ಶಾಲೆಗಳಿಗೆ ಕೇಸರಿ ಶಾಲು ಕೂಡ ಹಾಕಿಕೊಂಡು ಬರುವಂತಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದೆ. ಹೀಗಾಗಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ಶಾಲಾ, ಕಾಲೇಜುಗಳಲ್ಲಿ ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.