ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

KCET ವಿದ್ಯಾರ್ಥಿಗಳಿಗೆ ಶಾಕ್! ಕೌನ್ಸೆಲಿಂಗ್ ಮುಂದೂಡಿದ ಕೆಇಎ

KCET ವಿದ್ಯಾರ್ಥಿಗಳಿಗೆ ಶಾಕ್! ಕೌನ್ಸೆಲಿಂಗ್ ಮುಂದೂಡಿದ ಕೆಇಎ

ಯುಜಿ ಸಿಇಟಿ ಫಲಿತಾಂಶ ಈಗಾಗಲೇ ಹೊರ ಬಿದ್ದಿದ್ದು ವಿದ್ಯಾರ್ಥಿಗಳಿಗೆ ಇದೀಗ ಕೆಇಎ ಶಾಕ್‌ ನೀಡಿದೆ. ಉನ್ನತ ಶಿಕ್ಷಣ ಇಲಾಖೆಯಿಂದ ಅಂತಿಮ ಸೀಟ್ ಮ್ಯಾಟ್ರಿಕ್ಸ್ (ಸೀಟುಗಳ ಹಂಚಿಕೆ ಪಟ್ಟಿ) ಮತ್ತು ಶುಲ್ಕದ ರಚನೆ ಸಿಗುವುದು ವಿಳಂಬವಾಗಿರುವ ಹಿನ್ನೆಲೆಯಲ್ಲಿ, ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಮುಂದೂಡಿದೆ.

'ಐಐಟಿ ರೂರ್ಕಿ' ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ 'ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್', ಏನಿದರ ಉದ್ದೇಶ?

'ಐಐಟಿ ರೂರ್ಕಿ' ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

ಈ ಪಾಲುದಾರಿಕೆಯ ಅಡಿಯಲ್ಲಿ ಎರಡೂ ಸಂಸ್ಥೆಗಳು ಹಲವು ಪ್ರಮುಖ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಲಿವೆ. ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಜಂಟಿಯಾಗಿ ಶೈಕ್ಷಣಿಕ ಕಾರ್ಯಕ್ರಮಗಳು, ವೃತ್ತಿಪರ ತರಬೇತಿ ಕೋರ್ಸ್‌ಗಳು ಹಾಗೂ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಲಿವೆ.

ವೈರಲ್‌ ಆಡಿಯೋ ಕೇಸ್‌; ಜಮೀರ್‌ ಅಹ್ಮದ್ ಖಾನ್‌ ವಿರುದ್ಧ ಮಾನಹಾನಿ‌ ಸುದ್ದಿ ಪ್ರಸಾರ ನಿರ್ಬಂಧಿಸಿದ ನ್ಯಾಯಾಲಯ

ಜಮೀರ್‌ ವಿರುದ್ಧ ಮಾನಹಾನಿ‌ ಸುದ್ದಿ ಪ್ರಸಾರ ನಿರ್ಬಂಧಿಸಿದ ನ್ಯಾಯಾಲಯ

ದಾವಣಗೆರೆ ಉಪ ಚುನಾವಣೆ ವಿಚಾರದಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಮಾನ ಹಾನಿಕರ ಸುದ್ದಿಗಳ ಪ್ರಸಾರಕ್ಕೆ ಬೆಂಗಳೂರಿನ ನ್ಯಾಯಾಲಯವು ಮಂಗಳವಾರ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ ಎಂದು ತಿಳಿದು ಬಂದಿದೆ.

ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ

ವಿಧಾನಸೌಧದ ಬಳಿ ಆತ್ಮಹತ್ಯೆಗೆ ಯತ್ನಿಸಿದ ರೈತ

ರೈತನೊಬ್ಬ ಮಂಗಳವಾರ ಮಧ್ಯಾಹ್ನ ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಹಳಿಯೂರು ಗ್ರಾಮದ ವಿಶು ಕುಮಾರ್ ಎಂಬುವವರು ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Bike Accident: ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ, ಬಾಲಕ ದಾರುಣ ಸಾವು.!

ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ, ಬಾಲಕ ದಾರುಣ ಸಾವು.!

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸೋಮೇಶ್ವರ ಗ್ರಾಮದ ಸಮೀಪ ಭೀಕರ ಅಪಘಾತವೊಂದು ಸಂಭವಿಸಿದೆ. ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದ ಅರವಿಂದ್ (17) ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಪೇರೆಸಂದ್ರದಿಂದ ಸ್ವಗ್ರಾಮ ಸಾದಲಿಯತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

Gauribidanur News: ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಮಾಜಿ ಸಚಿವ ಎನ್ ಹೆಚ್ ಶಿವಶಂಕರ ರೆಡ್ಡಿ

ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ವಿದ್ಯಾರ್ಥಿಗಳು ಕೇವಲ ಎಂಬಿಬಿಎಸ್ ಅಥವಾ ಇನ್ನಿತರ ಉನ್ನತ ಪದವಿಗಳನ್ನು ಗಳಿಸಿದರೆ ಮಾತ್ರ ಜೀವನ ಸಾರ್ಥಕವಾಗುವುದಿಲ್ಲ. ಅನೇಕ ವಿದ್ಯಾರ್ಥಿಗಳು ಪದವಿಗಳಿಸಿದ ನಂತರ ಪೋಷಕರನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಅವರನ್ನು ಪ್ರೀತಿಯಿಂದ ನಡೆಸಿಕೊಳ್ಳು ತ್ತಿಲ್ಲ. ಕುಟುಂಬದಲ್ಲಿ ಪ್ರೀತಿ, ಪ್ರೇಮ ಮತ್ತು ಅನ್ನೋನ್ಯತೆ ಮುಖ್ಯ, ಶಿಕ್ಷಣ ಎಂದರೆ ಕೇವಲ ಅಂಕ ಗಳಿಸುವುದು ಮಾತ್ರವಲ್ಲ, ಉತ್ತಮ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿ ಕೊಳ್ಳುವುದೇ ನಿಜವಾದ ಶಿಕ್ಷಣ

Chinthamani News: ಚೀಮಲಗುಟ್ಟ ಗ್ರಾಮದ ಭೂಮಿ ವಿಚಾರದಲ್ಲಿ ಸುಳ್ಳು ಆರೋಪ: ಕೋಡಿಗಲ್ ರಮೇಶ್ ಆಕ್ರೋಶ

ಚೀಮಲಗುಟ್ಟ ಗ್ರಾಮದ ಭೂಮಿ ವಿಚಾರದಲ್ಲಿ ಸುಳ್ಳು ಆರೋಪ

ಚೆನ್ನರಾಯಪ್ಪನವರ ಮಗ ಪೊಲೀಸ್ ಅಧಿಕಾರಿಯಾಗಿದ್ದು,ಅವರು ಯಾರನ್ನೂ ಬೈದಿಲ್ಲ, ಹೊಡೆದಿಲ್ಲ. ಆದರೂ ಕೆಲವರು ಗುಂಪು ಕಟ್ಟಿಕೊಂಡು ಅವರ ಮೇಲೆ ಉದ್ದೇಶಪೂರ್ವಕ ವಾಗಿ ಪಿತೂರಿ ನಡೆಸಿ ಎಫ್‌ಐಆರ್ ದಾಖಲಿಸಿದ್ದಾರೆ. ಮದ ನಕ್ಷೆ ಮತ್ತು ಮಂಜೂರಾತಿ ಅರ್ಜಿಗಳ ಪ್ರಕಾರ, ಸುಮಾರು 23 ಜನರಿಗೆ ಅಲ್ಲಿ ಜಮೀನು ಗ್ರಾಂಟ್ ಆಗಿದೆ. ಅದರಲ್ಲಿ ಚೆನ್ನರಾಯಪ್ಪ ನವರಿಗೆ 3 ಎಕರೆ 20 ಕುಂಟೆ ಜಮೀನು ಮಂಜೂರಾಗಿದೆ"ಎಂದು ರಮೇಶ್ ದಾಖಲೆಗಳನ್ನು ಪ್ರದರ್ಶಿಸಿದರು

Shidlaghatta News: ಚಿಕ್ಕತೇಕಹಳ್ಳಿಯಲ್ಲಿ ಕೋಲಾಟದ ಸಂಭ್ರಮ; ಜನಮನ ಗೆದ್ದ ಜನಪದ ಕಲಾ ವೈಭವ

Shidlaghatta News: ಚಿಕ್ಕತೇಕಹಳ್ಳಿಯಲ್ಲಿ ಕೋಲಾಟದ ಸಂಭ್ರಮ

ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳು, ಯುವಕರು, ಮಹಿಳೆಯರು ಸೇರಿದಂತೆ ಗ್ರಾಮಸ್ಥರೇ ಕೋಲಾಟ ಕಲಿತು ವಿವಿಧ ಕೋಪುಗಳಲ್ಲಿ ಪ್ರದರ್ಶಿಸಿದರು. ಗ್ರಾಮೀಣ ಸೊಗಡಿನ ಈ ಜನಪದ ಕಲೆಯನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳಿಂದಲೂ ಕಲಾಭಿಮಾನಿಗಳು ಆಗಮಿಸಿದ್ದರು.

MLA S R Srinivas: ಲಿಂಕ್ ಕೆನಾಲ್ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಸ್ಪಷ್ಟ ಮಾಹಿತಿಯ ನೀಡಿದ್ದೇನೆ: ಶಾಸಕ ಎಸ್ ಆರ್ ಶ್ರೀನಿವಾಸ್*

ಲಿಂಕ್ ಕೆನಾಲ್ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದೇನೆ

ತಾಲೂಕಿನ ಮದನ ಘಟ್ಟ, ಸಾರಿಗೆ ಪಾಳ್ಯ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಒಟ್ಟು 5 ಕೋಟಿ ರೂ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಸಚಿವ ಸ್ಥಾನಕ್ಕೆ ಯಾವುದೇ ರೀತಿಯ ಒತ್ತಡ ಹಾಕಿಲ್ಲ ಒಂದು ಬಾರಿ ಮಾತ್ರ ಕೇಳಿದ್ದು, ಸಾಧಕ ಬಾಧಕಗಳನ್ನು ನೋಡಿ ವಿಚಾರ ಮಾಡುವ ಭರವಸೆ ನೀಡಿದ್ದಾರೆ. ಹಾಗಾಗಿ ಅದನ್ನು ಮೀರಿ ಪ್ರತಿನಿತ್ಯ ಅವರ ಮನೆಗೆ ಹೋದರೆ ಸರಿ ಹೋಗುವುದಿಲ್ಲ

Dr.M.C.Sudhakar: ಅಕ್ಷಯಪಾತ್ರೆಯ 81ನೇ ಅಡುಗೆ ಮನೆಗೆ ಚಾಲನೆ ನೀಡಿದ ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್

ಸರಕಾರಿ ಶಾಲೆ ಮಕ್ಕಳಿಗೆ ಇಸ್ಕಾನ್ ಬಿಸಿಯೂಟ ಸೌಲಭ್ಯ ವಿಸ್ತರಣೆ

ಇಸ್ಕಾನ್ ಆಡಳಿತ ಮಂಡಳಿಯ ಉಸ್ತುವಾರಿಯಲ್ಲಿ ನಡೆಯುತ್ತಿರುವ ಅಕ್ಷಯಪಾತ್ರೆ ಯೋಜನೆ ಅತ್ಯಾ ಧುನಿಕ ತಂತ್ರಜ್ಞಾನ ಹಾಗೂ ಸ್ವಯಂಚಾಲಿತ ವ್ಯವಸ್ಥೆಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ಆಹಾರ ತಯಾರಿಸುವ ಸಾಮರ್ಥ್ಯ ಹೊಂದಿದೆ. ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡುವ ಈ ವ್ಯವಸ್ಥೆ ಮಕ್ಕಳಿಗೆ ಆರೋಗ್ಯಕರ ಆಹಾರ ತಲುಪಿಸುವಲ್ಲಿ ಮಾದರಿಯಾಗಿದೆ ಎಂದು ಬಣ್ಣಿಸಿದರು

Raichur News: ಅಸಭ್ಯ ವರ್ತನೆ ತೋರಿದವನ ಕಣ್ಣಿಗೆ ಖಾರದ ಪುಡಿ ಎರಚಿ, ಧರ್ಮದೇಟು ಕೊಟ್ಟ ಮಹಿಳೆ! Video

ಅಸಭ್ಯ ವರ್ತನೆ ತೋರಿದವನಿಗೆ ಧರ್ಮದೇಟು ಕೊಟ್ಟ ಮಹಿಳೆ!

ರಾಯಚೂರಿನ ಸದರಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಸ್‌ ನಿಲ್ದಾಣದಲ್ಲಿ ಅನುಚಿತ ವರ್ತನೆ ತೋರಿದ್ದಾನೆ ಎಂದು ವ್ಯಕ್ತಿಯೊಬ್ಬನ ಕಣ್ಣಿಗೆ ಮಹಿಳೆ ಖಾರದ ಪುಡಿ ಎರಚಿ, ಧರ್ಮದೇಟು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದಲ್ಲಿ 5 ಕೋಟಿ ಗಿಡ ನೆಡುವ ಚಾಲನಾ ಕಾರ್ಯಕ್ರಮದ ಅಂಗವಾಗಿ ಜೂ.13ಕ್ಕೆ ಚಾಲನೆ

ಹೈಕೋರ್ಟ್ ಮು.ನ್ಯಾ ವಿಭು ಬಖ್ರು ರಿಂದ ಮುದ್ದೇನಹಳ್ಳಿಯಲ್ಲಿ ಚಾಲನೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಈ ಕಾರ್ಯಕ್ರಮದ ಅಂಗವಾಗಿ 5 ಲಕ್ಷ ಗಿಡಗಳನ್ನು ನೆಡುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಈ ವರ್ಷದಲ್ಲಿ 5 ಲಕ್ಷ ಗಿಡಗಳನ್ನು ನೆಡಲಾಗುವುದು. ಸ್ಥಳೀಯ ಸಾರ್ವಜನಿಕರು ಈ ಎಲ್ಲ ಗಿಡಗಳನ್ನು ಉಳಿಸಿ ಬೆಳೆಸಿಕೊಳ್ಳುವ ಮೂಲಕ ಸಾಮಾಜಿಕ ಜವಾಬ್ದಾರಿ ಯನ್ನು ಮೆರೆಯಬೇಕು ಎಂದು ಮನವಿ ಮಾಡಿದರು.

Road Accident: ಅವಲಗುರ್ಕಿ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಪ್ರಕಾಶ್ ಸಾವು

ಕಾರು ಬೈಕ್ ಢಿಕ್ಕಿ: ಬಿಲ್ ಕಲೆಕ್ಟರ್ ಆಗಿದ್ದ ಪ್ರಕಾಶ್ ಸಾವು

ಆವಲಗುರ್ಕಿ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಪ್ರಕಾಶ್ ಮಧ್ಯಾಹ್ನ ಊಟದ ಸಮಯ ದಲ್ಲಿ ಚಿಕ್ಕಬಳ್ಳಾಪುರಕ್ಕೆ ಹೋಗುತ್ತಿದ್ದ ವೇಳೆ ಹರಿಹರಪುರ ಗ್ರಾಮದ ಗೇಟ್ ಸಮೀಪ ಎದುರುಗಡೆ ಯಿಂದ ಬಂದ ಹಾಸನ ಮೂಲದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿಗೂ ಭಾರೀ ಹಾನಿಯಾಗಿದೆ ಎನ್ನಲಾಗಿದೆ.

ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ; ತುರ್ತು ಸ್ಪಂದಿಸಲು ಕೇಂದ್ರ ಕೃಷಿ ಸಚಿವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ

ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ; ತುರ್ತು ಸ್ಪಂದಿಸಲು ಮನವಿ

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ 'ಹಳದಿ ಎಲೆ ರೋಗ' ಮತ್ತು 'ಎಲೆ ಚುಕ್ಕಿ ರೋಗ' ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

Bengaluru Digital Arrest: ಬೆಂಗಳೂರಿನ ವೃದ್ಧೆಗೆ ಡಿಜಿಟಲ್‌ ಅರೆಸ್ಟ್; 98.40 ಲಕ್ಷ ದೋಚಿದ ಸೈಬರ್ ವಂಚಕರು!

ವೃದ್ಧೆಗೆ ಡಿಜಿಟಲ್‌ ಅರೆಸ್ಟ್; 98.40 ಲಕ್ಷ ದೋಚಿದ ಸೈಬರ್ ವಂಚಕರು!

ದೆಹಲಿಯ ಪೊಲೀಸ್ ಅಧಿಕಾರಿ ಎಂದು ವೃದ್ಧೆಗೆ ಕರೆ ಮಾಡಿದ ಸೈಬರ್ ಖದೀಮ,‌ ನಿಮ್ಮ ಖಾತೆಗಳಲ್ಲಿ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಬೆದರಿಸಿ ವಂಚಿಸಿದ್ದಾನೆ. ವೃದ್ಧೆಯಿಂದ ಹಂತ ಹಂತವಾಗಿ 98.40 ಲಕ್ಷ ರೂ.ಗಳನ್ನು ವಸೂಲಿ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರಿನ ಆಗ್ನೇಯ ವಿಭಾಗದ ಸೈಬರ್ ಅಪರಾಧ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Chikkaballapur News: ಸಾಮಾಜಿಕ ಸಂಬಂಧಗಳಿಂದಲೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ : ಡಾ.ಲೋಕನಾಥ್

ಸಾಮಾಜಿಕ ಸಂಬಂಧಗಳಿಂದಲೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ

ಯಶಸ್ವಿ ವ್ಯಕ್ತಿಗಳು ಕೋಪ, ದುಃಖ ಹಾಗೂ ಸಂತೋಷದ ಕ್ಷಣಗಳಲ್ಲಿ ಮಾನಸಿಕ ಸಮತೋಲನ ಕಾಯ್ದುಕೊಂಡಿರುತ್ತಾರೆ. ಇಂದು ಪದವಿ ಪ್ರಧಾನ ಸಮಾರಂಭದಲ್ಲಿ ಭಾಗಿಯಾಗಿರುವ ವಿದ್ಯಾರ್ಥಿ ಗಳು ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಈ ಮೂರು ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.

Mangaluru Honey Trap Case: ಉದ್ಯಮಿಗೆ ಹನಿಟ್ರ್ಯಾಪ್ ಮಾಡಿ 2.77 ಕೋಟಿ ವಸೂಲಿ; ಮಂಗಳೂರಿನಲ್ಲಿ ಕಾಂಗ್ರೆಸ್‌ ಮುಖಂಡ ಸೇರಿ ಇಬ್ಬರು ಅರೆಸ್ಟ್‌

ಉದ್ಯಮಿಗೆ ಹನಿಟ್ರ್ಯಾಪ್; ಕಾಂಗ್ರೆಸ್‌ ಮುಖಂಡ ಸೇರಿ ಇಬ್ಬರು ಅರೆಸ್ಟ್‌

ಅಶ್ಲೀಲ ಫೋಟೊ-ವಿಡಿಯೊಗಳನ್ನು ಪತ್ನಿಗೆ ತೋರಿಸುವುದಾಗಿ ಉದ್ಯಮಿಗೆ ಬ್ಲ್ಯಾಕ್​ ಮೇಲ್ ​ ಮಾಡಿದ್ದ ಆರೋಪಿಗಳು, ಸೂಸೈಡ್​ ಕಥೆ ಕಟ್ಟಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ್ದಾರೆ. ಈ ಬಗ್ಗೆ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

K S Bhagawan: ಶ್ರೀರಾಮ ದಶರಥನಿಗೆ ಹುಟ್ಟಿದ ಮಗನಲ್ಲ: ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಕೆ.ಎಸ್.ಭಗವಾನ್!

ಶ್ರೀರಾಮ ದಶರಥನಿಗೆ ಹುಟ್ಟಿದ ಮಗನಲ್ಲ: ಕೆ.ಎಸ್.ಭಗವಾನ್

Davanagere News: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿದ್ದಾರೆ. ಶೂದ್ರನಾದ ಶಂಬೂಕ, ಪತ್ನಿ ಸೀತೆ, ಸಹೋದರ ಲಕ್ಷ್ಮಣನನ್ನೇ ರಾಮ ಸಾಯಿಸಿದ್ದಾನೆ. ಇಂಥವರು ನಮಗೆ ಅದರ್ಶ ಆಗಬೇಕಾ? ಎಂದು ಪ್ರಶ್ನಿಸಿದ್ದಾರೆ.

ಬೆಳಗ್ಗೆ 10 ಗಂಟೆಯೊಳಗೆ ಸಿಬ್ಬಂದಿ ಹಾಜರಿರಬೇಕು, ಗುರುತಿನ ಚೀಟಿ ಕಡ್ಡಾಯ: ಚಿಕ್ಕನಾಯಕನಹಳ್ಳಿ ತಾಪಂನೂತನ ಇಒ ಶಿವರಾಜಯ್ಯ ಖಡಕ್ ಸೂಚನೆ

ಬೆಳಗ್ಗೆ 10 ಗಂಟೆಯೊಳಗೆ ಸಿಬ್ಬಂದಿ ಹಾಜರಿರಬೇಕು: ಇಒ ಶಿವರಾಜಯ್ಯ ಸೂಚನೆ

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಕಚೇರಿಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಬೆಳಿಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದ ಅವಧಿಯಲ್ಲಿ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದು ತಾಲೂಕು ಪಂಚಾಯಿತಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯಸಭೆಗೆ ಹೋಗಲು ದೇವೇಗೌಡರು ಅರ್ಜಿ ಹಾಕಿರಲಿಲ್ಲ; ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಎಂದ ಎಚ್‌ಡಿಕೆ

ರಾಜ್ಯಸಭೆಗೆ ಹೋಗಲು ದೇವೇಗೌಡರು ಅರ್ಜಿ ಹಾಕಿಲ್ಲ: ಎಚ್‌ಡಿಕೆ ಸ್ಪಷ್ಟನೆ

HD Kumaraswamy: ರಾಜ್ಯಸಭೆ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಮಾತನಾಡುತ್ತಿದ್ದಾರೆ. ದೇವೇಗೌಡರ ಬಗ್ಗೆ ಎಲ್ಲಿಲ್ಲದ ಅನುಕಂಪ ಬಂದಿದೆ. ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಬಿರುಕು ತರಲು ಕಾಂಗ್ರೆಸ್ ವಿಫಲ ಪ್ರಯತ್ನ ನಡೆಸುತ್ತಿದೆ. ರಾಜ್ಯಸಭೆ ಟಿಕೆಟ್‌‌ಗೆ ದೇವೇಗೌಡರು ಅರ್ಜಿಯೇ ಹಾಕಿಲ್ಲ ಎಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

P S Sadananda: ಲೋಕಧ್ವನಿ ಪತ್ರಿಕೆ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ ಹೃದಯಾಘಾತದಿಂದ ನಿಧನ

ಲೋಕಧ್ವನಿ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ ನಿಧನ

ಹಿರಿಯ ಪತ್ರಕರ್ತ ಪಿ.ಎಸ್. ಸದಾನಂದ ಅವರು ಮುಂಡಗೋಡ ತಾಲೂಕಿನ ನ್ಯಾಸರ್ಗಿ ಗ್ರಾಮದವರು. ಇವರು ಸುಮಾರು 35 ವರ್ಷಗಳಿಗೂ ಹೆಚ್ಚು ಕಾಲ ಲೋಕಧ್ವನಿ ಪತ್ರಿಕೆಯಲ್ಲಿ ವರದಿಗಾರರಾಗಿ ಹಾಗೂ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ನಿಧನಕ್ಕೆ ಗಣ್ಯರು ಸೇರಿ ಹಲವು ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

Star Fashion 2026: ಟ್ರೆಂಡ್‌ ಸೆಟ್‌ ಮಾಡಿದ ರಚಿತಾರಾಮ್‌ ಬ್ಯೂಟಿಫುಲ್‌ ಶರಾರ

ಟ್ರೆಂಡ್‌ ಸೆಟ್‌ ಮಾಡಿದ ರಚಿತಾರಾಮ್‌ ಬ್ಯೂಟಿಫುಲ್‌ ಶರಾರ

ಡಿಂಪಲ್‌ ಕ್ವೀನ್‌, ಸ್ಯಾಂಡಲ್‌ವುಡ್‌ನ ಲೇಡಿ ಸೂಪರ್‌ ಸ್ಟಾರ್‌ ರಚಿತಾ ರಾಮ್‌ ಅವರ ಶರಾರ ಲುಕ್‌ ಎಥ್ನಿಕ್‌ ಫ್ಯಾಷನ್‌ ಪ್ರಿಯರನ್ನು ಆಕರ್ಷಿಸಿರುವುದು ಮಾತ್ರವಲ್ಲ, ಟ್ರೆಂಡ್‌ ಸೆಟ್‌ ಮಾಡಿದೆ. ಈ ಬಗ್ಗೆ ಫ್ಯಾಷನ್‌ ವಿಮರ್ಶಕರು ಏನು ಹೇಳುತ್ತಾರೆ? ಇಲ್ಲಿದೆ ಡಿಟೇಲ್ಸ್.

Davanagere News: ದಾವಣಗೆರೆಯಲ್ಲಿ ನೀಚ ಕೃತ್ಯ; ಪತಿಯೊಂದಿಗೆ ಜಗಳವಾಡಿ ತವರಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್!

ಪತಿಯೊಂದಿಗೆ ಜಗಳವಾಡಿ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್!

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಂದಿ ಬೇಟೆಗೆ ತೆರಳಿದ್ದ ಯುವಕರು, ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯನ್ನು ಗಮನಿಸಿ, ಸುಸ್ತಾಗಿದಿಯಾ ಕೂಲ್ ಡ್ರಿಂಕ್ಸ್ ಕುಡಿ ಅಕ್ಕ ಎಂದು ಪಾನೀಯದಲ್ಲಿ ಮದ್ಯ ಬೆರೆಸಿ ಕುಡಿಸಿ, ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಬಟ್ಟೆ ವ್ಯಾಪಾರದಲ್ಲಿ ನಷ್ಟ; ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು

ಮಂಡ್ಯದ ನೆಹರು ನಗರದಲ್ಲಿ ಘಟನೆ ನಡೆದಿದೆ. ವ್ಯಾಪಾರದಲ್ಲಿ ನಷ್ಟದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವ್ಯಾಪಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಮಂಡ್ಯ ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Loading...