ಪರಪ್ಪನ ಅಗ್ರಹಾರದಲ್ಲಿ ಉಗ್ರನಿಗೆ ರಾಜಾತಿಥ್ಯ: ಗೃಹ ಸಚಿವರು ಹೇಳಿದ್ದೇನು?
Parappana Agrahara Jail: ಇಂಥ ಘಟನೆಗಳು ಮಂಗಳೂರು, ಬೆಳಗಾವಿ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇ ಪದೆ ಆಗಿದ್ದು ಕೇಳಿಬಂದಿದೆ. ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು. ಎಡಿಜಿಪಿ ಬಿ ದಯಾನಂದ ಅವರ ಜೊತೆಗೆ ನಾನು ಮಾತನಾಡಿದ್ದೇನೆ. ಈ ಬೆಳವಣಿಗೆಗೆ ಯಾರು ಹೊಣೆಗಾರರಾಗಿದ್ದಾರೋ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವರು ನುಡಿದಿದ್ದಾರೆ.