ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

BY Vijayendra: ರಾಜ್ಯ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ: ಬಿ.ವೈ. ವಿಜಯೇಂದ್ರ ಕಿಡಿ

ರಾಜ್ಯ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ: ಬಿ.ವೈ. ವಿಜಯೇಂದ್ರ ಕಿಡಿ

State Congress Government: ಕಬ್ಬು ಬೆಳೆಗಾರರ ಹೋರಾಟದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿ ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿರುವ ರೈತನನ್ನು ಹಾಗೂ ಅವರ ಕುಟುಂಬಸ್ಥರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಮುಖಂಡರು ಭೇಟಿ ಮಾಡಿದ ವೇಳೆ ಮಾಧ್ಯಮಗಳ ಮಾತನಾಡಿದ ಬಿ.ವೈ. ವಿಜಯೇಂದ್ರ ಮಾತನಾಡಿದ್ದಾರೆ.

Next Karnataka CM: ಸಿದ್ದರಾಮಯ್ಯ ಸಿಎಂ ಆಗಿರುವಷ್ಟೂ ದಿನ ಅವರೇ ಸಿಎಂ: ಡಿ.ಕೆ. ಸುರೇಶ್

ಸಿದ್ದರಾಮಯ್ಯ ಸಿಎಂ ಆಗಿರುವಷ್ಟೂ ದಿನ ಅವರೇ ಸಿಎಂ: ಡಿ.ಕೆ. ಸುರೇಶ್

DK Suresh: ನಾಯಕತ್ವ ಬದಲಾವಣೆ, ಅಧಿಕಾರ ಹಸ್ತಾಂತರ ವಿಚಾರವಾಗಿ ನಡೆಯುತ್ತಿರುವ ಚರ್ಚೆ ಬಗ್ಗೆ ಕೇಳಿದಾಗ, “ಇದೆಲ್ಲವೂ ಊಹಾಪೋಹ. ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ವಿಚಾರಗಳು ಪಕ್ಷದ ಮುಂದೆ ಇಲ್ಲ. ಸಿದ್ದರಾಮಯ್ಯ ಅವರಿಗೆ ಇನ್ನು ವಯಸ್ಸಾಗಿಲ್ಲ. ಮುಂದಿನ ದಿನಗಳಲ್ಲಿ ಬರುವ ಎಲ್ಲಾ ಚುನಾವಣೆಗಳು ಅವರ ನೇತೃತ್ವದಲ್ಲೇ ನಡೆಯಲಿವೆ” ಎಂದರು.

Hospet News: ಶಿರೂರು ಮಠದ ವೇದರ್ಧನತೀರ್ಥ ಶ್ರೀಪಾದರಿಂದ ಪರ್ಯಾಯ ಸಂಚಾರ

ಶಿರೂರು ಮಠದ ವೇದರ್ಧನತೀರ್ಥ ಶ್ರೀಪಾದರಿಂದ ಪರ್ಯಾಯ ಸಂಚಾರ

ಉಡುಪಿ ಶ್ರೀಕೃಷ್ಣ ಮಠದಲ್ಲಿ 2026ರ ಜನವರಿ 18ರಿಂದ ಶಿರೂರು ಮಠದ ಪರ್ಯಾಯ ಅವಧಿ ಆರಂಭವಾಗಲಿದ್ದು, ಎರಡು ವರ್ಷವೂ ಪ್ರತಿದಿನ ನಾಲ್ಕೂ ವೇದಗಳ ಪಠಣ ಪರ್ಯಾಯದ ವಿಶೇಷವಾಗಿರುತ್ತದೆ ಎಂದು ಸರ್ವಜ್ಞಪೀಠ ಏರಲಿರುವ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹೇಳಿದರು.

ಇಂಡಿಯಾ ಮೊಬೈಲ್ ಕಾಂಗ್ರೆಸ್‌ 2025ರಲ್ಲಿ 'ಎಲ್ಲರಿಗೂ ಎಐ' ಎಂಬ ಉದ್ದೇಶ ಸಾರುತ್ತಾ ಭಾರತದ ಎಐ ಕ್ರಾಂತಿಯ ಮುಂಚೂಣಿಯಲ್ಲಿ ನಿಂತ ಸ್ಯಾಮ್‌ ಸಂಗ್

ಭಾರತದ ಎಐ ಕ್ರಾಂತಿಯ ಮುಂಚೂಣಿಯಲ್ಲಿ ನಿಂತ ಸ್ಯಾಮ್‌ ಸಂಗ್

ಎಐ-ಚಾಲಿತ ತಂತ್ರಜ್ಞಾನದ ಪ್ರವರ್ತಕರಾಗಿರುವ ಸ್ಯಾಮ್‌ಸಂಗ್, ಎಲ್ಲಾ ಉಪಕರಣಗಳಾದ್ಯಂತ ಎಐ ಅನ್ನು ಸಂಯೋಜಿಸುವ ಮೂಲಕ ಭವಿಷ್ಯವನ್ನು ರೂಪಿಸುತ್ತಿದೆ. ಸ್ಯಾಮ್‌ಸಂಗ್ ಎಐ ಹೋಮ್, ಸ್ಮಾರ್ಟ್‌ ಫೋನ್‌ ಗಳಿಂದ ಹಿಡಿದು ಟಿವಿಗಳು, ವೇರೆಬಲ್‌ಗಳು ಮತ್ತು ಗೃಹೋಪಯೋಗಿ ಉಪಕರಣ ಗಳವರೆಗೆ ವಿಶಿಷ್ಟ ಅನುಭವಗಳನ್ನು ಒದಗಿಸುತ್ತದೆ.

Gathavibhava Movie: ಸಿಂಪಲ್ ಸುನಿ ʼಗತವೈಭವʼ ದಲ್ಲಿ ದುಷ್ಯಂತ್ ಸಿನಿವೈಭವ

ಸಿಂಪಲ್ ಸುನಿ ʼಗತವೈಭವʼ ದಲ್ಲಿ ದುಷ್ಯಂತ್ ಸಿನಿವೈಭವ

Sandalwood News: ʼಗತವೈಭವʼ ಸಿನಿಮಾ ಮೂಲಕ ಸಿಂಪಲ್ ಸುನಿ ಅವರು ಮತ್ತೊಬ್ಬ ಯುವ ನಟನನ್ನು ಕನ್ನಡ ಪ್ರೇಕ್ಷಕರಿಗೆ ಮಡಿಲಿಗೆ ಹಾಕುತ್ತಿದ್ದಾರೆ. ಅವರೇ ದುಷ್ಯಂತ್. ʼಗತವೈಭವʼ ಸಂಪೂರ್ಣ ಪ್ರೇಮಕಥೆ. ಫ್ಯಾಂಟಸಿ ಹಾಗೂ ಸನಾತನ ಧರ್ಮದ ಕಥೆಯನ್ನು ಈ ಸಿನಿಮಾದಲ್ಲಿ ಸುನಿ ಅವರು ಕಟ್ಟಿಕೊಟ್ಟಿದ್ದಾರೆ. ಚಿತ್ರದಲ್ಲಿ ದುಷ್ಯಂತ್‌ಗೆ ಜೋಡಿಯಾಗಿ ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ. ಸೇರ್ವೇಗಾರ ಸಿಲ್ವರ್ ಸ್ಕ್ರೀನ್ಸ್ ಮತ್ತು ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಕ್ ಹಾಗೂ ಸಿಂಪಲ್ ಸುನಿ ಚಿತ್ರ ನಿರ್ಮಾಣ ಮಾಡ್ತಿದ್ದಾರೆ.

Nikhil Kumaraswamy: ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ಮಣಿದು ಕಬ್ಬು ಬೆಳೆಗಾರರನ್ನು ಬಲಿಪಶು ಮಾಡಬೇಡಿ: ನಿಖಿಲ್ ಕುಮಾರಸ್ವಾಮಿ

ಅನ್ನ ನೀಡುವ ರೈತನನ್ನೇ ಕಾಪಾಡದ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ: ನಿಖಿಲ್

Sugarcane farmers protest: ಬೆಳಗಾವಿಯಲ್ಲಿ ರೈತರು ಏಳು ದಿನದಿಂದ ಹೋರಾಟ ಮಾಡುತ್ತಿದ್ದಾರೆ, ಸಿಎಂ, ಉಸ್ತುವಾರಿ ಸಚಿವರು ಇದರ ಬಗ್ಗೆ ಚಕಾರ ಎತ್ತಿಲ್ಲ. ಅನ್ನ ಕೊಡುವ ರೈತನನ್ನೇ ಕಾಪಾಡದ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಇದ್ದು ಪ್ರಯೋಜನ ಏನು? ಎಂದು ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮುಖ್ಯಮಂತ್ರಿಗಳೇ ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ಮಣಿದು ಕಬ್ಬು ಬೆಳೆಯುವ ರೈತರನ್ನು ಬಲಿಪಶು ಮಾಡಬೇಡಿ. ಕಬ್ಬು ಬೆಳೆಗಾರರು ವಿಚಾರದಲ್ಲಿ ರಾಜಕಾರಣ ಮಾಡದೇ, ರೈತರ ಬೆನ್ನೆಲುಬಾಗಿ ನಿಲ್ಲುವ ಕೆಲಸ ಮಾಡಬೇಕು ಅವರು ಆಗ್ರಹಿಸಿದ್ದಾರೆ.

ಎ.ಪಿ.ಎಸ್. ಒಲಿಂಪಿಕ್ಸ್ – 2025 ಕ್ರೀಡಾಕೂಟಕ್ಕೆ ಚಾಲನೆ

ಎ.ಪಿ.ಎಸ್. ಒಲಿಂಪಿಕ್ಸ್ – 2025 ಕ್ರೀಡಾಕೂಟಕ್ಕೆ ಚಾಲನೆ

ಸಹಕಾರ, ಉತ್ಸಾಹ ಮತ್ತು ಕ್ರೀಡಾ ಮನೋಭಾವವನ್ನು ಆಚರಿಸುವ ಉದ್ದೇಶದಿಂದ ಆಚಾರ್ಯ ಪಾಠಶಾಲಾದಿಂದ ಎ.ಪಿ.ಎಸ್. ಮೈದಾನದಲ್ಲಿಂದು “ಎ.ಪಿ.ಎಸ್. ಒಲಿಂಪಿಕ್ಸ್ – ಅನಂತ ಜ್ಯೋತಿ” ಕ್ರೀಡಾಕೂಟ ಆರಂಭವಾಯಿತು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವೈಯಕ್ತಿಕ ಮತ್ತು ತಂಡದ ಕ್ರೀಡೆಗಳನ್ನು ಆಯೋಜಿಸಲಾಗಿದೆ

ಫೆಡರಲ್ ಬ್ಯಾಂಕ್ ಹಾರ್ಮಿಸ್ ಸ್ಮಾರಕ ಪ್ರತಿಷ್ಠಾನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಎಂಬಿಬಿಎಸ್‌, ಬಿಡಿಎಸ್, ಬಿವಿಎಸ್‌ಸಿ, ಬಿ.ಇ/ಬಿ.ಟೆಕ್/ಬಿಎಆರ್‍ಸಿಹೆಚ್‌, ಬಿ.ಎಸ್ಸಿ ನರ್ಸಿಂಗ್, ಬಿ.ಎಸ್ಸಿ ಕೃಷಿ, ಮತ್ತು ಎಂಬಿಎ/ ಪಿಜಿಡಿಎಂ (ಪೂರ್ಣ ಸಮಯ) ಸೇರಿದಂತೆ ಆಯ್ದ ವೃತ್ತಿಪರ ಕೋರ್ಸ್‌ಗಳ ಮೊದಲ ವರ್ಷದಲ್ಲಿ ಮೆರಿಟ್‌ ಅನುಸಾರ ಪ್ರವೇಶ ಪಡೆದ ವಿದ್ಯಾರ್ಥಿಗಳಿಂದ ಪ್ರತಿಷ್ಠಾನವು ಅರ್ಜಿಗಳನ್ನು ಆಹ್ವಾನಿಸುತ್ತದೆ.

CM Siddaramaiah: ಇನ್ನೊಬ್ಬ ಮೇಟಿ ಹುಟ್ಟುವುದು ಕಷ್ಟ, ಮೇಟಿಗೆ ಮೇಟಿಯೇ ಸಾಟಿ: ಸಿಎಂ ಸಿದ್ದರಾಮಯ್ಯ

ಇನ್ನೊಬ್ಬ ಮೇಟಿ ಹುಟ್ಟುವುದು ಕಷ್ಟ, ಮೇಟಿಗೆ ಮೇಟಿಯೇ ಸಾಟಿ: ಸಿಎಂ

HY Meti death: ಶಾಸಕ ಮೇಟಿಯವರು ಸಾರ್ಥಕ ಜೀವನ ನಡೆಸಿದ್ದಾರೆ. ಅವರ ಆದರ್ಶಗಳು ಇತರರಿಗೆ ಮಾದರಿಯಾಗಲಿ. ಇನ್ನೊಬ್ಬ ಮೇಟಿ ಹುಟ್ಟುವುದು ಕಷ್ಟ. ಮೇಟಿಗೆ ಮೇಟಿಯೇ ಸಾಟಿ. ಜನರ ಆಶೀರ್ವಾದದಿಂದ ಇಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಮೇಟಿಯವರ ಅಭಿಮಾನಿಗಳು, ಸ್ನೇಹಿತರಿಗೆ ಹಾಗೂ ಅವರ ಕುಟುಂಬದವರಿಗೆ ಅವರ ಸಾವಿನಿಂದಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಕೊಡಲಿ, ಅವರ ಆತ್ಮಕ್ಕೆ ಚಿರ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

MLA HY Meti's Funeral: ಸ್ವಗ್ರಾಮ ತಿಮ್ಮಾಪುರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಶಾಸಕ ಎಚ್‌.ವೈ.ಮೇಟಿ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಶಾಸಕ ಎಚ್‌.ವೈ.ಮೇಟಿ ಅಂತ್ಯಕ್ರಿಯೆ

Bagalkot News: ಬುಧವಾರ ಬೆಳಗ್ಗೆ ಶಾಸಕ ಮೇಟಿ ಅವರ ಪಾರ್ಥಿವ ಶರೀರವನ್ನು ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ನಂತರ ತೆರೆದ ವಾಹನದಲ್ಲಿ ಬಾಗಲಕೋಟೆಯಿಂದ ಸ್ವಗ್ರಾಮ ತಿಮ್ಮಾಪುರಕ್ಕೆ ತರಲಾಯಿತು. ಸಿಎಂ ಸಿದ್ದರಾಮಯ್ಯ ಅವರು ಮೇಟಿ ಅವರ ಸ್ವಗ್ರಾಮಕ್ಕೆ ಬಂದು ಅಂತಿಮ ದರ್ಶನ ಪಡೆದರು.

Karnataka Weather: ಯೆಲ್ಲೋ ಅಲರ್ಟ್; ಮುಂದಿನ 2 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಮುಂದಿನ 2 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Rainfall) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಇರುವ ಸಾಧ್ಯತೆ ಇದೆ.

Malavika Avinash: ನ.7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ: ಮಾಳವಿಕ ಅವಿನಾಶ್

ನ.7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ

Vande Mataram Song: ನ.7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ, ವಂದೇ ಮಾತರಂನ ಸಂಭ್ರಮ ನಡೆಯಲಿದೆ. ದೇಶಾದ್ಯಂತ ಎಲ್ಲ ಬಿಜೆಪಿ ಕಾರ್ಯಾಲಯಗಳಲ್ಲಿ ಸಾಮೂಹಿಕ ಗಾಯನ ನಡೆಯಲಿದೆ. ಪ್ರಧಾನಿಯವರೂ ಈ ಗಾಯನದಲ್ಲಿ ಸ್ವತಃ ಭಾಗವಹಿಸಲಿದ್ದಾರೆ ಎಂದು ತಿಳಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕಿ ಮಾಳವಿಕ ಅವಿನಾಶ್, ಈ ಗೀತೆ ಹಾಡುವ ಮೂಲಕ ಆಚರಣೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ನಿರ್ಣಯಿಸಿದೆ.

Laxmi Hebbalkar: ಗೃಹಲಕ್ಷ್ಮಿ ಸೊಸೈಟಿ ಮೂಲಕ 3 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಲೋನ್ ಸೌಲಭ್ಯ: ಹೆಬ್ಬಾಳ್ಕರ್‌

ಮಹಿಳೆಯರಿಗೆ, ಇಲಾಖೆಗೆ ಶಕ್ತಿ ತುಂಬುವುದೇ ನನ್ನ ಗುರಿ: ಹೆಬ್ಬಾಳ್ಕರ್

Gruhalakshmi Scheme: ವಿಶ್ವದಲ್ಲೇ ದೊಡ್ಡದಾದ ಗೃಹಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ. 2000 ಜನ ಫಲಾನುಭವಿಗಳ ಹಣ ಸಂಗ್ರಹಿಸಲಾಗಿದ್ದು, ಇದು ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೆ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು ಎಂದು ಹೇಳಿದ್ದಾರೆ.

SSLC, 2nd PUC Exam 2026 TimeTable: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2, 2026 ವೇಳಾಪಟ್ಟಿ: ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದೆ.

HD Kumaraswamy: ಉಕ್ಕಿನ ಉತ್ಪಾದನೆ ಹೆಚ್ಚಿಸಲು ಉತ್ತೇಜನ; ₹43,800 ಕೋಟಿಗೂ ಹೆಚ್ಚು ಹೂಡಿಕೆ ನಿರೀಕ್ಷೆ: ಹೆಚ್‌ಡಿಕೆ

ಭಾರತದಲ್ಲಿ ₹43,800 ಕೋಟಿಗೂ ಹೆಚ್ಚು ಹೂಡಿಕೆ ನಿರೀಕ್ಷೆ-ಹೆಚ್‌ಡಿಕೆ

Central Government: ಜುಲೈ 2021ರಲ್ಲಿ ಕೇಂದ್ರ ಸಚಿವ ಸಂಪುಟವು ಅನುಮೋದಿಸಿದ ವಿಶೇಷ ಉಕ್ಕಿನ ಉತ್ತೇಜನಕ್ಕಾಗಿ ಒಟ್ಟು ₹6,322 ಕೋಟಿ ಮೊತ್ತದ PLI ಯೋಜನೆಯನ್ನು ಅನುಷ್ಠಾನಕ್ಕೆ ತರಲು ಅನುಮೋದನೆ ನೀಡಿತ್ತು. ಇದು ರಕ್ಷಣೆ, ಏರೋಸ್ಪೇಸ್, ಇಂಧನ, ಆಟೋಮೊಬೈಲ್‌ ಮತ್ತು ಮೂಲಸೌಕರ್ಯದಂತಹ ವಲಯಗಳಲ್ಲಿ ಬಳಸಲಾಗುವ ಹೆಚ್ಚಿನ ಮೌಲ್ಯದ, ಉನ್ನತ ದರ್ಜೆಯ ಉಕ್ಕಿನ ಉತ್ಪಾದನೆಯನ್ನು ಉತ್ತೇಜಿಸಲು ಉದ್ದೇಶಿಸಿದ ಯೋಜನೆಯಾಗಿದೆ ಎಂದು ಕೇಂದ್ರದ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

Basavaraj Bommai: ಕಬ್ಬಿನ ದರ ನಿಗದಿ ಪಡಿಸಲು ತಕ್ಷಣ ಸಿಎಂ ಮಧ್ಯ ಪ್ರವೇಶಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ

ಕಬ್ಬಿನ ದರ ನಿಗದಿ ಪಡಿಸಲು ತಕ್ಷಣ ಸಿಎಂ ಮಧ್ಯ ಪ್ರವೇಶಿಸಲಿ: ಬೊಮ್ಮಾಯಿ ಆಗ್ರಹ

Sugarcane farmers protest: ರಾಜ್ಯದ ಕಬ್ಬು ಬೆಳೆಗಾರರು ನ್ಯಾಯ ಸಮ್ಮತ ಬೆಲೆ ನಿಗದಿ ಆಗಬೇಕೆಂದು ಏಳನೇ ದಿನ ಹೋರಾಟ ಮಾಡುತ್ತಿದ್ದಾರೆ. ವ್ಯಾಪಕ ಹೋರಾಟ ಆಗುತ್ತಿದೆ. ನಾನು ಈಗಾಗಲೇ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದೇನೆ. ಆದರೆ, ಸಿಎಂ ರೈತರ ಬಗ್ಗೆ ಅಸಡ್ಡೆ ಭಾವನೆ ವ್ಯಕ್ತಪಡಿಸಿ ತಮ್ಮ ರಾಜಕಾರಣವನ್ನು ಸಿಎಂ ಸ್ಥಾನ ಉಳಿಸಿಕೊಳ್ಳಲು ಸಮಯ ಸಿಗುತ್ತಿಲ್ಲ ಹೀಗಾಗಿ ರೈತರ ಸಮಸ್ಯೆ ಪರಿಹರಿಸಲು ಅವರಿಗೆ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

Kannada Book Festival: ಕಲಾಗಂಗೋತ್ರಿ ತಂಡದಿಂದ ಮೈಸೂರು ಮಲ್ಲಿಗೆ ನಾಟಕ; ಉಚಿತ ಪ್ರವೇಶ

ಕಲಾಗಂಗೋತ್ರಿ ತಂಡದಿಂದ ಮೈಸೂರು ಮಲ್ಲಿಗೆ ನಾಟಕ!

Mysore Mallige play: ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸಿರುವ 5ನೇ ಕನ್ನಡ ಪುಸ್ತಕ ಹಬ್ಬದ ಅಂಗವಾಗಿ ಪ್ರತಿದಿನ ಸಂಜೆ ಸಂಸ್ಕಾರ ಭಾರತೀ ಬೆಂಗಳೂರು ಸಹಯೋಗದಲ್ಲಿ ಕೆಂಪೇಗೌಡ ನಗರದ ಕೇಶವಶಿಲ್ಪ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಪುಸ್ತಕ ಹಬ್ಬದ 5ನೇ ದಿನ (ನವೆಂಬರ್‌ 5) ಸಂಜೆ 6 ರಿಂದ ಕವಿ ಕೆ.ಎಸ್‌. ನರಸಿಂಹಸ್ವಾಮಿ ಅವರ ಕವನಗಳನ್ನು ಆಧರಿಸಿದ ಜನ ಪ್ರಿಯ ನಾಟಕ ‘ಮೈಸೂರು ಮಲ್ಲಿಗೆ’ ಪ್ರದರ್ಶನಗೊಳ್ಳಲಿದೆ. ಕವಿಯ ಜೀವನಪಯಣ, ಅವರ ಕವಿತೆಗಳ ತತ್ವಭಾವ, ಕಷ್ಟ–ಸುಖಗಳ ಮಿಶ್ರಣವನ್ನು ವೇದಿಕೆಗೆ ತರಲಿರುವ ಈ ನಾಟಕದಲ್ಲಿ ಸಂಗೀತ, ನೃತ್ಯ ಮತ್ತು ನಾಟಕೀಯ ಅಂಶಗಳ ಸಂಯೋಜನೆ ವಿಶೇಷ ಆಕರ್ಷಣೆಯಾಗಲಿದೆ.

Nandini Ghee Price: ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್; ನಂದಿನಿ ತುಪ್ಪದ ದರ ಪ್ರತಿ ಲೀಟರ್​ಗೆ 90 ರೂಪಾಯಿ ಏರಿಕೆ

ಮತ್ತೆ ದರ ಏರಿಕೆ ಶಾಕ್; ನಂದಿನಿ ತುಪ್ಪದ ದರ ಲೀಟರ್​ಗೆ 90 ರೂ. ಏರಿಕೆ

KMF's Nandini Ghee Price Hike: ಜಿಎಸ್​ಟಿ ಸುಧಾರಣೆ ಬಳಿಕ ನಂದಿನಿ ತುಪ್ಪದ ದರವನ್ನು 40 ರೂಪಾಯಿ ಇಳಿಕೆ ಮಾಡುವ ಮೂಲಕ ಗ್ರಾಹಕರಿಗೆ ಕೆಎಂಎಫ್‌ ಸಿಹಿಸುದ್ದಿ ನೀಡಿದ್ದು. ಆದರೆ, ಇದೀಗ ನಂದಿನಿ ತುಪ್ಪದ ದರ ದಿಢೀರ್ ಏರಿಕೆಯಾಗಿದ್ದು, ಇಂದಿನಿಂದಲೇ (ನ.5) ನಂದಿನಿ ತುಪ್ಪದ ಪರಿಷ್ಕೃತ ದರ ಜಾರಿಯಾಗಲಿದೆ.‌

Road Accident: ಬೀದರ್‌ನಲ್ಲಿ ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ, ತೆಲಂಗಾಣದ ನಾಲ್ವರು ಸಾವು

ಬೀದರ್‌ನಲ್ಲಿ ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ, ತೆಲಂಗಾಣದ ನಾಲ್ವರು ಸಾವು

Bidar News: ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ತೆಲಂಗಾಣ ಮೂಲದ ರಾಚಪ್ಪ, ನವೀನ್, ನಾಗರಾಜ್ ಮೃತ ದುರ್ದೈವಿಗಳಾಗಿದ್ದಾರೆ. ಮೃತರು ನೆರೆಯ ತೆಲಂಗಾಣದ ಜಗನ್ನಾಥಪುರ ಗ್ರಾಮದವರಾಗಿದ್ದಾರೆ. ನಿನ್ನೆ ಜಗನ್ನಾಥಪುರದಿಂದ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಇವರು ಬಂದಿದ್ದರು. ಇಂದು ದೇವರ ದರ್ಶನ ಮುಗಿಸಿ ವಾಪಸ್ ಜಗನ್ನಾಥಪುರಕ್ಕೆ ತೆರಳುವ ವೇಳೆ ಕಾರಿಗೆ ಗೂಡ್ಸ್​ ಗಾಡಿ ಡಿಕ್ಕಿ ಹೊಡೆದಿದೆ. ಮೂವರು ಸ್ಥಳದಲ್ಲೇ ಪ್ರಾಣ ತ್ಯಜಿಸಿದ್ದಾರೆ.

WhatsApp RTO challan scam: ವಾಟ್ಸ್ಯಾಪ್‌ನಲ್ಲಿ ಹೊಸ ವಂಚನೆ, ಆರ್‌ಟಿಒ ಚಲನ್‌ ಹೆಸರಿನಲ್ಲಿ ಧೋಖಾ

ವಾಟ್ಸ್ಯಾಪ್‌ನಲ್ಲಿ ಹೊಸ ವಂಚನೆ, ಆರ್‌ಟಿಒ ಚಲನ್‌ ಹೆಸರಿನಲ್ಲಿ ಧೋಖಾ

RTO challan scam:‌ ನಿಮಗೆ ಬರುವ ಈ ಫೈಲ್ ಅನ್ನು ತೆರೆದ ಕೂಡಲೇ ನಿಮ್ಮ ಫೋನ್‌ಗೆ ಮಾಲ್‌ವೇರ್‌ ಅಪಾಯ ಸಂಭವಿಸಬಹುದು. ಈ ಸಂದೇಶ ಸಾಮಾನ್ಯವಾಗಿ RTO E Challan.apk ಅಥವಾ Mparivahan.apk ಹೆಸರಿನ ಫೈಲ್ ಅನ್ನು ಹೊಂದಿರುತ್ತದೆ. ನೀವು ಅದನ್ನು ತೆರೆದ ನಂತರ, ಒಳಗೆ ಅಡಗಿರುವ ಮಾಲ್‌ವೇರ್ ಹ್ಯಾಕರ್‌ಗಳಿಗೆ ನಿಮ್ಮ ಸಾಧನಕ್ಕೆ ರಿಮೋಟ್ ಪ್ರವೇಶವನ್ನು ನೀಡುತ್ತದೆ. ಇದರಿಂದ ಸೈಬರ್ ಅಪರಾಧಿಗಳಿಗೆ ನಿಮ್ಮ ವೈಯಕ್ತಿಕ ಡೇಟಾ, ಬ್ಯಾಂಕ್ ವಿವರಗಳಿಗೆ ಪ್ರವೇಶ ಸಿಗುತ್ತದೆ. ಅವನ್ನು ಅವರು ಕದಿಯಬಹುದು. ನಿಮ್ಮ ಇತರ WhatsApp ಸಂಪರ್ಕಗಳಿಗೆ ಇದೇ ವಂಚನೆ ಸಂದೇಶವನ್ನು ಕಳುಹಿಸಲು ನಿಮ್ಮ ಸಂಖ್ಯೆಯನ್ನು ಸಹ ಬಳಸಬಹುದು.

Gold price today on 5th November 2025: ಚಿನ್ನದ ದರದಲ್ಲಿ ಇಂದು ಮತ್ತೆ ಕೊಂಚ ಇಳಿಕೆ; ಸ್ವರ್ಣಪ್ರಿಯರಿಗೆ ನಿರಾಳ

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 90 ರೂ. ಇಳಿಕೆ ಕಂಡು ಬಂದಿದ್ದು, 11,135 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 98 ರೂ. ಇಳಿಕೆಯಾಗಿ, 12,148 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 89,080 ರೂ. ಬಾಳಿದರೆ, 10 ಗ್ರಾಂಗೆ ನೀವು 1,11,350 ಹಾಗೂ 100 ಗ್ರಾಂಗೆ 11,13,500 ರೂ., ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 97,184 ರೂ. ಆದರೆ, 10 ಗ್ರಾಂಗೆ ನೀವು 1,21,480 ರೂ. ಹಾಗೂ 100 ಗ್ರಾಂಗೆ 12,14,800 ರೂ. ಪಾವತಿಸಬೇಕಾಗುತ್ತದೆ.

HY Meti: ಕಾಂಗ್ರೆಸ್‌ ಶಾಸಕ ಎಚ್‌ ವೈ ಮೇಟಿ ಅಂತ್ಯಕ್ರಿಯೆ ಇಂದು

ಕಾಂಗ್ರೆಸ್‌ ಶಾಸಕ ಎಚ್‌ ವೈ ಮೇಟಿ ಅಂತ್ಯಕ್ರಿಯೆ ಇಂದು

HY Meti State Funeral: ಬೆಂಗಳೂರಿನಿಂದ ಬಾಗಲಕೋಟೆಗೆ ಬೆಳಗ್ಗೆ ಪಾರ್ಥಿವ ಶರೀರ ತಂದು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅವರ ಸ್ವಗ್ರಾಮ ತಿಮ್ಮಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

Belagavi Sugarcane farmers Protest: ಕಾಳ್ಗಿಚ್ಚಾದ ಕಬ್ಬು ಬೆಳೆಗಾರರ ಪ್ರತಿಭಟನೆ, ನ.7ರಂದು ಬೆಳಗಾವಿಯಲ್ಲಿ ಹೆದ್ದಾರಿ ಬಂದ್

ಕಾಳ್ಗಿಚ್ಚಾದ ಕಬ್ಬು ಬೆಳೆಗಾರರ ಪ್ರತಿಭಟನೆ, ನ.7ರಂದು ಹೆದ್ದಾರಿ ಬಂದ್

Sugarcane farmers Protest: ಕಬ್ಬು ಬೆಳೆಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆರಂಭವಾಗಿರುವ ಕಬ್ಬು ಬೆಳೆಗಾರರ ಪ್ರತಿಭಟನೆ, ಇದೀಗ ಇಡೀ ಉತ್ತರ ಕರ್ನಾಟಕದ ರೈತರ ಬೃಹತ್‌ ಚಳವಳಿಯಾಗಿ ಪರಿವರ್ತನೆಯಾಗಿದೆ. ರೈತರ ಅಹೋರಾತ್ರಿ ಧರಣಿಗೆ ಮಂಗಳವಾರ ಬಿಜೆಪಿಯೂ ಕೈಜೋಡಿಸಿದೆ. ಪ್ರತಿ ಟನ್‌ ಕಬ್ಬಿಗೆ 3,500 ರೂ.ಕನಿಷ್ಠ ಬೆಂಬಲ ದರ ನೀಡಬೇಕೆಂಬ ಬೇಡಿಕೆಗೆ ದಿನೇದಿನೆ ಬಲ ಬರುತ್ತಿದ್ದು, ಸಕ್ಕರೆ ಕಾರ್ಖಾನೆಗಳು ನೀಡುತ್ತಿರುವ 3,200 ರೂ.ಬೆಲೆಗೆ ಕಬ್ಬು ಪೂರೈಸುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಅಹೋರಾತ್ರಿ ಧರಣಿ ಸತ್ಯಾಗ್ರಹ 6ನೇ ದಿನ ಮತ್ತಷ್ಟು ತೀವ್ರಗೊಂಡಿದ್ದು, ಸಹಸ್ರಾರು ರೈತರು ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ಸರಕಾರದ ವಿರುದ್ಧ ಕಹಳೆ ಊದಿದ್ದಾರೆ.

Karnataka Weather: ಹವಾಮಾನ ವರದಿ; ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (Karnataka Weather Report) ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Loading...