ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಆದ್ಯತೆ ನೀಡಿ: ತಹಶೀಲ್ದಾರ್ ಗಗನ ಸಿಂಧು
ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸುವವರು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಧ್ವನಿವರ್ಧಕ, ಮೆರವಣಿಗೆ ಹಾಗೂ ವಿಸರ್ಜನೆಗೆ ಸಂಬಂಧಿಸಿದ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸಿ ಪಿಒಪಿ ಮೂರ್ತಿಗಳ ಮಾರಾಟ, ಖರೀದಿ ಅಥವಾ ಪ್ರತಿಷ್ಠಾಪನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.