ಐಪಿಎಲ್ 2025ರಿಂದ ಬಿಸಿಸಿಐಗೆ ಬಂದ ಆದಾಯ ಎಷ್ಟು?
ಟಾಟಾ ಗ್ರೂಪ್ 2024 ರಿಂದ 2028 ರವರೆಗಿನ ಐಪಿಎಲ್ನ ಶೀರ್ಷಿಕೆ ಪ್ರಾಯೋಜಕರಾಗಿದ್ದು, ಒಟ್ಟು ₹2,500 ಕೋಟಿ ಮೌಲ್ಯದ ಒಪ್ಪಂದವನ್ನು ಹೊಂದಿದೆ. ಅಂದರೆ ಐಪಿಎಲ್ 2025 ಸೇರಿದಂತೆ ಪ್ರತಿ ಋತುವಿನಲ್ಲಿ ಟಾಟಾದಿಂದಲೇ ₹500 ಕೋಟಿ ಆದಾಯ ಬರುತ್ತದೆ.
IPL
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಬಳಿಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದ ಸಾಮರ್ಥ್ಯವನ್ನು ಬಿಸಿಸಿಐ ಪರಿಶೀಲಿಸುತ್ತಿದೆ ಹಾಗೂ ಭಾರತ ವೈಟ್ಬಾಲ್ ತಂಡದ ನಾಯಕತ್ವದ ರೇಸ್ಗೆ ಅವರು ಮರಳಿದ್ದಾರೆಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Vijay mallya on Match winners for RCB: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರ ನಡುವೆ ಈ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಅವರ ಸಂದರ್ಶನವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ.
Lalit Modi on Bengaluru franchise: 2008ರಲ್ಲಿ ಆರಂಭವಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಬೆಂಗಳೂರು ಫ್ರಾಂಚೈಸಿ ವಿಜಯ್ ಮಲ್ಯಗೆ ಮೊದಲ ಆಯ್ಕೆಯಾಗಿರಲಿಲ್ಲ. ಅವರು ಮುಂಬೈ ಫ್ರಾಂಚೈಸಿಯನ್ನು ಖರೀದಿಸಲು ಬಯಸಿದ್ದರು. ಆದರೆ, ಅದು ಸಿಗದ ಕಾರಣ ಬೆಂಗಳೂರು ಫ್ರಾಂಚೈಸಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದ್ದರು ಎಂದು ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ತಿಳಿಸಿದ್ದಾರೆ.
Bengaluru Stampede: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಕಾರ್ಯದರ್ಶಿ ಶಂಕರ್ ಹಾಗೂ ಕೆಎಸ್ಸಿಎ ಖಜಾಂಚಿ ಜೈರಾಮ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜಿನಾಮೆ (Resignation) ನೀಡಿದ್ದಾರೆ. ಪದಾಧಿಕಾರಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಶಂಕರ್, ಜೈರಾಮ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
Bengaluru Stampede: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಹೊಣೆಗಾರರನ್ನಾಗಿ ಮಾಡಿ ಆರ್ಸಿಬಿ ಮೇಲೆ ಮೂರು ಎಫ್ಐಆರ್ ದಾಖಲಾಗಿದೆ. ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಆರ್ಸಿಬಿ ಮ್ಯಾನೇಜ್ಮೆಂಟ್ A-1, DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ A3 ಆಗಿದ್ದಾರೆ.
KL Rahul Scored Hundred againsr England Lions: ಇಂಗ್ಲೆಂಡ್ ವಿರುದ್ಧ ಮುಂಬವರು ಐದು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಭಾರತ ತಂಡದ ಕೆಎಲ್ ರಾಹುಲ್ ಭರ್ಜರಿ ಶತಕವನ್ನು ಸಿಡಿಸಿದ್ದಾರೆ. ಅವರು ಜೂನ್ 6 ರಂದು ಇಂಗ್ಲೆಂಡ್ ಲಯನ್ಸ್ ವಿರುದ್ಧದ ಎರಡನೇ ಅನಗತ್ಯ ಟೆಸ್ಟ್ ಪಂದ್ಯದಲ್ಲಿ ಶತಕವನ್ನು ಬಾರಿಸಿದ್ದಾರೆ.
18 ವರ್ಷಗಳ ದೀರ್ಘ ಕಾಯುವಿಕೆಯ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೊಚ್ಚಲ ಚಾಂಪಿಯನ್ ಆಯಿತು. ಉದ್ಯಮಿ ವಿಜಯ್ ಮಲ್ಯ 2008ರಲ್ಲಿ ಆರ್ಸಿಬಿ ತಂಡವನ್ನು ಖರೀದಿಸಲು ಬಲವಾದ ಕಾರಣವೇನೆಂದು ವಿವರಿಸಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯಗಳನ್ನು ಆಡಲು ಭಾರತಕ್ಕೆ ಮರಳದೇ ಇರಲು ಕಾರಣವೇನೆಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಬಹಿರಂಗಪಡಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಘರ್ಷದ ಕಾರಣ ಒಂದು ವಾರದವರೆಗೂ ಪಂದ್ಯಗಳನ್ನು ನಿಲ್ಲಿಸಲಾಗಿತ್ತು. ಈ ವೇಳೆ ಆಸ್ಟ್ರೇಲಿಯಾಗೆ ತೆರಳಿದ್ದ ಮಿಚೆಲ್ ಸ್ಟಾರ್ಕ್ ಮತ್ತೆ ಭಾರತಕ್ಕೆ ಮರಳಲಿಲ್ಲ.
Yash Dayal on RCB's Maiden IPL Cup: ಸತತ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದು ಸಂಭ್ರಮಿಸಿದೆ. ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ ಗೆಲುವು ಸಾಧಿಸಿದ ಆರ್ಸಿಬಿ ಈ ಸಾಧನೆಯನ್ನು ಮಾಡಿತ್ತು. ಈ ಬಗ್ಗೆ ವೇಗಿ ಯಶ್ ದಯಾಳ್ ಮಾತನಾಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಂಡಿಯನ್ ಪ್ರೀಮಿಯರ್ ಲೀಗ್ನ ಚೊಚ್ಚಲ ಕಪ್ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ 11 ಮಂದಿ ಸಾವು ಹಾಗೂ 47 ಮಂದಿ ಸಾವಿಗೀಡಾದ ಪ್ರಕರಣ ಸಂಬಂಧ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಪ್ರತಿಕ್ರಿಯೆ ನೀಡಿದ್ದಾರೆ. ಸಂಭ್ರಮಾಚರಣೆಗಿಂತ ಜೀವ ಮುಖ್ಯ ಎಂದು ಹೇಳಿದ್ದಾರೆ.
ವಿರಾಟ್ ಕೊಹ್ಲಿಯನ್ನೇ ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಬಂದಿದ್ದರು. ಆದರೆ ಅವರು ಅಭಿಮಾನಿಗಳ ಸಾವಿನ ಮಧ್ಯೆಯೂ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಕೆಲ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ. ಕೆಲ ನೆಟ್ಟಿಗರು, ಕೊಹ್ಲಿ ಕೈದಿಯ ಪೋಷಾಕು ಧರಿಸಿರುವಂತೆ ಇರುವ ಫೋಟೊ ಎಡಿಟ್ ಮಾಡಿ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Gautam Gambhir on India's Test series vs ENG: ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಜೂನ್ 20 ರಂದು ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆರಂಭಿಸಲಿವೆ. ಇಂಗ್ಲೆಂಡ್ ಪ್ರವಾಸಕ್ಕೂ ತೆರಳುವುದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಡ್ ಕೋಚ್ ಗೌತಮ್ ಗಂಭೀರ್ ತಮ್ಮ ಮೇಲಿನ ಒತ್ತಡದ ಹೇಗಿದೆ ಎಂಬುದರ ಬಗ್ಗೆ ವಿವರಿಸಿದ್ದಾರೆ.
ಮಹ್ವಾಶ್ ಪಂಜಾಬ್ ತಂಡದ ಪ್ರತಿ ಪಂದ್ಯದಲ್ಲೂ ಪಾಲ್ಗೊಳ್ಳುವ ಮೂಲಕ ಚಹಲ್ ಮತ್ತು ತಂಡಕ್ಕೆ ಬೆಂಬಲ ಸೂಚಿಸುತ್ತಿದ್ದರು. ಚಹಲ್ ಜತೆಗಿನ ಸಂಬಂಧದ ಬಗ್ಗೆ ಯಾವುದೇ ಕ್ಲ್ಯಾರಿಟಿ ನೀಡದಿದ್ದರೂ ಕೂಡ ಚಹಲ್ ಜತೆ ಡೇಟಿಂಗ್ ಮಾಡುತ್ತಿರುವುದಂತು ನಿಜ. ಇಲ್ಲವಾದಲ್ಲಿ ಚಹಲ್ ಎಲ್ಲೇ ಹೋದರೂ ಅವರ ಜತೆ ಕಾಣಿಸಿಕೊಳ್ಳಲು ಸಾಧ್ಯವಿಲ್ಲ.
ಆರ್ಸಿಬಿ ತಂಡದ ಮೇಲಿನ ಅತಿಯಾದ ಕ್ರೇಜ್ 11 ಅಭಿಮಾನಿಗಳನ್ನು ಬಲಿ ಪಡೆದಿದೆ. ಕಪ್ ಗೆದ್ದ ನೆಚ್ಚಿನ ತಂಡ, ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಬಂದಿದ್ದವರು ದುರಂತ ಅಂತ್ಯ ಕಂಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಿಂದ ಉಜ್ವಲ ಭವಿಷ್ಯ ಕಾಣಬೇಕಿದ್ದ 11 ಅರಳುವ ಹಂತದಲ್ಲಿದ್ದ ಹೂವುಗಳು ಮುದುಡಿವೆ. ದುರಂತದಲ್ಲಿ ಯುವಕ-ಯುವತಿಯರು ಸೇರಿ 11 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 47ಕ್ಕೂ ಹೆಚ್ಚು ಮಂದಿಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಾವನ್ನಪ್ಪಿದ ಒಬ್ಬೊಬ್ಬರ ಹಿನ್ನೆಲೆ ಯೂ ಕರುಣಾಜನಕವಾಗಿದೆ.
Bengaluru stampede: ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಜೂನ್ 4 ರಂದು ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿದ್ದರು ಹಾಗೂ 47 ಮಂದಿ ಗಾಯಕ್ಕೆ ತುತ್ತಾಗಿದ್ದರು.
ಇಂಗ್ಲೆಂಡ್ ಪ್ರವಾಸಕ್ಕೆ ತೆರಳುವ ಮೊದಲು ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ಶುಭಮನ್ ಗಿಲ್ ಪತ್ರಿಕಾಗೋಷ್ಠಿ ನಡೆಸಿದರು. ಆರ್ಸಿಬಿಯ ವಿಜಯೋತ್ಸವದ ವೇಳೆ ಕಾಲ್ತುಳಿತದ ಘಟನೆಯ ಬಗ್ಗೆ ಕೇಳಿದಾಗ ಗಂಭೀರ್ ದೊಡ್ಡ ಹೇಳಿಕೆ ನೀಡಿದ್ದಾರೆ. ರೋಡ್ ಶೋಗಳು ಅಗತ್ಯವಿಲ್ಲ, ಜನರ ಜೀವ ಮುಖ್ಯ ಎಂದು ಅವರು ಹೇಳಿದ್ದಾರೆ.
Vaibhav Suryavanshi on his dream: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ನಿಂದ 14 ವರ್ಷದ ಪೋರ ವೈಭವ್ ಸೂರ್ಯವಂಶಿ ಎಲ್ಲರ ಗಮನವನ್ನು ಸೆಳೆದಿದ್ದರು. ತಮ್ಮ ಚೊಚ್ಚಲ ಐಪಿಎಲ್ ಪಯಣದ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿರುವ ಅವರು, 2026ರ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಫೈನಲ್ಗೆ ತಲುಪಿಸುವ ಗುರಿ ಹೊಂದಿರುವುದಾಗಿ ಹೇಳಿದ್ದಾರೆ.
Virender sehwag on Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಐಪಿಎಲ್ ಕಪ್ಗಾಗಿ ಕೇವಲ 18 ವರ್ಷಗಳು ಮಾತ್ರ ಕಾದಿದ್ದಾರೆ. ಆದರೆ, ಸಚಿನ್ ತೆಂಡೂಲ್ಕರ್ ಏಕದಿನ ವಿಶ್ವಕಪ್ಗಾಗಿ ಇನ್ನೂ ದೀರ್ಘಾವಧಿ ಕಾದಿದ್ದಾರೆಂದು ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.
Yograj Singh on Shreyas Iyer: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ 2025 ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರ ಶಾಟ್ ಸೆಲೆಕ್ಷನ್ ಬಗ್ಗೆ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.