ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಹೂ ಮಾರುಕಟ್ಟೆಯಲ್ಲಿ ಹಸಿದವರಿಗೆ ಅನ್ನದಾನ ಪ್ರಾರಂಭ ಮಾಡಿದ ಯಲುವಹಳ್ಳಿ ರಮೇಶ್

ಹೂ ಮಾರುಕಟ್ಟೆಯಲ್ಲಿ ಹಸಿದವರಿಗೆ ಅನ್ನದಾನ ಪ್ರಾರಂಭ

ಜನರಿಂದ ಗಿಜಿಗುಡುವ ಸ್ಥಳದಲ್ಲಿ ಹಮಾಲಿಗಳು, ಕೂಲಿ ಕಾರ್ಮಿಕರು ಸೇರಿದಂತೆ ಬಡಬಗ್ಗರಿಗೆ ಅನುಕೂಲವಾಗುವ ಉದ್ದೇಶದಿಂದ ಸೇವಾ ಚಟುವಟಿಕೆಯನ್ನು ಕೈಗೊಳ್ಳುತ್ತಿದ್ದು ಪ್ರತಿ ಸೋಮ ವಾರ ಬೆಳಿಗ್ಗೆ ೯ ಕ್ಕೆ ಊಟವನ್ನು ವಿತರಿಸಲಾಗುತ್ತದೆ ಎಂದು ವಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಟಾನಗಳ ಅಧ್ಯಕ್ಷ  ಯಲುವಹಳ್ಳಿ.ಎನ್. ರಮೇಶ್ ತಿಳಿಸಿದರು.

JDS: ತ್ಯಾಗ ಮುಖ್ಯವೆಂದು ನಂಬಿದ ಪ್ರಾಮಾಣಿಕ ವ್ಯಕ್ತಿತ್ವ ಹೊಂದಿದ ಟಿ.ಎನ್.ರಾಜಗೋಪಾಲ್ : ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮ್

ಪ್ರಾಮಾಣಿಕ ವ್ಯಕ್ತಿತ್ವ ಹೊಂದಿದ ಟಿ.ಎನ್.ರಾಜಗೋಪಾಲ್

ಸಹಕಾರ ಕ್ಷೇತ್ರವಾದ ಹೈನುಗಾರಿಕೆ ಕ್ಷೇತ್ರದಲ್ಲಿ ಕ್ಷೀರ ಕ್ರಾಂತಿಯನ್ನು ಉಂಟು ಮಾಡಿದವರು ಹಾಗೂ ನಂದಿನಿ ಉತ್ಪನ್ನಗಳನ್ನು ದೇಶ ವಿದೇಶಕ್ಕೆ ಪರಿಚಯಿಸಿದವರು ಹಾಗೂ ಟೆಟ್ರಾ ಪ್ಯಾಕ್ ಮೂಲಕ ಹಾಲು ಹಲವುದಿನಗಳ ಕಾಲ ಕೆಡದಂತೆ ದಾಸ್ತಾನು ಮಾಡುವ ವಿಧಾನವನ್ನು ಪರಿಚಯಿಸಿದವ ರೆಂದರು.

Actor and social activist Chetan: ಸಮ ಸಮಾಜದ ನಿರ್ಮಾಣಕ್ಕೆ ಯುವ ಜನತೆ ಪಣತೊಡಬೇಕು ಎಂದು ನಟ ಚೇತನ್ ಕರೆ

ಸಮ ಸಮಾಜದ ನಿರ್ಮಾಣಕ್ಕೆ ಯುವ ಜನತೆ ಪಣತೊಡಬೇಕು

ಒಳ್ಳೆ ಕೆಲಸಗಳನ್ನು ಮಾಡಲು ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಉತ್ತಮ ಸಮಾಜ ವನ್ನು ಕಟ್ಟಲು ಹೋರಾಟವೇ ಮುಖ್ಯ.  ಸಮ ಸಮಾಜ ನಿರ್ಮಾಣಕ್ಕೆ ಜನರ ಬೆಂಬಲ ಬೇಕು. ನಾವು ಬೆಳೆಯುವು ದಲ್ಲದೆ ನಮ್ಮೊಡನೆ ಜನರು ಬದಲಾಗಬೇಕು ಸಮ ಸಮಾಜ ನಿರ್ಮಾಣ ವಾಗಬೇಕೆಂದು ತಿಳಿಸಿದರು.

Poor Quality Helmet: ಚಿಂತಾಮಣಿಯಲ್ಲಿ ಕಳಪೆ ಹೆಲ್ಮೆಟ್ ಮಾರಾಟ: ಹೆಸರಿಗೆ ಹೆಲ್ಮೆಟ್ ಸವಾರರ ಸುರಕ್ಷತೆಗಿಲ್ಲ ಗ್ಯಾರಂಟಿ

ಚಿಂತಾಮಣಿಯಲ್ಲಿ ಕಳಪೆ ಹೆಲ್ಮೆಟ್ ಮಾರಾಟ

ಹೆಲ್ಕೆಟ್‌ಗಾಗಿ ಶೋರೂಮ್, ಅಂಗಡಿಗಳಿಗೆ ಭೇಟಿ ನೀಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ನಗರದ ತಹಸೀಲ್ದಾ‌ರ್ ಕಚೇರಿ,ಬೆಂಗಳೂರು ರಸ್ತೆ,ಚೇಳೂರು ವೃತ್ತ,ಬಾಗೇಪಲ್ಲಿ ಸರ್ಕಲ್ ಸೇರಿದಂತೆ ಬೀದಿ ಬದಿಯಲ್ಲಿ ವ್ಯಾಪಾರಿಗಳು ಹೆಲ್ಮೆಟ್ ಮಾರಾಟ ಮಾಡುತ್ತಿದ್ದು ಮೊದಲ ದಿನ ಯಾವುದೋ ಒಂದು ಹೆಲ್ಮೆಟ್ ಲಭಿಸಿದರೆ ಆನಂತರ ಗುಣಮಟ್ಟದ ಹೆಲ್ಮೆಟ್ ಖರೀದಿ ಮಾಡೋಣ ಎಂದು ಗುಣಮಟ್ಟ ಲೆಕ್ಕಿಸದೆ ಬೀದಿಬದಿ ಹೆಲ್ಮೆಟ್ ಖರೀದಿಸುತ್ತಿದ್ದಾರೆ

Chinthamani Crime:  ITC ನಕಲಿ ಕಂಪನಿಯ ಸಿಗರೇಟ್ ಮಾರಾಟ: ಮೂವರು ಆರೋಪಿಗಳ ಸಮೇತ ಕಾರು ವಶಕ್ಕೆ

ಸಿಗರೇಟ್ ಮಾರಾಟ: ಮೂವರು ಆರೋಪಿಗಳ ಸಮೇತ ಕಾರು ವಶಕ್ಕೆ

ಚಿಂತಾಮಣಿ ನಗರದ ಟಿಎಪಿಎಂಸಿ ಮಾರುಕಟ್ಟೆಯ ಆವರದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ತಂದಿದ ಐ ಟಿ ಸಿ ಕಂಪನಿಯ ಹೆಸರಿನ ನಕಲಿ ಸಿಗರೇಟ್ ಪ್ಯಾಕೆಟ್ ಮತ್ತು ಮೂವರು ಆರೋಪಿಗಳ ಸಮೇತ ಒಂದು ಬಲೆನೋ ಕಾರು ವಶಪಡಿಸಿಕೊಳ್ಳುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿ ಯಾಗಿದ್ದಾರೆ.

Chikkaballapur News: ದೇಶದ ಅಖಂಡತೆಗೆ ರಾಷ್ಟ್ರೀಯ ಪಕ್ಷಗಳಿಂದಲೇ ಅಪಾಯವಿದೆ: ಜ್ಞಾನಪ್ರಕಾಶ ಸ್ವಾಮೀಜಿ

ದೇಶದ ಅಖಂಡತೆಗೆ ರಾಷ್ಟೀಯ ಪಕ್ಷಗಳಿಂದಲೇ ಅಪಾಯವಿದೆ: ಜ್ಞಾನಪ್ರಕಾಶ ಸ್ವಾಮೀಜಿ

ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಬಲಗೈಜಾತಿಗಳ ಒಕ್ಕೂಟ ಏರ್ಪಡಿಸಿದ್ದ ವೀರವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿದ್ದಾರೆ. ಭಾರತ ದೇಶವು ವಿವಿಧತೆಯಲ್ಲಿ ಏಕತೆಯನ್ನು ಬಯಸುವ ರಾಷ್ಟ್ರವಾಗಿದ್ದು ಇಂತಹ ದೇಶದ ಅಖಂಡತೆಗೆ ರಾಷ್ಟ್ರೀಯ ಪಕ್ಷಗಳಿಂದಲೇ ಅಪಾಯವಿದೆ ಎಂದು ಅವರು ಹೇಳಿದ್ದಾರೆ.

ಶಾಮನೂರು ಶಿವಶಂಕರಪ್ಪ ಹೆಸರು ಚಿರಸ್ಥಾಯಿ ಆಗಿಸಲು ಸಿಎಂ ಕ್ರಮವಹಿಸಲಿ: ಬಿ.ವೈ. ವಿಜಯೇಂದ್ರ

ಶಾಮನೂರು ಶಿವಶಂಕರಪ್ಪ ಹೆಸರು ಚಿರಸ್ಥಾಯಿ ಆಗಿಸಲು ಸಿಎಂ ಕ್ರಮವಹಿಸಲಿ: ಬಿವೈವಿ

Shamanur Shivashankarappa: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಬಂದಾಗಲೂ ಪಕ್ಷವನ್ನು ಮರೆತು ಸಮಾಜ ಒಗ್ಗೂಡಿಸುವ ಕೆಲಸ ಅವರ ನೇತೃತ್ವದಲ್ಲಿ ಆಗಿತ್ತು. ಅವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ವೋಟ್‌ ಚೋರಿ ನೆಪದಲ್ಲಿ ಸುಳ್ಳು ಸಂಕಥನ ಸೃಷ್ಟಿ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಎಚ್.ಡಿ. ದೇವೇಗೌಡ

ವೋಟ್‌ ಚೋರಿ ನೆಪದಲ್ಲಿ ಸುಳ್ಳು ಸಂಕಥನ ಸೃಷ್ಟಿ: ಎಚ್.ಡಿ. ದೇವೇಗೌಡ

HD Deve Gowda: ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಪ್ರಸ್ತಾಪಿಸಿಯೂ ಕಾಂಗ್ರೆಸ್ ಪಕ್ಷವು ಇತ್ತೀಚಿಗೆ ಬಿಹಾರ ಚುನಾವಣೆಯಲ್ಲಿ ಸೋಲು ಎದುರಿಸಿತು. ಮತದಾರರ ಪಟ್ಟಿಯ ಕೂಲಂಕಷ ಪರಿಶೀಲನೆಯ ನಂತರವೂ ಆ ರಾಜ್ಯದಲ್ಲಿ ಏನಾಯಿತು ಎಂಬುದನ್ನು ಸ್ವತಃ ಪ್ರತಿಪಕ್ಷ ನಾಯಕರು ಆಲೋಚಿಸಬೇಕು ಎಂದು ಕೈ ನಾಯಕರ ವಿರುದ್ಧ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕಿಡಿಕಾರಿದ್ದಾರೆ.

Ramanagara News: ಕೌಟುಂಬಿಕ ಕಲಹ; ಪತ್ನಿಯನ್ನು ಕತ್ತುಹಿಸುಕಿ ಕೊಂದು ಪತಿಯೂ ಆತ್ಮಹತ್ಯೆ!

ಕೌಟುಂಬಿಕ ಕಲಹ; ಪತ್ನಿಯನ್ನು ಕತ್ತುಹಿಸುಕಿ ಕೊಂದು ಪತಿಯೂ ಆತ್ಮಹತ್ಯೆ!

ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ವಾರ ದಂಪತಿ ಗಲಾಟೆ ಮಾಡಿಕೊಂಡು ಮಹಿಳಾ ಠಾಣೆ ಮೆಟ್ಟಿಲೇರಿದ್ದರು. ಸೋಮವಾರ ಗಲಾಟೆ ವಿಕೋಪಕ್ಕೆ ತಿರುಗಿದ ವೇಳೆ ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶಾಮನೂರು ಶಿವಶಂಕರಪ್ಪ ಅಂತ್ಯ ಸಂಸ್ಕಾರ

ದಾವಣಗೆರೆಯಲ್ಲಿ ನೆರವೇರಿದ ಶಾಮನೂರು ಶಿವಶಂಕರಪ್ಪ ಅಂತ್ಯ ಸಂಸ್ಕಾರ

Shamanur shivashankarappa: ದಾವಣಗೆರೆ ನಿವಾಸದಿಂದ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಹೈಸ್ಕೂಲ್ ಮೈದಾನಕ್ಕೆ ತೆಗೆದುಕೊಂಡು ಹೋಗಲಾಯಿತು. ಸಾರ್ವಜನಿಕರು ದರ್ಶನ ಪಡೆದ ಬಳಿಕ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸೋಮವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.

Karnataka Weather: ದಾವಣಗೆರೆ ಸೇರಿ ಮೂರು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆ; ಮುಂದಿನ ಎರಡು ದಿನ ಹೇಗಿರಲಿದೆ ಹವಾಮಾನ?

ದಾವಣಗೆರೆ ಸೇರಿ ಮೂರು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮುಖ್ಯವಾಗಿ ಸ್ಪಷ್ಟ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 14 ಡಿಗ್ರಿ ಸೆ. ಇರುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Hardware Hackathon: ಸಿಲಿಕಾನ್ ಸಿಟಿಯ ಎಂಜಿನಿಯರ್‌ಗಳಿಗೆ 'ಜರ್ನಿ ಟು ಮಾರ್ಸ್' ಸವಾಲು; ಜಯನಗರದಲ್ಲಿ ₹2 ಲಕ್ಷ ಬಹುಮಾನದ ಹ್ಯಾಕಥಾನ್!

ಡಿ.19ರಿಂದ ಹಾರ್ಡ್‌ವೇರ್ ಹ್ಯಾಕಥಾನ್ 2.0 – ಜರ್ನಿ ಟು ಮಾರ್ಸ್'

Bengaluru News: ಬೆಂಗಳೂರಿನ ಜಯನಗರದಲ್ಲಿರುವ ಪಾರ್ಸೆಕ್‌ (ParSEC) ಸೆಂಟರ್‌ ಹಾಗೂ ಮೇಕರ್ಸ್‌ ಅಡ್ಡದಲ್ಲಿ 2025ರ ಡಿಸೆಂಬರ್ 19 ರಿಂದ 21ರವರೆಗೆ 'ಹಾರ್ಡ್‌ವೇರ್ ಹ್ಯಾಕಥಾನ್ 2.0 – ಜರ್ನಿ ಟು ಮಾರ್ಸ್' ಹಮ್ಮಿಕೊಳ್ಳಲಾಗಿದೆ. ಇದು 72 ಗಂಟೆಗಳ ಕಾಲ ನಡೆಯುವ ಒಂದು ಸ್ಪೆಷಲ್ ಹಾರ್ಡ್‌ವೇರ್ ಹ್ಯಾಕಥಾನ್ ಆಗಿದೆ.

National Herald case: ದೆಹಲಿ ಪೊಲೀಸ್ ನೋಟೀಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿ.ಕೆ. ಶಿವಕುಮಾರ್

ದೆಹಲಿ ಪೊಲೀಸ್ ನೋಟೀಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆಶಿ

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ದೆಹಲಿ ಪೊಲೀಸರ ನೋಟೀಸ್‌ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದು ಅವರು ತಿಳಿಸಿದ್ದಾರೆ.

Bomb threat: ಮಂಗಳೂರಿನ ಆರ್‌ಟಿಒ ಕಚೇರಿ, ಗದಗ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ!

ಮಂಗಳೂರಿನ ಆರ್‌ಟಿಒ ಕಚೇರಿ, ಗದಗ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ!

ಮಂಗಳೂರಿನ ಆರ್‌ಟಿಒ ಕಚೇರಿ ಮತ್ತು ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಇಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇದರಿಂದ ಎರಡೂ ಸ್ಥಳಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು, ಬಾಂಬ್‌ ಸ್ಕ್ವಾಡ್‌ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Karnataka Winter Session: ಚಳಿಗಾಲದ ಅಧಿವೇಶನ ಅವಧಿ ಒಂದು ವಾರ ವಿಸ್ತರಿಸಿ; ಸ್ಪೀಕರ್‌ಗೆ ಆರ್‌.ಅಶೋಕ್‌ ಪತ್ರ

ಚಳಿಗಾಲದ ಅಧಿವೇಶನ ಅವಧಿ ಒಂದು ವಾರ ವಿಸ್ತರಿಸಿ: ಆರ್‌.ಅಶೋಕ್‌ ಆಗ್ರಹ

ಈ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಾಗಿರುವ ಬಹಳಷ್ಟು ವಿಷಯಗಳು ಬಾಕಿಯಿದೆ. ಹೀಗಾಗಿ ತಾವು ಪ್ರಸ್ತುತ ಅಧಿವೇಶನದ ಅವಧಿಯನ್ನು ಒಂದು ವಾರ ವಿಸ್ತರಿಸಬೇಕು ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ವಿಪಕ್ಷ ನಾಯಕ ಆ.ಅಶೋಕ್‌ ಒತ್ತಾಯಿಸಿದ್ದಾರೆ.

Bengaluru Crime News: ಪಾರ್ಟಿಗೆ ದಾಳಿ ಮಾಡಿ ಹಣ ಕೇಳಿದ ಪೊಲೀಸರು, ಬಾಲ್ಕನಿಯಿಂದ ಜಿಗಿದ ಯುವತಿ ಗಂಭೀರ

ಪಾರ್ಟಿ ವೇಳೆ ಲಂಚ ಕೇಳಿದ ಪೊಲೀಸರು, ಬಾಲ್ಕನಿಯಿಂದ ಜಿಗಿದ ಯುವತಿ ಗಂಭೀರ

ಪಾರ್ಟಿಯ ವೇಳೆ ಪೊಲೀಸರು ಬಂದ ವಿಚಾರ ತಿಳಿದ ಯುವತಿ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಹಾರಿದ್ದಾಳೆ ಎಂದು ಹೇಳಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್‌ಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Gold Price Today on 15th December 2025: ಮತ್ತೆ ಹೆಚ್ಚಾಯ್ತು ಚಿನ್ನದ ದರ; ಇಂದು ದುಬಾರಿಯಾಗಿದ್ದು ಇಷ್ಟು

ಮತ್ತಷ್ಟು ಹೆಚ್ಚಾಯ್ತು ಚಿನ್ನದ ದರ

Gold Rate Today: ಕೆಲವು ದಿನಗಳಿಂದ ಗ್ರಾಹಕರ ನೆಮ್ಮದಿ ಗೆಡಿಸಿದ ಚಿನ್ನದ ದರ ಇಂದು ಕೂಡ ಹೆಚ್ಚಾಗಿದೆ. ಸೋಮವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 75 ರೂ. ಹೆಚ್ಚಾದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 82 ರೂ. ದುಬಾರಿಯಾಗಿದೆ.

ಕ್ಲಿಷ್ಟಕರ ಥೈರಾಯ್ಡ್ ಗೆಡ್ಡೆಗೆ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಚಿಕಿತ್ಸೆ

ಕ್ಲಿಷ್ಟಕರ ಥೈರಾಯ್ಡ್ ಗೆಡ್ಡೆಗೆ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಚಿಕಿತ್ಸೆ

ವೈದ್ಯಕೀಯ ತಂಡವು ಇ ಎನ್ ಟಿ, ಹೆಡ್ & ನೆಕ್ ಕ್ಯಾನ್ಸರ್ ಮತ್ತು ಕಾರ್ಡಿಯೋಥೊರಾಸಿಕ್ ಸರ್ಜರಿ ತಂಡಗಳು ಸೇರಿದಂತೆ ಬಹುವಿಭಾಗೀಯ ತಂಡದ ಸಹಕಾರ ದಿಂದ ಅತ್ಯಂತ ಕೌಶಲ್ಯಪೂರ್ವಕವಾಗಿ ಕನಿಷ್ಠ ಪ್ರವೇಶ ಶಸ್ತ್ರಚಿಕಿತ್ಸೆಯ ಮೂಲಕ ಈ ಗೆಡ್ಡೆಯನ್ನು ಯಶಸ್ವಿಯಾಗಿ, ಸಂಪೂರ್ಣವಾಗಿ ತೆಗೆದುಹಾಕಲಾಯಿತು. ಈ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಲಾಯಿತು.

ದಾವಣಗೆರೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬೆಳವಣಿಗೆಗೆ ಶಾಮನೂರು ಕಾರಣ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ

ದಾವಣಗೆರೆಯ ಆರ್ಥಿಕ, ಶೈಕ್ಷಣಿಕ ಬೆಳವಣಿಗೆಗೆ ಶಾಮನೂರು ಕಾರಣ: ಸದನದಲ್ಲಿ ಸಿಎಂ

ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಾಮನೂರರು (Shamanuru Shivashankarappa) ತಂದುಕೊಟ್ಟರು ಎಂದು ಸಿಎಂ ನೆನೆದುಕೊಂಡಿದ್ದಾರೆ.

Shamanuru Shivashankarappa: ಪತ್ನಿಯ ಸಮಾಧಿ ಬಳಿಯೇ ಶಾಮನೂರು ಅಂತ್ಯಕ್ರಿಯೆ ಸಿದ್ಧತೆ, ಶಾಲೆ- ಕಾಲೇಜುಗಳಿಗೆ ರಜೆ

ಪತ್ನಿ ಸಮಾಧಿ ಬಳಿಯೇ ಶಾಮನೂರು ಅಂತ್ಯಕ್ರಿಯೆ ಸಿದ್ಧತೆ, ಶಾಲೆ- ಕಾಲೇಜಿಗೆ ರಜೆ

ಆನೆಕೊಂಡದ ಶಾಮನೂರ ಮನೆತನದ ಕಲ್ಲೇಶ್ವರ ರೈಸ್ ಮಿಲ್ ಜಾಗಕ್ಕೆ ಕರೆತಂದು, ಸಂಜೆ 5:30 ಸೂರ್ಯ ಮುಳುಗುವುದರ ಒಳಗಾಗಿ, ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಅವರ ಪತ್ನಿಯ ಸಮಾಧಿ ಪಕ್ಕವೇ ಶಾಮನೂರು ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

ಚಳಿಯ ಅಬ್ಬರಕ್ಕೆ ಕೊಪ್ಪಳ ಜನ ʼಥಂಡಾʼ !

ಚಳಿಯ ಅಬ್ಬರಕ್ಕೆ ಕೊಪ್ಪಳ ಜನ ʼಥಂಡಾʼ !

ತಾಪಮಾನ ಪ್ರಮಾಣ ದಾಖಲೆ ಪ್ರಮಾಣದಲ್ಲಿ ಇಳಿಕೆ ಆಗಿದ್ದು, ಜನ ಜೀವನ ಅಸ್ವಸ್ಥಗೊಂಡಿದೆ. ಬೆಳಗ್ಗೆ ವಾಕಿಂಗ್ ಮಾಡುವವರು ಚಳಿಯಿಂದ ರಕ್ಷಿಸಿಕೊಳ್ಳಲು ವಿಶೇಷ ಧರಿಸುಗಳ ಮೊರೆ ಹೋಗಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಕನಿಷ್ಠ 10 ರಿಂದ 12 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗು ತ್ತಿದ್ದು, ಇದು ಸಾಮಾನ್ಯಕ್ಕಿಂತ ತೀರಾ ಕಡಿಮೆ ಆಗಿದೆ. ಇದರಿಂದ ಬೆಳಗ್ಗೆ 6 ರಿಂದ 7 ಗಂಟೆ ವರೆಗೆ ದಟ್ಟ ಮಂಜು ಕವಿದಿರುತ್ತದೆ.

Delhi Smog: ದೆಹಲಿಯಲ್ಲಿ ದಟ್ಟ ಮಂಜು, ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಬಾಕಿ

ದೆಹಲಿಯಲ್ಲಿ ದಟ್ಟ ಮಂಜು, ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಬಾಕಿ

ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು. ಇಂದು ದಾವಣಗೆರೆಯಲ್ಲಿ ನಡೆಯಲಿರುವ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೆಹಲಿಯಿಂದ (Delhi smog) ಬೆಳಗಾವಿಗೆ ಹೋಗುವ ವಿಮಾನ ಏರಿದ್ದರು.

ಜಿಲ್ಲಾದ್ಯಂತ ಕೊರೆಯುವ ಚಳಿ, ಬೆಚ್ಚನೆಯ ಇಡುವ ಬೆಂಕಿ ಮೊರೆ

ಜಿಲ್ಲಾದ್ಯಂತ ಕೊರೆಯುವ ಚಳಿ, ಬೆಚ್ಚನೆಯ ಇಡುವ ಬೆಂಕಿ ಮೊರೆ

ಚಳಿಯ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಬೆಳಗ್ಗೆ ಹಾಗೂ ಸಂಜೆ ವಾಕಿಂಗ್ ಮಾಡುವವರ ಸಂಖ್ಯೆ ಕಡಿಮೆಯಾಗಿದೆ. ಬೆಳ್ಳಂ ಬೆಳಗ್ಗೆ ವಾಕಿಂಗ್ ಮಾಡುತ್ತಿರುವವರು ಸೂರ್ಯನ ಉದಯದ ಬಳಿಕ ವಾಕಿಂಗ್ ಮಾಡುತ್ತಿದ್ದರೆ, ಸಂಜೆ ಸೂರ್ಯಾಸ್ತದ ಒಳಗಾಗಿ ಕೆಲವರು ವಾಕಿಂಗ್ ಮಾಡು ತ್ತಿದ್ದಾರೆ. ಚಳಿ ಕಾರಣ ದಿಂದ ಹೆಚ್ಚಿನವರು ವಾಕಿಂಗ್ನಿಂದ ದೂರ ಉಳಿದಿದ್ದಾರೆ.

Karnataka Weather: ತೀವ್ರವಾದ ಚಳಿ, ಉತ್ತರ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್

ತೀವ್ರವಾದ ಚಳಿ, ಉತ್ತರ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್

ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ (Karnataka Weather) ಹಾಗೂ ಶೀತಗಾಳಿ ಇರಲಿದೆ. ಇದು ವಯಸ್ಸಾದವರ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದರ ಜೊತೆಗೆ ಬೆಳೆ ವೈಪರಿತ್ಯವೂ ಉಂಟಾಗಲಿದೆ ಎಂದ ಹವಾಮಾನ ಇಲಾಖೆ ತಿಳಿಸಿದೆ. ಈ ಶೀತಗಾಳಿಯಿಂದ ಮನುಷ್ಯರು ತಮ್ಮನ್ನು ರಕ್ಷಿಸಿಕೊಳ್ಳಬೇಕು. ಬೆಚ್ಚಗಿನ ನೀರು, ಆಹಾರವನ್ನೇ ಸೇವಿಸಬೇಕು. ಇದರ ಜೊತೆಗೆ ಬೆಳೆಗಳನ್ನು ಸಂರಕ್ಷಿಸಲು ಹವಾಮಾನ ತಜ್ಞರು ಕೆಲವೊಂದಿಷ್ಟು ಸೂಚನೆಗಳನ್ನು ನೀಡಿದ್ದಾರೆ.

Loading...