ಮೊಬೈಲ್ ಮೋಹಕ್ಕೆ ಒಳಗಾದವರಿಗೆ ಖಂಡಿತವಾಗಿ ಭವಿಷ್ಯವಿಲ್ಲ
ಪದವಿ ಶಿಕ್ಷಣ ಎಂಬುದು ಕೇವಲ ಡಿಗ್ರಿ ಮಾತ್ರವಲ್ಲ ಬದಲಿಗೆ ಬದುಕು ಕಟ್ಟಿಕೊಳ್ಳಲು ಇಡುವ ಮಹತ್ವದ ಹೆಜ್ಜೆಯಾಗಿದೆ. ಒಂದು ದಿನವೂ ಗೈರುಹಾಜರಾಗದೆ ತರಗತಿಗಳಿಗೆ ಬರಬೇಕು. ಮನವಿಟ್ಟು ಉಪನ್ಯಾಸ ಕೇಳಬೇಕು. ಯಾರೋ ಕೊಡುವ ನೋಟ್ಸ್ ಮೇಲೆ ಅವಲಂಬಿತ ರಾಗಬೇಡಿ.
ಜೂ.4ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದೆ. 08, 10, 12, 14, 16 ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟ ನಡೆಯುತ್ತಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾ ಪಟುಗಳು ಜೂ.4ರ ಬೆಳಿಗ್ಗೆ ೬ ಗಂಟೆಗೆ ಕಂಠೀರವ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕಿದೆ.
ಆಸ್ಪತ್ರೆಯ ಒಳರೋಗಿಗಳಿಗೆ ಹಾಲು ವಿತರಿಸಿ ಮಾತನಾಡಿದ ಚಿಮುಲ್ ನಿರ್ದೇಶಕರಾದ ಊಲವಾಡಿ ಅಶ್ವಥನಾರಾಯಣಬಾಬು ಮಾತನಾಡಿ ಜೂನ್ ಒಂದನೇ ದಿನಾಂಕವನ್ನು ವಿಶ್ವ ಹಾಲು ದಿನವನ್ನಾಗಿ ಘೋಷಿಸಿರುವದರಿಂದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮೊಟ್ಟ ಮೊದಲನೆಯದಾಗಿ ಇಂದು ವಿಶ್ವಹಾಲು ದಿನಾಚರಣೆಯನ್ನು ಸರ್ಕಾರಿ ಆಸ್ಪತ್ರೆ ಯಲ್ಲಿ ಬಡ ರೋಗಿಗಳಿಗೆ ಆಚರಣೆ ಮಾಡುತ್ತಿರುವುದಾಗಿ ಹೇಳಿದರು
ರೈತರಿಗೆ ಮಾರಕ ವಾದ ಭೂಸ್ವಾಧೀನ ಕಾಯ್ದೆಯನ್ನು ಕೇಂದ್ರ ಸರ್ಕಾರವು ವಾಪಸ್ ಪಡೆಯಿತು. ಅಂದು ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೆ ತಂದಿದ್ದು ವಾಪಸ್ ಪಡೆಯಲಿಲ್ಲ.ಅಂದಿನ ವಿರೋಧಪಕ್ಷದಲ್ಲಿದ್ದ ಇಂದಿನ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಭರವಸೆ ನೀಡಿದ್ದರು
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವ ಸಂತಸದಲ್ಲಿ ತಾಲೂಕಿನ ಪ್ರತಿ ಮನೆಗೂ ಸಿಹಿ ಹಂಚಲು ಉದ್ದೇಶಿಸಲಾಗಿದೆ. ನೆಲಮಂಗಲದಲ್ಲಿ ಲಾಡುಗಳ ತಯಾರಿಕೆಯನ್ನು ಶಾಸಕ ಶ್ರೀನಿವಾಸ್ ಮಂಗಳವಾರ ಪರಿಶೀಲನೆ ನಡೆಸಿದರು. ಪ್ರತಿ ಮನೆಗೆ ಮುಕ್ಕಾಲು ಕೆಜಿ ಸಿಹಿ ಬಾಕ್ಸ್ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
DK Shivakumar: ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ನಾನು ತುಂಬಾ ಬದ್ಧನಾಗಿದ್ದೇನೆ ಮತ್ತು ನಾನು ಬಹಳಷ್ಟು ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರಗಳನ್ನು ಈಡೇರಿಸುತ್ತೇನೆ. ದಾರಿ ಅಷ್ಟು ಸುಲಭವಾಗಿಲ್ಲ. ಆದರೂ ಇದನ್ನು ನಿರ್ವಹಿಸಬೇಕು. ನಾನು ನನ್ನ ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ, ಸಮರ್ಪಣಾಭಾವದಿಂದ ಮಾಡುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
Chikkanayakanahalli News: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಡಿ.ಕೆ. ಶಿವಕುಮಾರ್ ಅವರ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಉಪ್ಪಾರ ಸಂಘದ ಉಪಾಧ್ಯಕ್ಷ ಕಲ್ಲೇಶ್ ಒತ್ತಾಯಿಸಿದ್ದಾರೆ.
CM oath-taking ceremony: ಡಿ.ಕೆ.ಶಿವಕುಮಾರ್ ಅವರು ನೂತನ ಸಿಎಂ ಆಗಿ ನಾಳೆ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಳಿನ ಕಾರ್ಯಕ್ರಮಕ್ಕೆ ಸಾಮಾನ್ಯರಿಂದ ಹಿಡಿದು ಹೈಕಮಾಂಡ್ ಮಟ್ಟದ ನಾಯಕರವರೆಗೆ ಆಹ್ವಾನ ನೀಡಿರುವುದು ವಿಶೇಷವಾಗಿದೆ. ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬ ಪಟ್ಟಿ ಇಲ್ಲಿ ನೀಡಲಾಗಿದೆ.
ತನ್ನನ್ನು ತಾನು ಅರಿಯಬೇಕು ಎಂದು ಎಲ್ಲಾ ಸಂತರು ಉಪದೇಶ ಮಾಡಿದ್ದಾರೆ. ತನ್ನನ್ನು ತಾನು ಅರಿಯುವುದೇ ಮೋಕ್ಷ. ದುರ್ಗುಣಗಳನ್ನು ಒಳಗೊಂಡಿರುವ ಮನಸ್ಸು ಈ ಸಾಧನೆ ಮಾಡಲು ಬಿಡುವುದಿಲ್ಲ. ಮನಸ್ಸು ಕನ್ನಡಿಯ ಹಾಗೆ. ಧೂಳು ಮುಚ್ಚಿದ ಕನ್ನಡಿಯಲ್ಲಿ ಪ್ರತಿಬಿಂಬವೂ ಮಲಿನವಾಗಿ ಕಾಣುವಂತೆ, ದುರ್ಗುಣಗಳಿಂದ ಕೂಡಿ, ಮಲಿನವಾದ ಮನಸ್ಸಿ ನಲ್ಲಿ ಶುದ್ಧ ಚೈತನ್ಯರೂಪದ ಆತ್ಮದರ್ಶನ ಸಾಧ್ಯವಿಲ್ಲ
ನಾಳೆ ಸಂಜೆ 4 ಗಂಟೆಗೆ ಬೆಂಗಳೂರಿನ ಲೋಕ ಭವನದಲ್ಲಿ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಇನ್ನು ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಬೃಹತ್ ಬ್ಯಾನರ್, ಫ್ಲೆಕ್ಸ್ಗಳು ರಾರಾಜಿಸುತ್ತಿವೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಕೊಲೆ ಕೇಸ್ನ ತನಿಖೆ ನಡೆಸುತ್ತಿದ್ದ ವೇಳೆ ಪೊಲೀಸರಿಗೆ ಕಂಟ್ರಿ ಪಿಸ್ತೂಲ್ನಿಂದ ಹತ್ಯೆ ಮಾಡಿರುವುದು ಗೊತ್ತಾಗಿತ್ತು. ಬಳಿಕ ಕಂಟ್ರಿ ಪಿಸ್ತೂಲ್ ಮೂಲ ಬೆನ್ನುಬಿದ್ದ ಪೊಲೀಸರು, ಪಿಸ್ತೂಲ್ ತಯಾರಿಸುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಪ್ರಕಾರ, ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕ ಮತ್ತು ಹೊಸ ಸಿರಿಂಜ್ಗಳನ್ನು ಕಡ್ಡಾಯವಾಗಿ ಬಳಸಬೇಕು ಎಂಬ ಕಾನೂನು ಇದೆ ಆದರೆ ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ಮಲ್ಲಿಕಾರ್ಜುನ ಎಂಬ ಯುವಕ ಸಣ್ಣಪುಟ್ಟ ಗಾಯಗಳಾ ಗಿದ್ದು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಹೋಗಿದ್ದಾನೆ ಈ ವೇಳೆ ಕರ್ತವ್ಯದಲ್ಲಿದ್ದ ಸ್ಟಾಪ್ ನರ್ಸ್ ಕೇವಲ ಸೂಜಿ ಬದಲಿಸಿ ಹಳೆಯ ಸಿರೇಂಜ್ ಬಳಸಿ ಚುಚ್ಚುಮದ್ದು ನೀಡಿದ್ದಾನೆ.
ಅಕ್ರಮ ಶಸ್ತ್ರಾಸ್ತ್ರ ತಯಾರಿಸುತ್ತಿದ್ದ ಆರೋಪದಲ್ಲಿ ಕರ್ನಾಟಕ ಪೊಲೀಸರು ಪುಸ್ತಕ ಮಾರಾಟಗಾರನೊಬ್ಬ ಸೇರಿದಂತೆ ಒಟ್ಟು 13 ಶಂಕಿತರನ್ನು ಬಂಧಿಸಿದ್ದಾರೆ. ಈ ಮೂಲಕ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಂದೂಕು ಸರಬರಾಜು ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಇವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
30 ವರ್ಷದೊಳಗಿನ ಏಷ್ಯಾ ಫೋರ್ಬ್ಸ್ 30ರ 2025 ಪಟ್ಟಿಯಲ್ಲಿ ಬೆಂಗಳೂರಿನ ವಿದ್ಯಾರ್ಥಿನಿಯೊಬ್ಬಳು ಸ್ಥಾನ ಪಡೆದಿದ್ದಾಳೆ. ಸಾಮಾಜಿಕ ಪರಿಣಾಮ ವಿಭಾಗದಲ್ಲಿ ಈ ಸಾಧನೆ ಮಾಡಿರುವುದು 17 ವರ್ಷದ ದಿವಾ ಉತ್ಕರ್ಷ. ಇವರು ಬಸವೇಶ್ವರ ನಗರದ ನ್ಯಾಷನಲ್ ಅಕಾಡೆಮಿ ಫಾರ್ ಲರ್ನಿಂಗ್ನಲ್ಲಿ ದ್ವಿತೀಯ ಪಿಯುಸಿ ಮುಗಿಸಿ ಅಮೆರಿಕದಲ್ಲಿ ಕೈಗಾರಿಕಾ ಎಂಜಿನಿಯರಿಂಗ್ ಅಧ್ಯಯನ ಮಾಡುವ ಯೋಜನೆ ಮಾಡಿಕೊಂಡಿದ್ದಾರೆ. ಇವರು ಮಾಡಿರುವ ಸಾಧನೆ ವಿವರ ಇಲ್ಲಿದೆ.
ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ, ತಮಗೆ ಆನ್ ಲೈನ್ನಲ್ಲಿ 23 ಲಕ್ಷ ವಂಚನೆ ಮಾಡಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಮಹಿಳೆ ವೈವಾಹಿಕ ವೇದಿಕೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿದ್ದರು. ಇದರಿಂದ ಸ್ಕಾಟ್ಲೆಂಡ್ ನಲ್ಲಿ ಕೆಲಸ ಮಾಡುತ್ತಿರುವ ಡಾ. ವಿಹಾನ್ ಮಿಶ್ರಾ ಹೆಸರಿನ ವ್ಯಕ್ತಿ ಸಂಪರ್ಕಿಸಿದ್ದಾರೆ.