ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Murder Case: ಹೆಂಡತಿಯ ತಂಗಿಯ ಜೊತೆ ನಾಳೆ ಮದುವೆಯಾಗಬೇಕಿದ್ದ ವ್ಯಕ್ತಿಯ ಹತ್ಯೆ

ಹೆಂಡತಿಯ ತಂಗಿಯ ಜೊತೆ ನಾಳೆ ಮದುವೆಯಾಗಬೇಕಿದ್ದ ವ್ಯಕ್ತಿಯ ಹತ್ಯೆ

ಆರು ತಿಂಗಳ ಹಿಂದಷ್ಟೆ ಅವರ ಪತ್ನಿಯ (Wife) ಸಾವು ಸಂಭವಿಸಿತ್ತು. ಈ ಹಿನ್ನೆಲೆಯಲ್ಲೇ ಅವರು ಎರಡನೇ ಮದುವೆಗೆ ತಯಾರಾಗುತ್ತಿದ್ದರು. ನಾಳೆ ಶಿರಸಿಯ ದೇವಸ್ಥಾನ ಒಂದರಲ್ಲಿ ರಮೇಶರ ಎರಡನೇ ಮದುವೆ ನಿಗದಿಯಾಗಿತ್ತು. ಮದುವೆಗೂ ಒಂದು ದಿನ ಮೊದಲೆ ವೈದ್ಯನ ಕೊಲೆಯಾಗಿದ್ದು, ಹಲವು ಅನುಮಾನಗಳಿಗೂ ಕಾರಣವಾಗಿದೆ.

Ahinda: ಕಾಂಗ್ರೆಸ್‌ ಪಕ್ಷಕ್ಕೆ ಅಹಿಂದ ಬುಡ ಅಲುಗಾಡುವ ಆತಂಕ

ಕಾಂಗ್ರೆಸ್‌ ಪಕ್ಷಕ್ಕೆ ಅಹಿಂದ ಬುಡ ಅಲುಗಾಡುವ ಆತಂಕ

ರಾಜ್ಯ ಕಾಂಗ್ರೆಸ್‌ನಲ್ಲಿ ದಾವಣಗೆರೆ ಉಪಚುನಾವಣೆ ನಂತರದ ಬೆಳವಣಿಗೆ ಪಕ್ಷದ ಅಧಿಕಾರದ ಅಸ್ತ್ರವಾಗಿರುವ ಅಹಿಂದ ಬುಡವನ್ನೇ ಅಲ್ಲಾಡಿಸುತ್ತಿದೆಯೇ ಎನ್ನುವ ಆತಂಕ ಶುರುವಾಗಿದೆ. ಉಪ ಚುನಾವಣೆಯ ನಂತರ ಉಂಟಾಗಿರುವ ಗೊಂದಲ, ಗದ್ದಲಗಳು ಅಹಿಂದ ಸಮುದಾಯಗಳ ಮನಸ್ಸು ಕೆಡಿಸುತ್ತಿದ್ದು, ಇದರಿಂದ ಸರಕಾರ ಮತ್ತು ಕಾಂಗ್ರೆಸ್ ಪಕ್ಷ ಎರಡರ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನುವ ಭೀತಿ ಇದೆ.

Gudibande News: ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಒಗ್ಗಟ್ಟಿನ ಹೋರಾಟಕ್ಕೆ ಮುಖಂಡರ ನಿರ್ಧಾರ

ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ

ದೇಶದಲ್ಲಿ ಕ್ಷೇತ್ರ ಮರುವಿಂಗಡಣೆಯ ಪ್ರಕ್ರಿಯೆಗಳು ನಡೆಯಲಿರುವ ಸುದ್ದಿಯ ಹಿನ್ನೆಲೆಯಲ್ಲಿ ನಮ್ಮ ಬೇಡಿಕೆಯನ್ನು ಮಂಡಿಸಲು ಇದುವೇ ಅತ್ಯಂತ ಪ್ರಶಸ್ತ ಸಮಯವಾಗಿದೆ ಎಂದು ತಿಳಿಸಿದರು. ಈ ಹಿಂದೆ ನಡೆದ ಹಲವು ಪ್ರತಿಭಟನೆಗಳು ತಾರ್ಕಿಕ ಅಂತ್ಯ ಕಾಣದಿದ್ದರೂ, ಈ ಬಾರಿ ಜಾತಿ ಮತ್ತು ರಾಜಕೀಯ ಪಕ್ಷ ಗಳ ಭೇದ ಮರೆತು ಒಗ್ಗಟ್ಟಿನಿಂದ ಹೆಜ್ಜೆ ಇಡಬೇಕಿದೆ

Shidlaghatta News: ಬಡವರಿಗೆ ಮನೆಗಾಗಿ ಹೋರಾಟಕ್ಕೆ ಘೋಷಣೆ: ಡಾ.ಬಿ.ಎನ್.ವೆಂಕಟೇಶ್

ಬಡವರಿಗೆ ಮನೆಗಾಗಿ ಹೋರಾಟಕ್ಕೆ ಘೋಷಣೆ: ಡಾ.ಬಿ.ಎನ್.ವೆಂಕಟೇಶ್

ಒಂದೇ ಮನೆಯಲ್ಲಿ ಹಲವರು ವಾಸಿಸುವ ದುಸ್ಥಿತಿ ಇದೆ. ಸ್ಥಳೀಯ ಶಾಸಕರು ಮತ್ತು ಸಂಸದರು ಬಡವ ರಿಗೆ ಸೈಟು ಹಾಗೂ ಮನೆ ನಿರ್ಮಾಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ(Chief Minister Siddaramaiah) ಅವರ ಸರ್ಕಾರದ ವಿರುದ್ಧವೂ ಹೋರಾಟಕ್ಕೆ ಮುಂದಾಗುತ್ತೇವೆ

Cauvery river Tragedy: ಕಾವೇರಿ ನದಿ ದುರಂತ; ಮೃತ 6 ಮಂದಿಯ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಕಾವೇರಿ ನದಿ ದುರಂತ; ಮೃತರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರು ಜಿಲ್ಲೆಯ ಕೆ.ಆರ್‌.ನಗರದ ಪ್ರಸಿದ್ಧ ಅರ್ಕೇಶ್ವರ ದೇವಸ್ಥಾನದ ಸಮೀಪದ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಭಾನುವಾರ ಮೃತಪಟ್ಟಿದ್ದರು. ದರ್ಗಾಕ್ಕೆ ಭೇಟಿ ನೀಡಲು ಹೋಗಿದ್ದ ಪ್ರವಾಸಿಗರು, ಅರ್ಕೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಾಗ ದುರಂತ ಸಂಭವಿಸಿತ್ತು.

MP Dr K.Sudhakar: ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಸಂಸದರ ಮನವಿ

ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಭೌಗೋಳಿಕ ರಾಜಕೀಯ ಸಂಘರ್ಷಗಳಿಂದಾಗಿ ಪೂರೈಕೆ ಸರಪಳಿ ಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ರಫ್ತು ಆಧಾರಿತ ಬೆಳೆಯ ಮಾರುಕಟ್ಟೆ ಕುಸಿದಿದೆ. ಹಿಂದೆ ಪ್ರತಿ ಚೀಲಕ್ಕೆ 1200 ರಿಂದ 1500 ಇರುತ್ತಿದ್ದ ಬೆಲೆ ಈಗ 100ಕ್ಕಿಂತ ಕೆಳಕ್ಕೆ ಇಳಿದಿರುವುದು ರೈತರನ್ನು ತೀವ್ರ ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ. ಮಾರಾಟವಾಗದ ಈರುಳ್ಳಿ ರಾಶಿಗಳು ಮಳೆಯಿಂದ ಕೊಳೆಯುವ ಭೀತಿ ಯಲ್ಲಿದ್ದು, ಪರಿಸ್ಥಿತಿ ಗಂಭೀರವಾಗಿದೆ

ಕಾರ್ಪೊರೇಟ್ ಜಿಹಾದ್, ಜಿಮ್‌ ಜಿಹಾದ್‌ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ; ಬೆಂಗಳೂರಿನಲ್ಲಿ ಹಿಂದೂ ಸಂಘಟನೆಗಳ ಬೃಹತ್‌ ಪ್ರತಿಭಟನೆ

ಕಾರ್ಪೊರೇಟ್ ಜಿಹಾದ್ ವಿರುದ್ಧ ಕ್ರಮಕ್ಕೆ ಆಗ್ರಹ; ಬೆಂಗಳೂರಿನಲ್ಲಿ ಪ್ರತಿಭಟನೆ

Nashik TCS Corporate Jihad: ಕಾರ್ಪೊರೇಟ್ ಹೆಸರಿನಲ್ಲಿ ಹಿಂದೂ ಮಹಿಳೆಯರ ಮೇಲೆ ಹಿಂಸೆ ನಡೆಯುವುದನ್ನು ಸಹಿಸಲಾಗುವುದಿಲ್ಲ. ಆಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಇತರ ಹಿಂದೂ ಸಂಘಟನೆಗಳೊಂದಿಗೆ ಸೇರಿ ತೀವ್ರ ಹೋರಾಟ ನಡೆಸಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಮಹಿಳಾ ಬಿಲ್ ಪಾಸ್ ವಿಳಂಬ: ಕೇಂದ್ರ ಸರ್ಕಾರದ ವಿರುದ್ಧ ಆಂಜಿನಪ್ಪ ಪುಟ್ಟು ವಾಗ್ದಾಳಿ

'ನಾರಿ ಶಕ್ತಿ' ಹೆಸರಿನಲ್ಲಿ ರಾಜಕೀಯ ಮಾತ್ರ, ನಿಜವಾದ ಸಬಲೀಕರಣದಲ್ಲಿ ವಿಫಲ

ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆ ಯನ್ನು ಗಮನದಲ್ಲಿಟ್ಟುಕೊಂಡು, ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಈ ಮಸೂದೆ ವಿಷಯ ವನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇದೀಗ ಮತ ನೀಡಿ ಮುಂದೆ ಬಿಲ್ ಪಾಸ್ ಮಾಡುತ್ತೇವೆ ಎಂಬ ಹೇಳಿಕೆಗಳು ನಾಟಕೀಯವಾಗಿವೆ

ಅಂಬೇಡ್ಕರ್ ತತ್ವ ಸಂದೇಶ ಅರಿಯುವುದಕ್ಕಿಂತ ಹೆಚ್ಚಾಗಿ ವ್ಯಕ್ತಿ ಪೂಜೆ ಹೆಚ್ಚುತ್ತಿದೆ: ವೆಂಕಟರಮಣಪ್ಪ

ಅಂಬೇಡ್ಕರ್ ರನ್ನು ಅರಿಯುವುದಕ್ಕಿಂತ ಹೆಚ್ಚಾಗಿ ವ್ಯಕ್ತಿ ಪೂಜೆ ಹೆಚ್ಚುತ್ತಿದೆ

ಅಂಬೇಡ್ಕರ್ ಅವರನ್ನು ಕೇವಲ ಒಂದು ಜಾತಿಯ ನಾಯಕನನ್ನಾಗಿ ನೋಡದೇ, ಸರ್ವ ಸಮುದಾಯದ ವಿಮೋಚಕರಾಗಿ ನೋಡಬೇಕು. ವಿಶ್ವದ ಮಟ್ಟದಲ್ಲಿ ಅವರನ್ನು ಜ್ಞಾನದ ಸಂಕೇತವಾಗಿ ಗುರುತಿಸು ತ್ತಿರುವುದನ್ನು ಅರಿಯಬೇಕು ಎಂದರು. ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಕೂಡ ಅಂಬೇಡ್ಕರ್ ಅವರ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿರುವುದನ್ನು ಅವರು ಸ್ಮರಿಸಿದರು.

ಸರ್ಕಾರಿ ಶಾಲೆಗಳಿಗೇ ಮಕ್ಕಳನ್ನು ದಾಖಲಾತಿ ಮಾಡಿ ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿ: ಡಿಡಿಪಿಐ ರಮೇಶ್ ಮನವಿ

ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆಯ ವಿಶ್ವಾಸ

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಎಲ್ಲಾ ಸರ್ಕಾರಿ ಪ್ರಾಥಮಿಕ ಸರ್ಕಾರಿ ಶಾಲೆಗಳ ಬಲವರ್ಧನೆ ಮಾಡಲಾಗುತ್ತಿದೆ.ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳ ಅನಾವರಣಕ್ಕಾಗಿ ಪ್ರತಿಭಾ ಕಾರಂಜಿ, ಕಲಿಕಾ ಹಬ್ಬ ಮತ್ತು ಕಲೋತ್ಸವ ಕಾರ್ಯಕ್ರಗಳು, ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಗಳನ್ನು ನಡೆಸುವ ಮೂಲಕ ಸರ್ಕಾರಿ ಶಾಲಾ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಒದಗಿಸಲಾಗುತ್ತಿದೆ.

ದೇವರನ್ನು ನಂಬಿ, ಆದ್ರೆ ಮೂಢನಂಬಿಕೆಗಳನ್ನು ತ್ಯಜಿಸಿ: ಸಿಎಂ ಸಿದ್ದರಾಮಯ್ಯ ಕರೆ

ದೇವರನ್ನು ನಂಬಿ, ಆದ್ರೆ ಮೂಢನಂಬಿಕೆಗಳನ್ನು ತ್ಯಜಿಸಿ: ಸಿಎಂ ಕರೆ

ರಾಣೆಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50 ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಶ್ರೀ ಭಕ್ತ ಕನಕದಾಸರ ಮಹಾದ್ವಾರದ ಉದ್ಘಾಟನೆ ಹಾಗೂ ಧರ್ಮ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ತುಮಕೂರು ಜಿಲ್ಲೆ ಅಭಿವೃದ್ಧಿಗೆ ಗೃಹಸಚಿವ ಪರಮೇಶ್ವರ್ ಕೊಡುಗೆ ಏನು?; ಬಹಿರಂಗ ಚರ್ಚೆಗೆ ಕೆಆರ್‌ಎಸ್‌ ಪಕ್ಷ ಆಹ್ವಾನ

ಅಭಿವೃದ್ಧಿ ಬಗ್ಗೆ ಪರಮೇಶ್ವರ್ ಬಹಿರಂಗ ಚರ್ಚೆಗೆ ಬರಲಿ: ಕೆಆರ್‌ಎಸ್‌ ಪಕ್ಷ

ತುಮಕೂರು ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಅಕ್ರಮಗಳ ಬಗ್ಗೆ ನಮ್ಮ ಬಳಿ ದಾಖಲೆಗಳಿದೆ. ಈ ವಿಷಯಗಳ ಕುರಿತು ಬಹಿರಂಗ ಚರ್ಚೆ ನಡೆಸಲು ನೀವು ಸ್ಥಳ ಮತ್ತು ದಿನಾಂಕವನ್ನು ನಿಗದಿಪಡಿಸಬೇಕು ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಕೆಆರ್‌ಎಸ್‌ ಪಕ್ಷ ಆಗ್ರಹಿಸಿದೆ.

Cauvery River Tragedy: ಕೆ.ಆರ್‌.ನಗರದಲ್ಲಿ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

ಮೈಸೂರು: ಜಿಲ್ಲೆಯ ಕೆ.ಆರ್‌.ನಗರದ ಅರ್ಕೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. ದರ್ಗಾಕ್ಕೆ ಭೇಟಿ ನೀಡಲು ಪ್ರವಾಸಿಗರು ಬಂದಿದ್ದ ವೇಳೆ ಅರ್ಕೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ.

Radha Krishna Adiga's Book: ಬೆಂಗಳೂರಿನಲ್ಲಿ ʼರಾಧಾಕೃಷ್ಣ ಅಡಿಗ: ಇಡ್ಲಿ ಕಾಫಿ ಪರಂಪರೆ-ಪಯಣ' ಪುಸ್ತಕ ಲೋಕಾರ್ಪಣೆ Video

ʼರಾಧಾಕೃಷ್ಣ ಅಡಿಗ: ಇಡ್ಲಿ ಕಾಫಿ ಪರಂಪರೆ-ಪಯಣ' ಪುಸ್ತಕ ಲೋಕಾರ್ಪಣೆ

ದಕ್ಷಿಣ ಕನ್ನಡದ ಪುಟ್ಟ ಊರಿನಿಂದ ದಶಕಗಳ ಹಿಂದೆ ಬೆಂಗಳೂರಿಗೆ ವಲಸೆ ಬಂದು ಹೊಟೇಲ್ ಉದ್ಯಮದಲ್ಲಿ ಸ್ಮರಣೀಯ ಪರಂಪರೆ ಹುಟ್ಟುಹಾಕಿದ ಹೋಟೆಲ್‌ ಉದ್ಯಮಿ ರಾಧಾಕೃಷ್ಣ ಅಡಿಗ ಅವರ ಕುರಿತ ಅಪೂರ್ವ ಕಥನ ʼರಾಧಾಕೃಷ್ಣ ಅಡಿಗ- ಇಡ್ಲಿ ಕಾಫಿ ಪರಂಪರೆ- ಪಯಣʼ ಪುಸ್ತಕದಲ್ಲಿದೆ.

Women's Reservation Bill: ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ ಎಂದ ಸಿಎಂ

ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ ಎಂದ ಸಿಎಂ

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ; 21 ಮಂದಿಗೆ ಸರ್ಕಾರಿ ಕೆಲಸ

ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಕೆಲಸ ಘೋಷಣೆ

Chamarajanagar oxygen tragedy: ಗಡಿ ಜಿಲ್ಲೆ ಚಾಮರಾಜನಗರದಲ್ಲಿ 2021ರ ಮೇ 2ರಂದು ಸಂಭವಿಸಿದ ಆಕ್ಸಿಜನ್ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ವೇಳೆ 36 ಜನರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು. ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಕೊಡುವಂತೆ ಅಂದಿನಿಂದಲೂ ಆಗ್ರಹ ಕೇಳಿಬಂದಿತ್ತು. ಇದೀಗ ಸಂತ್ರಸ್ತ್ರ ಕುಟುಂಬಗಳ ಮನವಿಗೆ ಸರ್ಕಾರ ಸ್ಪಂದಿಸಿದೆ.

ಮದ್ಯ ಪ್ರಿಯರಿಗೆ ಮತ್ತೆ ಶಾಕ್‌; ಹೊಸ ತೆರಿಗೆ ವ್ಯವಸ್ಥೆ ಜಾರಿಯಾದ್ರೆ  ಶೇ.20 ರಷ್ಟು ಬೆಲೆ ಹೆಚ್ಚಳ

ಮದ್ಯ ಪ್ರಿಯರಿಗೆ ಮತ್ತೆ ಶಾಕ್‌; ಮತ್ತೆ ಹೆಚ್ಚಾಗುತ್ತಾ ಬೆಲೆ!

ಮದ್ಯ ಪ್ರಿಯರಿಗೆ ಶಾಕ್‌ ಕೊಡಲು ಸರ್ಕಾರ ಸಜ್ಜಾಗಿದೆ ಎಂದು ತಿಳಿದು ಬಂದಿದೆ. ಕರ್ನಾಟಕ ಸರ್ಕಾರ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಆಧರಿಸಿ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ ವಿಸ್ಕಿ, ರಮ್ ಸೇರಿದಂತೆ ಸಾಮಾನ್ಯ ಮದ್ಯಗಳ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗಲಿದೆ.

ಕಾರವಾರ ಶಾಸಕ ಸತೀಶ್ ಸೈಲ್‌  ಪುತ್ರಿ  ಸಾಧ್ವಿಗೆ ಒಲಿದ ಮಿಸ್ ಇಂಡಿಯಾ ಕಿರೀಟ

ಕಾರವಾರ ಶಾಸಕ ಸತೀಶ್ ಸೈಲ್‌ ಪುತ್ರಿಗೆ ಮಿಸ್ ಇಂಡಿಯಾ ಕಿರೀಟ

Satish Sail daughter wins Miss India: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಮಿಸ್ ಇಂಡಿಯಾ ವಿಜೇತೆಯಾಗಿದ್ದಾರೆ. ಏಪ್ರಿಲ್ 18, 2026 ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ನಲ್ಲಿ ನಡೆದ 61 ನೇ ಮಿಸ್ ಇಂಡಿಯಾ ಆವೃತ್ತಿಯಲ್ಲಿ ಸಾಧ್ವಿ ಸತೀಶ್ ಸೈಲ್ ಅವರು ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಹೊಸಪೇಟೆಯಲ್ಲಿ ಸರಣಿ ಅಪಘಾತ; ಬೈಕ್, ಕಾರು, ಬಸ್​ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ,  ನಾಲ್ವರ ಸಾವಿನ ಶಂಕೆ

ಸರಣಿ ಅಪಘಾತ; ಬೈಕ್, ಕಾರು, ಬಸ್​ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ

Hosapete Road Accident: ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಬೈಕ್, ಕಾರು, ಬಸ್​ಗೆ ಲಾರಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಎಪಿಎಸ್ ಶಿಕ್ಷಣ ಸಂಸ್ಘೆಗಳ ಸಂಸ್ಥಾಪಕ ಪ್ರೊ.ಎನ್.ಅನಂತಾಚಾರ್ ಅವರ 50ನೇ ಪುಣ್ಯಸ್ಮರಣೆ: ಅಂಚೆ ಚೀಟಿ ಬಿಡುಗಡೆ

ಪ್ರೊ. ಎನ್. ಅನಂತಾಚಾರ್ ಅವರ 50ನೇ ಪುಣ್ಯಸ್ಮರಣೆ: ಅಂಚೆ ಚೀಟಿ ಬಿಡುಗಡೆ

ಅನಂತಾಚಾರ್ ಅವರು ನರಸಿಂಹಮೂರ್ತಿ ಚಾರ್ ಮತ್ತು ತುಳಸಮ್ಮ ದಂಪತಿಯ ಆರು ಮಕ್ಕಳಲ್ಲಿ ಹಿರಿಯ ಮಗನಾಗಿ ಜನಿಸಿದರು. ಪದವಿ ಶಿಕ್ಷಣವೇ ಅಪರೂಪವಾಗಿದ್ದ ಆ ಕಾಲದಲ್ಲಿ, ಇವರ ಕುಟುಂಬದ ಎಲ್ಲ ಗಂಡು ಮಕ್ಕಳು ಪದವೀಧರರಾಗಿದ್ದು ಅವರ ಸಂಸ್ಕಾರಕ್ಕೆ ಸಾಕ್ಷಿಯಾಗಿದೆ. ಅನಂತಾಚಾರ್ ಅವರು ಮೈಸೂರಿನಲ್ಲಿ ಕಲಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದರು.

ಜೀವಾವಧಿ ಶಿಕ್ಷೆಗೊಳಗಾದ ಅಪ್ಪನ ಪರ ಭಾವನಾತ್ಮಕ ಬರಹ ಬರೆದುಕೊಂಡ ವಿನಯ್ ಕುಲಕರ್ಣಿ ಪುತ್ರಿ

ಅಪ್ಪನ ಪರ ಭಾವನಾತ್ಮಕ ಬರಹ ಬರೆದುಕೊಂಡ ವಿನಯ್ ಕುಲಕರ್ಣಿ ಪುತ್ರಿ

ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ವಿನಯ್ ಕುಲಕರ್ಣಿ ಅವರ ಪರ ಪುತ್ರಿ ದೀಪಾಲಿ ವಿ. ಕುಲಕರ್ಣಿ ಭಾವನಾತ್ಮಕ ಬರಹವೊಂದನ್ನು ಬರೆದುಕೊಂಡು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ಏನು?

ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ಏನು?

Vinay Kulakarni: ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಸಜಾ ಬಂಧಿ ಖೈದಿ ನಂಬರ್‌ ನೀಡಲಾಗಿದೆ.

ಚಿಕನ್‌ ಪ್ರಿಯರೇ ಎಚ್ಚರ! ಬೆಂಗಳೂರಿಗೂ ಬಂತು H5N1 ಹಕ್ಕಿ ಜ್ವರ

ಚಿಕನ್‌ ಪ್ರಿಯರೇ ಎಚ್ಚರ ; ಬೆಂಗಳೂರಿಗೂ ಬಂತು H5N1 ಹಕ್ಕಿ ಜ್ವರ

ಹಲವು ದಿನಗಳಿಂದ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದ ಹಕ್ಕಿಜ್ವರ ಬೆಂಗಳೂರಿಗೂ ಕಾಲಿಟ್ಟಿದೆ. ಬೆಂಗಳೂರಿನ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಕಿನಂದು ಹಕ್ಕಿಜ್ವರ ಧೃಡಪಟ್ಟಿದೆ ಎಂದು ತಿಳಿದು ಬಂದಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಹೆಚ್ಚಿದ ಬಿಸಿಲಿನ ತಾಪ; ಕೆಲವು ಜಿಲ್ಲೆಗಳಲ್ಲಿ ಮಳೆ ಸೂಚನೆ

ರಾಜ್ಯಾದ್ಯಂತ ಹೆಚ್ಚಿದ ಬಿಸಿಲಿನ ತಾಪ; ಕೆಲವು ಜಿಲ್ಲೆಗಳಲ್ಲಿ ಮಳೆ ಸೂಚನೆ

Karnataka Weather: ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಏರುತ್ತಲೇ. ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Loading...