ಕರಾವಳಿಗೆ ಖಾದರ್ ಸಾಹೇಬರ ಖದರ್ ಆಡಳಿತ ಭಾಗ್ಯ!
ಕ್ಷೇತ್ರದ ಶಾಸಕರಾಗಿ ಸತತ ಐದು ಬಾರಿ ಆಯ್ಕೆಯಾಗಿ, ಪ್ರಸ್ತುತ ಸಚಿವ ಸಂಪುಟದಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಂಡಿರುವ ಯು.ಟಿ.ಖಾದರ್ ಅವರು ಅತ್ಯಂತ ಪ್ರಭಾವಶಾಲಿ ಹಾಗೂ ಜನಪ್ರಿಯ ನಾಯಕರಲ್ಲಿ ಒಬ್ಬರು. ಕಾನೂನು ಪದವೀಧರರಾದ ಇವರು, ಸೇಂಟ್ ಅಲೋಶಿಯಸ್ ಮತ್ತು ಎಸ್ಡಿ ಎಂ ಕಾಲೇಜುಗಳಲ್ಲಿ ಶಿಕ್ಷಣ ಮುಗಿಸಿದರು. ವಿದ್ಯಾರ್ಥಿ ದಿಸೆಯಿಂದಲೇ ಎನ್ಎಸ್ಯುಐ ಸಂಘಟನೆ ಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಹಂತಹಂತವಾಗಿ ಬೆಳೆದರು.