ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Karnataka Weather: ಯೆಲ್ಲೋ ಅಲರ್ಟ್; ಮುಂದಿನ 2 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಮುಂದಿನ 2 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Rainfall) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಇರುವ ಸಾಧ್ಯತೆ ಇದೆ.

Malavika Avinash: ನ.7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ: ಮಾಳವಿಕ ಅವಿನಾಶ್

ನ.7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ

Vande Mataram Song: ನ.7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ, ವಂದೇ ಮಾತರಂನ ಸಂಭ್ರಮ ನಡೆಯಲಿದೆ. ದೇಶಾದ್ಯಂತ ಎಲ್ಲ ಬಿಜೆಪಿ ಕಾರ್ಯಾಲಯಗಳಲ್ಲಿ ಸಾಮೂಹಿಕ ಗಾಯನ ನಡೆಯಲಿದೆ. ಪ್ರಧಾನಿಯವರೂ ಈ ಗಾಯನದಲ್ಲಿ ಸ್ವತಃ ಭಾಗವಹಿಸಲಿದ್ದಾರೆ ಎಂದು ತಿಳಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕಿ ಮಾಳವಿಕ ಅವಿನಾಶ್, ಈ ಗೀತೆ ಹಾಡುವ ಮೂಲಕ ಆಚರಣೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ನಿರ್ಣಯಿಸಿದೆ.

Laxmi Hebbalkar: ಗೃಹಲಕ್ಷ್ಮಿ ಸೊಸೈಟಿ ಮೂಲಕ 3 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಲೋನ್ ಸೌಲಭ್ಯ: ಹೆಬ್ಬಾಳ್ಕರ್‌

ಮಹಿಳೆಯರಿಗೆ, ಇಲಾಖೆಗೆ ಶಕ್ತಿ ತುಂಬುವುದೇ ನನ್ನ ಗುರಿ: ಹೆಬ್ಬಾಳ್ಕರ್

Gruhalakshmi Scheme: ವಿಶ್ವದಲ್ಲೇ ದೊಡ್ಡದಾದ ಗೃಹಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ. 2000 ಜನ ಫಲಾನುಭವಿಗಳ ಹಣ ಸಂಗ್ರಹಿಸಲಾಗಿದ್ದು, ಇದು ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೆ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು ಎಂದು ಹೇಳಿದ್ದಾರೆ.

SSLC, 2nd PUC Exam 2026 TimeTable: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2, 2026 ವೇಳಾಪಟ್ಟಿ: ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದೆ.

HD Kumaraswamy: ಉಕ್ಕಿನ ಉತ್ಪಾದನೆ ಹೆಚ್ಚಿಸಲು ಉತ್ತೇಜನ; ₹43,800 ಕೋಟಿಗೂ ಹೆಚ್ಚು ಹೂಡಿಕೆ ನಿರೀಕ್ಷೆ: ಹೆಚ್‌ಡಿಕೆ

ಭಾರತದಲ್ಲಿ ₹43,800 ಕೋಟಿಗೂ ಹೆಚ್ಚು ಹೂಡಿಕೆ ನಿರೀಕ್ಷೆ-ಹೆಚ್‌ಡಿಕೆ

Central Government: ಜುಲೈ 2021ರಲ್ಲಿ ಕೇಂದ್ರ ಸಚಿವ ಸಂಪುಟವು ಅನುಮೋದಿಸಿದ ವಿಶೇಷ ಉಕ್ಕಿನ ಉತ್ತೇಜನಕ್ಕಾಗಿ ಒಟ್ಟು ₹6,322 ಕೋಟಿ ಮೊತ್ತದ PLI ಯೋಜನೆಯನ್ನು ಅನುಷ್ಠಾನಕ್ಕೆ ತರಲು ಅನುಮೋದನೆ ನೀಡಿತ್ತು. ಇದು ರಕ್ಷಣೆ, ಏರೋಸ್ಪೇಸ್, ಇಂಧನ, ಆಟೋಮೊಬೈಲ್‌ ಮತ್ತು ಮೂಲಸೌಕರ್ಯದಂತಹ ವಲಯಗಳಲ್ಲಿ ಬಳಸಲಾಗುವ ಹೆಚ್ಚಿನ ಮೌಲ್ಯದ, ಉನ್ನತ ದರ್ಜೆಯ ಉಕ್ಕಿನ ಉತ್ಪಾದನೆಯನ್ನು ಉತ್ತೇಜಿಸಲು ಉದ್ದೇಶಿಸಿದ ಯೋಜನೆಯಾಗಿದೆ ಎಂದು ಕೇಂದ್ರದ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

Basavaraj Bommai: ಕಬ್ಬಿನ ದರ ನಿಗದಿ ಪಡಿಸಲು ತಕ್ಷಣ ಸಿಎಂ ಮಧ್ಯ ಪ್ರವೇಶಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ

ಕಬ್ಬಿನ ದರ ನಿಗದಿ ಪಡಿಸಲು ತಕ್ಷಣ ಸಿಎಂ ಮಧ್ಯ ಪ್ರವೇಶಿಸಲಿ: ಬೊಮ್ಮಾಯಿ ಆಗ್ರಹ

Sugarcane farmers protest: ರಾಜ್ಯದ ಕಬ್ಬು ಬೆಳೆಗಾರರು ನ್ಯಾಯ ಸಮ್ಮತ ಬೆಲೆ ನಿಗದಿ ಆಗಬೇಕೆಂದು ಏಳನೇ ದಿನ ಹೋರಾಟ ಮಾಡುತ್ತಿದ್ದಾರೆ. ವ್ಯಾಪಕ ಹೋರಾಟ ಆಗುತ್ತಿದೆ. ನಾನು ಈಗಾಗಲೇ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದೇನೆ. ಆದರೆ, ಸಿಎಂ ರೈತರ ಬಗ್ಗೆ ಅಸಡ್ಡೆ ಭಾವನೆ ವ್ಯಕ್ತಪಡಿಸಿ ತಮ್ಮ ರಾಜಕಾರಣವನ್ನು ಸಿಎಂ ಸ್ಥಾನ ಉಳಿಸಿಕೊಳ್ಳಲು ಸಮಯ ಸಿಗುತ್ತಿಲ್ಲ ಹೀಗಾಗಿ ರೈತರ ಸಮಸ್ಯೆ ಪರಿಹರಿಸಲು ಅವರಿಗೆ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

Kannada Book Festival: ಕಲಾಗಂಗೋತ್ರಿ ತಂಡದಿಂದ ಮೈಸೂರು ಮಲ್ಲಿಗೆ ನಾಟಕ; ಉಚಿತ ಪ್ರವೇಶ

ಕಲಾಗಂಗೋತ್ರಿ ತಂಡದಿಂದ ಮೈಸೂರು ಮಲ್ಲಿಗೆ ನಾಟಕ!

Mysore Mallige play: ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸಿರುವ 5ನೇ ಕನ್ನಡ ಪುಸ್ತಕ ಹಬ್ಬದ ಅಂಗವಾಗಿ ಪ್ರತಿದಿನ ಸಂಜೆ ಸಂಸ್ಕಾರ ಭಾರತೀ ಬೆಂಗಳೂರು ಸಹಯೋಗದಲ್ಲಿ ಕೆಂಪೇಗೌಡ ನಗರದ ಕೇಶವಶಿಲ್ಪ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಪುಸ್ತಕ ಹಬ್ಬದ 5ನೇ ದಿನ (ನವೆಂಬರ್‌ 5) ಸಂಜೆ 6 ರಿಂದ ಕವಿ ಕೆ.ಎಸ್‌. ನರಸಿಂಹಸ್ವಾಮಿ ಅವರ ಕವನಗಳನ್ನು ಆಧರಿಸಿದ ಜನ ಪ್ರಿಯ ನಾಟಕ ‘ಮೈಸೂರು ಮಲ್ಲಿಗೆ’ ಪ್ರದರ್ಶನಗೊಳ್ಳಲಿದೆ. ಕವಿಯ ಜೀವನಪಯಣ, ಅವರ ಕವಿತೆಗಳ ತತ್ವಭಾವ, ಕಷ್ಟ–ಸುಖಗಳ ಮಿಶ್ರಣವನ್ನು ವೇದಿಕೆಗೆ ತರಲಿರುವ ಈ ನಾಟಕದಲ್ಲಿ ಸಂಗೀತ, ನೃತ್ಯ ಮತ್ತು ನಾಟಕೀಯ ಅಂಶಗಳ ಸಂಯೋಜನೆ ವಿಶೇಷ ಆಕರ್ಷಣೆಯಾಗಲಿದೆ.

Nandini Ghee Price: ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್; ನಂದಿನಿ ತುಪ್ಪದ ದರ ಪ್ರತಿ ಲೀಟರ್​ಗೆ 90 ರೂಪಾಯಿ ಏರಿಕೆ

ಮತ್ತೆ ದರ ಏರಿಕೆ ಶಾಕ್; ನಂದಿನಿ ತುಪ್ಪದ ದರ ಲೀಟರ್​ಗೆ 90 ರೂ. ಏರಿಕೆ

KMF's Nandini Ghee Price Hike: ಜಿಎಸ್​ಟಿ ಸುಧಾರಣೆ ಬಳಿಕ ನಂದಿನಿ ತುಪ್ಪದ ದರವನ್ನು 40 ರೂಪಾಯಿ ಇಳಿಕೆ ಮಾಡುವ ಮೂಲಕ ಗ್ರಾಹಕರಿಗೆ ಕೆಎಂಎಫ್‌ ಸಿಹಿಸುದ್ದಿ ನೀಡಿದ್ದು. ಆದರೆ, ಇದೀಗ ನಂದಿನಿ ತುಪ್ಪದ ದರ ದಿಢೀರ್ ಏರಿಕೆಯಾಗಿದ್ದು, ಇಂದಿನಿಂದಲೇ (ನ.5) ನಂದಿನಿ ತುಪ್ಪದ ಪರಿಷ್ಕೃತ ದರ ಜಾರಿಯಾಗಲಿದೆ.‌

Road Accident: ಬೀದರ್‌ನಲ್ಲಿ ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ, ತೆಲಂಗಾಣದ ನಾಲ್ವರು ಸಾವು

ಬೀದರ್‌ನಲ್ಲಿ ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ, ತೆಲಂಗಾಣದ ನಾಲ್ವರು ಸಾವು

Bidar News: ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ತೆಲಂಗಾಣ ಮೂಲದ ರಾಚಪ್ಪ, ನವೀನ್, ನಾಗರಾಜ್ ಮೃತ ದುರ್ದೈವಿಗಳಾಗಿದ್ದಾರೆ. ಮೃತರು ನೆರೆಯ ತೆಲಂಗಾಣದ ಜಗನ್ನಾಥಪುರ ಗ್ರಾಮದವರಾಗಿದ್ದಾರೆ. ನಿನ್ನೆ ಜಗನ್ನಾಥಪುರದಿಂದ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಇವರು ಬಂದಿದ್ದರು. ಇಂದು ದೇವರ ದರ್ಶನ ಮುಗಿಸಿ ವಾಪಸ್ ಜಗನ್ನಾಥಪುರಕ್ಕೆ ತೆರಳುವ ವೇಳೆ ಕಾರಿಗೆ ಗೂಡ್ಸ್​ ಗಾಡಿ ಡಿಕ್ಕಿ ಹೊಡೆದಿದೆ. ಮೂವರು ಸ್ಥಳದಲ್ಲೇ ಪ್ರಾಣ ತ್ಯಜಿಸಿದ್ದಾರೆ.

WhatsApp RTO challan scam: ವಾಟ್ಸ್ಯಾಪ್‌ನಲ್ಲಿ ಹೊಸ ವಂಚನೆ, ಆರ್‌ಟಿಒ ಚಲನ್‌ ಹೆಸರಿನಲ್ಲಿ ಧೋಖಾ

ವಾಟ್ಸ್ಯಾಪ್‌ನಲ್ಲಿ ಹೊಸ ವಂಚನೆ, ಆರ್‌ಟಿಒ ಚಲನ್‌ ಹೆಸರಿನಲ್ಲಿ ಧೋಖಾ

RTO challan scam:‌ ನಿಮಗೆ ಬರುವ ಈ ಫೈಲ್ ಅನ್ನು ತೆರೆದ ಕೂಡಲೇ ನಿಮ್ಮ ಫೋನ್‌ಗೆ ಮಾಲ್‌ವೇರ್‌ ಅಪಾಯ ಸಂಭವಿಸಬಹುದು. ಈ ಸಂದೇಶ ಸಾಮಾನ್ಯವಾಗಿ RTO E Challan.apk ಅಥವಾ Mparivahan.apk ಹೆಸರಿನ ಫೈಲ್ ಅನ್ನು ಹೊಂದಿರುತ್ತದೆ. ನೀವು ಅದನ್ನು ತೆರೆದ ನಂತರ, ಒಳಗೆ ಅಡಗಿರುವ ಮಾಲ್‌ವೇರ್ ಹ್ಯಾಕರ್‌ಗಳಿಗೆ ನಿಮ್ಮ ಸಾಧನಕ್ಕೆ ರಿಮೋಟ್ ಪ್ರವೇಶವನ್ನು ನೀಡುತ್ತದೆ. ಇದರಿಂದ ಸೈಬರ್ ಅಪರಾಧಿಗಳಿಗೆ ನಿಮ್ಮ ವೈಯಕ್ತಿಕ ಡೇಟಾ, ಬ್ಯಾಂಕ್ ವಿವರಗಳಿಗೆ ಪ್ರವೇಶ ಸಿಗುತ್ತದೆ. ಅವನ್ನು ಅವರು ಕದಿಯಬಹುದು. ನಿಮ್ಮ ಇತರ WhatsApp ಸಂಪರ್ಕಗಳಿಗೆ ಇದೇ ವಂಚನೆ ಸಂದೇಶವನ್ನು ಕಳುಹಿಸಲು ನಿಮ್ಮ ಸಂಖ್ಯೆಯನ್ನು ಸಹ ಬಳಸಬಹುದು.

Gold price today on 5th November 2025: ಚಿನ್ನದ ದರದಲ್ಲಿ ಇಂದು ಮತ್ತೆ ಕೊಂಚ ಇಳಿಕೆ; ಸ್ವರ್ಣಪ್ರಿಯರಿಗೆ ನಿರಾಳ

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 90 ರೂ. ಇಳಿಕೆ ಕಂಡು ಬಂದಿದ್ದು, 11,135 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 98 ರೂ. ಇಳಿಕೆಯಾಗಿ, 12,148 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 89,080 ರೂ. ಬಾಳಿದರೆ, 10 ಗ್ರಾಂಗೆ ನೀವು 1,11,350 ಹಾಗೂ 100 ಗ್ರಾಂಗೆ 11,13,500 ರೂ., ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 97,184 ರೂ. ಆದರೆ, 10 ಗ್ರಾಂಗೆ ನೀವು 1,21,480 ರೂ. ಹಾಗೂ 100 ಗ್ರಾಂಗೆ 12,14,800 ರೂ. ಪಾವತಿಸಬೇಕಾಗುತ್ತದೆ.

HY Meti: ಕಾಂಗ್ರೆಸ್‌ ಶಾಸಕ ಎಚ್‌ ವೈ ಮೇಟಿ ಅಂತ್ಯಕ್ರಿಯೆ ಇಂದು

ಕಾಂಗ್ರೆಸ್‌ ಶಾಸಕ ಎಚ್‌ ವೈ ಮೇಟಿ ಅಂತ್ಯಕ್ರಿಯೆ ಇಂದು

HY Meti State Funeral: ಬೆಂಗಳೂರಿನಿಂದ ಬಾಗಲಕೋಟೆಗೆ ಬೆಳಗ್ಗೆ ಪಾರ್ಥಿವ ಶರೀರ ತಂದು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅವರ ಸ್ವಗ್ರಾಮ ತಿಮ್ಮಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

Belagavi Sugarcane farmers Protest: ಕಾಳ್ಗಿಚ್ಚಾದ ಕಬ್ಬು ಬೆಳೆಗಾರರ ಪ್ರತಿಭಟನೆ, ನ.7ರಂದು ಬೆಳಗಾವಿಯಲ್ಲಿ ಹೆದ್ದಾರಿ ಬಂದ್

ಕಾಳ್ಗಿಚ್ಚಾದ ಕಬ್ಬು ಬೆಳೆಗಾರರ ಪ್ರತಿಭಟನೆ, ನ.7ರಂದು ಹೆದ್ದಾರಿ ಬಂದ್

Sugarcane farmers Protest: ಕಬ್ಬು ಬೆಳೆಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆರಂಭವಾಗಿರುವ ಕಬ್ಬು ಬೆಳೆಗಾರರ ಪ್ರತಿಭಟನೆ, ಇದೀಗ ಇಡೀ ಉತ್ತರ ಕರ್ನಾಟಕದ ರೈತರ ಬೃಹತ್‌ ಚಳವಳಿಯಾಗಿ ಪರಿವರ್ತನೆಯಾಗಿದೆ. ರೈತರ ಅಹೋರಾತ್ರಿ ಧರಣಿಗೆ ಮಂಗಳವಾರ ಬಿಜೆಪಿಯೂ ಕೈಜೋಡಿಸಿದೆ. ಪ್ರತಿ ಟನ್‌ ಕಬ್ಬಿಗೆ 3,500 ರೂ.ಕನಿಷ್ಠ ಬೆಂಬಲ ದರ ನೀಡಬೇಕೆಂಬ ಬೇಡಿಕೆಗೆ ದಿನೇದಿನೆ ಬಲ ಬರುತ್ತಿದ್ದು, ಸಕ್ಕರೆ ಕಾರ್ಖಾನೆಗಳು ನೀಡುತ್ತಿರುವ 3,200 ರೂ.ಬೆಲೆಗೆ ಕಬ್ಬು ಪೂರೈಸುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಅಹೋರಾತ್ರಿ ಧರಣಿ ಸತ್ಯಾಗ್ರಹ 6ನೇ ದಿನ ಮತ್ತಷ್ಟು ತೀವ್ರಗೊಂಡಿದ್ದು, ಸಹಸ್ರಾರು ರೈತರು ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ಸರಕಾರದ ವಿರುದ್ಧ ಕಹಳೆ ಊದಿದ್ದಾರೆ.

Karnataka Weather: ಹವಾಮಾನ ವರದಿ; ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (Karnataka Weather Report) ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

POCSO case: ಮಾತು ಬಾರದ ವಿದ್ಯಾರ್ಥಿನಿಗೆ ಶಿಕ್ಷಕನ ಲೈಂಗಿಕ ಕಿರುಕುಳ, 13 ವರ್ಷದ ಬಳಿಕ ಬಯಲು

ಮೂಕ ವಿದ್ಯಾರ್ಥಿನಿಗೆ ಶಿಕ್ಷಕನ ಲೈಂಗಿಕ ಕಿರುಕುಳ, 13 ವರ್ಷ ಬಳಿಕ ಬಯಲು

Harassment: ವಿದ್ಯಾರ್ಥಿನಿಗೆ ಮಾತನಾಡಲು ಬರದಿದ್ದರಿಂದ ಇದನ್ನೇ ಆರೋಪಿ ಲಾಭವಾಗಿ ಬಳಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಕೊಳ್ಳೇಗಾಲದಲ್ಲಿ 2012-2013ನೇ ಸಾಲಿನಲ್ಲಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವೇಳೆ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂಬಂಧ ಕಳೆದ 1 ವಾರದ ಹಿಂದೆ ಶಾಲೆಯಲ್ಲಿ ನಡೆದ ಹಳೇ ವಿದ್ಯಾರ್ಥಿಗಳ ಸಭೆಯಲ್ಲಿ ಸಂತ್ರಸ್ತೆ ಈ ವಿಚಾರವನ್ನು ಬಿಚ್ಚಿಟ್ಟಿದ್ದಾಳೆ. ಬಳಿಕ ಸಂತ್ರಸ್ತೆ ಕೊಟ್ಟ ಮಾಹಿತಿ ಮೇರೆಗೆ ಶಾಲೆಯ ಸಿಇಒ ದೂರು ನೀಡಿದ್ದು, ಇದೀಗ ಕೊಳ್ಳೇಗಾಲ ಪೊಲೀಸರು ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Priyank Kharge: ರಾಜ್ಯದ ಪ್ರಜೆಗಳಿಗೆ ಸಿಹಿ ಸುದ್ದಿ:  ಒಂದು ಕೋಟಿ ಅಕ್ರಮ ಆಸ್ತಿ ಸಕ್ರಮಕ್ಕೆ ಇ-ಸ್ವತ್ತು ವಿತರಣೆ ಶೀಘ್ರ

ಸಿಹಿ ಸುದ್ದಿ: 1 ಕೋಟಿ ಅಕ್ರಮ ಆಸ್ತಿ ಸಕ್ರಮಕ್ಕೆ ಇ-ಸ್ವತ್ತು ವಿತರಣೆ ಶೀಘ್ರ

E- Properties: ರಾಜ್ಯದ ಲಕ್ಷಾಂತರ ಮಂದಿ ಈ ಯೋಜನೆಯ ಪ್ರಯೋಜನ ಪಡೆಯಲು ತವಕದಿಂದ ಕಾಯುತ್ತಿದ್ದು, ಸಾರ್ವಜನಿಕರಿಗೆ ಸುಗಮ ಹಾಗೂ ಪಾರದರ್ಶಕವಾಗಿ ಇ–ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಯನ್ನು ಸಜ್ಜು ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವನ್ನು ಪಡೆದು ಇ-ಸ್ವತ್ತು ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ನಿರ್ದೇಶನ ನೀಡಲಾಗಿದೆ.

Chikkaballapur News: ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಲು ಮಾಸಿಕ ಕನಿಷ್ಠ ೧೫ ತಪಾಸಣೆ ಕಡ್ಡಾಯ : ಜಿಲ್ಲಾಧಿಕಾರಿ ಪಿ,ಎನ್ ರವೀಂದ್ರ  ಸೂಚನೆ

ಬಾಲಕಾರ್ಮಿಕರನ್ನು ಪತ್ತೆ ಮಾಡಲು ಮಾಸಿಕ ಕನಿಷ್ಠ ೧೫ ತಪಾಸಣೆ ಕಡ್ಡಾಯ

ಬಾಲಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ಶಿಕ್ಷೆ ವಿಧಿಸಲು ಅವಕಾಶ ವಿರುತ್ತದೆ. ತಪ್ಪಿತಸ್ಥ ಮಾಲೀಕರು ಪ್ರತಿ ಮಗುವಿಗೆ ರೂ.೨೦,೦೦೦ ಗಳನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕು. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವವರು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ೧೦೯೮ ಗೆ ಕರೆಮಾಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

Chikkaballapur News: ಜಿಲ್ಲಾಡಳಿತ ವತಿಯಿಂದ ಅಂತರಾಷ್ಟ್ರೀಯ ದತ್ತು ಮಾಸಾಚರಣೆ

ಜಿಲ್ಲಾಡಳಿತ ವತಿಯಿಂದ ಅಂತರಾಷ್ಟ್ರೀಯ ದತ್ತು ಮಾಸಾಚರಣೆ

ಎಲ್ಲಾ ಮಕ್ಕಳಿಗೂ ಕುಟುಂಬದ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಮಾಜದಲ್ಲಿ ದತ್ತು ಕುರಿತು ಸಕಾರಾತ್ಮಕ ಅರಿವು ಮೂಡಿಸುವುದು, ಶಿಶುಗಳಿಗೆ ಪ್ರೀತಿಯುತ ಮತ್ತು ಭದ್ರವಾದ ಮನೆಗಳನ್ನು ಒದಗಿಸುವ ಮಹತ್ವವನ್ನು ಜನರಿಗೆ ತಲುಪಿಸಬೇಕು.

Shidlaghatta News: ಪ್ಲಾಸ್ಟಿಕ್ ಬಳಕೆ ಮಾಡಿದಲ್ಲಿ ಅಂತವರ ಮೇಲೆ ಕ್ರಮ :  ನಗರಸಭೆ ಪರಿಸರ ಅಭಿಯಂತರ ಮೋಹನ್ ಕುಮಾರ್ ಎಚ್ಚರಿಕೆ

ಪ್ಲಾಸ್ಟಿಕ್ ಬಳಕೆ ಮಾಡಿದಲ್ಲಿ ಅಂತವರ ಮೇಲೆ ಕ್ರಮ

ಚಮಚ, ಕ್ಯಾರಿ ಬ್ಯಾಗ್, ಊಟದ ಮೇಜಿನ ಮೇಲೆ ಹರಡುವ ಹಾಳೆ, ಪ್ಲಾಸ್ಟಿಕ್‌ನಿಂದ ತಯಾರಾದ ಭಿತ್ತಿ ಪತ್ರ, ತೋರಣ, ಫ್ಲೆಕ್ಸ್ ಬಾವುಟಗಳು ಇವುಗಳೊಂದಿಗೆ ಥರ್ಮಾಕಾಲ್ ಮತ್ತು ಮೈಕ್ರೊ ಬಿಡ್ಸ್ನಿಂದ ತಯಾರಿಸಿದ ವಸ್ತುಗಳ ಮಾರಾಟ ಹಾಗೂ ದಾಸ್ತಾನು ಮಾಡದಂತೆ ಸೂಚಿಸಿದೆ ಎಂದರು. ಮತ್ತೊಮ್ಮೆ ನಿಷೇಧಿತ ಪ್ಲಾಸ್ಟಿಕ್ ಕವರ್‌ಗಳು ಸಿಕ್ಕಿದರೆ ದಂಡದ ಜತೆಗೆ ಕಾನೂನು ರೀತಿ ಕ್ರಮ ಕೆ?ಗೊಳ್ಳುವ ಬಗ್ಗೆ ಎಚ್ಚರಿಕೆ ಸಹ ನೀಡಿದ್ದಾರೆ.

Nikhil Kumaraswamy: ಕುರ್ಚಿಗಾಗಿ ಕಿತ್ತಾಡುವ ಕಾಂಗ್ರೆಸ್ ಸರ್ಕಾರಕ್ಕೆ ಸ್ಥಳೀಯ ಚುನಾವಣೆಗೆ ಧೈರ್ಯವಿಲ್ಲ : ನಿಖಿಲ್ ಕುಮಾರಸ್ವಾಮಿ

ಕುರ್ಚಿಗಾಗಿ ಕಿತ್ತಾಡುವ 'ಕೈʼ ಸರ್ಕಾರಕ್ಕೆ ಸ್ಥಳೀಯ ಚುನಾವಣೆಗೆ ಧೈರ್ಯವಿಲ್ಲ

ಕಾಂಗ್ರೆಸ್ ಸರ್ಕಾರ ಅಧಿಕಾರ ಉಳಿಸಿಕೊಳ್ಳಲು ಕಿತ್ತಾಟ ನಡೆಸುತ್ತಿರುವುದು ಜನರಿಗೆ ತಿಳಿದಿದೆ. ಅಭಿವೃದ್ದಿ ಎಂಬುದು ಶೂನ್ಯ. ಹತ್ತು ರೂಪಾಯಿ ಕೂಡಾ ಕ್ಷೇತ್ರಗಳಿಗೆ ನೀಡಲಾಗುತ್ತಿಲ್ಲ. ಹತ್ತು ಕೋಟಿ ಎಂದು ಹೇಳಿದ್ದಷ್ಟೇ ಇನ್ನೂ ಯಾವ ಕೆಲಸಕ್ಕೂ ಚಾಲನೆ ಸಿಕ್ಕಿಲ್ಲ. ಆದರೆ ಜನರಿಗೆ ಮಂಕು ಬೂದಿ ಎರಚಲು ಕೇವಲ ಭರವಸೆ ನೀಡುತ್ತಾ ಕಾಂಗ್ರೆಸ್ ಸರ್ಕಾರ ಘೋಷಣೆಯ ಸರ್ಕಾರ ಎಂದು ಲೇವಡಿ ಮಾಡಿದರು.

MB Patil: ಕಿರ್ಲೋಸ್ಕರ್‌ನಿಂದ ರಾಜ್ಯದಲ್ಲಿ 3,000 ಕೋಟಿ ರೂ. ಹೂಡಿಕೆ: ಎಂ.ಬಿ. ಪಾಟೀಲ್‌

ಕಿರ್ಲೋಸ್ಕರ್‌ನಿಂದ ರಾಜ್ಯದಲ್ಲಿ 3,000 ಕೋಟಿ ರೂ. ಹೂಡಿಕೆ: ಎಂ.ಬಿ. ಪಾಟೀಲ್‌

Kirloskar Ferrous: ಕಿರ್ಲೋಸ್ಕರ್ ಫೆರೋಸ್ ಈಗಾಗಲೇ ಹಿರಿಯೂರಿನಲ್ಲಿ ತನ್ನ ಘಟಕ ಹೊಂದಿದ್ದು, ಅದನ್ನು ಮೇಲ್ದರ್ಜೆಗೇರಿಸಲು ಮುಂದಾಗಿದೆ. ಇಲ್ಲಿ ಸ್ಪಾಂಜ್ ಪೈಪ್ ಉತ್ಪಾದನೆ ಆರಂಭಿಸಲಿದೆ. ಜತೆಗೆ ತನ್ನ ಉಕ್ಕು ಉತ್ಪಾದನೆ ಘಟಕದ ಸಾಮರ್ಥ್ಯ ಹೆಚ್ಚಳ, ಕಬ್ಬಿಣದ ಅದಿರು ಸಂಸ್ಕರಣೆ ಹೆಚ್ಚಳ, ಫೌಂಡ್ರಿ ಘಟಕದ ಅಭಿವೃದ್ಧಿ ಮುಂತಾದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

Sri Sathya Sai University: ಮೌಲ್ಯಾಧಾರಿತ ಶಿಕ್ಷಣ; ಕರ್ನಾಟಕ ಸಂಸ್ಕೃತ ವಿವಿ ಜತೆ ಸತ್ಯ ಸಾಯಿ ವಿವಿ ಒಡಂಬಡಿಕೆ

ಮೌಲ್ಯಾಧಾರಿತ ಶಿಕ್ಷಣ; ಸಂಸ್ಕೃತ ವಿವಿ ಜತೆ ಸತ್ಯ ಸಾಯಿ ವಿವಿ ಒಪ್ಪಂದ

Sadguru Sri Madhusudan Sai: ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಸಾಂಸ್ಕೃತಿಕ ಉತ್ಸವ'ದ 81ನೇ ದಿನವಾದ ಮಂಗಳವಾರ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಒಡಂಬಡಿಕೆ ಮಾಡಿಕೊಂಡವು. ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ಸಮ್ಮುಖದಲ್ಲಿ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಕುಲಪತಿ ಶ್ರೀಕಂಠ ಮೂರ್ತಿ ಹಾಗೂ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಹಲ್ಯಾ ಅವರು ಒಡಂಬಡಿಕೆ ಪತ್ರ ವಿನಿಮಯ ಮಾಡಿಕೊಂಡರು.

BY Vijayendra: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದ್ದರೆ ತಕ್ಷಣ ರೈತರ ಸಂಕಷ್ಟಕ್ಕೆ ಪರಿಹಾರ ನೀಡಲಿ: ಬಿ.ವೈ. ವಿಜಯೇಂದ್ರ ಆಗ್ರಹ

ಸರ್ಕಾರಕ್ಕೆ ಮನುಷ್ಯತ್ವ ಇದ್ದರೆ ರೈತರ ಸಂಕಷ್ಟ ಪರಿಹರಿಸಲಿ

Sugarcane farmers protest: ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್‌ನಲ್ಲಿ ನಡೆಯುತ್ತಿರುವ ಆಹೋರಾತ್ರಿ ಹೋರಾಟದಲ್ಲಿ ಮಂಗಳವಾರ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ನಾನು ರಾಜಕಾರಣ ಮಾಡುತ್ತಿಲ್ಲ. ರೈತರು ಇವತ್ತು ಕಂಗಾಲಾಗಿದ್ದಾರೆ. ಕಬ್ಬು ಬೆಳೆಗಾರರು ಕೇಳುತ್ತಿರುವುದು ಭಿಕ್ಷೆಯಲ್ಲ, ನ್ಯಾಯಸಮ್ಮತ ಬೇಡಿಕೆಯನ್ನು ಅವರು ಕೇಳುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ಜವಾಬ್ದಾರಿ ಇದ್ದಲ್ಲಿ, ರಾಜ್ಯ ಸರ್ಕಾರಕ್ಕೆ ಕಿಂಚಿತ್ತಾದರೂ ಮನುಷ್ಯತ್ವ ಇದ್ದರೆ, ತಕ್ಷಣ ಸಭೆ ಕರೆದು ರೈತರ ಸಂಕಷ್ಟಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Mangaluru News: ದಾಂಪತ್ಯ ಕಲಹ; ಮಗಳ ಜತೆ ಆತ್ಮಹತ್ಯೆಗೆ ಯತ್ನಿಸಿದ ತಂದೆಯ ರಕ್ಷಣೆ

ದಾಂಪತ್ಯ ಕಲಹ; ಮಗಳ ಜತೆ ಆತ್ಮಹತ್ಯೆಗೆ ಯತ್ನಿಸಿದ ತಂದೆಯ ರಕ್ಷಣೆ

Self Harming: ಮಂಗಳೂರಿನ ಪಣಂಬೂರು ಬೀಚ್ ಬಳಿ ಪುಟ್ಟ ಮಗಳ ಜತೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ. ಸುತ್ತಮುತ್ತಲು ಜನ, ಪೊಲೀಸರು ಇರುವುದನ್ನು ಗಮನಿಸಿ ಆತ ಮನೆಗೆ ತೆರಳಿದ್ದ. ಸಂಶಯದಿಂದ ಮನೆಗೆ ತೆರಳಿದಾಗ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಂದೆ ಮತ್ತು ಮಗಳನ್ನು ಪೊಲೀಸರು ರಕ್ಷಿಸಿದ್ದಾರೆ.

Loading...