ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Chikkaballapur News: ಒಳಮೀಸಲಾತಿಯಂತೆ ನೇಮಕಾತಿ ನಡೆಯದಿದ್ದರೆ ವಿಧಾನ ಸೌಧ ಮುತ್ತಿಗೆ ಖಚಿತ : ಮಾದಾರ ಮಹಾಸಭಾದ ಜಿಲ್ಲಾಧ್ಯಕ್ಷ ಪಟ್ರೇನಹಳ್ಳಿ ಕೃಷ್ಣ  ಎಚ್ಚರಿಕೆ.

ಒಳಮೀಸಲಾತಿಯಂತೆ ನೇಮಕಾತಿ ನಡೆಯದಿದ್ದರೆ ವಿಧಾನ ಸೌಧ ಮುತ್ತಿಗೆ ಖಚಿತ

ಪ್ರಸ್ತುತ ನೇಮಕಾತಿ ನಡೆಯುವ 56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಶೇ.21ರಂತಾಗಲಿ, ಅಥವಾ ಶೇ 18 ರಂತಾಗಲಿ ಹೇಗಾದರೂ ಆಗಲಿ ಒಳಮೀಸಲಾತಿಯಂತೆಯೇ ನಡೆಯಬೇಕು. ಆ ಮೂಲಕ 35 ವರ್ಷ ಗಳ ಹೋರಾಟಕ್ಕೆ ನ್ಯಾಯ ನೀಡಬೇಕು. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಕ್ರಮ ತೆಗೆದುಕೊಳ್ಳಬೇಕು. ಒತ್ತಡಕ್ಕೆ ಮಣಿದಲ್ಲಿ ಮುಂದಿನ ದಿನಗಳಲ್ಲಿ ಮಾದಿಗ ಸಮುದಾಯದ ಪ್ರತಿರೋದ ಎದುರಿಸಬೇಕಾಗುತ್ತದೆ.

Chikkaballapur News: ಸಾಮಾಜಿಕ ಪರಿಣಾಮಗಳನ್ನು ಅಧ್ಯಯನ ಮಾಡುವ ಜವಾಬ್ದಾರಿ ಸಮಾಜ ಶಾಸ್ತ್ರಜ್ಞರ ಮೇಲಿದೆ: ಪ್ರಾಂಶುಪಾಲೆ ಡಾ.ಮಂಜುಳ ಅಭಿಮತ

ಸಾಮಾಜಿಕ ಪರಿಣಾಮಗಳ ಅಧ್ಯಯನ ಸಮಾಜಶಾಸ್ತ್ರಜ್ಞರ ಜವಾಬ್ದಾರಿ

ತಂತ್ರಜ್ಞಾನ ಮಾನವನ ಜೀವನವನ್ನು ಸುಲಭಗೊಳಿಸಿದರೂ, ಅದರ ಸಾಮಾಜಿಕ ಪರಿಣಾಮಗಳನ್ನು ಅಧ್ಯಯನ ಮಾಡುವ ಜವಾಬ್ದಾರಿ ಸಮಾಜ ಶಾಸ್ತ್ರಜ್ಞರ ಮೇಲಿದೆ. ಕೃತಕ ಬುದ್ಧಿಮತ್ತೆಯ ಬಳಕೆ ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಕ್ಷೇತ್ರಗಳಲ್ಲಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ, ಸಾಮಾಜಿಕ ಅಸಮಾ ನತೆ, ಉದ್ಯೋಗ ನಷ್ಟ, ಡೇಟಾ ಗೌಪ್ಯತೆ ಮತ್ತು ನೈತಿಕ ಮೌಲ್ಯಗಳಂತಹ ಪ್ರಶ್ನೆಗಳು ಉದ್ಭವಿಸುತ್ತಿವೆ

Chikkaballapur News: “ವಿಶ್ವದ ಸಮಸ್ಯೆಗಳಿಗೆ ಭಾರತೀಯ ಸಂಸ್ಕೃತಿ ಆಚಾರ–ವಿಚಾರಗಳೇ ಏಕೈಕ ಪರಿಹಾರ” :  ಸಂತೋಷ್ ಕುಮಾರ್ ಕಾರ್ಲೇಟಿ

“ವಿಶ್ವದ ಸಮಸ್ಯೆಗಳಿಗೆ ಭಾರತೀಯ ಸಂಸ್ಕೃತಿ ಆಚಾರ–ವಿಚಾರಗಳೇ ಏಕೈಕ ಪರಿಹಾರ”

ಹಿಂದೂ ಧರ್ಮಕ್ಕೆ ನಿರ್ದಿಷ್ಟ ಜನನ ಅಥವಾ ಅಂತ್ಯದ ದಿನಾಂಕವಿಲ್ಲದೆ, ಸತ್ಯಯುಗ, ತ್ರೇತಾಯುಗ, ದ್ವಾಪರಯುಗ ಹಾಗೂ ಕಲಿಯುಗಗಳ ಮೂಲಕ ಕಾಲಮಾನವನ್ನು ಖಗೋಳಶಾಸ್ತ್ರದ ಆಧಾರದ ಮೇಲೆ ವಿವರಿಸಲಾಗಿದೆ. ಲೋಹಶಾಸ್ತ್ರ, ಶಿಲ್ಪಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ವಸ್ತ್ರ ತಯಾರಿಕಾ ಕಲೆಗಳಲ್ಲಿ ಭಾರತೀಯರ ಸಾಧನೆಗಳನ್ನು ಅವರು ಸ್ಮರಿಸಿದರು.

ಗ್ರೇಟರ್ ಬೆಂಗಳೂರು ವ್ಯಾಪ್ತಿಯ ರಸ್ತೆ ಬದಿ, ವಿಭಜಕಗಳ ಗಿಡಗಳ ಸೂಕ್ತ ನಿರ್ವಹಣೆಗೆ ಆದೇಶ

ಬೆಂಗಳೂರಿನ ರಸ್ತೆ ಬದಿ, ವಿಭಜಕಗಳ ಗಿಡಗಳ ಸೂಕ್ತ ನಿರ್ವಹಣೆಗೆ ಆದೇಶ

DK Shivakumar: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಎಲ್ಲ ರಸ್ತೆಬದಿ ಹಾಗೂ ರಸ್ತೆ ವಿಭಜಕಗಳಲ್ಲಿನ ಗಿಡಗಳನ್ನು ಸರಿಯಾಗಿ ಪೋಷಣೆ ಮಾಡಬೇಕು, ಒಣಗಿ ಬಿದ್ದಿರುವ ಕಸವನ್ನು ತೆರವುಗೊಳಿಸಬೇಕು. ಈ ಪ್ರಕ್ರಿಯೆಯನ್ನು ನಿರಂತರ ಪರಿಶೀಲಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ನೆಡಲಾಗಿದ್ದ ಗಿಡಗಳನ್ನು ಸೂಕ್ತ ನಿರ್ವಹಣೆಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Bengaluru News: ಪ್ರಿಯಕರನ ಕೈಕಾಲು ಕಟ್ಟಿ ಭೀಕರವಾಗಿ ಹತೈಗೈದ ಕಿರುತೆರೆ ನಟಿ

ಪ್ರಿಯಕರನನ್ನು ಭೀಕರವಾಗಿ ಹತೈಗೈದ ಕಿರುತೆರೆ ನಟಿ

Crime News: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ಬಾಗಲಗುಂಟೆಯ ವಿಜಯಲಕ್ಷ್ಮೀ ಬಡಾವಣೆಯ ಮನೆಯೊಂದರಲ್ಲಿ ಪ್ರಿಯಕರನನ್ನು ಕಿರುತೆರೆ ನಟಿ ಊರ್ವಶಿ ಕೊಲೆ ಮಾಡಿದ್ದಾಳೆ. ಕೆಲವು ದಿನಗಲ ಹಿಂದೆ ಮೃತದೇಹ ಪತ್ತೆಯಾಗಿತ್ತು. ಇದೀಗ ಕೊಲೆಯ ರಹಸ್ಯ ಬಯಲಾಗಿದ್ದು, ಮೃತನನ್ನು ಮೋಹನ ಕೃಷ್ಣ ಎಂದು ಗುರುತಿಸಲಾಗಿದೆ.

ಹಿಂದುಳಿದ, ದಲಿತ ಸಮುದಾಯಗಳ 24 ಮಠಗಳಿಗೆ ಯಲಹಂಕ ಕ್ಷೇತ್ರದಲ್ಲಿ ಭೂಮಿ

ಶಾಸಕ ಎಸ್.ಆರ್. ವಿಶ್ವನಾಥ್‌ಗೆ ಶ್ರೀಗಳ ಕೃಪಾಶೀರ್ವಾದ

SR Vishwanath: ಯಲಹಂಕ ಕ್ಷೇತ್ರದ ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದಲ್ಲಿ 24 ಹಿಂದುಳಿದ ಹಾಗೂ ದಲಿತ ಸಮುದಾಯಗಳ ಮಠಗಳಿಗೆ ಭೂಮಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭೂಮಿ ಪಡೆದ 24 ಮಠಾಧೀಶರು ಸೋಮವಾರ ಬೆಳಗ್ಗೆ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಮನೆಗೆ ಆಗಮಿಸಿ ಆಶೀರ್ವದಿಸಿದ್ದಾರೆ.

ಇರಾನ್‌-ಇಸ್ರೇಲ್‌ ಸಂಘರ್ಷ; ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಕನ್ನಡಿಗರ ರಕ್ಷಣೆಗಾಗಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

Middle East Crisis: ಇರಾನ್‌ ಮೇಲೆ ಇಸ್ರೇಲ್‌-ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಬಳಿಕ ಮಧ್ಯಪ್ರಾಚ್ಯ ಸಂಘರ್ಷಭರಿತವಾಗಿದೆ. ಇದರಿಂದ ಸೌದಿ ಅರೇಬಿಯಾ, ಯುಎಇ ಸೇರಿದಂತೆ ಹಲವು ದೇಶಗಳಲ್ಲಿ ಕನ್ನಡಿಗರು ಸೇರಿ ಭಾರತೀಯರು ಸಿಲುಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆ ತರುವಂತೆ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

Iran- Israel War: ಅಬುಧಾಬಿಯಲ್ಲಿ ಸಿಲುಕಿದ ಕನ್ನಡಿಗರು; ನೆರವಿಗೆ ಮನವಿ ಮಾಡಿದ ಕುಟುಂಬ

ತಾಯ್ನಾಡಿಗೆ ಕರೆ ತರುವಂತೆ ಅಬುಧಾಬಿಯಲ್ಲಿನ ಕನ್ನಡಿಗರ ಮನವಿ

ಅಮೆರಿಕ ಮತ್ತು ಇಸ್ರೇಲ್‌ ಜಂಟಿ ಕಾರ್ಯಾಚರಣೆ ನಡೆಸಿ ಇರಾನ್‌ನ ಸರ್ವೋಚ್ಚ ನಾಯಕನಾಗಿದ್ದ ಆಯತೊಲ್ಲ ಅಲಿ ಖಮೇನಿ ಅವರನ್ನು ಹತ್ಯೆ ಮಾಡಿದ ಬಳಿಕ ಮಧ್ಯಪ್ರಾಚ್ಯ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಅಬುಧಾಬಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಹಾವೇರಿಯ ಕುಟುಂಬವೊಂದು ತಮ್ಮನ್ನು ತಾಯ್ನಾಡಿಗೆ ಕರೆ ತರುವಂತೆ ಮನವಿ ಮಾಡಿದೆ.

ಮದ್ದೂರು ತಾಲೂಕಿನ 4 ಗ್ರಾಮ ಪಂಚಾಯತ್‌ ನಗರಸಭೆ ಸೇರ್ಪಡೆಗೆ ವಿರೋಧ; ಸ್ಥಳೀಯರಿಂದ ಆಕ್ರೋಶ, ಸಿಎಂಗೆ ಕೇಂದ್ರ ಸಚಿವರ ಪತ್ರ

ಮದ್ದೂರು ತಾಲೂಕಿನ 4 ಗ್ರಾ.ಪಂ. ಮದ್ದೂರು ನಗರಸಭೆ ಸೇರ್ಪಡೆಗೆ ವಿರೋಧ

Mandya News: ಮದ್ದೂರು ತಾಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಮುಂತಾದ ಗ್ರಾಮ ಪಂಚಾಯತ್‌ಗಳನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿ ಕೆಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಈ‌ ವಿಚಾರದಲ್ಲಿ ಮಧ್ಯ ಪ್ರವೇಶಿಸಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದುಬೈನಲ್ಲಿ ಸಂಕಷ್ಟದಲ್ಲಿರುವ ಪ್ರವಾಸಿಗರಿಗೆ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ ನೆರವು, ತುರ್ತು ಸಹಕಾರಕ್ಕಾಗಿ ಸರ್ಕಾರಕ್ಕೆ ಮನವಿ

ದುಬೈ ಪ್ರವಾಸಿಗರ ನೆರವಿಗೆ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ

ಯುಎಇನಲ್ಲಿರುವ ಸದ್ಯದ ಪರಿಸ್ಥಿತಿ, ಅಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರ ಮಾಹಿತಿ ಸಂಗ್ರಹಕ್ಕೆ ಅನಿವಾಸಿ ಕನ್ನಡಿಗರ ಪೋಷಕರಾದ ರೊನಾಲ್ಡ್ ಕೊಲಸೋ ಅವರ ನೇತೃತ್ವದ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡವು ಕರ್ನಾಟಕ ಸರ್ಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಯಾವುದೇ ರೀತಿಯ ಅಪಪ್ರಚಾರಗಳನ್ನು ನಂಬಬೇಡಿ, ಸುಳ್ಳು ಮಾಹಿತಿಗಳನ್ನು ಹರಡಬೇಡಿ ಎಂದು ಮನವಿ ಮಾಡಿದರು.

prahlad Joshi: ರಾಯಭಾರಿಗಳ ಜತೆ ಮಾತುಕತೆ, ಎಲ್ಲ ಭಾರತೀಯರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಸಚಿವ ಪ್ರಹ್ಲಾದ ಜೋಶಿ

ಎಲ್ಲ ಭಾರತೀಯರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಸಚಿವ ಪ್ರಹ್ಲಾದ ಜೋಶಿ

ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಉಕ್ರೇನ್‌ನಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ. ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಗೆ ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

Assault Case: ಪಿಯುಸಿ ಪರೀಕ್ಷೆ ಬರೆಯಲು ಹೋಗದಂತೆ ವಿದ್ಯಾರ್ಥಿನಿ ಮೇಲೆ ಸೋದರಮಾವನ ಹಲ್ಲೆ

ಪಿಯುಸಿ ಪರೀಕ್ಷೆ ಬರೆಯಲು ಹೋಗದಂತೆ ವಿದ್ಯಾರ್ಥಿನಿ ಮೇಲೆ ಸೋದರಮಾವನ ಹಲ್ಲೆ

ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ (2nd PUC Exam) ಮುಗಿಸಿ ಮನೆಗೆ ಬಂದಾಗ ವಿದ್ಯಾರ್ಥಿನಿಯ ಸೋದರ ಮಾವ ಸೋಮಣ್ಣ ಎಂಬಾತ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನಲೆಯಲ್ಲಿ, ನೀನು ಓದಬಾರದು ಅಂತ ಹಲ್ಲೆ ಮಾಡಿದ್ದಾನೆ.

Physical Abuse: ಡ್ರಗ್ಸ್‌ ನೀಡಿ ಅತ್ಯಾಚಾರ ಪ್ರಕರಣದಲ್ಲಿ ಕಾರ್ಪೊರೇಟರ್‌ ಮಗ ಅಂದರ್‌

ಡ್ರಗ್ಸ್‌ ನೀಡಿ ಅತ್ಯಾಚಾರ ಪ್ರಕರಣದಲ್ಲಿ ಕಾರ್ಪೊರೇಟರ್‌ ಮಗ ಅಂದರ್‌

ಡ್ರಗ್ಸ್ ದಂಧೆ ಜತೆ ಸೆಕ್ಸ್ ದಂಧೆಗೂ ಬಯಲಾಗಿದ್ದ ಕೇಸ್​ನಲ್ಲಿ ಮತ್ತೆ ಮೂವರು ಬಂಧನವಾಗಿದ್ದಾರೆ. ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ನಿಖಿಲ್, ಡಿಕ್ಸನ್ ಹೆಡೆಮುರಿ ಕಟ್ಟಿದ್ದ ಅಮೃತಹಳ್ಳಿ ಪೊಲೀಸರು ಇದೀಗ ಅನಿರುದ್ಧ, ಶ್ರವಣ್, ಮೋಹಿತ್ ಎಂಬ ಮೂವರನ್ನು ಕಸ್ಟಡಿಗೆ ಪಡೆದಿದ್ದಾರೆ. ಈ ಮೂವರು ಕೂಡ ನಿಖಿಲ್ ಕೃತ್ಯಕ್ಕೆ ಪ್ರತ್ಯಕ್ಷ, ಪರೋಕ್ಷವಾಗಿ ಸಾಥ್ ನೀಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬಯಲಾಗಿದೆ.

Lunar Eclipse: ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ

ನಾಳೆ ಚಂದ್ರಗ್ರಹಣ: ಪ್ರಮುಖ ದೇವಾಲಯಗಳ ದರ್ಶನ ಸಮಯ ಬದಲಾವಣೆ

ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳ (temple) ಪೂಜೆ ಮತ್ತು ದರ್ಶನದ ಸಮಯದಲ್ಲಿ ಮಹತ್ತರ ಬದಲಾವಣೆಗಳನ್ನು ಮಾಡಲಾಗಿದೆ. ಬಹುತೇಕ ದೇವಾಲಯಗಳಲ್ಲಿ ಗ್ರಹಣ ಕಾಲದಲ್ಲಿ ದರ್ಶನ ಸ್ಥಗಿತಗೊಳಿಸಿ, ಶುದ್ಧೀಕರಣದ ನಂತರವಷ್ಟೇ ಭಕ್ತರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ.

Heart Attack: ಪೊಲೀಸ್‌ ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

ಪೊಲೀಸ್‌ ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

ನಿನ್ನೆ ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ಉಡುಪಿ ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್‌ಐ ಕುಸಿದುಬಿದ್ದಿದ್ದಾರೆ.

ಲಾ ಸ್ಕೂಲ್‌ನಲ್ಲಿ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಆಲ್ ಅಮೀನ್ ಮತ್ತು ಸೇಂಟ್ ಜೋಸೆಫ್ ಲಾ ಕಾಲೇಜಿಗೆ ಪ್ರಶಸ್ತಿ

ಆಲ್ ಅಮೀನ್ ಮತ್ತು ಸೇಂಟ್ ಜೋಸೆಫ್ ಲಾ ಕಾಲೇಜಿಗೆ ಪ್ರಶಸ್ತಿ

ಉತ್ತಮ ಪುರುಷ ಮೂಟರ್ ಪ್ರಶಸ್ತಿಯನ್ನು ಎಸ್. ಯೋಗಿನಾಥ್ (ಕೆಎಲ್‌ಇ ಲಾ ಕಾಲೇಜು) ರೂ. 2,500 ನಗದು ಬಹುಮಾನ ಸಹಿತವಾಗಿ ಪಡೆದರು. ಉತ್ತಮ ಮಹಿಳಾ ಮೂಟರ್ ಪ್ರಶಸ್ತಿಯನ್ನು ಸೇಂಟ್ ಜೋಸೆಫ್ ಲಾ ಕಾಲೇಜಿನ ಸಾವನ್ನಾ ಮೇರಿ ಅಲೆಕ್ಸಾಂಡರ್ ಅವರಿಗೆ ರೂ. 2,500 ನಗದು ಬಹುಮಾನ ಸಹಿತವಾಗಿ ನೀಡಲಾಯಿತು.

Bangalore News: ಬಿಎಂಎಸ್.ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಬಿಎಂಎಸ್.ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ದೇಶದಲ್ಲಿ ಇಂಜನಿಯರಿಂಗ್ ಪದವಿ ಪಡೆದವರು ಸಂಖ್ಯೆ ಹೆಚ್ಚಬೇಕು. ದೇಶ ಅಭಿವೃದ್ದಿಯಲ್ಲಿ ಇಂಜನಿಯರ್ ಗಳು ಮಹತ್ವಪೂರ್ಣ ಪಾತ್ರ ವಹಿಸುತ್ತಾರೆ. ದೇಶದಲ್ಲಿ ಇಂಜನಿಯರ್ʼಗಳಿಗೆ ಉತ್ತಮ ಅವಕಾಶವಿದೆ. ಉತ್ತಮ ಮನುಷ್ಯರಾಗಲು ಕಠಿಣ ಪರಿಶ್ರಮ ಪಡಬೇಕು. ಸಾಧನೆ ಮಾಡಲು ಗುರಿ ಇರಬೇಕು ಮತ್ತು ಗುರುಗಳ ಮಾರ್ಗದರ್ಶನದಲ್ಲಿ ನಡೆಯಬೇಕು.

Indi News: ರಾಷ್ಟ್ರಪ್ರೇಮದ ಅಲೆ ಜನತೆಯ ಹೃದಯದಲ್ಲಿ ಮೂಡಿಸಿದ ಶಿವಾಜಿ ಮಹಾರಾಜರು

ರಾಷ್ಟ್ರಪ್ರೇಮದ ಅಲೆ ಜನತೆಯ ಹೃದಯದಲ್ಲಿ ಮೂಡಿಸಿದ ಶಿವಾಜಿ ಮಹಾರಾಜರು

ಭಾರತೀಯರ ತುಂಬ ಆದರ ಅಭಿಮಾನ ಮತ್ತು ಗೌರವಗಳಿಗೆ ಪಾತ್ರನಾದ ರಾಜ ಶಿವಾಜಿಯವರು. ಅವರ ಹೆಸರು ಪಾವಿತ್ರ್ಯ ಸ್ವಾಭಿಮಾನ ಸಂಘಟನಾ ಬಲಗಳ ಸಂಕೇತವಾಗಿದೆ. ಸ್ವಾತಂತ್ರ್ಯಪ್ರಿಯತೆ ಕಷ್ಟ ಸಹಿ ಷ್ಣುತೆ ರಾಷ್ಟ್ರಪ್ರೇಮದ ಅಲೆಯನ್ನು ದೇಶದ ಜನತೆಯ ಹೃದಯ ದಲ್ಲಿ ಮೂಡಿಸಿದ ಶಿವಾಜಿ ಮಹಾ ರಾಜರ ವ್ಯಕ್ತಿತ್ವ ಸದಾ ಅಮರ.

ಎಲ್ಲಾ ಸಮಾಜಗಳಿಗೆ ನೆರಳು, ಆಶ್ರಯ ನೀಡುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕಿದೆ: ಬಿ.ವೈ ವಿಜಯೇಂದ್ರ

ಎಲ್ಲಾ ಸಮಾಜಗಳಿಗೆ ಆಶ್ರಯ ನೀಡುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕಿದೆ

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ವೀರ ಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ‌ ಮಹಾ ರಥೋತ್ಸವ ಕಾರ್ಯಕ್ರಮದಲ್ಲಿ‌ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದಾರೆ.

Jyotibha Phule State Award: ಡಾ.ಕಾಂತು ಇಂಡಿ ಇವರಿಗೆ ಜ್ಯೋತಿಭಾ ಪುಲೆ ರಾಜ್ಯಪ್ರಶಸ್ತಿ

ಡಾ.ಕಾಂತು ಇಂಡಿ ಇವರಿಗೆ ಜ್ಯೋತಿಭಾ ಪುಲೆ ರಾಜ್ಯಪ್ರಶಸ್ತಿ

ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನದಲ್ಲಿ ಜ್ಯೋತಿಭಾ ಫುಲೆ ರಾಜ್ಯ ಪ್ರಶಸ್ತಿಯನ್ನು ಡಾ.ಕಾಂತು ಇಂಡಿ ಇವರಿಗೆ ಲಭಿಸಿದೆ. ಇವರು ಕನ್ನಡ ಸಾಹಿತ್ಯ ಪರಿಷತ್ತು ಇಂಡಿ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 8 ತಾಲೂಕು ಸಮ್ಮೇಳನ, 1 ಜಿಲ್ಲೆ ಸಮ್ಮೇಳ, 1 ಮಹಿಳಾ ಸಮ್ಮೇಳನ ಮಾಡಿದ್ದಾರೆ.

ದೇಶದಲ್ಲಿ ಮುಸ್ಲಿಂ ಲೀಗ್ ಸ್ಥಾನವನ್ನು ತುಂಬುತ್ತಿದೆ ಕಾಂಗ್ರೆಸ್ ಪಕ್ಷ: ಜೋಶಿ ಕಿಡಿ

ಮುಸ್ಲಿಂ ಲೀಗ್ ಸ್ಥಾನವನ್ನು ತುಂಬುತ್ತಿದೆ ಕಾಂಗ್ರೆಸ್ ಪಕ್ಷ: ಜೋಶಿ

ಧಾರವಾಡದಲ್ಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಅನುಮತಿ ಕೊಟ್ಟಿಲ್ಲ. ಆನೆ ದಾಳಿ ಪ್ರಕರಣದಲ್ಲಿ ಶಾಶ್ವತ ಪರಿಹಾರ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆಗೆ ಇಳಿದವರ ಮೇಲೆ ಲಾಠಿ ಪ್ರಹಾರ ಮಾಡುತ್ತಾರೆ. ಇದನ್ನೆಲ್ಲಾ ನೋಡಿದರೆ ಈ ಸರ್ಕಾರ ಹೋರಾಟ ಹತ್ತಿಕ್ಕುವ ಇಂದಿರಾಗಾಂಧಿ ಮನಸ್ಥಿತಿಯಲ್ಲೇ ಇರುವುದು ಸ್ಪಷ್ಟವಾಗಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ.

Chikkaballapur News: ವಿದ್ಯಾರ್ಥಿಗಳ ಜೀವನ ರೂಪಿಸಿದ ಗುರುಗಳ ಋಣ ತೀರಿಸಲಾಗದು: ಕೆ.ವಿ.ನವೀನ್ ಕಿರಣ್

ವಿದ್ಯಾರ್ಥಿಗಳ ಜೀವನ ರೂಪಿಸಿದ ಗುರುಗಳ ಋಣ ತೀರಿಸಲಾಗದು

ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿಗಳ ಅಧ್ಯಕ್ಷನಾಗಿದ್ದರೂ ನಾನೂ ಸಹ ಶಿಕ್ಷಕರ ಶಿಷ್ಯನೇ ಆಗಿದ್ದೇನೆ. ಸಮಾಜದಿಂದ ನಾವು ಏನಾದರೂ ಪಡೆಯುವುದಕ್ಕಿಂತ ಮೊದಲು ಸಮಾಜಕ್ಕೆ ನಾನೇನು ಮಾಡಿದ್ದೇನೆ ಎಂಬುದನ್ನು ನಾವು ಮನದಟ್ಟು ಮಾಡಿಕೊಳ್ಳಬೇಕು. ಸಮಾಜಕ್ಕೆ ಒಳಿತಾಗುವ ಕಾರ್ಯ ಮಾಡಿ ಆದರ್ಶ ವ್ಯಕ್ತಿಗಳಾಗಿ ಬಾಳಬೇಕು ಎಂಬುದು ನಮ್ಮ ಶಿಕ್ಷಕರ ಆಶಯವಾಗಿತ್ತು

ಮಧ್ಯಪ್ರಾಚ್ಯದಿಂದ ಕನ್ನಡಿಗರು ಹಿಂದಿರುಗಲು ಅಗತ್ಯ ವ್ಯವಸ್ಥೆ ಕಲ್ಪಿಸಿ: ವಿಮಾನಯಾನ ಸಚಿವಾಲಯಕ್ಕೆ ಮುಖ್ಯ ಕಾರ್ಯದರ್ಶಿ ಪತ್ರ

ಮಧ್ಯಪ್ರಾಚ್ಯದಿಂದ ಕನ್ನಡಿಗರು ಹಿಂದಿರುಗಲು ಸಹಕರಿಸಿ: ಕೇಂದ್ರಕ್ಕೆ ಪತ್ರ

iran–israel war: ಅರಬ್‌ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರು ಸ್ವದೇಶಕ್ಕೆ ವಾಪಸ್‌ ಆಗಲು ಅಗತ್ಯ ವಿಮಾನಗಳ ವ್ಯವಸ್ಥೆ ಮಾಡಲು ವಿಮಾನಯಾನ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಬೇಕು. ಟಿಕೆಟ್‌ಗಳನ್ನು ಕಾಯ್ದಿರಿಸಿ, ಹಿಂದಿರುಗಲು ಸಾಧ್ಯವಾಗದವರಿಗೆ ಅಗತ್ಯ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿನಂತಿಸಿದ್ದಾರೆ.

ಬೆಂಗಳೂರಿನ ತರಕಾರಿಯಲ್ಲಿ ವಿಷಕಾರಿ ಅಂಶಕ್ಕೆ ಅತಿಯಾದ ರಾಸಾಯನಿಕಗಳ ಬಳಕೆ ಕಾರಣ: ಸುತಾರಿಯಾ

ತರಕಾರಿಯಲ್ಲಿ ವಿಷಕಾರಿ ಅಂಶಕ್ಕೆ ಅತಿಯಾದ ರಾಸಾಯನಿಕಗಳ ಬಳಕೆ ಕಾರಣ

ಬೆಂಗಳೂರಿನ ಕುಮಾರ ಪಾರ್ಕ್‌ನ ಗಾಂಧಿಭವನದಲ್ಲಿ ದಿ ಫಾರ್ವರ್ಡ್ ಫೌಂಡೇಶನ್ ವತಿಯಿಂದ ಸಾವಯವ ಕೃಷಿಯಲ್ಲಿ ʼಗೋಕೃಪಾಮೃತ; ಮಹತ್ವ ಸಾರಲು ರೈತರೊಂದಿಗಿನ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಗುಜರಾತ್‌ನ ಪ್ರಸಿದ್ಧ ಬನ್ಸಿ ಗಿರ್ ಗೋಶಾಲಾ ಖ್ಯಾತಿಯ ಗೋಪಾಲ್ ಭಾಯ್ ಸುತಾರಿಯಾ ಅವರು ಮಾತನಾಡಿದ್ದಾರೆ.

Loading...