ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Ministry for U T Khader: ಕರಾವಳಿಗೆ ಖಾದರ್ ಸಾಹೇಬರ ಖದರ್ ಆಡಳಿತ ಭಾಗ್ಯ!

ಕರಾವಳಿಗೆ ಖಾದರ್ ಸಾಹೇಬರ ಖದರ್ ಆಡಳಿತ ಭಾಗ್ಯ!

ಕ್ಷೇತ್ರದ ಶಾಸಕರಾಗಿ ಸತತ ಐದು ಬಾರಿ ಆಯ್ಕೆಯಾಗಿ, ಪ್ರಸ್ತುತ ಸಚಿವ ಸಂಪುಟದಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಂಡಿರುವ ಯು.ಟಿ.ಖಾದರ್ ಅವರು ಅತ್ಯಂತ ಪ್ರಭಾವಶಾಲಿ ಹಾಗೂ ಜನಪ್ರಿಯ ನಾಯಕರಲ್ಲಿ ಒಬ್ಬರು. ಕಾನೂನು ಪದವೀಧರರಾದ ಇವರು, ಸೇಂಟ್ ಅಲೋಶಿಯಸ್ ಮತ್ತು ಎಸ್‌ಡಿ ಎಂ ಕಾಲೇಜುಗಳಲ್ಲಿ ಶಿಕ್ಷಣ ಮುಗಿಸಿದರು. ವಿದ್ಯಾರ್ಥಿ ದಿಸೆಯಿಂದಲೇ ಎನ್‌ಎಸ್‌ಯುಐ ಸಂಘಟನೆ ಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಹಂತಹಂತವಾಗಿ ಬೆಳೆದರು.

ಘೋರ ದುರಂತ: ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಉಸಿರುಗಟ್ಟಿ ಸಾವು

ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಉಸಿರುಗಟ್ಟಿ ಸಾವು

ಆಕಸ್ಮಿಕವಾಗಿ ಕಾರಿನ ಡಿಕ್ಕಿಯೊಳಗೆ ಸಿಲುಕಿ ಮೂರು ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೊಟ್ಟೂರೇಶ್ವರ ಪೂಜ್ಯರ ಎಂಬುವವರ ಪುತ್ರ ಬಸವಪ್ರಭು (3) ಮೃತಪಟ್ಟ ದುರ್ದೈವಿ ಬಾಲಕ. ಬಸವಪ್ರಭು ಎಂದಿನಂತೆ ತನ್ನ ಸ್ನೇಹಿತರೊಂದಿಗೆ ಮನೆಯ ಮುಂಭಾಗದ ಆವರಣದಲ್ಲಿ ಆಟವಾಡುತ್ತಿದ್ದ.

Kalaburagi is number 1: ನಾಡ ಕಚೇರಿಯಿಂದ ತ್ವರಿತ ಸೇವೆ: ರಾಜ್ಯದಲ್ಲಿಯೇ ಕಲಬುರಗಿ ನಂಬರ್-1

ನಾಡ ಕಚೇರಿಯಿಂದ ತ್ವರಿತ ಸೇವೆ: ರಾಜ್ಯದಲ್ಲಿಯೇ ಕಲಬುರಗಿ ನಂಬರ್-1

ನಾಡ ಕಚೇರಿಯಿಂದ ಕಂದಾಯ ಇಲಾಖೆಯ 43 ಸೇವೆ ನೀಡಲು ಮೇ -2026ರ ಮಾಹೆಯಲ್ಲಿ ಸ್ವೀಕರಿಸ ಲಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ 9.48 ವಿಲೇವಾರಿ ಸೂಚ್ಯಂಕದ ಪ್ರಕಾರ ವಿಲೇವಾರಿ ಮಾಡುವ ಮೂಲಕ ಈಶಾನ್ಯದ ತುದಿಯಲ್ಲಿರುವ ಕಲಬುರಗಿ ಜಿಲ್ಲೆ ಸಾರ್ವಜನಿಕರ ಸೇವೆ ವಿಲೇವಾರಿ ಮತ್ತು ಮಾದರಿ ಆಡಳಿತದ ಮೂಲಕ ಮತ್ತೆ ರಾಜ್ಯದ ಗಮನ ಸೆಳೆದಿದೆ.

ಕಲಬುರಗಿಯನ್ನು ಪಾಕಿಸ್ತಾನ ಮಾಡಲು ಹೊರಟಿದೆ ಸರ್ಕಾರ: ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ FIR

ಕಲಬುರಗಿಯನ್ನು ಪಾಕಿಸ್ತಾನ ಮಾಡಲು ಹೊರಟಿದೆ ಸರ್ಕಾರ: ವಿವಾದಾತ್ಮಕ ಹೇಳಿಕೆ

ಹಿಂದೆ ಮುಸ್ಲಿಂ ಲೀಗ್ ಶಾಸಕರಾಗಿದ್ದ ಖಮರುಲ್ ಇಸ್ಲಾಂ ಅವರು ಕಲಬುರಗಿಯನ್ನು 'ಛೋಟಾ ಪಾಕಿಸ್ತಾನ' ಮಾಡುವುದಾಗಿ ಹೇಳುತ್ತಿದ್ದರು. ಅಂದಿನ ನಾಯಕರಿಂದ ಅದು ಸಾಧ್ಯವಾಗಲಿಲ್ಲ. ಆದರೆ ಇಂದಿನ ನಾಯಕರು ಮತ್ತು ಸರ್ಕಾರ ಮತ್ತೊಮ್ಮೆ ಕಲಬುರಗಿ ಯನ್ನು ಪಾಕಿಸ್ತಾನದ ಮಾದರಿಯಲ್ಲಿ ನಿರ್ಮಿಸಲು ಕೈ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು

ಖಾತೆ ಕಸರತ್ತು ಮಂತ್ರಿಗಳಿಂದ ಮಹಾ ಲಾಬಿ ಶುರು

ಖಾತೆ ಕಸರತ್ತು ಮಂತ್ರಿಗಳಿಂದ ಮಹಾ ಲಾಬಿ ಶುರು

ಸಂಪುಟ ರಚನೆಯ ನಿರಂತರ ಕಸರತ್ತು ನಡೆಸಿದ ನಂತರ ಪಕ್ಷದ ಹೈಕಮಾಂಡ್, ಖಾತೆಗಳ ಹಂಚಿಕೆ ಬಗ್ಗೆ ಮುಖ್ಯಮಂತ್ರಿ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯದ ಹಿರಿಯ ನಾಯಕರಿಗೆ ಸೂಚನೆಗಳು ನೀಡಿದೆ. ಇದನ್ನು ಆಧರಿಸಿ ಈಗಾಗಲೇ ಯಾವ ಸಚಿವರಿಗೆ ಯಾವ ಖಾತೆ ಎನ್ನುವ ತಾತ್ಕಾಲಿಕ ಪಟ್ಟಿಯನ್ನು ಒಂದು ಹಂತಕ್ಕೆ ಸಿದ್ಧಪಡಿಸಲಾಗಿದೆ.

Karnatakaʼs New CM: ಸಿಎಂ ಕುರ್ಚಿ ನನ್ನದಲ್ಲ, ಜನರದ್ದು: ಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಕುರ್ಚಿ ನನ್ನದಲ್ಲ, ಜನರದ್ದು: ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ ಆಡಳಿತದಲ್ಲಿ ಹೊಸ ಬೆಳಕು ಮೂಡಿಸಲು ನನ್ನ 40 ವರ್ಷಗಳ ರಾಜಕೀಯ ಅನುಭವದಲ್ಲಿ ಪ್ರಯತ್ನ ಮಾಡುತ್ತೇನೆ. ಚಿಕ್ಕ ವಯಸ್ಸಿನಲ್ಲೇ ಅಧಿಕಾರ ನೋಡಿದ್ದೇನೆ. ಅನೇಕ ರಾಜಕೀಯ ತಂತ್ರಗಳ ಬಲೆಗೆ ಬಿದ್ದಿದ್ದೇನೆ. ತಿಹಾರ್ ಜೈಲಿಗೆ ಹೋಗುವ ಪರಿಸ್ಥಿತಿ ಬಂತು. ನಾನು ಎಂದಿಗೂ ಎದೆಗುಂದಲಿಲ್ಲ. ಇದೇ ವಿಶ್ವಾಸ ಮತ್ತೆ ರಾಜ್ಯದ ಜನರ ಸೇವೆ ಮಾಡಲು ಸಿಕ್ಕಿದೆ ಎಂದು ನೂತನ ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Celebrations in Chikkaballapur: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ : ಚಿಕ್ಕಬಳ್ಳಾಪುರದಲ್ಲಿ ಸಂಭ್ರಮಾಚರಣೆ

ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮ ವನ್ನು ಕಾಂಗ್ರೆಸ್ ಕಚೇರಿ ಎದುರು ಎಲ್‌ಇಡಿ ಪರದೆಯ ಮೂಲಕ ಸಾರ್ವಜನಿಕರಿಗೆ ನೇರಪ್ರಸಾರ ಮಾಡಲಾಯಿತು. ಬಳಿಕ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.

MLC Elections: ವಿಧಾನ ಪರಿಷತ್‌ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿಧಾನ ಪರಿಷತ್‌ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ 7 ಸದಸ್ಯ ಸ್ಥಾನಕ್ಕೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಜೂನ್ 1 ಜೂ.8ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಗುರುಗಳ ಆಶೀರ್ವಾದವೇ ಯಶಸ್ಸಿನ ರಹಸ್ಯ: ಹಂದನಕೆರೆ, ತಿಪಟೂರು ಕಾಡಸಿದ್ದೇಶ್ವರ ಮಠಗಳೊಂದಿಗೆ ಡಿಕೆಶಿಗೆ ಅವಿನಾಭಾವ ಬಾಂಧವ್ಯ

ತುಮಕೂರಿನ ಧಾರ್ಮಿಕ ಕ್ಷೇತ್ರಗಳೊಂದಿಗೆ ಡಿಕೆಶಿಗೆ ಅವಿನಾಭಾವ ಬಾಂಧವ್ಯ

CM DK Shivakumar: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಈ ಐತಿಹಾಸಿಕ ಸಂದರ್ಭದಲ್ಲಿ, ತುಮಕೂರು ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳೊಂದಿಗೆ ಅವರಿಗಿರುವ ದಶಕಗಳ ಅವಿನಾಭಾವ ಬಾಂಧವ್ಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಕುರಿತ ವಿವರ ಇಲ್ಲಿದೆ.

ಡಾರ್ಕ್ ಪ್ಯಾಟರ್ನ್ ವಿರುದ್ಧ CCPA ಕಠಿಣ ಕ್ರಮ: 5 ಲಕ್ಷದವರೆಗೆ ದಂಡಾಸ್ತ್ರ

ಡಾರ್ಕ್ ಪ್ಯಾಟರ್ನ್ ವಿರುದ್ಧ CCPA ಕಠಿಣ ಕ್ರಮ: 5 ಲಕ್ಷದವರೆಗೆ ದಂಡಾಸ್ತ್ರ

CCPA: ಡಿಜಿಟಲ್, ಇ ಕಾಮರ್ಸ್ ವೇದಿಕೆಗಳಲ್ಲಿ ಕರಾಳ ಮಾದರಿ (ಡಾರ್ಕ್ ಪ್ಯಾಟರ್ನ್‌) ವಿರುದ್ಧ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, 2 ಪ್ರಮುಖ ಕಂಪನಿಗಳಿಗೆ ₹ 5 ಲಕ್ಷದವರೆಗೆ ದಂಡ ವಿಧಿಸಿದ್ದಲ್ಲದೆ, ಗ್ರಾಹಕರನ್ನು ಮೋಸಗೊಳಿಸದಂತೆ ನಿರ್ದೇಶನ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶರಾಗಿ ರಾಘವೇಂದ್ರ ಸೀತಾರಾಮ ಶ್ರೀವತ್ಸ ನೇಮಕ

ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶರಾಗಿ ರಾಘವೇಂದ್ರ ಶ್ರೀವತ್ಸ ನೇಮಕ

ಸುಪ್ರೀಂಕೋರ್ಟ್‌ನ ಅಧಿಕೃತ ಹಿರಿಯ ವಕೀಲರಾಗಿದ್ದ ಚಿಕ್ಕಬಳ್ಳಾಪುರ ಮೂಲದ ರಾಘವೇಂದ್ರ ಸೀತಾರಾಮ ಶ್ರೀವತ್ಸ ಅವರನ್ನು ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶರಾಗಿ ನೇಮಕ ಮಾಡುವ ಪ್ರಸ್ತಾವಕ್ಕೆ ಸುಪ್ರೀಂಕೋರ್ಟ್‌ ಕೊಲಿಜಿಯಂ ಒಪ್ಪಿಗೆ ಸೂಚಿಸಿದೆ. ಕಳೆದ ಹಲವು ವರ್ಷಗಳಿಂದ ಸುಪ್ರೀಂಕೋರ್ಟ್‌, ದಿಲ್ಲಿ ಹೈಕೋರ್ಟ್‌ ಸೇರಿ ವಿವಿಧ ನ್ಯಾಯಾಲಯಗಳಲ್ಲಿ ನ್ಯಾಯವಾದಿಯಾಗಿ ಕರ್ತವ್ಯ ನಿರ್ವಹಿಸಿದ್ದ ರಾಘವೇಂದ್ರ ಶ್ರೀವತ್ಸ ಅವರು 2024ರ ಜನವರಿ 19ರಿಂದ ಸುಪ್ರೀಂಕೋರ್ಟ್‌ನ ಅಧಿಕೃತ ಹಿರಿಯ ವಕೀಲರಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ.

ಬಿ.ಕೆ. ಹರಿಪ್ರಸಾದ್‌ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ; ಡಿ.ಕೆ. ಶಿವಕುಮಾರ್‌ ಉತ್ತರಾಧಿಕಾರಿಯಾಗಿ ಆಯ್ಕೆ

ಬಿ.ಕೆ. ಹರಿಪ್ರಸಾದ್‌ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ

BK Hariprasad: ಡಿ.ಕೆ. ಶಿವಕುಮಾರ್‌ ಅವರಿಂದ ತೆರವಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆಯ್ಕೆಯಾಗಿದ್ದಾರೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿಕೃತ ಆದೇಶ ಹೊರಡಿಸಿದೆ.

Cabinet Meeting: ವಿದ್ಯಾರ್ಥಿಗಳಿಗೂ ಫ್ರೀ ಬಸ್‌ ಪಾಸ್‌; ಮೊದಲ ಸಚಿವ ಸಂಪುಟ ಸಭೆಯಲ್ಲೇ 6 ಪ್ರಮುಖ ನಿರ್ಣಯ ಘೋಷಿಸಿದ ಸಿಎಂ ಡಿಕೆಶಿ

ವಿದ್ಯಾರ್ಥಿಗಳಿಗೂ ಫ್ರೀ ಬಸ್‌ ಪಾಸ್‌; ಸಚಿವ ಸಂಪುಟದಲ್ಲಿ ನಿರ್ಣಯ

ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನತೆಗೆ ಹಲವು ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಸಭೆಯಲ್ಲಿ ಯಾವೆಲ್ಲಾ ನಿರ್ಣಯ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಇಲ್ಲಿದೆ.

Chinthamani News: ಸಾಧನೆಗೈದ ವಿದ್ಯಾರ್ಥಿಗಳಿಗೆ ಬಲಿಜ ಜನಾಂಗದದಿಂದ ಸನ್ಮಾನ

ಸಾಧನೆಗೈದ ವಿದ್ಯಾರ್ಥಿಗಳಿಗೆ ಬಲಿಜ ಜನಾಂಗದದಿಂದ ಸನ್ಮಾನ

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ(Bangalore North University) ನಡೆಸಿದ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಚಿಂತಾಮಣಿ ನಗರದ ಇಬ್ಬರು ವಿದ್ಯಾರ್ಥಿನಿ ಯರು ಅತ್ಯುತ್ತಮ ಸಾಧನೆ ಮಾಡಿದ್ದು,ಅವರಿಗೆ ತಾಲೂಕು ಬಲಿಜ ಜನಾಂಗದ ಸೇವಾ ಟ್ರಸ್ಟ್ ವತಿಯಿಂದ ಆತ್ಮೀಯ ವಾಗಿ ಸನ್ಮಾನಿಸಿ ಗೌರವಿಸಲಾಯಿತು.

Chikkaballapur News: ಪ್ರಕೃತಿಯ ಎದುರು ಎಲ್ಲರೂ ಅನಾಥರೇ, ವಾಸ್ತವ ಅರಿತು ಭವಿಷ್ಯ ರೂಪಿಸಿಕೊಳ್ಳಿ: ಜಿಲ್ಲಾಧಿಕಾರಿ ಜಿ.ಪ್ರಭು ಹೇಳಿಕೆ

ಪ್ರಕೃತಿಯ ಎದುರು ಎಲ್ಲರೂ ಅನಾಥರೇ, ವಾಸ್ತವ ಅರಿತು ಭವಿಷ್ಯ ರೂಪಿಸಿಕೊಳ್ಳಿ

ಕೋವಿಡ್ ಸಾಂಕ್ರಾಮಿಕದಂತಹ ಪ್ರಾಕೃತಿಕ ದಾಳಿಗೆ ಸಿಕ್ಕಿ ಜಿಲ್ಲೆಯಲ್ಲಿ 16 ಮಕ್ಕಳು ತಂದೆ ತಾಯಿಗಳನ್ನು ಕಳೆದುಕೊಂಡು ಅನಾಥರಾಗಿದ್ದರು. ಈ ಪೈಕಿ ಪ್ರಸ್ತುತ 9 ಮಕ್ಕಳು ಪಿ.ಎಂ. ಪೋಷಣ್ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ಯೋಜನೆಯಡಿ ನೊಂದಾಯಿತರಾದ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾಧಿಕಾರಿಗಳು ಹಾಗೂ ಫಲಾನು ಭವಿಯ ಹೆಸರಲ್ಲಿ ಜಂಟಿ ಖಾತೆಯನ್ನು ತೆರೆಯಲಾಗಿರುತ್ತದೆ

Shidlaghatta News: ಸಲ್ಲಾಪುರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ; ಸಾರ್ವಜನಿಕರಿಗೆ ಬಿರಿಯಾನಿ ವಿತರಣೆ

ಸಾರ್ವಜನಿಕರಿಗೆ ಬಿರಿಯಾನಿ ವಿತರಣೆ

ಸಲ್ಲಾಪುರಮ್ಮ ದೇವಿಯ ಕೃಪೆಯಿಂದ ತಾವು ಹೊತ್ತಿದ್ದ ಹರಿಕೆ ಈಡೇರಿದ್ದು, ಅದರ ಅಂಗ ವಾಗಿ ವಿಶೇಷ ಪೂಜೆ ನೆರವೇರಿಸಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಮಾಡಲಾಗಿದೆ ಎಂದು ತಿಳಿಸಿ ದರು. ರಾಜ್ಯದಲ್ಲಿ ಸುಶಾಸನ, ರೈತರ ಕಲ್ಯಾಣ, ಯುವಕರಿಗೆ ಉದ್ಯೋಗಾವಕಾಶಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಮತ್ತಷ್ಟು ವೇಗ ಪಡೆಯಲಿ ಎಂದು ದೇವಿಯಲ್ಲಿ ಪ್ರಾರ್ಥಿಸಲಾಗಿದೆ

Gudibande News: ಗುಡಿಬಂಡೆ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ: ಜನರ ಸಮಸ್ಯೆ ಆಲಿಸಿದ ಜಿ.ಪ್ರಭು

ಗುಡಿಬಂಡೆ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ

ತಾಲೂಕು ಕಚೇರಿಗೆ ಆಗಮಿಸಿದ ಜಿಲ್ಲಾಧಿಕಾರಿಗಳು ಮೊದಲು ಟಪಾಲು ವಿಭಾಗ, ದಾಖಲೆ ಸಂಗ್ರಹ ಕೊಠಡಿ ಸೇರಿದಂತೆ ವಿವಿಧ ವಿಭಾಗಗಳನ್ನು ಪರಿಶೀಲಿಸಿ, ದಾಖಲೆಗಳ ನಿರ್ವಹಣೆ ಮತ್ತು ಆಡಳಿತಾತ್ಮಕ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಳಿಕ ಸಭಾಂಗಣ ದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಿದರು.

Gauribidanur News: ಎಸಿಸಿ ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಜಿಲ್ಲಾಧಿಕಾರಿ ಅವಕಾಶ ನೀಡಬಾರದು : ರಕ್ಷಣಾ ವೇದಿಕೆ ಆಗ್ರಹ

ಎಸಿಸಿ ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಜಿಲ್ಲಾಧಿಕಾರಿ ಅವಕಾಶ ನೀಡಬಾರದು

ಪ್ರಸ್ತುತ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ 2.0 ಮೆಟ್ರಿಕ್ ಟನ್ ಸಿಮೆಂಟ್ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿದ್ದು, ಅದನ್ನು 8.0 ಮೆಟ್ರಿಕ್ ಟನ್ ಸಿಮೆಂಟ್ ಉತ್ಪಾದನೆ ಮಾಡಲು ಎಸಿಸಿ ಸಿಮೆಂಟ್ ಕಾರ್ಖಾನೆಯವರು ಮುಂದಾಗಿರುವುದು ತಿಳಿದು ಬಂದಿದೆ. ಜಿಲ್ಲಾಧಿಕಾರಿಗಳು ಇದಕ್ಕೆ ಅವಕಾಶ ಮಾಡಬಾರದು

ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ರಾಜ್ಯ ಅಭಿವೃದ್ಧಿಯತ್ತ ಸಾಗಲಿದೆ: ಪುಟ್ಟು ಅಂಜಿನಪ್ಪ

ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ರಾಜ್ಯ ಅಭಿವೃದ್ಧಿಯತ್ತ ಸಾಗಲಿದೆ

ನಗರದಲ್ಲಿ ಬುಧವಾರ ಆಯೋಜಿಸಿದ್ದ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮ ದಲ್ಲಿ ಮಾತನಾಡಿ, ನೂತನ ಮುಖ್ಯಮಂತ್ರಿಯವರ ಯಶಸ್ವಿ ಆಡಳಿತ, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸುಖ-ಶಾಂತಿಗಾಗಿ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ

DK Shivakumar: ಸಾಷ್ಟಾಂಗ ನಮಸ್ಕಾರ ಮಾಡಿ ಶಕ್ತಿಸೌಧಕ್ಕೆ ಡಿಕೆಶಿ ಎಂಟ್ರಿ; ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ

ಸಾಷ್ಟಾಂಗ ನಮಸ್ಕಾರ ಮಾಡಿ ಶಕ್ತಿಸೌಧಕ್ಕೆ ಸಿಎಂ ಡಿಕೆಶಿ ಪ್ರವೇಶ

DK Shivakumar Oath Ceremony: ಲೋಕಭವನದಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಡಿ.ಕೆ.ಶಿವಕುಮಾರ್ ತೆರಳಿದರು. ಶಕ್ತಿಸೌಧದ ಆವರಣದಲ್ಲಿ ಗಾಂಧಿಜಿ, ಅಂಬೇಡ್ಕರ್‌, ನೆಹರು, ಬಸವಣ್ಣ ಮೂರ್ತಿಗಳಿಗೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕ ಸಿಎಂ ಕಚೇರಿಗೆ ತೆರಳಿದರು.

ಭವಿಷ್ಯದ ಎಐ ತಜ್ಞರನ್ನು ರೂಪಿಸಲು ಮುಂದಾದ ಕಾಗ್ನಿಜೆಂಟ್, ಯುವ ಎಂಜಿನಿಯರ್‌ಗಳಿಗೆ ಬಂಪರ್ ಅವಕಾಶ!

ಭವಿಷ್ಯದ ಎಐ ತಜ್ಞರನ್ನು ರೂಪಿಸಲು ಮುಂದಾದ ಕಾಗ್ನಿಜೆಂಟ್

Cognizant: ಎಐ (ಕೃತಕ ಬುದ್ಧಿಮತ್ತೆ) ಈಗ ಪ್ರಯೋಗದ ಹಂತವನ್ನು ದಾಟಿ, ವಾಸ್ತವ ಕೆಲಸಗಳಲ್ಲಿ ಬಳಕೆಯಾಗುವ ಹಂತಕ್ಕೆ ತಲುಪಿದೆ. ಭವಿಷ್ಯದಲ್ಲಿ ಇದನ್ನು ಸಮರ್ಥವಾಗಿ ನಿಭಾಯಿಸಲೆಂದೇ 'ಎಐ ಬಿಲ್ಡರ್‌'ಗಳ ಪಡೆಯನ್ನು ಕಟ್ಟಲು ಮುಂದಾಗಿರುವ ಖ್ಯಾತ ಐಟಿ ಸೇವಾ ಸಂಸ್ಥೆ 'ಕಾಗ್ನಿಜೆಂಟ್' ಹೊಸ ಕಾರ್ಯಕ್ರಮವನ್ನು ಪರಿಚಯಿಸಿದೆ.

ವಿದ್ಯಾರ್ಥಿ ನಾಯಕ ಈಗ ಮುಖ್ಯಮಂತ್ರಿ; ಡಿ.ಕೆ. ಶಿವಕುಮಾರ್‌ಗೆ ರಾಜಕೀಯ ಜರ್ನಿ ಹೇಗಿತ್ತು?

ಡಿ.ಕೆ. ಶಿವಕುಮಾರ್‌ಗೆ ರಾಜಕೀಯ ಜರ್ನಿ ಹೇಗಿತ್ತು?

DK Shivakumar: ರಾಜಕೀಯದಲ್ಲಿ ʼಟ್ರಬಲ್ ಶೂಟರ್ʼ ಎಂದೇ ಕರೆಯಲ್ಪಡುವ ಡಿಕೆಶಿ ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬರಲು ಮಹತ್ವದ ಕೊಡುಗೆ ನೀಡಿದ ಅವರಿಗೆ ಸಿಎಂ ಪಟ್ಟ ದೊರೆತಿದೆ. ಕುಟುಂಬಸ್ಥರು, ಕಾಂಗ್ರೆಸ್‌ ಮುಖಂಡರ ಸಮ್ಮುಖದಲ್ಲಿ ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ಬಳಕಿ ವಿಧಾನಸೌಧಕ್ಕೆ ರೋಡ್‌ ಶೋ ಮೂಲಕ ತೆರಳಿದರು. ಅವರ ರಾಜಕೀಯ ಜರ್ನಿ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

CM Oath ceremony: ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ಮೋದಿ, ಕೇಂದ್ರ ಸಚಿವ ಎಚ್‌ಡಿಕೆ ಸೇರಿ ಹಲವು ಗಣ್ಯರಿಂದ ಅಭಿನಂದನೆ

ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ಮೋದಿ, ಎಚ್‌ಡಿಕೆ ಅಭಿನಂದನೆ

ಬೆಂಗಳೂರಿನ ಲೋಕಭವನದಲ್ಲಿ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಅವರು ಬುಧವಾರ ಪದಗ್ರಹಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸೇರಿ ದೇಶದ ವಿವಿಧ ಭಾಗಗಳ ರಾಜಕೀಯ ನಾಯಕರು ಸೇರಿ ಗಣ್ಯರು ಶುಭ ಹಾರೈಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಹಲವರು ಅಭಿನಂದನೆ ತಿಳಿಸಿದ್ದಾರೆ.

Karnataka Cabinet: ಸಿಎಂ ಡಿಕೆಶಿ ಜತೆ ಸಚಿವರಾಗಿ 13 ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಸಿಎಂ ಡಿಕೆಶಿ ಜತೆ ಸಚಿವರಾಗಿ 13 ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ನೂತನ ಸಿಎಂ ಡಿ.ಕೆ.ಶಿವಕುಮಾರ್, ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಡಿಸಿಎಂ ಆಗಿ ಡಾ.ಜಿ.ಪರಮೇಶ್ವರ್‌ ಸೇರಿ 13 ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದರು. ಯಾರಿಗೆಲ್ಲಾ ಡಿಕೆಶಿ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

Loading...