಚಿಂತೆ ಇಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬೆಳೆ ಇಲ್ಲ, ಕೆರೆ ಕಟ್ಟೆ, ಜಲಾಶಯಗಳಲ್ಲಿ ನೀರಿಲ್ಲ. ಇದರಿಂದ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಉತ್ತಮ ಮಳೆ, ಬೆಳೆಯಾಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

Karnataka Drought: 178 ತಾಲೂಕುಗಳಲ್ಲಿ ಮಳೆ ಕೊರತೆ; ಬರ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಡಿಸಿ-ಸಿಇಒಗಳಿಗೆ ಸಿಎಂ ಸೂಚನೆ

ಬರ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಡಿಸಿ-ಸಿಇಒಗಳಿಗೆ ಸಿಎಂ ಸೂಚನೆ

ಮಳೆ ಕೊರತೆ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇ. 40 ರಷ್ಟು ಮಾತ್ರ ನೀರು ಸಂಗ್ರಹವಿದೆ. ರೈತರು ಕಡಿಮೆ‌ ನೀರಿನ‌ ಬಳಕೆಯಾಗುವ ಬೆಳೆಗಳನ್ನು ಬೆಳೆಯುವ ಮೂಲಕ ಬರದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಜೋಡಿಸಬೇಕು. ರೈತರ ಹಿತರಕ್ಷಣೆಗೆ ಸಕಲ ಸಿದ್ಧತೆಗಳನ್ನೂ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Chennamma Deve Gowda: ಬೆಂಗಳೂರಿನಲ್ಲಿ ಚೆನ್ನಮ್ಮ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

ಬೆಂಗಳೂರಿನಲ್ಲಿ ಚೆನ್ನಮ್ಮ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

ಬೆಂಗಳೂರಿನಿಂದ ಹೊಳೆನರಸೀಪುರಕ್ಕೆ ಹೊರಟ ಚೆನ್ನಮ್ಮ ಅಂತಿಮ ಯಾತ್ರೆ ಹೊರಟ ವಾಹನದಲ್ಲಿ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಮೊಮ್ಮಕ್ಕಳು ಕುಳಿದಿದ್ದಾರೆ. ಹಾಸನ ಕಡೆಗೆ ಹೊರಟ ಚೆನ್ನಮ್ಮ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು, ಅಭಿಮಾನಿಗಳು ಕಣ್ಣೀರ ವಿದಾಯ ಹೇಳಿದ್ದಾರೆ.

ಪಿಫಾ ವಿಶ್ವ ಕಪ್ ಫೈನಲ್‌; ಬೆಳಗ್ಗೆ 3.30 ರವರೆಗೆ ರೆಸ್ಟೋರೆಂಟ್‌ಗಳಿಗೆ ಅನುಮತಿ ಎಂದ CM ಡಿಕೆ ಶಿವಕುಮಾರ್‌

ಪಿಫಾ ವಿಶ್ವ ಕಪ್ ಫೈನಲ್‌; ಪುಟ್ಬಾಲ್ ಅಭಿಮಾನಿಗಳಿಗೆ ಸಿಎಂ ಹೇಳಿದ್ದೇನು?

FIFA World Cup Final: ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಆಸ್ಪತ್ರೆ, ಶಾಲೆಗಳ ಕ್ಯಾಂಟೀನ್​ಗಳಲ್ಲಿ ಜಂಕ್‌ಫುಡ್​ ಮಾರಾಟ ನಿಷೇಧಕ್ಕೆ ಸರ್ಕಾರ ಮುಂದು; ಆರೋಗ್ಯ ಸಚಿವರಿಂದ ಸೂಚನೆ

ಆಸ್ಪತ್ರೆ, ಶಾಲೆಗಳ ಕ್ಯಾಂಟೀನ್​ಗಳಲ್ಲಿ ಜಂಕ್‌ಫುಡ್​ ಮಾರಾಟ ನಿಷೇಧ?

ಇನ್ನುಮುಂದೆ ರಾಜ್ಯದ ಶಾಲೆಗಳು ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಶಾಲೆ ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ಗೆ ಸಂಪೂರ್ಣ ನಿಷೇಧ ಹೇರಬೇಕು. ಈ ಕ್ರಮವನ್ನು ಮೊದಲು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.

SIR ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವು

ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವು

SIR ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ಬಾಗೆವಾಡಿಯ ರತ್ನಮ್ಮ ಬಳಿಗಾರ (43) ಮೃತ ಮಹಿಳೆ. ಎಸ್‌ಐಆರ್ ಹಿನ್ನೆಲೆ ರತ್ನಮ್ಮ ಬಿಎಲ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಅಜ್ಜಿ ಚೆನ್ನಮ್ಮ ಅಂತ್ಯಕ್ರಿಯೆಗೆ ಬರ್ತಾರಾ ಪ್ರಜ್ವಲ್‌ ರೇವಣ್ಣ?

ಅಜ್ಜಿ ಚೆನ್ನಮ್ಮ ಅಂತ್ಯಕ್ರಿಯೆಗೆ ಬರ್ತಾರಾ ಪ್ರಜ್ವಲ್‌ ರೇವಣ್ಣ?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನದ ಸುದ್ದಿ ಕೇಳಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತುರ್ತು ಪೆರೋಲ್‌ ಕೋರಿ ಜೈಲಾಧಿಕಾರಿಗಳಿಗೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿ.ಕೆ.ಶಿವಕುಮಾರ್;‌ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸೂಚನೆ

ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ: ಸಿಎಂ ಡಿಕೆಶಿ

ಚೆನ್ನಮ್ಮನವರು ದೇವೇಗೌಡರ ಪ್ರತಿ ಯಶಸ್ಸಿನ‌ ಹಿಂದೆ ಹಾಗೂ ರಾಜಕೀಯದ ಏಳು-ಬೀಳುಗಳಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ಮನೆಯನ್ನು ಜವಾಬ್ದಾರಿಯಿಂದ ನೋಡಿಕೊಳ್ಳುವ ಮೂಲಕ ಅವರು ಗೌಡರ ಬದುಕಿನ ನಿಜವಾದ ಶಕ್ತಿಯಾಗಿದ್ದರು. ಭಗವಂತ ಹಿರಿಯರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ.

Chennamma Photos: ಆ್ಯಸಿಡ್ ದಾಳಿಗೂ ಮುನ್ನ ಹೀಗಿದ್ದರು ಚೆನ್ನಮ್ಮ; ತಾಯಿ ಜತೆಗಿನ ಹಳೆಯ ಫೋಟೊಗಳನ್ನು ಹಂಚಿಕೊಂಡ ಕುಮಾರಸ್ವಾಮಿ

ತಾಯಿ ಜತೆಗಿನ ಹಳೆಯ ಫೋಟೊಗಳನ್ನು ಹಂಚಿಕೊಂಡ ಕುಮಾರಸ್ವಾಮಿ

ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನನ್ನ ತಾಯಿ ಚೆನ್ನಮ್ಮ ಅವರು ಗುಣಮುಖರಾಗಿ ಮನೆಗೆ ಮರಳುತ್ತಾರೆನ್ನುವ ನಿರೀಕ್ಷೆ ನನ್ನದಾಗಿತ್ತು. ಆದರೆ, ಅವರು ನಮ್ಮನ್ನಗಲಿದ್ದಾರೆ. ಸದಾ ಶಿವಧ್ಯಾನದಲ್ಲಿ ತಲ್ಲೀನರಾಗಿರುತ್ತಿದ್ದ ಅಮ್ಮನವರನ್ನು ಆ ಶಿವನೇ ತನ್ನಲ್ಲಿಗೆ ಕರೆಸಿಕೊಂಡಿದ್ದಾನೆ ಅವರಿಗೆ ಸದ್ಗತಿ ದೊರೆಯಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Loading...